Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಿಮಗೆ ನಮ್ಮ ತೋಟದಲ್ಲಿ ಹುಡುಕಿದರೂ ಒಂದು ಶಂಖದ ಹುಳು ಸಿಕ್ಕುವುದಿಲ್ಲ. ಅವು ಇದ್ದ ಕುರುಹಾಗಿ ಅಲ್ಲಿ ಇಲ್ಲಿ ಬಿದ್ದ ಅವುಗಳ ಚಿಪ್ಪುಗಳು ಸಿಕ್ಕಿದರೆ ಸಿಕ್ಕಬಹುದು ಅಷ್ಟೆ.

ಜೂನ್‌ ಜುಲೈ ಹೊತ್ತಿಗೆ ಅಲ್ಲೊಂದು ಇಲ್ಲೊಂದು ಬೀಜರೂಪವಾಗಿ ಕಾಣಿಸಿಕೊಳ್ಳುತ್ತವೆ. ಹಿಂಗಾರು ಮಳೆ ಆರಂಭವಾಗಿ ನೆಲ ತೇವಗೊಂಡು ಜೀವ ಸಂಚಾರದ ವೇಗ ಹೆಚ್ಚುತ್ತದೆ. ಆಗಸ್ಟ್‌ ಸೆಪ್ಟೆಂಬರ್‌ ಹೊತ್ತಿಗೆ ಎಲ್ಲಿ ಕಾಲಿಟ್ಟರೂ ಈ ಶಂಖದ ಹುಳುವಿನ ಮೇಲೆ ಇಡಬೇಕಾಗುತ್ತದೆ. ಈಗ್ಗೆ ಹತ್ತು ವರ್ಷಗಳ ಹಿಂದೆ ಹೀಗಿರಲಿಲ್ಲ. ಆಗ ಅವು ತುಂಬಾ ವಿರಳವಾಗಿದ್ದವು. ಅವು ಎಲ್ಲಿದ್ದವೋ ಏನೋ ಗೊತ್ತಿಲ್ಲ, ವರ್ಷಗಳೆರಡು ಕಳೆದಂತೆ ಅವುಗಳ ಸಂಖ್ಯೆ ಲಕ್ಷದ ಲೆಕ್ಕದಲ್ಲಿ ಹೆಚ್ಚಿದವು. ಈಗ ಪ್ರತಿ ವರ್ಷ ಸೆಪ್ಟೆಂಬರ್‌, ಶಂಖದ ಹುಳುವಿನ ತಿಂಗಳಾಗಿ ಪರಿವರ್ತನೆಯಾಗಿದೆ. ಆಗಸ್ಟ್‌ ತಿಂಗಳಲ್ಲಿ ನಿಮಗೆ ಒಂಟಿ ಹುಳ ಕಾಣುವುದೇ ಇಲ್ಲ, ಏನಿದ್ದರೂ ಜಂಟಿ ಹುಳುಗಳೇ. ನಂತರದ ಒಂದು ತಿಂಗಳ ಅವಧಿಯಲ್ಲಿ ಎಲ್ಲಿ ನೋಡಿದರೂ ಹೆಸರು ಕಾಳು ಗಾತ್ರದ ಹಳದಿ ಮೊಟ್ಟೆಗಳ ಪುಟ್ಟ ಪುಟ್ಟ ರಾಶಿಗಳನ್ನು ನೋಡಬಹುದು. ಇವು ಸುಮಾರು ಮುವತ್ತರಿಂದ ನಲವತ್ತು ಮೊಟ್ಟೆಗಳನ್ನು ಇಡುತ್ತವೆ. ಯಾವ ಪ್ರತಿರೋಧದ ದರಕಾರವೂ ಇಲ್ಲದೆ ತಾಯಿ ಹುಳುದ ಕಾವೂ ಇಲ್ಲದೆ ಮರಿಯಾಗುತ್ತವೆ. ಆ ಮೊಟ್ಟೆಗಳನ್ನು ಇತರ ಯಾವ ಜೀವಿಗಳೂ ತಿಂದಂತೆ ಕಾಣುವುದಿಲ್ಲ. ಹೀಗಾಗಿ ಅವುಗಳ ಸಂಖ್ಯೆ ಲಕ್ಷ ಲಕ್ಷವಾಗಿ ಹಬ್ಬುತ್ತದೆ. ತೋಟವೆಲ್ಲಾ ಶಂಖದ ಹುಳುಗಳಿಂದ ಅಲಂಕೃತವಾಗುತ್ತದೆ. ಕಾಲಿಟ್ಟ ಕಡೆಯೆಲ್ಲಾ ಮಾರಣಹೋಮವೂ ನಡೆಯುತ್ತಿರುತ್ತದೆ. ನರಿಗ್‌ ನರಿಗ್‌ ಎಂಬ ಶಬ್ಧ ಮಾರ್ದನಸುತ್ತದೆ.

ಶಂಖದ ಹುಳುಗಳು ಕೊಳೆತ ಕಸ ಕಡ್ಡಿ, ತಿಂದು ಜೀವಿಸುತ್ತವೆ. ಅವುಗಳಿಗೆ ಹಸಿರು ಸೊಪ್ಪು ವರ್ಜ್ಯವಲ್ಲ. ಅದಕ್ಕೆ ಹೊಲದ ರೈತರಿಗೆ ಈ ಶಂಖದ ಹುಳು ಆಗಿಬರುವುದಿಲ್ಲ. ಅವು ಹೊಲದಲ್ಲಿನ ಎಳೆ ಬೆಳೆಯನ್ನು ನಗ್ಗುಯ್ಯುತ್ತವೆ, ರೇಷ್ಮೆಹುಳು ಬೇಕು ಇವು ಬೇಡ, ನೆಲಸಮ ಮಾಡಿಬಿಡುತ್ತವೆ. ಅವುಗಳನ್ನು ನಿಯಂತ್ರಿಸಲು ರೈತರು ನಾನಾ ಬಗೆಯ ಕಸರತ್ತು ನಡೆಸುತ್ತಾರೆ. ಆದರೆ ನಮ್ಮಂತಹ ಉಳುಮೆ ಇಲ್ಲದ ತೋಟಗಳು ಅವಕ್ಕೆ ಕ್ಷೇಮಸ್ವರ್ಗ. ಯಾರ ಭಯವೂ ಇಲ್ಲದೇ ನಮ್ಮಲ್ಲಿಗೆ ಬಂದು ಇದ್ದು ಮರಿಮಾಡಿಕೊಂಡು ಬೆಳೆದು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುವ ಹೊತ್ತಿಗೆ ತಮ್ಮ ಆಟ ಮುಗಿಸಿ ಕಣ್ಮರೆಯಾಗುತ್ತವೆ.

ಆ ಲಕ್ಷ ಲಕ್ಷ ಜೀವಿಗಳು ವಿಸರ್ಜಿಸಿದ ಮಲ ಮೂತ್ರದ ಪಾತ್ರ ಗಿಡಮರಗಳಲ್ಲಿ ಫಲದ ರೂಪದಲ್ಲಿ ಪಲ್ಲವಿಸತೊಡಿಗಿರುತ್ತದೆ. ಅಷ್ಟೇ ಅಲ್ಲದೆ ಅವು ತಮ್ಮನ್ನು ತಾವು ಇಲ್ಲಿಯೆ ವಿಸರ್ಜಿಸಿಕೊಳ್ಳುವ ಕಾರಣ ಅವು ಋಣಮುಕ್ತವಾಗುತ್ತವೆ.

ತೋಟಕ್ಕೆ ಬಂದವರು ಹೇಳುತ್ತಾರೆ “ನಿಮ್ಮ ತೋಟ ಚೆನ್ನಾಗಿದೆ”. ಅವರು ಮುಂದುವರಿಸುತ್ತಾರೆ, ನಿಮ್ಮ ತೋಟದಲ್ಲಿ ಶಂಖದ ಹುಳುಗಳು ಅತಿಯಾಗಿವೆ. ಎರಡೂ ನಿಜವೇ. ಅವು ಅತಿಯಾಗಿರಲು ಅವಕ್ಕೆ ಇಲ್ಲಿ ತಾಣವಿದೆ, ಆಹಾರವಿದೆ, ಅವಕ್ಕೆ ಗಟ್ಟಿಯಾದ ಚಿಪ್ಪಿನ ಕವಚವಿದೆ.

ಸಾಂಬಾರ್ಗಾಗೆಗಳು ಈ ಶಂಖದ ಹುಳುಗಳನ್ನು ತಿನ್ನುತ್ತವಾದರೂ ಅಷ್ಟು ಇಷ್ಟಪಟ್ಟು ತಿನ್ನುವುದಿಲ್ಲ, ನವಿಲುಗಳು ಏನೂ ಆಹಾರ ಸಿಕ್ಕದಿದ್ದಾಗ ಮಾತ್ರ ಹಾಗೊಂದು ಹೀಗೊಂದು ಈ ಶಂಖದ ಹುಳುಗಳನ್ನು ಸೇವಿಸುವ ಪರಿಪಾಠ ಇಟ್ಟುಕೊಂಡಿವೆ. ಮಿಕ್ಕಂತೆ ಇವುಗಳಿಗೆ ಇನ್ನಾರ ಭಯವೂ ಇರುವಂತಿಲ್ಲ. ನಮ್ಮಲ್ಲಿನ ಕೆಲವು ಜನ ಒಮ್ಮೊಮ್ಮೆ ಐವತ್ತರಿಂದ ನೂರು ಗ್ರಾಮ್‌ ತೂಗುವ ಈ ಶಂಖದ ಹುಳುಗಳನ್ನು ನೋಡಿ ತಿನ್ನುವ ಆಸೆ ವ್ಯಕ್ತಪಡಿಸಿದರೂ ಇನ್ನು ಅದು ಅವರಿಗೆ (ನನ್ನನ್ನೂ ಒಳಗೊಂಡು) ಸಾಧ್ಯವಾಗಿಲ್ಲ.

PC : Freepik

ಏನೇ ಆಗಲಿ ಈ ಶಂಖದ ಹುಳುಗಳ ಬೆಳೆ ನಮ್ಮ ತೋಟಕ್ಕೆ ಬಲು ಒಳ್ಳೆಯದು ಮಾಡಿದೆ. ಇವು ಇಡುವ ಮಿಲಿ ಗ್ರಾಮ್‌ ಲೆಕ್ಕದ ಹಿಕ್ಕೆಗೆ ಬೆಲೆ ಕಟ್ಟಲಾಗದು. ಅದು ತೂಕಕ್ಕಾಗಲಿ ಲೆಕ್ಕಕ್ಕಾಗಲಿ ಸಿಗುವಂತಾದ್ದಲ್ಲ. ಅದು ಅನೂಹ್ಯ, ಆದರೆ ಲೆಕ್ಕ ಮಾಡುವವರಿಗೆ ಒಳ್ಳೆಯ ವಸ್ತು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ: ಕೋಟಿ ಕೀಟಗಳ ಉಳುಮೆ, ಹುಲ್ಲು ಬೇರಿನ ಮಹಿಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಂಖದ ಹುಳುಗಳು ಅಡಿಕೆಗೆ ಆಗಿ ಬರುವುದಿಲ್ಲ. ಹಗಲುಹೊತ್ತು ಮರದ ಬುಡ ಸೇರುವ ಅವು ಸಂಜೆಯಾದಂತೆ ಮರ ಏರಿ ಎಳೆಯ ಸಿಂಗಾರದ (ಹೂ ಗೊಂಚಲು) ಬುಡದ ತಿರುಳನ್ನು ತಿಂದು ಇಡೀ ಗೊನೆಯನ್ನು ಹಾಳುಮಾಡುತ್ತವೆ. ಆದ್ರಿಂದ, ಅಡಿಕೆ ತೋಟದಲ್ಲಿ ಅವು ಅನಪೇಕ್ಷಿತ ಅತಿಥಿಗಳು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...