Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಿಮಗೆ ನಮ್ಮ ತೋಟದಲ್ಲಿ ಹುಡುಕಿದರೂ ಒಂದು ಶಂಖದ ಹುಳು ಸಿಕ್ಕುವುದಿಲ್ಲ. ಅವು ಇದ್ದ ಕುರುಹಾಗಿ ಅಲ್ಲಿ ಇಲ್ಲಿ ಬಿದ್ದ ಅವುಗಳ ಚಿಪ್ಪುಗಳು ಸಿಕ್ಕಿದರೆ ಸಿಕ್ಕಬಹುದು ಅಷ್ಟೆ.

ಜೂನ್‌ ಜುಲೈ ಹೊತ್ತಿಗೆ ಅಲ್ಲೊಂದು ಇಲ್ಲೊಂದು ಬೀಜರೂಪವಾಗಿ ಕಾಣಿಸಿಕೊಳ್ಳುತ್ತವೆ. ಹಿಂಗಾರು ಮಳೆ ಆರಂಭವಾಗಿ ನೆಲ ತೇವಗೊಂಡು ಜೀವ ಸಂಚಾರದ ವೇಗ ಹೆಚ್ಚುತ್ತದೆ. ಆಗಸ್ಟ್‌ ಸೆಪ್ಟೆಂಬರ್‌ ಹೊತ್ತಿಗೆ ಎಲ್ಲಿ ಕಾಲಿಟ್ಟರೂ ಈ ಶಂಖದ ಹುಳುವಿನ ಮೇಲೆ ಇಡಬೇಕಾಗುತ್ತದೆ. ಈಗ್ಗೆ ಹತ್ತು ವರ್ಷಗಳ ಹಿಂದೆ ಹೀಗಿರಲಿಲ್ಲ. ಆಗ ಅವು ತುಂಬಾ ವಿರಳವಾಗಿದ್ದವು. ಅವು ಎಲ್ಲಿದ್ದವೋ ಏನೋ ಗೊತ್ತಿಲ್ಲ, ವರ್ಷಗಳೆರಡು ಕಳೆದಂತೆ ಅವುಗಳ ಸಂಖ್ಯೆ ಲಕ್ಷದ ಲೆಕ್ಕದಲ್ಲಿ ಹೆಚ್ಚಿದವು. ಈಗ ಪ್ರತಿ ವರ್ಷ ಸೆಪ್ಟೆಂಬರ್‌, ಶಂಖದ ಹುಳುವಿನ ತಿಂಗಳಾಗಿ ಪರಿವರ್ತನೆಯಾಗಿದೆ. ಆಗಸ್ಟ್‌ ತಿಂಗಳಲ್ಲಿ ನಿಮಗೆ ಒಂಟಿ ಹುಳ ಕಾಣುವುದೇ ಇಲ್ಲ, ಏನಿದ್ದರೂ ಜಂಟಿ ಹುಳುಗಳೇ. ನಂತರದ ಒಂದು ತಿಂಗಳ ಅವಧಿಯಲ್ಲಿ ಎಲ್ಲಿ ನೋಡಿದರೂ ಹೆಸರು ಕಾಳು ಗಾತ್ರದ ಹಳದಿ ಮೊಟ್ಟೆಗಳ ಪುಟ್ಟ ಪುಟ್ಟ ರಾಶಿಗಳನ್ನು ನೋಡಬಹುದು. ಇವು ಸುಮಾರು ಮುವತ್ತರಿಂದ ನಲವತ್ತು ಮೊಟ್ಟೆಗಳನ್ನು ಇಡುತ್ತವೆ. ಯಾವ ಪ್ರತಿರೋಧದ ದರಕಾರವೂ ಇಲ್ಲದೆ ತಾಯಿ ಹುಳುದ ಕಾವೂ ಇಲ್ಲದೆ ಮರಿಯಾಗುತ್ತವೆ. ಆ ಮೊಟ್ಟೆಗಳನ್ನು ಇತರ ಯಾವ ಜೀವಿಗಳೂ ತಿಂದಂತೆ ಕಾಣುವುದಿಲ್ಲ. ಹೀಗಾಗಿ ಅವುಗಳ ಸಂಖ್ಯೆ ಲಕ್ಷ ಲಕ್ಷವಾಗಿ ಹಬ್ಬುತ್ತದೆ. ತೋಟವೆಲ್ಲಾ ಶಂಖದ ಹುಳುಗಳಿಂದ ಅಲಂಕೃತವಾಗುತ್ತದೆ. ಕಾಲಿಟ್ಟ ಕಡೆಯೆಲ್ಲಾ ಮಾರಣಹೋಮವೂ ನಡೆಯುತ್ತಿರುತ್ತದೆ. ನರಿಗ್‌ ನರಿಗ್‌ ಎಂಬ ಶಬ್ಧ ಮಾರ್ದನಸುತ್ತದೆ.

ಶಂಖದ ಹುಳುಗಳು ಕೊಳೆತ ಕಸ ಕಡ್ಡಿ, ತಿಂದು ಜೀವಿಸುತ್ತವೆ. ಅವುಗಳಿಗೆ ಹಸಿರು ಸೊಪ್ಪು ವರ್ಜ್ಯವಲ್ಲ. ಅದಕ್ಕೆ ಹೊಲದ ರೈತರಿಗೆ ಈ ಶಂಖದ ಹುಳು ಆಗಿಬರುವುದಿಲ್ಲ. ಅವು ಹೊಲದಲ್ಲಿನ ಎಳೆ ಬೆಳೆಯನ್ನು ನಗ್ಗುಯ್ಯುತ್ತವೆ, ರೇಷ್ಮೆಹುಳು ಬೇಕು ಇವು ಬೇಡ, ನೆಲಸಮ ಮಾಡಿಬಿಡುತ್ತವೆ. ಅವುಗಳನ್ನು ನಿಯಂತ್ರಿಸಲು ರೈತರು ನಾನಾ ಬಗೆಯ ಕಸರತ್ತು ನಡೆಸುತ್ತಾರೆ. ಆದರೆ ನಮ್ಮಂತಹ ಉಳುಮೆ ಇಲ್ಲದ ತೋಟಗಳು ಅವಕ್ಕೆ ಕ್ಷೇಮಸ್ವರ್ಗ. ಯಾರ ಭಯವೂ ಇಲ್ಲದೇ ನಮ್ಮಲ್ಲಿಗೆ ಬಂದು ಇದ್ದು ಮರಿಮಾಡಿಕೊಂಡು ಬೆಳೆದು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುವ ಹೊತ್ತಿಗೆ ತಮ್ಮ ಆಟ ಮುಗಿಸಿ ಕಣ್ಮರೆಯಾಗುತ್ತವೆ.

ಆ ಲಕ್ಷ ಲಕ್ಷ ಜೀವಿಗಳು ವಿಸರ್ಜಿಸಿದ ಮಲ ಮೂತ್ರದ ಪಾತ್ರ ಗಿಡಮರಗಳಲ್ಲಿ ಫಲದ ರೂಪದಲ್ಲಿ ಪಲ್ಲವಿಸತೊಡಿಗಿರುತ್ತದೆ. ಅಷ್ಟೇ ಅಲ್ಲದೆ ಅವು ತಮ್ಮನ್ನು ತಾವು ಇಲ್ಲಿಯೆ ವಿಸರ್ಜಿಸಿಕೊಳ್ಳುವ ಕಾರಣ ಅವು ಋಣಮುಕ್ತವಾಗುತ್ತವೆ.

ತೋಟಕ್ಕೆ ಬಂದವರು ಹೇಳುತ್ತಾರೆ “ನಿಮ್ಮ ತೋಟ ಚೆನ್ನಾಗಿದೆ”. ಅವರು ಮುಂದುವರಿಸುತ್ತಾರೆ, ನಿಮ್ಮ ತೋಟದಲ್ಲಿ ಶಂಖದ ಹುಳುಗಳು ಅತಿಯಾಗಿವೆ. ಎರಡೂ ನಿಜವೇ. ಅವು ಅತಿಯಾಗಿರಲು ಅವಕ್ಕೆ ಇಲ್ಲಿ ತಾಣವಿದೆ, ಆಹಾರವಿದೆ, ಅವಕ್ಕೆ ಗಟ್ಟಿಯಾದ ಚಿಪ್ಪಿನ ಕವಚವಿದೆ.

ಸಾಂಬಾರ್ಗಾಗೆಗಳು ಈ ಶಂಖದ ಹುಳುಗಳನ್ನು ತಿನ್ನುತ್ತವಾದರೂ ಅಷ್ಟು ಇಷ್ಟಪಟ್ಟು ತಿನ್ನುವುದಿಲ್ಲ, ನವಿಲುಗಳು ಏನೂ ಆಹಾರ ಸಿಕ್ಕದಿದ್ದಾಗ ಮಾತ್ರ ಹಾಗೊಂದು ಹೀಗೊಂದು ಈ ಶಂಖದ ಹುಳುಗಳನ್ನು ಸೇವಿಸುವ ಪರಿಪಾಠ ಇಟ್ಟುಕೊಂಡಿವೆ. ಮಿಕ್ಕಂತೆ ಇವುಗಳಿಗೆ ಇನ್ನಾರ ಭಯವೂ ಇರುವಂತಿಲ್ಲ. ನಮ್ಮಲ್ಲಿನ ಕೆಲವು ಜನ ಒಮ್ಮೊಮ್ಮೆ ಐವತ್ತರಿಂದ ನೂರು ಗ್ರಾಮ್‌ ತೂಗುವ ಈ ಶಂಖದ ಹುಳುಗಳನ್ನು ನೋಡಿ ತಿನ್ನುವ ಆಸೆ ವ್ಯಕ್ತಪಡಿಸಿದರೂ ಇನ್ನು ಅದು ಅವರಿಗೆ (ನನ್ನನ್ನೂ ಒಳಗೊಂಡು) ಸಾಧ್ಯವಾಗಿಲ್ಲ.

PC : Freepik

ಏನೇ ಆಗಲಿ ಈ ಶಂಖದ ಹುಳುಗಳ ಬೆಳೆ ನಮ್ಮ ತೋಟಕ್ಕೆ ಬಲು ಒಳ್ಳೆಯದು ಮಾಡಿದೆ. ಇವು ಇಡುವ ಮಿಲಿ ಗ್ರಾಮ್‌ ಲೆಕ್ಕದ ಹಿಕ್ಕೆಗೆ ಬೆಲೆ ಕಟ್ಟಲಾಗದು. ಅದು ತೂಕಕ್ಕಾಗಲಿ ಲೆಕ್ಕಕ್ಕಾಗಲಿ ಸಿಗುವಂತಾದ್ದಲ್ಲ. ಅದು ಅನೂಹ್ಯ, ಆದರೆ ಲೆಕ್ಕ ಮಾಡುವವರಿಗೆ ಒಳ್ಳೆಯ ವಸ್ತು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ: ಕೋಟಿ ಕೀಟಗಳ ಉಳುಮೆ, ಹುಲ್ಲು ಬೇರಿನ ಮಹಿಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಂಖದ ಹುಳುಗಳು ಅಡಿಕೆಗೆ ಆಗಿ ಬರುವುದಿಲ್ಲ. ಹಗಲುಹೊತ್ತು ಮರದ ಬುಡ ಸೇರುವ ಅವು ಸಂಜೆಯಾದಂತೆ ಮರ ಏರಿ ಎಳೆಯ ಸಿಂಗಾರದ (ಹೂ ಗೊಂಚಲು) ಬುಡದ ತಿರುಳನ್ನು ತಿಂದು ಇಡೀ ಗೊನೆಯನ್ನು ಹಾಳುಮಾಡುತ್ತವೆ. ಆದ್ರಿಂದ, ಅಡಿಕೆ ತೋಟದಲ್ಲಿ ಅವು ಅನಪೇಕ್ಷಿತ ಅತಿಥಿಗಳು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...