Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಿಮಗೆ ನಮ್ಮ ತೋಟದಲ್ಲಿ ಹುಡುಕಿದರೂ ಒಂದು ಶಂಖದ ಹುಳು ಸಿಕ್ಕುವುದಿಲ್ಲ. ಅವು ಇದ್ದ ಕುರುಹಾಗಿ ಅಲ್ಲಿ ಇಲ್ಲಿ ಬಿದ್ದ ಅವುಗಳ ಚಿಪ್ಪುಗಳು ಸಿಕ್ಕಿದರೆ ಸಿಕ್ಕಬಹುದು ಅಷ್ಟೆ.

ಜೂನ್‌ ಜುಲೈ ಹೊತ್ತಿಗೆ ಅಲ್ಲೊಂದು ಇಲ್ಲೊಂದು ಬೀಜರೂಪವಾಗಿ ಕಾಣಿಸಿಕೊಳ್ಳುತ್ತವೆ. ಹಿಂಗಾರು ಮಳೆ ಆರಂಭವಾಗಿ ನೆಲ ತೇವಗೊಂಡು ಜೀವ ಸಂಚಾರದ ವೇಗ ಹೆಚ್ಚುತ್ತದೆ. ಆಗಸ್ಟ್‌ ಸೆಪ್ಟೆಂಬರ್‌ ಹೊತ್ತಿಗೆ ಎಲ್ಲಿ ಕಾಲಿಟ್ಟರೂ ಈ ಶಂಖದ ಹುಳುವಿನ ಮೇಲೆ ಇಡಬೇಕಾಗುತ್ತದೆ. ಈಗ್ಗೆ ಹತ್ತು ವರ್ಷಗಳ ಹಿಂದೆ ಹೀಗಿರಲಿಲ್ಲ. ಆಗ ಅವು ತುಂಬಾ ವಿರಳವಾಗಿದ್ದವು. ಅವು ಎಲ್ಲಿದ್ದವೋ ಏನೋ ಗೊತ್ತಿಲ್ಲ, ವರ್ಷಗಳೆರಡು ಕಳೆದಂತೆ ಅವುಗಳ ಸಂಖ್ಯೆ ಲಕ್ಷದ ಲೆಕ್ಕದಲ್ಲಿ ಹೆಚ್ಚಿದವು. ಈಗ ಪ್ರತಿ ವರ್ಷ ಸೆಪ್ಟೆಂಬರ್‌, ಶಂಖದ ಹುಳುವಿನ ತಿಂಗಳಾಗಿ ಪರಿವರ್ತನೆಯಾಗಿದೆ. ಆಗಸ್ಟ್‌ ತಿಂಗಳಲ್ಲಿ ನಿಮಗೆ ಒಂಟಿ ಹುಳ ಕಾಣುವುದೇ ಇಲ್ಲ, ಏನಿದ್ದರೂ ಜಂಟಿ ಹುಳುಗಳೇ. ನಂತರದ ಒಂದು ತಿಂಗಳ ಅವಧಿಯಲ್ಲಿ ಎಲ್ಲಿ ನೋಡಿದರೂ ಹೆಸರು ಕಾಳು ಗಾತ್ರದ ಹಳದಿ ಮೊಟ್ಟೆಗಳ ಪುಟ್ಟ ಪುಟ್ಟ ರಾಶಿಗಳನ್ನು ನೋಡಬಹುದು. ಇವು ಸುಮಾರು ಮುವತ್ತರಿಂದ ನಲವತ್ತು ಮೊಟ್ಟೆಗಳನ್ನು ಇಡುತ್ತವೆ. ಯಾವ ಪ್ರತಿರೋಧದ ದರಕಾರವೂ ಇಲ್ಲದೆ ತಾಯಿ ಹುಳುದ ಕಾವೂ ಇಲ್ಲದೆ ಮರಿಯಾಗುತ್ತವೆ. ಆ ಮೊಟ್ಟೆಗಳನ್ನು ಇತರ ಯಾವ ಜೀವಿಗಳೂ ತಿಂದಂತೆ ಕಾಣುವುದಿಲ್ಲ. ಹೀಗಾಗಿ ಅವುಗಳ ಸಂಖ್ಯೆ ಲಕ್ಷ ಲಕ್ಷವಾಗಿ ಹಬ್ಬುತ್ತದೆ. ತೋಟವೆಲ್ಲಾ ಶಂಖದ ಹುಳುಗಳಿಂದ ಅಲಂಕೃತವಾಗುತ್ತದೆ. ಕಾಲಿಟ್ಟ ಕಡೆಯೆಲ್ಲಾ ಮಾರಣಹೋಮವೂ ನಡೆಯುತ್ತಿರುತ್ತದೆ. ನರಿಗ್‌ ನರಿಗ್‌ ಎಂಬ ಶಬ್ಧ ಮಾರ್ದನಸುತ್ತದೆ.

ಶಂಖದ ಹುಳುಗಳು ಕೊಳೆತ ಕಸ ಕಡ್ಡಿ, ತಿಂದು ಜೀವಿಸುತ್ತವೆ. ಅವುಗಳಿಗೆ ಹಸಿರು ಸೊಪ್ಪು ವರ್ಜ್ಯವಲ್ಲ. ಅದಕ್ಕೆ ಹೊಲದ ರೈತರಿಗೆ ಈ ಶಂಖದ ಹುಳು ಆಗಿಬರುವುದಿಲ್ಲ. ಅವು ಹೊಲದಲ್ಲಿನ ಎಳೆ ಬೆಳೆಯನ್ನು ನಗ್ಗುಯ್ಯುತ್ತವೆ, ರೇಷ್ಮೆಹುಳು ಬೇಕು ಇವು ಬೇಡ, ನೆಲಸಮ ಮಾಡಿಬಿಡುತ್ತವೆ. ಅವುಗಳನ್ನು ನಿಯಂತ್ರಿಸಲು ರೈತರು ನಾನಾ ಬಗೆಯ ಕಸರತ್ತು ನಡೆಸುತ್ತಾರೆ. ಆದರೆ ನಮ್ಮಂತಹ ಉಳುಮೆ ಇಲ್ಲದ ತೋಟಗಳು ಅವಕ್ಕೆ ಕ್ಷೇಮಸ್ವರ್ಗ. ಯಾರ ಭಯವೂ ಇಲ್ಲದೇ ನಮ್ಮಲ್ಲಿಗೆ ಬಂದು ಇದ್ದು ಮರಿಮಾಡಿಕೊಂಡು ಬೆಳೆದು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುವ ಹೊತ್ತಿಗೆ ತಮ್ಮ ಆಟ ಮುಗಿಸಿ ಕಣ್ಮರೆಯಾಗುತ್ತವೆ.

ಆ ಲಕ್ಷ ಲಕ್ಷ ಜೀವಿಗಳು ವಿಸರ್ಜಿಸಿದ ಮಲ ಮೂತ್ರದ ಪಾತ್ರ ಗಿಡಮರಗಳಲ್ಲಿ ಫಲದ ರೂಪದಲ್ಲಿ ಪಲ್ಲವಿಸತೊಡಿಗಿರುತ್ತದೆ. ಅಷ್ಟೇ ಅಲ್ಲದೆ ಅವು ತಮ್ಮನ್ನು ತಾವು ಇಲ್ಲಿಯೆ ವಿಸರ್ಜಿಸಿಕೊಳ್ಳುವ ಕಾರಣ ಅವು ಋಣಮುಕ್ತವಾಗುತ್ತವೆ.

ತೋಟಕ್ಕೆ ಬಂದವರು ಹೇಳುತ್ತಾರೆ “ನಿಮ್ಮ ತೋಟ ಚೆನ್ನಾಗಿದೆ”. ಅವರು ಮುಂದುವರಿಸುತ್ತಾರೆ, ನಿಮ್ಮ ತೋಟದಲ್ಲಿ ಶಂಖದ ಹುಳುಗಳು ಅತಿಯಾಗಿವೆ. ಎರಡೂ ನಿಜವೇ. ಅವು ಅತಿಯಾಗಿರಲು ಅವಕ್ಕೆ ಇಲ್ಲಿ ತಾಣವಿದೆ, ಆಹಾರವಿದೆ, ಅವಕ್ಕೆ ಗಟ್ಟಿಯಾದ ಚಿಪ್ಪಿನ ಕವಚವಿದೆ.

ಸಾಂಬಾರ್ಗಾಗೆಗಳು ಈ ಶಂಖದ ಹುಳುಗಳನ್ನು ತಿನ್ನುತ್ತವಾದರೂ ಅಷ್ಟು ಇಷ್ಟಪಟ್ಟು ತಿನ್ನುವುದಿಲ್ಲ, ನವಿಲುಗಳು ಏನೂ ಆಹಾರ ಸಿಕ್ಕದಿದ್ದಾಗ ಮಾತ್ರ ಹಾಗೊಂದು ಹೀಗೊಂದು ಈ ಶಂಖದ ಹುಳುಗಳನ್ನು ಸೇವಿಸುವ ಪರಿಪಾಠ ಇಟ್ಟುಕೊಂಡಿವೆ. ಮಿಕ್ಕಂತೆ ಇವುಗಳಿಗೆ ಇನ್ನಾರ ಭಯವೂ ಇರುವಂತಿಲ್ಲ. ನಮ್ಮಲ್ಲಿನ ಕೆಲವು ಜನ ಒಮ್ಮೊಮ್ಮೆ ಐವತ್ತರಿಂದ ನೂರು ಗ್ರಾಮ್‌ ತೂಗುವ ಈ ಶಂಖದ ಹುಳುಗಳನ್ನು ನೋಡಿ ತಿನ್ನುವ ಆಸೆ ವ್ಯಕ್ತಪಡಿಸಿದರೂ ಇನ್ನು ಅದು ಅವರಿಗೆ (ನನ್ನನ್ನೂ ಒಳಗೊಂಡು) ಸಾಧ್ಯವಾಗಿಲ್ಲ.

PC : Freepik

ಏನೇ ಆಗಲಿ ಈ ಶಂಖದ ಹುಳುಗಳ ಬೆಳೆ ನಮ್ಮ ತೋಟಕ್ಕೆ ಬಲು ಒಳ್ಳೆಯದು ಮಾಡಿದೆ. ಇವು ಇಡುವ ಮಿಲಿ ಗ್ರಾಮ್‌ ಲೆಕ್ಕದ ಹಿಕ್ಕೆಗೆ ಬೆಲೆ ಕಟ್ಟಲಾಗದು. ಅದು ತೂಕಕ್ಕಾಗಲಿ ಲೆಕ್ಕಕ್ಕಾಗಲಿ ಸಿಗುವಂತಾದ್ದಲ್ಲ. ಅದು ಅನೂಹ್ಯ, ಆದರೆ ಲೆಕ್ಕ ಮಾಡುವವರಿಗೆ ಒಳ್ಳೆಯ ವಸ್ತು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ: ಕೋಟಿ ಕೀಟಗಳ ಉಳುಮೆ, ಹುಲ್ಲು ಬೇರಿನ ಮಹಿಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಂಖದ ಹುಳುಗಳು ಅಡಿಕೆಗೆ ಆಗಿ ಬರುವುದಿಲ್ಲ. ಹಗಲುಹೊತ್ತು ಮರದ ಬುಡ ಸೇರುವ ಅವು ಸಂಜೆಯಾದಂತೆ ಮರ ಏರಿ ಎಳೆಯ ಸಿಂಗಾರದ (ಹೂ ಗೊಂಚಲು) ಬುಡದ ತಿರುಳನ್ನು ತಿಂದು ಇಡೀ ಗೊನೆಯನ್ನು ಹಾಳುಮಾಡುತ್ತವೆ. ಆದ್ರಿಂದ, ಅಡಿಕೆ ತೋಟದಲ್ಲಿ ಅವು ಅನಪೇಕ್ಷಿತ ಅತಿಥಿಗಳು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...