Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಿಮಗೆ ನಮ್ಮ ತೋಟದಲ್ಲಿ ಹುಡುಕಿದರೂ ಒಂದು ಶಂಖದ ಹುಳು ಸಿಕ್ಕುವುದಿಲ್ಲ. ಅವು ಇದ್ದ ಕುರುಹಾಗಿ ಅಲ್ಲಿ ಇಲ್ಲಿ ಬಿದ್ದ ಅವುಗಳ ಚಿಪ್ಪುಗಳು ಸಿಕ್ಕಿದರೆ ಸಿಕ್ಕಬಹುದು ಅಷ್ಟೆ.

ಜೂನ್‌ ಜುಲೈ ಹೊತ್ತಿಗೆ ಅಲ್ಲೊಂದು ಇಲ್ಲೊಂದು ಬೀಜರೂಪವಾಗಿ ಕಾಣಿಸಿಕೊಳ್ಳುತ್ತವೆ. ಹಿಂಗಾರು ಮಳೆ ಆರಂಭವಾಗಿ ನೆಲ ತೇವಗೊಂಡು ಜೀವ ಸಂಚಾರದ ವೇಗ ಹೆಚ್ಚುತ್ತದೆ. ಆಗಸ್ಟ್‌ ಸೆಪ್ಟೆಂಬರ್‌ ಹೊತ್ತಿಗೆ ಎಲ್ಲಿ ಕಾಲಿಟ್ಟರೂ ಈ ಶಂಖದ ಹುಳುವಿನ ಮೇಲೆ ಇಡಬೇಕಾಗುತ್ತದೆ. ಈಗ್ಗೆ ಹತ್ತು ವರ್ಷಗಳ ಹಿಂದೆ ಹೀಗಿರಲಿಲ್ಲ. ಆಗ ಅವು ತುಂಬಾ ವಿರಳವಾಗಿದ್ದವು. ಅವು ಎಲ್ಲಿದ್ದವೋ ಏನೋ ಗೊತ್ತಿಲ್ಲ, ವರ್ಷಗಳೆರಡು ಕಳೆದಂತೆ ಅವುಗಳ ಸಂಖ್ಯೆ ಲಕ್ಷದ ಲೆಕ್ಕದಲ್ಲಿ ಹೆಚ್ಚಿದವು. ಈಗ ಪ್ರತಿ ವರ್ಷ ಸೆಪ್ಟೆಂಬರ್‌, ಶಂಖದ ಹುಳುವಿನ ತಿಂಗಳಾಗಿ ಪರಿವರ್ತನೆಯಾಗಿದೆ. ಆಗಸ್ಟ್‌ ತಿಂಗಳಲ್ಲಿ ನಿಮಗೆ ಒಂಟಿ ಹುಳ ಕಾಣುವುದೇ ಇಲ್ಲ, ಏನಿದ್ದರೂ ಜಂಟಿ ಹುಳುಗಳೇ. ನಂತರದ ಒಂದು ತಿಂಗಳ ಅವಧಿಯಲ್ಲಿ ಎಲ್ಲಿ ನೋಡಿದರೂ ಹೆಸರು ಕಾಳು ಗಾತ್ರದ ಹಳದಿ ಮೊಟ್ಟೆಗಳ ಪುಟ್ಟ ಪುಟ್ಟ ರಾಶಿಗಳನ್ನು ನೋಡಬಹುದು. ಇವು ಸುಮಾರು ಮುವತ್ತರಿಂದ ನಲವತ್ತು ಮೊಟ್ಟೆಗಳನ್ನು ಇಡುತ್ತವೆ. ಯಾವ ಪ್ರತಿರೋಧದ ದರಕಾರವೂ ಇಲ್ಲದೆ ತಾಯಿ ಹುಳುದ ಕಾವೂ ಇಲ್ಲದೆ ಮರಿಯಾಗುತ್ತವೆ. ಆ ಮೊಟ್ಟೆಗಳನ್ನು ಇತರ ಯಾವ ಜೀವಿಗಳೂ ತಿಂದಂತೆ ಕಾಣುವುದಿಲ್ಲ. ಹೀಗಾಗಿ ಅವುಗಳ ಸಂಖ್ಯೆ ಲಕ್ಷ ಲಕ್ಷವಾಗಿ ಹಬ್ಬುತ್ತದೆ. ತೋಟವೆಲ್ಲಾ ಶಂಖದ ಹುಳುಗಳಿಂದ ಅಲಂಕೃತವಾಗುತ್ತದೆ. ಕಾಲಿಟ್ಟ ಕಡೆಯೆಲ್ಲಾ ಮಾರಣಹೋಮವೂ ನಡೆಯುತ್ತಿರುತ್ತದೆ. ನರಿಗ್‌ ನರಿಗ್‌ ಎಂಬ ಶಬ್ಧ ಮಾರ್ದನಸುತ್ತದೆ.

ಶಂಖದ ಹುಳುಗಳು ಕೊಳೆತ ಕಸ ಕಡ್ಡಿ, ತಿಂದು ಜೀವಿಸುತ್ತವೆ. ಅವುಗಳಿಗೆ ಹಸಿರು ಸೊಪ್ಪು ವರ್ಜ್ಯವಲ್ಲ. ಅದಕ್ಕೆ ಹೊಲದ ರೈತರಿಗೆ ಈ ಶಂಖದ ಹುಳು ಆಗಿಬರುವುದಿಲ್ಲ. ಅವು ಹೊಲದಲ್ಲಿನ ಎಳೆ ಬೆಳೆಯನ್ನು ನಗ್ಗುಯ್ಯುತ್ತವೆ, ರೇಷ್ಮೆಹುಳು ಬೇಕು ಇವು ಬೇಡ, ನೆಲಸಮ ಮಾಡಿಬಿಡುತ್ತವೆ. ಅವುಗಳನ್ನು ನಿಯಂತ್ರಿಸಲು ರೈತರು ನಾನಾ ಬಗೆಯ ಕಸರತ್ತು ನಡೆಸುತ್ತಾರೆ. ಆದರೆ ನಮ್ಮಂತಹ ಉಳುಮೆ ಇಲ್ಲದ ತೋಟಗಳು ಅವಕ್ಕೆ ಕ್ಷೇಮಸ್ವರ್ಗ. ಯಾರ ಭಯವೂ ಇಲ್ಲದೇ ನಮ್ಮಲ್ಲಿಗೆ ಬಂದು ಇದ್ದು ಮರಿಮಾಡಿಕೊಂಡು ಬೆಳೆದು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುವ ಹೊತ್ತಿಗೆ ತಮ್ಮ ಆಟ ಮುಗಿಸಿ ಕಣ್ಮರೆಯಾಗುತ್ತವೆ.

ಆ ಲಕ್ಷ ಲಕ್ಷ ಜೀವಿಗಳು ವಿಸರ್ಜಿಸಿದ ಮಲ ಮೂತ್ರದ ಪಾತ್ರ ಗಿಡಮರಗಳಲ್ಲಿ ಫಲದ ರೂಪದಲ್ಲಿ ಪಲ್ಲವಿಸತೊಡಿಗಿರುತ್ತದೆ. ಅಷ್ಟೇ ಅಲ್ಲದೆ ಅವು ತಮ್ಮನ್ನು ತಾವು ಇಲ್ಲಿಯೆ ವಿಸರ್ಜಿಸಿಕೊಳ್ಳುವ ಕಾರಣ ಅವು ಋಣಮುಕ್ತವಾಗುತ್ತವೆ.

ತೋಟಕ್ಕೆ ಬಂದವರು ಹೇಳುತ್ತಾರೆ “ನಿಮ್ಮ ತೋಟ ಚೆನ್ನಾಗಿದೆ”. ಅವರು ಮುಂದುವರಿಸುತ್ತಾರೆ, ನಿಮ್ಮ ತೋಟದಲ್ಲಿ ಶಂಖದ ಹುಳುಗಳು ಅತಿಯಾಗಿವೆ. ಎರಡೂ ನಿಜವೇ. ಅವು ಅತಿಯಾಗಿರಲು ಅವಕ್ಕೆ ಇಲ್ಲಿ ತಾಣವಿದೆ, ಆಹಾರವಿದೆ, ಅವಕ್ಕೆ ಗಟ್ಟಿಯಾದ ಚಿಪ್ಪಿನ ಕವಚವಿದೆ.

ಸಾಂಬಾರ್ಗಾಗೆಗಳು ಈ ಶಂಖದ ಹುಳುಗಳನ್ನು ತಿನ್ನುತ್ತವಾದರೂ ಅಷ್ಟು ಇಷ್ಟಪಟ್ಟು ತಿನ್ನುವುದಿಲ್ಲ, ನವಿಲುಗಳು ಏನೂ ಆಹಾರ ಸಿಕ್ಕದಿದ್ದಾಗ ಮಾತ್ರ ಹಾಗೊಂದು ಹೀಗೊಂದು ಈ ಶಂಖದ ಹುಳುಗಳನ್ನು ಸೇವಿಸುವ ಪರಿಪಾಠ ಇಟ್ಟುಕೊಂಡಿವೆ. ಮಿಕ್ಕಂತೆ ಇವುಗಳಿಗೆ ಇನ್ನಾರ ಭಯವೂ ಇರುವಂತಿಲ್ಲ. ನಮ್ಮಲ್ಲಿನ ಕೆಲವು ಜನ ಒಮ್ಮೊಮ್ಮೆ ಐವತ್ತರಿಂದ ನೂರು ಗ್ರಾಮ್‌ ತೂಗುವ ಈ ಶಂಖದ ಹುಳುಗಳನ್ನು ನೋಡಿ ತಿನ್ನುವ ಆಸೆ ವ್ಯಕ್ತಪಡಿಸಿದರೂ ಇನ್ನು ಅದು ಅವರಿಗೆ (ನನ್ನನ್ನೂ ಒಳಗೊಂಡು) ಸಾಧ್ಯವಾಗಿಲ್ಲ.

PC : Freepik

ಏನೇ ಆಗಲಿ ಈ ಶಂಖದ ಹುಳುಗಳ ಬೆಳೆ ನಮ್ಮ ತೋಟಕ್ಕೆ ಬಲು ಒಳ್ಳೆಯದು ಮಾಡಿದೆ. ಇವು ಇಡುವ ಮಿಲಿ ಗ್ರಾಮ್‌ ಲೆಕ್ಕದ ಹಿಕ್ಕೆಗೆ ಬೆಲೆ ಕಟ್ಟಲಾಗದು. ಅದು ತೂಕಕ್ಕಾಗಲಿ ಲೆಕ್ಕಕ್ಕಾಗಲಿ ಸಿಗುವಂತಾದ್ದಲ್ಲ. ಅದು ಅನೂಹ್ಯ, ಆದರೆ ಲೆಕ್ಕ ಮಾಡುವವರಿಗೆ ಒಳ್ಳೆಯ ವಸ್ತು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ: ಕೋಟಿ ಕೀಟಗಳ ಉಳುಮೆ, ಹುಲ್ಲು ಬೇರಿನ ಮಹಿಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಂಖದ ಹುಳುಗಳು ಅಡಿಕೆಗೆ ಆಗಿ ಬರುವುದಿಲ್ಲ. ಹಗಲುಹೊತ್ತು ಮರದ ಬುಡ ಸೇರುವ ಅವು ಸಂಜೆಯಾದಂತೆ ಮರ ಏರಿ ಎಳೆಯ ಸಿಂಗಾರದ (ಹೂ ಗೊಂಚಲು) ಬುಡದ ತಿರುಳನ್ನು ತಿಂದು ಇಡೀ ಗೊನೆಯನ್ನು ಹಾಳುಮಾಡುತ್ತವೆ. ಆದ್ರಿಂದ, ಅಡಿಕೆ ತೋಟದಲ್ಲಿ ಅವು ಅನಪೇಕ್ಷಿತ ಅತಿಥಿಗಳು.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...