Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಿಮಗೆ ನಮ್ಮ ತೋಟದಲ್ಲಿ ಹುಡುಕಿದರೂ ಒಂದು ಶಂಖದ ಹುಳು ಸಿಕ್ಕುವುದಿಲ್ಲ. ಅವು ಇದ್ದ ಕುರುಹಾಗಿ ಅಲ್ಲಿ ಇಲ್ಲಿ ಬಿದ್ದ ಅವುಗಳ ಚಿಪ್ಪುಗಳು ಸಿಕ್ಕಿದರೆ ಸಿಕ್ಕಬಹುದು ಅಷ್ಟೆ.

ಜೂನ್‌ ಜುಲೈ ಹೊತ್ತಿಗೆ ಅಲ್ಲೊಂದು ಇಲ್ಲೊಂದು ಬೀಜರೂಪವಾಗಿ ಕಾಣಿಸಿಕೊಳ್ಳುತ್ತವೆ. ಹಿಂಗಾರು ಮಳೆ ಆರಂಭವಾಗಿ ನೆಲ ತೇವಗೊಂಡು ಜೀವ ಸಂಚಾರದ ವೇಗ ಹೆಚ್ಚುತ್ತದೆ. ಆಗಸ್ಟ್‌ ಸೆಪ್ಟೆಂಬರ್‌ ಹೊತ್ತಿಗೆ ಎಲ್ಲಿ ಕಾಲಿಟ್ಟರೂ ಈ ಶಂಖದ ಹುಳುವಿನ ಮೇಲೆ ಇಡಬೇಕಾಗುತ್ತದೆ. ಈಗ್ಗೆ ಹತ್ತು ವರ್ಷಗಳ ಹಿಂದೆ ಹೀಗಿರಲಿಲ್ಲ. ಆಗ ಅವು ತುಂಬಾ ವಿರಳವಾಗಿದ್ದವು. ಅವು ಎಲ್ಲಿದ್ದವೋ ಏನೋ ಗೊತ್ತಿಲ್ಲ, ವರ್ಷಗಳೆರಡು ಕಳೆದಂತೆ ಅವುಗಳ ಸಂಖ್ಯೆ ಲಕ್ಷದ ಲೆಕ್ಕದಲ್ಲಿ ಹೆಚ್ಚಿದವು. ಈಗ ಪ್ರತಿ ವರ್ಷ ಸೆಪ್ಟೆಂಬರ್‌, ಶಂಖದ ಹುಳುವಿನ ತಿಂಗಳಾಗಿ ಪರಿವರ್ತನೆಯಾಗಿದೆ. ಆಗಸ್ಟ್‌ ತಿಂಗಳಲ್ಲಿ ನಿಮಗೆ ಒಂಟಿ ಹುಳ ಕಾಣುವುದೇ ಇಲ್ಲ, ಏನಿದ್ದರೂ ಜಂಟಿ ಹುಳುಗಳೇ. ನಂತರದ ಒಂದು ತಿಂಗಳ ಅವಧಿಯಲ್ಲಿ ಎಲ್ಲಿ ನೋಡಿದರೂ ಹೆಸರು ಕಾಳು ಗಾತ್ರದ ಹಳದಿ ಮೊಟ್ಟೆಗಳ ಪುಟ್ಟ ಪುಟ್ಟ ರಾಶಿಗಳನ್ನು ನೋಡಬಹುದು. ಇವು ಸುಮಾರು ಮುವತ್ತರಿಂದ ನಲವತ್ತು ಮೊಟ್ಟೆಗಳನ್ನು ಇಡುತ್ತವೆ. ಯಾವ ಪ್ರತಿರೋಧದ ದರಕಾರವೂ ಇಲ್ಲದೆ ತಾಯಿ ಹುಳುದ ಕಾವೂ ಇಲ್ಲದೆ ಮರಿಯಾಗುತ್ತವೆ. ಆ ಮೊಟ್ಟೆಗಳನ್ನು ಇತರ ಯಾವ ಜೀವಿಗಳೂ ತಿಂದಂತೆ ಕಾಣುವುದಿಲ್ಲ. ಹೀಗಾಗಿ ಅವುಗಳ ಸಂಖ್ಯೆ ಲಕ್ಷ ಲಕ್ಷವಾಗಿ ಹಬ್ಬುತ್ತದೆ. ತೋಟವೆಲ್ಲಾ ಶಂಖದ ಹುಳುಗಳಿಂದ ಅಲಂಕೃತವಾಗುತ್ತದೆ. ಕಾಲಿಟ್ಟ ಕಡೆಯೆಲ್ಲಾ ಮಾರಣಹೋಮವೂ ನಡೆಯುತ್ತಿರುತ್ತದೆ. ನರಿಗ್‌ ನರಿಗ್‌ ಎಂಬ ಶಬ್ಧ ಮಾರ್ದನಸುತ್ತದೆ.

ಶಂಖದ ಹುಳುಗಳು ಕೊಳೆತ ಕಸ ಕಡ್ಡಿ, ತಿಂದು ಜೀವಿಸುತ್ತವೆ. ಅವುಗಳಿಗೆ ಹಸಿರು ಸೊಪ್ಪು ವರ್ಜ್ಯವಲ್ಲ. ಅದಕ್ಕೆ ಹೊಲದ ರೈತರಿಗೆ ಈ ಶಂಖದ ಹುಳು ಆಗಿಬರುವುದಿಲ್ಲ. ಅವು ಹೊಲದಲ್ಲಿನ ಎಳೆ ಬೆಳೆಯನ್ನು ನಗ್ಗುಯ್ಯುತ್ತವೆ, ರೇಷ್ಮೆಹುಳು ಬೇಕು ಇವು ಬೇಡ, ನೆಲಸಮ ಮಾಡಿಬಿಡುತ್ತವೆ. ಅವುಗಳನ್ನು ನಿಯಂತ್ರಿಸಲು ರೈತರು ನಾನಾ ಬಗೆಯ ಕಸರತ್ತು ನಡೆಸುತ್ತಾರೆ. ಆದರೆ ನಮ್ಮಂತಹ ಉಳುಮೆ ಇಲ್ಲದ ತೋಟಗಳು ಅವಕ್ಕೆ ಕ್ಷೇಮಸ್ವರ್ಗ. ಯಾರ ಭಯವೂ ಇಲ್ಲದೇ ನಮ್ಮಲ್ಲಿಗೆ ಬಂದು ಇದ್ದು ಮರಿಮಾಡಿಕೊಂಡು ಬೆಳೆದು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುವ ಹೊತ್ತಿಗೆ ತಮ್ಮ ಆಟ ಮುಗಿಸಿ ಕಣ್ಮರೆಯಾಗುತ್ತವೆ.

ಆ ಲಕ್ಷ ಲಕ್ಷ ಜೀವಿಗಳು ವಿಸರ್ಜಿಸಿದ ಮಲ ಮೂತ್ರದ ಪಾತ್ರ ಗಿಡಮರಗಳಲ್ಲಿ ಫಲದ ರೂಪದಲ್ಲಿ ಪಲ್ಲವಿಸತೊಡಿಗಿರುತ್ತದೆ. ಅಷ್ಟೇ ಅಲ್ಲದೆ ಅವು ತಮ್ಮನ್ನು ತಾವು ಇಲ್ಲಿಯೆ ವಿಸರ್ಜಿಸಿಕೊಳ್ಳುವ ಕಾರಣ ಅವು ಋಣಮುಕ್ತವಾಗುತ್ತವೆ.

ತೋಟಕ್ಕೆ ಬಂದವರು ಹೇಳುತ್ತಾರೆ “ನಿಮ್ಮ ತೋಟ ಚೆನ್ನಾಗಿದೆ”. ಅವರು ಮುಂದುವರಿಸುತ್ತಾರೆ, ನಿಮ್ಮ ತೋಟದಲ್ಲಿ ಶಂಖದ ಹುಳುಗಳು ಅತಿಯಾಗಿವೆ. ಎರಡೂ ನಿಜವೇ. ಅವು ಅತಿಯಾಗಿರಲು ಅವಕ್ಕೆ ಇಲ್ಲಿ ತಾಣವಿದೆ, ಆಹಾರವಿದೆ, ಅವಕ್ಕೆ ಗಟ್ಟಿಯಾದ ಚಿಪ್ಪಿನ ಕವಚವಿದೆ.

ಸಾಂಬಾರ್ಗಾಗೆಗಳು ಈ ಶಂಖದ ಹುಳುಗಳನ್ನು ತಿನ್ನುತ್ತವಾದರೂ ಅಷ್ಟು ಇಷ್ಟಪಟ್ಟು ತಿನ್ನುವುದಿಲ್ಲ, ನವಿಲುಗಳು ಏನೂ ಆಹಾರ ಸಿಕ್ಕದಿದ್ದಾಗ ಮಾತ್ರ ಹಾಗೊಂದು ಹೀಗೊಂದು ಈ ಶಂಖದ ಹುಳುಗಳನ್ನು ಸೇವಿಸುವ ಪರಿಪಾಠ ಇಟ್ಟುಕೊಂಡಿವೆ. ಮಿಕ್ಕಂತೆ ಇವುಗಳಿಗೆ ಇನ್ನಾರ ಭಯವೂ ಇರುವಂತಿಲ್ಲ. ನಮ್ಮಲ್ಲಿನ ಕೆಲವು ಜನ ಒಮ್ಮೊಮ್ಮೆ ಐವತ್ತರಿಂದ ನೂರು ಗ್ರಾಮ್‌ ತೂಗುವ ಈ ಶಂಖದ ಹುಳುಗಳನ್ನು ನೋಡಿ ತಿನ್ನುವ ಆಸೆ ವ್ಯಕ್ತಪಡಿಸಿದರೂ ಇನ್ನು ಅದು ಅವರಿಗೆ (ನನ್ನನ್ನೂ ಒಳಗೊಂಡು) ಸಾಧ್ಯವಾಗಿಲ್ಲ.

PC : Freepik

ಏನೇ ಆಗಲಿ ಈ ಶಂಖದ ಹುಳುಗಳ ಬೆಳೆ ನಮ್ಮ ತೋಟಕ್ಕೆ ಬಲು ಒಳ್ಳೆಯದು ಮಾಡಿದೆ. ಇವು ಇಡುವ ಮಿಲಿ ಗ್ರಾಮ್‌ ಲೆಕ್ಕದ ಹಿಕ್ಕೆಗೆ ಬೆಲೆ ಕಟ್ಟಲಾಗದು. ಅದು ತೂಕಕ್ಕಾಗಲಿ ಲೆಕ್ಕಕ್ಕಾಗಲಿ ಸಿಗುವಂತಾದ್ದಲ್ಲ. ಅದು ಅನೂಹ್ಯ, ಆದರೆ ಲೆಕ್ಕ ಮಾಡುವವರಿಗೆ ಒಳ್ಳೆಯ ವಸ್ತು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ: ಕೋಟಿ ಕೀಟಗಳ ಉಳುಮೆ, ಹುಲ್ಲು ಬೇರಿನ ಮಹಿಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಂಖದ ಹುಳುಗಳು ಅಡಿಕೆಗೆ ಆಗಿ ಬರುವುದಿಲ್ಲ. ಹಗಲುಹೊತ್ತು ಮರದ ಬುಡ ಸೇರುವ ಅವು ಸಂಜೆಯಾದಂತೆ ಮರ ಏರಿ ಎಳೆಯ ಸಿಂಗಾರದ (ಹೂ ಗೊಂಚಲು) ಬುಡದ ತಿರುಳನ್ನು ತಿಂದು ಇಡೀ ಗೊನೆಯನ್ನು ಹಾಳುಮಾಡುತ್ತವೆ. ಆದ್ರಿಂದ, ಅಡಿಕೆ ತೋಟದಲ್ಲಿ ಅವು ಅನಪೇಕ್ಷಿತ ಅತಿಥಿಗಳು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...