Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

- Advertisement -
- Advertisement -

ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಿಮಗೆ ನಮ್ಮ ತೋಟದಲ್ಲಿ ಹುಡುಕಿದರೂ ಒಂದು ಶಂಖದ ಹುಳು ಸಿಕ್ಕುವುದಿಲ್ಲ. ಅವು ಇದ್ದ ಕುರುಹಾಗಿ ಅಲ್ಲಿ ಇಲ್ಲಿ ಬಿದ್ದ ಅವುಗಳ ಚಿಪ್ಪುಗಳು ಸಿಕ್ಕಿದರೆ ಸಿಕ್ಕಬಹುದು ಅಷ್ಟೆ.

ಜೂನ್‌ ಜುಲೈ ಹೊತ್ತಿಗೆ ಅಲ್ಲೊಂದು ಇಲ್ಲೊಂದು ಬೀಜರೂಪವಾಗಿ ಕಾಣಿಸಿಕೊಳ್ಳುತ್ತವೆ. ಹಿಂಗಾರು ಮಳೆ ಆರಂಭವಾಗಿ ನೆಲ ತೇವಗೊಂಡು ಜೀವ ಸಂಚಾರದ ವೇಗ ಹೆಚ್ಚುತ್ತದೆ. ಆಗಸ್ಟ್‌ ಸೆಪ್ಟೆಂಬರ್‌ ಹೊತ್ತಿಗೆ ಎಲ್ಲಿ ಕಾಲಿಟ್ಟರೂ ಈ ಶಂಖದ ಹುಳುವಿನ ಮೇಲೆ ಇಡಬೇಕಾಗುತ್ತದೆ. ಈಗ್ಗೆ ಹತ್ತು ವರ್ಷಗಳ ಹಿಂದೆ ಹೀಗಿರಲಿಲ್ಲ. ಆಗ ಅವು ತುಂಬಾ ವಿರಳವಾಗಿದ್ದವು. ಅವು ಎಲ್ಲಿದ್ದವೋ ಏನೋ ಗೊತ್ತಿಲ್ಲ, ವರ್ಷಗಳೆರಡು ಕಳೆದಂತೆ ಅವುಗಳ ಸಂಖ್ಯೆ ಲಕ್ಷದ ಲೆಕ್ಕದಲ್ಲಿ ಹೆಚ್ಚಿದವು. ಈಗ ಪ್ರತಿ ವರ್ಷ ಸೆಪ್ಟೆಂಬರ್‌, ಶಂಖದ ಹುಳುವಿನ ತಿಂಗಳಾಗಿ ಪರಿವರ್ತನೆಯಾಗಿದೆ. ಆಗಸ್ಟ್‌ ತಿಂಗಳಲ್ಲಿ ನಿಮಗೆ ಒಂಟಿ ಹುಳ ಕಾಣುವುದೇ ಇಲ್ಲ, ಏನಿದ್ದರೂ ಜಂಟಿ ಹುಳುಗಳೇ. ನಂತರದ ಒಂದು ತಿಂಗಳ ಅವಧಿಯಲ್ಲಿ ಎಲ್ಲಿ ನೋಡಿದರೂ ಹೆಸರು ಕಾಳು ಗಾತ್ರದ ಹಳದಿ ಮೊಟ್ಟೆಗಳ ಪುಟ್ಟ ಪುಟ್ಟ ರಾಶಿಗಳನ್ನು ನೋಡಬಹುದು. ಇವು ಸುಮಾರು ಮುವತ್ತರಿಂದ ನಲವತ್ತು ಮೊಟ್ಟೆಗಳನ್ನು ಇಡುತ್ತವೆ. ಯಾವ ಪ್ರತಿರೋಧದ ದರಕಾರವೂ ಇಲ್ಲದೆ ತಾಯಿ ಹುಳುದ ಕಾವೂ ಇಲ್ಲದೆ ಮರಿಯಾಗುತ್ತವೆ. ಆ ಮೊಟ್ಟೆಗಳನ್ನು ಇತರ ಯಾವ ಜೀವಿಗಳೂ ತಿಂದಂತೆ ಕಾಣುವುದಿಲ್ಲ. ಹೀಗಾಗಿ ಅವುಗಳ ಸಂಖ್ಯೆ ಲಕ್ಷ ಲಕ್ಷವಾಗಿ ಹಬ್ಬುತ್ತದೆ. ತೋಟವೆಲ್ಲಾ ಶಂಖದ ಹುಳುಗಳಿಂದ ಅಲಂಕೃತವಾಗುತ್ತದೆ. ಕಾಲಿಟ್ಟ ಕಡೆಯೆಲ್ಲಾ ಮಾರಣಹೋಮವೂ ನಡೆಯುತ್ತಿರುತ್ತದೆ. ನರಿಗ್‌ ನರಿಗ್‌ ಎಂಬ ಶಬ್ಧ ಮಾರ್ದನಸುತ್ತದೆ.

ಶಂಖದ ಹುಳುಗಳು ಕೊಳೆತ ಕಸ ಕಡ್ಡಿ, ತಿಂದು ಜೀವಿಸುತ್ತವೆ. ಅವುಗಳಿಗೆ ಹಸಿರು ಸೊಪ್ಪು ವರ್ಜ್ಯವಲ್ಲ. ಅದಕ್ಕೆ ಹೊಲದ ರೈತರಿಗೆ ಈ ಶಂಖದ ಹುಳು ಆಗಿಬರುವುದಿಲ್ಲ. ಅವು ಹೊಲದಲ್ಲಿನ ಎಳೆ ಬೆಳೆಯನ್ನು ನಗ್ಗುಯ್ಯುತ್ತವೆ, ರೇಷ್ಮೆಹುಳು ಬೇಕು ಇವು ಬೇಡ, ನೆಲಸಮ ಮಾಡಿಬಿಡುತ್ತವೆ. ಅವುಗಳನ್ನು ನಿಯಂತ್ರಿಸಲು ರೈತರು ನಾನಾ ಬಗೆಯ ಕಸರತ್ತು ನಡೆಸುತ್ತಾರೆ. ಆದರೆ ನಮ್ಮಂತಹ ಉಳುಮೆ ಇಲ್ಲದ ತೋಟಗಳು ಅವಕ್ಕೆ ಕ್ಷೇಮಸ್ವರ್ಗ. ಯಾರ ಭಯವೂ ಇಲ್ಲದೇ ನಮ್ಮಲ್ಲಿಗೆ ಬಂದು ಇದ್ದು ಮರಿಮಾಡಿಕೊಂಡು ಬೆಳೆದು ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುವ ಹೊತ್ತಿಗೆ ತಮ್ಮ ಆಟ ಮುಗಿಸಿ ಕಣ್ಮರೆಯಾಗುತ್ತವೆ.

ಆ ಲಕ್ಷ ಲಕ್ಷ ಜೀವಿಗಳು ವಿಸರ್ಜಿಸಿದ ಮಲ ಮೂತ್ರದ ಪಾತ್ರ ಗಿಡಮರಗಳಲ್ಲಿ ಫಲದ ರೂಪದಲ್ಲಿ ಪಲ್ಲವಿಸತೊಡಿಗಿರುತ್ತದೆ. ಅಷ್ಟೇ ಅಲ್ಲದೆ ಅವು ತಮ್ಮನ್ನು ತಾವು ಇಲ್ಲಿಯೆ ವಿಸರ್ಜಿಸಿಕೊಳ್ಳುವ ಕಾರಣ ಅವು ಋಣಮುಕ್ತವಾಗುತ್ತವೆ.

ತೋಟಕ್ಕೆ ಬಂದವರು ಹೇಳುತ್ತಾರೆ “ನಿಮ್ಮ ತೋಟ ಚೆನ್ನಾಗಿದೆ”. ಅವರು ಮುಂದುವರಿಸುತ್ತಾರೆ, ನಿಮ್ಮ ತೋಟದಲ್ಲಿ ಶಂಖದ ಹುಳುಗಳು ಅತಿಯಾಗಿವೆ. ಎರಡೂ ನಿಜವೇ. ಅವು ಅತಿಯಾಗಿರಲು ಅವಕ್ಕೆ ಇಲ್ಲಿ ತಾಣವಿದೆ, ಆಹಾರವಿದೆ, ಅವಕ್ಕೆ ಗಟ್ಟಿಯಾದ ಚಿಪ್ಪಿನ ಕವಚವಿದೆ.

ಸಾಂಬಾರ್ಗಾಗೆಗಳು ಈ ಶಂಖದ ಹುಳುಗಳನ್ನು ತಿನ್ನುತ್ತವಾದರೂ ಅಷ್ಟು ಇಷ್ಟಪಟ್ಟು ತಿನ್ನುವುದಿಲ್ಲ, ನವಿಲುಗಳು ಏನೂ ಆಹಾರ ಸಿಕ್ಕದಿದ್ದಾಗ ಮಾತ್ರ ಹಾಗೊಂದು ಹೀಗೊಂದು ಈ ಶಂಖದ ಹುಳುಗಳನ್ನು ಸೇವಿಸುವ ಪರಿಪಾಠ ಇಟ್ಟುಕೊಂಡಿವೆ. ಮಿಕ್ಕಂತೆ ಇವುಗಳಿಗೆ ಇನ್ನಾರ ಭಯವೂ ಇರುವಂತಿಲ್ಲ. ನಮ್ಮಲ್ಲಿನ ಕೆಲವು ಜನ ಒಮ್ಮೊಮ್ಮೆ ಐವತ್ತರಿಂದ ನೂರು ಗ್ರಾಮ್‌ ತೂಗುವ ಈ ಶಂಖದ ಹುಳುಗಳನ್ನು ನೋಡಿ ತಿನ್ನುವ ಆಸೆ ವ್ಯಕ್ತಪಡಿಸಿದರೂ ಇನ್ನು ಅದು ಅವರಿಗೆ (ನನ್ನನ್ನೂ ಒಳಗೊಂಡು) ಸಾಧ್ಯವಾಗಿಲ್ಲ.

PC : Freepik

ಏನೇ ಆಗಲಿ ಈ ಶಂಖದ ಹುಳುಗಳ ಬೆಳೆ ನಮ್ಮ ತೋಟಕ್ಕೆ ಬಲು ಒಳ್ಳೆಯದು ಮಾಡಿದೆ. ಇವು ಇಡುವ ಮಿಲಿ ಗ್ರಾಮ್‌ ಲೆಕ್ಕದ ಹಿಕ್ಕೆಗೆ ಬೆಲೆ ಕಟ್ಟಲಾಗದು. ಅದು ತೂಕಕ್ಕಾಗಲಿ ಲೆಕ್ಕಕ್ಕಾಗಲಿ ಸಿಗುವಂತಾದ್ದಲ್ಲ. ಅದು ಅನೂಹ್ಯ, ಆದರೆ ಲೆಕ್ಕ ಮಾಡುವವರಿಗೆ ಒಳ್ಳೆಯ ವಸ್ತು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ: ಕೋಟಿ ಕೀಟಗಳ ಉಳುಮೆ, ಹುಲ್ಲು ಬೇರಿನ ಮಹಿಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಂಖದ ಹುಳುಗಳು ಅಡಿಕೆಗೆ ಆಗಿ ಬರುವುದಿಲ್ಲ. ಹಗಲುಹೊತ್ತು ಮರದ ಬುಡ ಸೇರುವ ಅವು ಸಂಜೆಯಾದಂತೆ ಮರ ಏರಿ ಎಳೆಯ ಸಿಂಗಾರದ (ಹೂ ಗೊಂಚಲು) ಬುಡದ ತಿರುಳನ್ನು ತಿಂದು ಇಡೀ ಗೊನೆಯನ್ನು ಹಾಳುಮಾಡುತ್ತವೆ. ಆದ್ರಿಂದ, ಅಡಿಕೆ ತೋಟದಲ್ಲಿ ಅವು ಅನಪೇಕ್ಷಿತ ಅತಿಥಿಗಳು.

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...