Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಿಮಗೆ ನಮ್ಮ ತೋಟದಲ್ಲಿ ಹುಡುಕಿದರೂ ಒಂದು ಶಂಖದ ಹುಳು ಸಿಕ್ಕುವುದಿಲ್ಲ. ಅವು ಇದ್ದ ಕುರುಹಾಗಿ ಅಲ್ಲಿ ಇಲ್ಲಿ ಬಿದ್ದ ಅವುಗಳ ಚಿಪ್ಪುಗಳು ಸಿಕ್ಕಿದರೆ ಸಿಕ್ಕಬಹುದು ಅಷ್ಟೆ.

ಜೂನ್‌ ಜುಲೈ ಹೊತ್ತಿಗೆ ಅಲ್ಲೊಂದು ಇಲ್ಲೊಂದು ಬೀಜರೂಪವಾಗಿ ಕಾಣಿಸಿಕೊಳ್ಳುತ್ತವೆ. ಹಿಂಗಾರು ಮಳೆ ಆರಂಭವಾಗಿ ನೆಲ ತೇವಗೊಂಡು ಜೀವ ಸಂಚಾರದ ವೇಗ ಹೆಚ್ಚುತ್ತದೆ. ಆಗಸ್ಟ್‌ ಸೆಪ್ಟೆಂಬರ್‌ ಹೊತ್ತಿಗೆ ಎಲ್ಲಿ ಕಾಲಿಟ್ಟರೂ ಈ ಶಂಖದ ಹುಳುವಿನ ಮೇಲೆ ಇಡಬೇಕಾಗುತ್ತದೆ. ಈಗ್ಗೆ ಹತ್ತು ವರ್ಷಗಳ ಹಿಂದೆ ಹೀಗಿರಲಿಲ್ಲ. ಆಗ ಅವು ತುಂಬಾ ವಿರಳವಾಗಿದ್ದವು. ಅವು ಎಲ್ಲಿದ್ದವೋ ಏನೋ ಗೊತ್ತಿಲ್ಲ, ವರ್ಷಗಳೆರಡು ಕಳೆದಂತೆ ಅವುಗಳ ಸಂಖ್ಯೆ ಲಕ್ಷದ ಲೆಕ್ಕದಲ್ಲಿ ಹೆಚ್ಚಿದವು. ಈಗ ಪ್ರತಿ ವರ್ಷ ಸೆಪ್ಟೆಂಬರ್‌, ಶಂಖದ ಹುಳುವಿನ ತಿಂಗಳಾಗಿ ಪರಿವರ್ತನೆಯಾಗಿದೆ. ಆಗಸ್ಟ್‌ ತಿಂಗಳಲ್ಲಿ ನಿಮಗೆ ಒಂಟಿ ಹುಳ ಕಾಣುವುದೇ ಇಲ್ಲ, ಏನಿದ್ದರೂ ಜಂಟಿ ಹುಳುಗಳೇ. ನಂತರದ ಒಂದು ತಿಂಗಳ ಅವಧಿಯಲ್ಲಿ ಎಲ್ಲಿ ನೋಡಿದರೂ ಹೆಸರು ಕಾಳು ಗಾತ್ರದ ಹಳದಿ ಮೊಟ್ಟೆಗಳ ಪುಟ್ಟ ಪುಟ್ಟ ರಾಶಿಗಳನ್ನು ನೋಡಬಹುದು. ಇವು ಸುಮಾರು ಮುವತ್ತರಿಂದ ನಲವತ್ತು ಮೊಟ್ಟೆಗಳನ್ನು ಇಡುತ್ತವೆ. ಯಾವ ಪ್ರತಿರೋಧದ ದರಕಾರವೂ ಇಲ್ಲದೆ ತಾಯಿ ಹುಳುದ ಕಾವೂ ಇಲ್ಲದೆ ಮರಿಯಾಗುತ್ತವೆ. ಆ ಮೊಟ್ಟೆಗಳನ್ನು ಇತರ ಯಾವ ಜೀವಿಗಳೂ ತಿಂದಂತೆ ಕಾಣುವುದಿಲ್ಲ. ಹೀಗಾಗಿ ಅವುಗಳ ಸಂಖ್ಯೆ ಲಕ್ಷ ಲಕ್ಷವಾಗಿ ಹಬ್ಬುತ್ತದೆ. ತೋಟವೆಲ್ಲಾ ಶಂಖದ ಹುಳುಗಳಿಂದ ಅಲಂಕೃತವಾಗುತ್ತದೆ. ಕಾಲಿಟ್ಟ ಕಡೆಯೆಲ್ಲಾ ಮಾರಣಹೋಮವೂ ನಡೆಯುತ್ತಿರುತ್ತದೆ. ನರಿಗ್‌ ನರಿಗ್‌ ಎಂಬ ಶಬ್ಧ ಮಾರ್ದನಸುತ್ತದೆ.

ಶಂಖದ ಹುಳುಗಳು ಕೊಳೆತ ಕಸ ಕಡ್ಡಿ, ತಿಂದು ಜೀವಿಸುತ್ತವೆ. ಅವುಗಳಿಗೆ ಹಸಿರು ಸೊಪ್ಪು ವರ್ಜ್ಯವಲ್ಲ. ಅದಕ್ಕೆ ಹೊಲದ ರೈತರಿಗೆ ಈ ಶಂಖದ ಹುಳು ಆಗಿಬರುವುದಿಲ್ಲ. ಅವು ಹೊಲದಲ್ಲಿನ ಎಳೆ ಬೆಳೆಯನ್ನು ನಗ್ಗುಯ್ಯುತ್ತವೆ, ರೇಷ್ಮೆಹುಳು ಬೇಕು ಇವು ಬೇಡ, ನೆಲಸಮ ಮಾಡಿಬಿಡುತ್ತವೆ. ಅವುಗಳನ್ನು ನಿಯಂತ್ರಿಸಲು ರೈತರು ನಾನಾ ಬಗೆಯ ಕಸರತ್ತು ನಡೆಸುತ್ತಾರೆ. ಆದರೆ ನಮ್ಮಂತಹ ಉಳುಮೆ ಇಲ್ಲದ ತೋಟಗಳು ಅವಕ್ಕೆ ಕ್ಷೇಮಸ್ವರ್ಗ. ಯಾರ ಭಯವೂ ಇಲ್ಲದೇ ನಮ್ಮಲ್ಲಿಗೆ ಬಂದು ಇದ್ದು ಮರಿಮಾಡಿಕೊಂಡು ಬೆಳೆದು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುವ ಹೊತ್ತಿಗೆ ತಮ್ಮ ಆಟ ಮುಗಿಸಿ ಕಣ್ಮರೆಯಾಗುತ್ತವೆ.

ಆ ಲಕ್ಷ ಲಕ್ಷ ಜೀವಿಗಳು ವಿಸರ್ಜಿಸಿದ ಮಲ ಮೂತ್ರದ ಪಾತ್ರ ಗಿಡಮರಗಳಲ್ಲಿ ಫಲದ ರೂಪದಲ್ಲಿ ಪಲ್ಲವಿಸತೊಡಿಗಿರುತ್ತದೆ. ಅಷ್ಟೇ ಅಲ್ಲದೆ ಅವು ತಮ್ಮನ್ನು ತಾವು ಇಲ್ಲಿಯೆ ವಿಸರ್ಜಿಸಿಕೊಳ್ಳುವ ಕಾರಣ ಅವು ಋಣಮುಕ್ತವಾಗುತ್ತವೆ.

ತೋಟಕ್ಕೆ ಬಂದವರು ಹೇಳುತ್ತಾರೆ “ನಿಮ್ಮ ತೋಟ ಚೆನ್ನಾಗಿದೆ”. ಅವರು ಮುಂದುವರಿಸುತ್ತಾರೆ, ನಿಮ್ಮ ತೋಟದಲ್ಲಿ ಶಂಖದ ಹುಳುಗಳು ಅತಿಯಾಗಿವೆ. ಎರಡೂ ನಿಜವೇ. ಅವು ಅತಿಯಾಗಿರಲು ಅವಕ್ಕೆ ಇಲ್ಲಿ ತಾಣವಿದೆ, ಆಹಾರವಿದೆ, ಅವಕ್ಕೆ ಗಟ್ಟಿಯಾದ ಚಿಪ್ಪಿನ ಕವಚವಿದೆ.

ಸಾಂಬಾರ್ಗಾಗೆಗಳು ಈ ಶಂಖದ ಹುಳುಗಳನ್ನು ತಿನ್ನುತ್ತವಾದರೂ ಅಷ್ಟು ಇಷ್ಟಪಟ್ಟು ತಿನ್ನುವುದಿಲ್ಲ, ನವಿಲುಗಳು ಏನೂ ಆಹಾರ ಸಿಕ್ಕದಿದ್ದಾಗ ಮಾತ್ರ ಹಾಗೊಂದು ಹೀಗೊಂದು ಈ ಶಂಖದ ಹುಳುಗಳನ್ನು ಸೇವಿಸುವ ಪರಿಪಾಠ ಇಟ್ಟುಕೊಂಡಿವೆ. ಮಿಕ್ಕಂತೆ ಇವುಗಳಿಗೆ ಇನ್ನಾರ ಭಯವೂ ಇರುವಂತಿಲ್ಲ. ನಮ್ಮಲ್ಲಿನ ಕೆಲವು ಜನ ಒಮ್ಮೊಮ್ಮೆ ಐವತ್ತರಿಂದ ನೂರು ಗ್ರಾಮ್‌ ತೂಗುವ ಈ ಶಂಖದ ಹುಳುಗಳನ್ನು ನೋಡಿ ತಿನ್ನುವ ಆಸೆ ವ್ಯಕ್ತಪಡಿಸಿದರೂ ಇನ್ನು ಅದು ಅವರಿಗೆ (ನನ್ನನ್ನೂ ಒಳಗೊಂಡು) ಸಾಧ್ಯವಾಗಿಲ್ಲ.

PC : Freepik

ಏನೇ ಆಗಲಿ ಈ ಶಂಖದ ಹುಳುಗಳ ಬೆಳೆ ನಮ್ಮ ತೋಟಕ್ಕೆ ಬಲು ಒಳ್ಳೆಯದು ಮಾಡಿದೆ. ಇವು ಇಡುವ ಮಿಲಿ ಗ್ರಾಮ್‌ ಲೆಕ್ಕದ ಹಿಕ್ಕೆಗೆ ಬೆಲೆ ಕಟ್ಟಲಾಗದು. ಅದು ತೂಕಕ್ಕಾಗಲಿ ಲೆಕ್ಕಕ್ಕಾಗಲಿ ಸಿಗುವಂತಾದ್ದಲ್ಲ. ಅದು ಅನೂಹ್ಯ, ಆದರೆ ಲೆಕ್ಕ ಮಾಡುವವರಿಗೆ ಒಳ್ಳೆಯ ವಸ್ತು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ: ಕೋಟಿ ಕೀಟಗಳ ಉಳುಮೆ, ಹುಲ್ಲು ಬೇರಿನ ಮಹಿಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಂಖದ ಹುಳುಗಳು ಅಡಿಕೆಗೆ ಆಗಿ ಬರುವುದಿಲ್ಲ. ಹಗಲುಹೊತ್ತು ಮರದ ಬುಡ ಸೇರುವ ಅವು ಸಂಜೆಯಾದಂತೆ ಮರ ಏರಿ ಎಳೆಯ ಸಿಂಗಾರದ (ಹೂ ಗೊಂಚಲು) ಬುಡದ ತಿರುಳನ್ನು ತಿಂದು ಇಡೀ ಗೊನೆಯನ್ನು ಹಾಳುಮಾಡುತ್ತವೆ. ಆದ್ರಿಂದ, ಅಡಿಕೆ ತೋಟದಲ್ಲಿ ಅವು ಅನಪೇಕ್ಷಿತ ಅತಿಥಿಗಳು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...