Homeಮುಖಪುಟಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

- Advertisement -
- Advertisement -

ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಎಂಬುದೇನೋ ಗಾದೆ. (ಇದು ಕೂಡ ಮಹಿಳೆಯರ ವಿರುದ್ಧದ ಷಡ್ಯಂತ್ರವೇ!). ಅದಿರಲಿ, ಈ ಹುಡುಗಿ ತಾನು ಪ್ರೀತಿಸಿದವನನ್ನು, ಅದಕ್ಕೂ ಹೆಚ್ಚಾಗಿ ತನ್ನ ಶ್ರೇಯೋಭಿವೃದ್ಧಿಗೆ ಎಲ್ಲ ರೀತಿಯಲ್ಲೂ ನೆರವು ನೀಡುತ್ತಿದ್ದವನನ್ನು ಮದುವೆಯಾಗಲು ಒಂದೇ ಒಂದು ಸುಳ್ಳನ್ನು ಪೋಷಕರಿಗೆ ಹೇಳಿದಳು. ತೌಫೀಕ್‌ನನ್ನು ರಾಹುಲ್ ವರ್ಮಾ ಎಂದು ಪೋಷಕರಿಗೆ ಪರಿಚಯಿಸಿ ಮದುವೆಯಾದಳು.

ಪ್ರೀತಿಗೆ ಬದ್ಧನಾಗಿದ್ದ ತೌಫಿಕ್ ಹಿಂದೂ ಸಂಪ್ರದಾಯದಂತೆ ವಿವಾಹವಾದ. ಈ ಸುಳ್ಳೇನೂ ಮಹಾಪರಾಧವಲ್ಲ ಎಂದು ನಂಬಿದ್ದ ಪ್ರಿಯಾ ಎದುರು ಧುತ್ತನೆ ಈಗ ಉತ್ತರಪ್ರದೇಶದ ಮತಾಂತರ ವಿರೋಧಿ ಕಾನೂನು ಎಂಬ ‘ಭಯಂಕರ’ ಭೂತ ಎದುರಾಗಿದೆ. ಇದರ ಪರಿಣಾಮ, ಸುಳ್ಳು ಪರಿಚಯ ಮಾಡಿಕೊಂಡು ಮತಾಂತರ ಮಾಡಲು ತೌಫಿಕ್ ಮದುವೆಯಾಗಿದ್ದ, ಇದು ಲವ್ ಜಿಹಾದ್ ಎಂದೆಲ್ಲ ಕತೆ ಕಟ್ಟಿದ ಬಿಜೆಪಿ ನಾಯಕನೊಬ್ಬ ಪ್ರಿಯಾ ಪೋಷಕರ ತಲೆ ಕೆಡಿಸಿದ.

ಈಗ ತೌಫಿಕ್ ಜೈಲಿನಲ್ಲಿ, ಪ್ರಿಯಾ ಪೋಷಕರ ಮನೆಯೆಂಬ ಜೈಲಿಗಿಂತ ಭೀಕರವಾದ ಬಂಧನದಲ್ಲಿ!

ಬರೀ ಇಂತಹ ಉಪದ್ಯಾಪಿ ಕಾನೂನುಗಳನ್ನೇ ಮಾಡುವುದಕ್ಕೆಂದೇ ಸಂಘ ಪರಿವಾರ ಸೃಷ್ಟಿಸಿರುವ ಯೋಗಿ ಆದಿತ್ಯನಾಥ ಎಂಬ ಮುಖ್ಯಮಂತ್ರಿ ಲವ್ ಜಿಹಾದ್ ‘ತಡೆಯಲು’ ಮತಾಂತರ ವಿರೋಧ ಕಾನೂನು ಜಾರಿಗೆ ತಂದರು. ಅದೀಗ ಮುಸ್ಲಿಂ ಮತ್ತು ಹಿಂದೂ ಯುವ-ಯುವತಿಯರು ಪ್ರೀತಿಸಲೇಬಾರದು ಮತ್ತು ಮದುವೆಯಾಗಲೇಬಾರದು ಎಂಬ ಅಲಿಖಿತ ಜಂಗಲ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದೆ. ಬಿಜೆಪಿ ಅಧಿಕಾರವಿರುವ ಹಿಮಾಚಲ ಪ್ರದೇಶ, ಮಧ್ಯಪ್ರದೇಶಗಳಲ್ಲೂ ಈ ಜಂಗಲ್ ಕಾಯ್ದೆ ಜಾರಿಗೆ ಬಂದಿದ್ದು, ಗುಜರಾತ್ ಸರ್ಕಾರವು ಜಾರಿಗೆ ತರಲು ತಯ್ಯಾರಿ ನಡೆಸಿದೆ. ಕರ್ನಾಟಕದಲ್ಲೂ ಕೆಲವು ಸಚಿವರು ಈ ಬಗ್ಗೆ ರಾಗ ಎಳೆದಿದ್ದಾರೆ. ಡ್ರಾಫ್ಟ್ ಹೇಗೂ ಯೋಗಿ ಬಳಿ ಸಿದ್ಧವಿದೆಯಲ್ಲ? ಸುಗ್ರೀವಾಜ್ಞೆ ಎಂಬ ಜನವಿರೋಧಿ ಅಸ್ತ್ರವಿದೆಯಲ್ಲ? ಇಲ್ಲೂ ಜಾರಿಗೆ ಬರುವ ದಿನ ದೂರವಿಲ್ಲ!

ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರಿಯಾ (29) ಮತ್ತು ತೌಫಿಕ್ (32) ಕಳೆದ ತಿಂಗಳಷ್ಟೇ ಪ್ರಿಯಾ ಪೋಷಕರು-ಸಂಬಂಧಿಕರ ಮತ್ತು ಪರಿಚಯಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಸ್ವಲ್ಪ ದಿನಗಳ ನಂತರ ರಾಹುಲ್ ವರ್ಮಾ ಅಲ್ಲ ತೌಫಿಕ್ ಎಂದು ಗೊತ್ತಾದ ನಂತರ ಆರೆಸ್ಸೆಸ್ ಮಾಜಿ ಸದಸ್ಯ ಮತ್ತು ಬಿಜೆಪಿಯ ಹಾಲಿ ನಾಯಕನೊಬ್ಬ ಪ್ರಿಯಾ ತಂದೆ ಸರ್ವೇಶ್ ಶುಕ್ಲಾರನ್ನು ಭೇಟಿಯಾಗಿ, ಇದು ಲವ್ ಜಿಹಾದ್ ಕೇಸು, ಕೂಡಲೇ ದೂರು ದಾಖಲಿಸಿ ಎಂದು ಗಂಟುಬಿದ್ದ. ಆಗ ವಿವಾಹ ಸಂಬಂಧದ ಸಂಪ್ರದಾಯ ಆಚರಣೆಗೆಂದು ತವರಿನಲ್ಲೇ ಇದ್ದ ಪ್ರಿಯಾ ದೂರು ಕೊಡದಂತೆ ಪೋಷಕರಿಗೆ ಕಾಡಿ ಬೇಡಿದಳು.

‘ಆತ ತನಗೆ ಮೋಸ ಮಾಡಿಲ್ಲ. ನೀವು ಮುಸ್ಲಿಂನನ್ನು ಒಪ್ಪುವುದಿಲ್ಲ ಎಂಬ ಕಾರಣಕ್ಕೆ ನಾನೇ ಆತನ ಹೆಸರು ಮರೆಮಾಚಿದೆ. ಆತ ಎಂದೂ ಮತಾಂತರಕ್ಕೆ ಒತ್ತಾಯಿಸಿಲ್ಲ’ ಎಂದು ವಿನಂತಿಸಿದರೂ ಕೇಳಲಿಲ್ಲ. ದೂರು ದಾಖಲಿಸಿಯೇ ಬಿಟ್ಟರು. ಪೊಲೀಸರು ಮನೆಗೆ ಬಂದು ತೌಫಿಕ್ ವಿರುದ್ಧ ಪ್ರಿಯಾ ಹೇಳಿಕೆ ಪಡೆದು ಹೋಗಿ ತೌಫಿಕನನ್ನು ಅರೆಸ್ಟ್ ಮಾಡಿದ್ದಾರೆ.

ಈಗ ಮತ್ತೊಂದು ಮದುವೆಗೆ ಪ್ರಿಯಾ ಮೇಲೆ ಒತ್ತಡ ಹಾಕಲಾಗುತ್ತಿದೆ. ಆದರೆ ಪ್ರಿಯಾ ಒಪ್ಪುತ್ತಿಲ್ಲ. ‘ದಿ ಪ್ರಿಂಟ್’ ಪ್ರತಿನಿಧಿ ಅವರ ಮನೆಗೆ ಹೋದಾಗ, ಪ್ರಿಯಾಗೆ ಮುಕ್ತವಾಗಿ ಮಾತಾಡುವ ಅವಕಾಶವನ್ನು ಪೋಷಕರು ನೀಡಲಿಲ್ಲ. ಪಕ್ಕಕ್ಕೆ ಕರೆದು ಮೆಲ್ಲಗೆ ಪ್ರತಿನಿಧಿಯ ನಂಬರ್ ಪಡೆದ ಪ್ರಿಯಾ ನಂತರ ಫೋನಿನಲ್ಲಿ ಎಲ್ಲವನ್ನೂ ವಿವರಿಸಿ, ‘ನನ್ನ ಸಲುವಾಗಿ ತೌಫಿಕ್ ಹಿಂದೂ ಧರ್ಮಕ್ಕೆ ಮತಾಂತರವಾಗಲು ಸಿದ್ಧನಾಗಿದ್ದ. ಅಂತಹ ಹುಡುಗ ಏಕೆ ನನ್ನನ್ನು ಮತಾಂತರಕ್ಕೆ ಒತ್ತಾಯಿಸುತ್ತಾನೆ? ನನ್ನ ಮಾತನ್ನು ಇಲ್ಲಿ ಕೇಳುವವರೇ ಇಲ್ಲ’ ಎಂದು ತನ್ನ ಸಂಕಟ ಹೇಳಿಕೊಂಡಿದ್ದಾಳೆ.

ಅಂದಂತೆ, ದೂರಿನಲ್ಲಿ ಎಲ್ಲೂ ಮತಾಂತರದ ಉದ್ದೇಶದ ಪ್ರಸ್ತಾಪವಿಲ್ಲ! ಇದನ್ನೂ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ‘ಆದರೆ, ಯುವತಿಯೇ ಹೇಳಿಕೆ ಕೊಟ್ಟ ಮೇಲೆ ನಾವೇನು ಮಾಡುವುದು?’ ಎಂದಿದ್ದಾರೆ.
ಆದರೆ, ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸದೇ ಮನೆಯಲ್ಲಿಯೇ ಹೇಳಿಕೆ ಪಡೆದ ಪೊಲೀಸರು, ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ಪಡೆದವರಂತೆ ಎಫ್‌ಐಆರ್ ತಯಾರಿಸಿದ್ದಾರೆ. ಬೇರೊಬ್ಬರ ಹೆಸರಲ್ಲಿ ಮದುವೆಯಾಗಿರುವುದು, ಮೋಸ, ದುರುದ್ದೇಶದಿಂದ ಮದುವೆ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ ಈ ಸೆಕ್ಷನ್‌ಗಳ ಜೊತೆಗೆ, 2020 ರ ಮತಾಂತರ ವಿರೋಧಿ ಧಾರ್ಮಿಕ ಕಾಯ್ದೆಯ 3 ಮತ್ತು 6ನೆ ಸೆಕ್ಷನ್‌ಗಳಡಿ ತೌಫಿಕ್‌ನನ್ನು ಬಂಧಿಸಲಾಗಿದೆ.

‘ಮತಾಂತರದ ಉದ್ದೇಶಕ್ಕೆ ಮದುವೆ’ಯನ್ನು ಸೆಕ್ಷನ್ 3 ನಿಷೇಧಿಸಿದರೆ, ಸೆಕ್ಷನ್ 6, ‘ಕಾನೂನುಬಾಹಿರ ಮತಾಂತರಕ್ಕೆಂದೇ ನಡೆದ ಮದುವೆ’ಯನ್ನು ನಿಷೇಧಿಸುತ್ತದೆ. ಗಮನಿಸಬೇಕಾದ ಅಂಶ ದೂರಿನಲ್ಲೆಲ್ಲೂ ಮತಾಂತರದ ವಿಷಯವೇ ಪ್ರಸ್ತಾಪವಿಲ್ಲ. ಇದು ಏನನ್ನು ಸೂಚಿಸುತ್ತದೆ? ಸ್ಥಳೀಯ ಬಿಜೆಪಿ ನಾಯಕರ ಅಣತಿಯಂತೆ ಪೊಲೀಸರು ಈ ಕಾಯ್ದೆಯನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು ಎಂಬುದನ್ನಲ್ಲವೆ?

ಪ್ರಿಯಾ ಮತ್ತು ತೌಫಿಕ್ ಏನೂ ಹದಿಹರೆಯ ಉಕ್ಕಿ ಉತ್ಸಾಹದಲ್ಲಿ ಪ್ರೀತಿಸಿದವರಲ್ಲ. ಈಗ 29 ವರ್ಷವಾಗಿರುವ ಪ್ರಿಯಾ ಮತ್ತು 32 ವರ್ಷದ ತೌಫಿಕ್ ಎರಡು ವರ್ಷದ ಹಿಂದಿನಿಂದಲೇ ಪ್ರೀತಿಸುತ್ತಿದ್ದಾರೆ. ಪ್ರಿಯಾ ಸೋಷಿಯಾಲಜಿಯಲ್ಲಿ ಡಬಲ್ ಎಂಎ ಪಡೆದಿದ್ದು, ಐಪಿಎಸ್ ಆಗುವ ಉದ್ದೇಶ ಹೊಂದಿದ್ದಾಳೆ.
‘ತೌಫಿಕ್ ಕೂಡ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸಿದ್ದು, ಇಬ್ಬರೂ ಸೇರಿ ಅಭ್ಯಾಸ ಮಾಡುವ ಗುರಿ ಹೊಂದಿದ್ದೆವು. ಆತ ನನಗೆ ಹಲವಾರು ಅಮೂಲ್ಯ ಪುಸ್ತಕಗಳನ್ನು ತಂದು ಕೊಟ್ಟಿದ್ದಾನೆ. ಆತನ ಧರ್ಮದ ವಿಷಯದಲ್ಲಿ ಹೇಳಿದ ಸುಳ್ಳು ಅವನನ್ನು ಜೈಲಿಗೆ ತಳ್ಳಲಿದೆ ಎಂಬುದನ್ನು ನಾವಿಬ್ಬರೂ ಊಹಿಸಿರಲೇ ಇಲ್ಲ’ ಎಂದು ಫೋನಿನಲ್ಲಿ ಪ್ರಿಂಟ್ ಪ್ರತಿನಿಧಿ ಎದುರು ಪ್ರಿಯಾ ಹೇಳಿಕೊಂಡಿದ್ದಾಳೆ.

ಅಸಹಾಯಕ ಸ್ಥಿತಿಯಲ್ಲಿರುವ ಆಕೆ ಪ್ರಿಂಟ್ ಪ್ರತಿನಿಧಿಯ ನೆರವನ್ನು ಕೇಳಿದ್ದಾಳೆ. ‘ಒತ್ತಡದಲ್ಲಿ ನಾನು ನೀಡಿದ ಹೇಳಿಕೆ ಪರಿಗಣಿಸಬೇಡಿ ಎಂದು ಸತ್ಯ ಹೇಳಿದ ನಂತರವೂ ದೂರು ದಾಖಲಾಗಿದೆ. ಈಗ ನನ್ನ ಗಂಡನನ್ನು ನಾನು ಭೇಟಿ ಮಾಡಬೇಕು. ಪೊಲಿಸರು ಅದಕ್ಕೆ ಅವಕಾಶ ನೀಡಲಾರರು. ಕೋರ್ಟ್ ಮೊರೆ ಹೋದರೆ ನ್ಯಾಯ ಸಿಗಬಹುದೇ? ಎಂದು ಪ್ರಿಂಟ್ ಪ್ರತಿನಿಧಿ ಜೊತೆ ಚರ್ಚಿಸಿರುವ ಪ್ರಿಯ ಕೋರ್ಟ್ ಮೆಟ್ಟಿಲೇರುವ ಉದ್ದೇಶ ಹೊಂದಿದ್ದಾಳೆ.

ಆರೆಸ್ಸೆಸ್ ಮಾಜಿ ಸದಸ್ಯ ಮತ್ತು ಈಗ ಕಾನ್ಪುರ ಮತ್ತು ಬುಂದೇಲ್‌ಖಂಡ್ ವಿಭಾಗದ ಬಿಜೆಪಿ ಮುಖ್ಯಸ್ಥನಾಗಿರುವ ವಿನಯ್ ಮತ್ತು ಆತನ ಹಿಂಬಾಲಕರ ಚಿತಾವಣೆಯಿಂದ, ಮತಾಂತರ ವಿರೋಧಿ ಕಾಯ್ದೆ ಎಂಬ ಜೀವವಿರೋಧಿ ‘ಸಿದ್ಧಾಂತ’ದಿಂದ ಉಜ್ವಲ ಕನಸುಗಳನ್ನು ಹೊತ್ತ ದಂಪತಿ ಈಗ ಬಂಧನದಲ್ಲಿದ್ದಾರೆ. ಒಂದು ಪೊಲೀಸ್ ಬಂಧನ, ಇನ್ನೊಂದು ಕೌಟುಂಬಿಕ ಬಂಧನ. ಎರಡರ ಹಿಂದೆಯೂ ಆಳುವ ಪಕ್ಷ ಉತ್ತರಪ್ರದೇಶದಲ್ಲಿ ನಿರ್ಮಿಸಿರುವ ಕಲುಷಿತ ಸಾಮಾಜಿಕ ವಾತಾವರಣವೇ ಕೆಲಸ ಮಾಡುತ್ತಿದೆ.

  • ಮಲ್ಲನಗೌಡರ್ ಪಿ.ಕೆ
  • ಆಧಾರ: ದಿ ಪ್ರಿಂಟ್

ಇದನ್ನೂ ಓದಿ: ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...