Homeಮುಖಪುಟಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

- Advertisement -
- Advertisement -

ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಎಂಬುದೇನೋ ಗಾದೆ. (ಇದು ಕೂಡ ಮಹಿಳೆಯರ ವಿರುದ್ಧದ ಷಡ್ಯಂತ್ರವೇ!). ಅದಿರಲಿ, ಈ ಹುಡುಗಿ ತಾನು ಪ್ರೀತಿಸಿದವನನ್ನು, ಅದಕ್ಕೂ ಹೆಚ್ಚಾಗಿ ತನ್ನ ಶ್ರೇಯೋಭಿವೃದ್ಧಿಗೆ ಎಲ್ಲ ರೀತಿಯಲ್ಲೂ ನೆರವು ನೀಡುತ್ತಿದ್ದವನನ್ನು ಮದುವೆಯಾಗಲು ಒಂದೇ ಒಂದು ಸುಳ್ಳನ್ನು ಪೋಷಕರಿಗೆ ಹೇಳಿದಳು. ತೌಫೀಕ್‌ನನ್ನು ರಾಹುಲ್ ವರ್ಮಾ ಎಂದು ಪೋಷಕರಿಗೆ ಪರಿಚಯಿಸಿ ಮದುವೆಯಾದಳು.

ಪ್ರೀತಿಗೆ ಬದ್ಧನಾಗಿದ್ದ ತೌಫಿಕ್ ಹಿಂದೂ ಸಂಪ್ರದಾಯದಂತೆ ವಿವಾಹವಾದ. ಈ ಸುಳ್ಳೇನೂ ಮಹಾಪರಾಧವಲ್ಲ ಎಂದು ನಂಬಿದ್ದ ಪ್ರಿಯಾ ಎದುರು ಧುತ್ತನೆ ಈಗ ಉತ್ತರಪ್ರದೇಶದ ಮತಾಂತರ ವಿರೋಧಿ ಕಾನೂನು ಎಂಬ ‘ಭಯಂಕರ’ ಭೂತ ಎದುರಾಗಿದೆ. ಇದರ ಪರಿಣಾಮ, ಸುಳ್ಳು ಪರಿಚಯ ಮಾಡಿಕೊಂಡು ಮತಾಂತರ ಮಾಡಲು ತೌಫಿಕ್ ಮದುವೆಯಾಗಿದ್ದ, ಇದು ಲವ್ ಜಿಹಾದ್ ಎಂದೆಲ್ಲ ಕತೆ ಕಟ್ಟಿದ ಬಿಜೆಪಿ ನಾಯಕನೊಬ್ಬ ಪ್ರಿಯಾ ಪೋಷಕರ ತಲೆ ಕೆಡಿಸಿದ.

ಈಗ ತೌಫಿಕ್ ಜೈಲಿನಲ್ಲಿ, ಪ್ರಿಯಾ ಪೋಷಕರ ಮನೆಯೆಂಬ ಜೈಲಿಗಿಂತ ಭೀಕರವಾದ ಬಂಧನದಲ್ಲಿ!

ಬರೀ ಇಂತಹ ಉಪದ್ಯಾಪಿ ಕಾನೂನುಗಳನ್ನೇ ಮಾಡುವುದಕ್ಕೆಂದೇ ಸಂಘ ಪರಿವಾರ ಸೃಷ್ಟಿಸಿರುವ ಯೋಗಿ ಆದಿತ್ಯನಾಥ ಎಂಬ ಮುಖ್ಯಮಂತ್ರಿ ಲವ್ ಜಿಹಾದ್ ‘ತಡೆಯಲು’ ಮತಾಂತರ ವಿರೋಧ ಕಾನೂನು ಜಾರಿಗೆ ತಂದರು. ಅದೀಗ ಮುಸ್ಲಿಂ ಮತ್ತು ಹಿಂದೂ ಯುವ-ಯುವತಿಯರು ಪ್ರೀತಿಸಲೇಬಾರದು ಮತ್ತು ಮದುವೆಯಾಗಲೇಬಾರದು ಎಂಬ ಅಲಿಖಿತ ಜಂಗಲ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದೆ. ಬಿಜೆಪಿ ಅಧಿಕಾರವಿರುವ ಹಿಮಾಚಲ ಪ್ರದೇಶ, ಮಧ್ಯಪ್ರದೇಶಗಳಲ್ಲೂ ಈ ಜಂಗಲ್ ಕಾಯ್ದೆ ಜಾರಿಗೆ ಬಂದಿದ್ದು, ಗುಜರಾತ್ ಸರ್ಕಾರವು ಜಾರಿಗೆ ತರಲು ತಯ್ಯಾರಿ ನಡೆಸಿದೆ. ಕರ್ನಾಟಕದಲ್ಲೂ ಕೆಲವು ಸಚಿವರು ಈ ಬಗ್ಗೆ ರಾಗ ಎಳೆದಿದ್ದಾರೆ. ಡ್ರಾಫ್ಟ್ ಹೇಗೂ ಯೋಗಿ ಬಳಿ ಸಿದ್ಧವಿದೆಯಲ್ಲ? ಸುಗ್ರೀವಾಜ್ಞೆ ಎಂಬ ಜನವಿರೋಧಿ ಅಸ್ತ್ರವಿದೆಯಲ್ಲ? ಇಲ್ಲೂ ಜಾರಿಗೆ ಬರುವ ದಿನ ದೂರವಿಲ್ಲ!

ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರಿಯಾ (29) ಮತ್ತು ತೌಫಿಕ್ (32) ಕಳೆದ ತಿಂಗಳಷ್ಟೇ ಪ್ರಿಯಾ ಪೋಷಕರು-ಸಂಬಂಧಿಕರ ಮತ್ತು ಪರಿಚಯಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಸ್ವಲ್ಪ ದಿನಗಳ ನಂತರ ರಾಹುಲ್ ವರ್ಮಾ ಅಲ್ಲ ತೌಫಿಕ್ ಎಂದು ಗೊತ್ತಾದ ನಂತರ ಆರೆಸ್ಸೆಸ್ ಮಾಜಿ ಸದಸ್ಯ ಮತ್ತು ಬಿಜೆಪಿಯ ಹಾಲಿ ನಾಯಕನೊಬ್ಬ ಪ್ರಿಯಾ ತಂದೆ ಸರ್ವೇಶ್ ಶುಕ್ಲಾರನ್ನು ಭೇಟಿಯಾಗಿ, ಇದು ಲವ್ ಜಿಹಾದ್ ಕೇಸು, ಕೂಡಲೇ ದೂರು ದಾಖಲಿಸಿ ಎಂದು ಗಂಟುಬಿದ್ದ. ಆಗ ವಿವಾಹ ಸಂಬಂಧದ ಸಂಪ್ರದಾಯ ಆಚರಣೆಗೆಂದು ತವರಿನಲ್ಲೇ ಇದ್ದ ಪ್ರಿಯಾ ದೂರು ಕೊಡದಂತೆ ಪೋಷಕರಿಗೆ ಕಾಡಿ ಬೇಡಿದಳು.

‘ಆತ ತನಗೆ ಮೋಸ ಮಾಡಿಲ್ಲ. ನೀವು ಮುಸ್ಲಿಂನನ್ನು ಒಪ್ಪುವುದಿಲ್ಲ ಎಂಬ ಕಾರಣಕ್ಕೆ ನಾನೇ ಆತನ ಹೆಸರು ಮರೆಮಾಚಿದೆ. ಆತ ಎಂದೂ ಮತಾಂತರಕ್ಕೆ ಒತ್ತಾಯಿಸಿಲ್ಲ’ ಎಂದು ವಿನಂತಿಸಿದರೂ ಕೇಳಲಿಲ್ಲ. ದೂರು ದಾಖಲಿಸಿಯೇ ಬಿಟ್ಟರು. ಪೊಲೀಸರು ಮನೆಗೆ ಬಂದು ತೌಫಿಕ್ ವಿರುದ್ಧ ಪ್ರಿಯಾ ಹೇಳಿಕೆ ಪಡೆದು ಹೋಗಿ ತೌಫಿಕನನ್ನು ಅರೆಸ್ಟ್ ಮಾಡಿದ್ದಾರೆ.

ಈಗ ಮತ್ತೊಂದು ಮದುವೆಗೆ ಪ್ರಿಯಾ ಮೇಲೆ ಒತ್ತಡ ಹಾಕಲಾಗುತ್ತಿದೆ. ಆದರೆ ಪ್ರಿಯಾ ಒಪ್ಪುತ್ತಿಲ್ಲ. ‘ದಿ ಪ್ರಿಂಟ್’ ಪ್ರತಿನಿಧಿ ಅವರ ಮನೆಗೆ ಹೋದಾಗ, ಪ್ರಿಯಾಗೆ ಮುಕ್ತವಾಗಿ ಮಾತಾಡುವ ಅವಕಾಶವನ್ನು ಪೋಷಕರು ನೀಡಲಿಲ್ಲ. ಪಕ್ಕಕ್ಕೆ ಕರೆದು ಮೆಲ್ಲಗೆ ಪ್ರತಿನಿಧಿಯ ನಂಬರ್ ಪಡೆದ ಪ್ರಿಯಾ ನಂತರ ಫೋನಿನಲ್ಲಿ ಎಲ್ಲವನ್ನೂ ವಿವರಿಸಿ, ‘ನನ್ನ ಸಲುವಾಗಿ ತೌಫಿಕ್ ಹಿಂದೂ ಧರ್ಮಕ್ಕೆ ಮತಾಂತರವಾಗಲು ಸಿದ್ಧನಾಗಿದ್ದ. ಅಂತಹ ಹುಡುಗ ಏಕೆ ನನ್ನನ್ನು ಮತಾಂತರಕ್ಕೆ ಒತ್ತಾಯಿಸುತ್ತಾನೆ? ನನ್ನ ಮಾತನ್ನು ಇಲ್ಲಿ ಕೇಳುವವರೇ ಇಲ್ಲ’ ಎಂದು ತನ್ನ ಸಂಕಟ ಹೇಳಿಕೊಂಡಿದ್ದಾಳೆ.

ಅಂದಂತೆ, ದೂರಿನಲ್ಲಿ ಎಲ್ಲೂ ಮತಾಂತರದ ಉದ್ದೇಶದ ಪ್ರಸ್ತಾಪವಿಲ್ಲ! ಇದನ್ನೂ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ‘ಆದರೆ, ಯುವತಿಯೇ ಹೇಳಿಕೆ ಕೊಟ್ಟ ಮೇಲೆ ನಾವೇನು ಮಾಡುವುದು?’ ಎಂದಿದ್ದಾರೆ.
ಆದರೆ, ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸದೇ ಮನೆಯಲ್ಲಿಯೇ ಹೇಳಿಕೆ ಪಡೆದ ಪೊಲೀಸರು, ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ಪಡೆದವರಂತೆ ಎಫ್‌ಐಆರ್ ತಯಾರಿಸಿದ್ದಾರೆ. ಬೇರೊಬ್ಬರ ಹೆಸರಲ್ಲಿ ಮದುವೆಯಾಗಿರುವುದು, ಮೋಸ, ದುರುದ್ದೇಶದಿಂದ ಮದುವೆ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ ಈ ಸೆಕ್ಷನ್‌ಗಳ ಜೊತೆಗೆ, 2020 ರ ಮತಾಂತರ ವಿರೋಧಿ ಧಾರ್ಮಿಕ ಕಾಯ್ದೆಯ 3 ಮತ್ತು 6ನೆ ಸೆಕ್ಷನ್‌ಗಳಡಿ ತೌಫಿಕ್‌ನನ್ನು ಬಂಧಿಸಲಾಗಿದೆ.

‘ಮತಾಂತರದ ಉದ್ದೇಶಕ್ಕೆ ಮದುವೆ’ಯನ್ನು ಸೆಕ್ಷನ್ 3 ನಿಷೇಧಿಸಿದರೆ, ಸೆಕ್ಷನ್ 6, ‘ಕಾನೂನುಬಾಹಿರ ಮತಾಂತರಕ್ಕೆಂದೇ ನಡೆದ ಮದುವೆ’ಯನ್ನು ನಿಷೇಧಿಸುತ್ತದೆ. ಗಮನಿಸಬೇಕಾದ ಅಂಶ ದೂರಿನಲ್ಲೆಲ್ಲೂ ಮತಾಂತರದ ವಿಷಯವೇ ಪ್ರಸ್ತಾಪವಿಲ್ಲ. ಇದು ಏನನ್ನು ಸೂಚಿಸುತ್ತದೆ? ಸ್ಥಳೀಯ ಬಿಜೆಪಿ ನಾಯಕರ ಅಣತಿಯಂತೆ ಪೊಲೀಸರು ಈ ಕಾಯ್ದೆಯನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು ಎಂಬುದನ್ನಲ್ಲವೆ?

ಪ್ರಿಯಾ ಮತ್ತು ತೌಫಿಕ್ ಏನೂ ಹದಿಹರೆಯ ಉಕ್ಕಿ ಉತ್ಸಾಹದಲ್ಲಿ ಪ್ರೀತಿಸಿದವರಲ್ಲ. ಈಗ 29 ವರ್ಷವಾಗಿರುವ ಪ್ರಿಯಾ ಮತ್ತು 32 ವರ್ಷದ ತೌಫಿಕ್ ಎರಡು ವರ್ಷದ ಹಿಂದಿನಿಂದಲೇ ಪ್ರೀತಿಸುತ್ತಿದ್ದಾರೆ. ಪ್ರಿಯಾ ಸೋಷಿಯಾಲಜಿಯಲ್ಲಿ ಡಬಲ್ ಎಂಎ ಪಡೆದಿದ್ದು, ಐಪಿಎಸ್ ಆಗುವ ಉದ್ದೇಶ ಹೊಂದಿದ್ದಾಳೆ.
‘ತೌಫಿಕ್ ಕೂಡ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸಿದ್ದು, ಇಬ್ಬರೂ ಸೇರಿ ಅಭ್ಯಾಸ ಮಾಡುವ ಗುರಿ ಹೊಂದಿದ್ದೆವು. ಆತ ನನಗೆ ಹಲವಾರು ಅಮೂಲ್ಯ ಪುಸ್ತಕಗಳನ್ನು ತಂದು ಕೊಟ್ಟಿದ್ದಾನೆ. ಆತನ ಧರ್ಮದ ವಿಷಯದಲ್ಲಿ ಹೇಳಿದ ಸುಳ್ಳು ಅವನನ್ನು ಜೈಲಿಗೆ ತಳ್ಳಲಿದೆ ಎಂಬುದನ್ನು ನಾವಿಬ್ಬರೂ ಊಹಿಸಿರಲೇ ಇಲ್ಲ’ ಎಂದು ಫೋನಿನಲ್ಲಿ ಪ್ರಿಂಟ್ ಪ್ರತಿನಿಧಿ ಎದುರು ಪ್ರಿಯಾ ಹೇಳಿಕೊಂಡಿದ್ದಾಳೆ.

ಅಸಹಾಯಕ ಸ್ಥಿತಿಯಲ್ಲಿರುವ ಆಕೆ ಪ್ರಿಂಟ್ ಪ್ರತಿನಿಧಿಯ ನೆರವನ್ನು ಕೇಳಿದ್ದಾಳೆ. ‘ಒತ್ತಡದಲ್ಲಿ ನಾನು ನೀಡಿದ ಹೇಳಿಕೆ ಪರಿಗಣಿಸಬೇಡಿ ಎಂದು ಸತ್ಯ ಹೇಳಿದ ನಂತರವೂ ದೂರು ದಾಖಲಾಗಿದೆ. ಈಗ ನನ್ನ ಗಂಡನನ್ನು ನಾನು ಭೇಟಿ ಮಾಡಬೇಕು. ಪೊಲಿಸರು ಅದಕ್ಕೆ ಅವಕಾಶ ನೀಡಲಾರರು. ಕೋರ್ಟ್ ಮೊರೆ ಹೋದರೆ ನ್ಯಾಯ ಸಿಗಬಹುದೇ? ಎಂದು ಪ್ರಿಂಟ್ ಪ್ರತಿನಿಧಿ ಜೊತೆ ಚರ್ಚಿಸಿರುವ ಪ್ರಿಯ ಕೋರ್ಟ್ ಮೆಟ್ಟಿಲೇರುವ ಉದ್ದೇಶ ಹೊಂದಿದ್ದಾಳೆ.

ಆರೆಸ್ಸೆಸ್ ಮಾಜಿ ಸದಸ್ಯ ಮತ್ತು ಈಗ ಕಾನ್ಪುರ ಮತ್ತು ಬುಂದೇಲ್‌ಖಂಡ್ ವಿಭಾಗದ ಬಿಜೆಪಿ ಮುಖ್ಯಸ್ಥನಾಗಿರುವ ವಿನಯ್ ಮತ್ತು ಆತನ ಹಿಂಬಾಲಕರ ಚಿತಾವಣೆಯಿಂದ, ಮತಾಂತರ ವಿರೋಧಿ ಕಾಯ್ದೆ ಎಂಬ ಜೀವವಿರೋಧಿ ‘ಸಿದ್ಧಾಂತ’ದಿಂದ ಉಜ್ವಲ ಕನಸುಗಳನ್ನು ಹೊತ್ತ ದಂಪತಿ ಈಗ ಬಂಧನದಲ್ಲಿದ್ದಾರೆ. ಒಂದು ಪೊಲೀಸ್ ಬಂಧನ, ಇನ್ನೊಂದು ಕೌಟುಂಬಿಕ ಬಂಧನ. ಎರಡರ ಹಿಂದೆಯೂ ಆಳುವ ಪಕ್ಷ ಉತ್ತರಪ್ರದೇಶದಲ್ಲಿ ನಿರ್ಮಿಸಿರುವ ಕಲುಷಿತ ಸಾಮಾಜಿಕ ವಾತಾವರಣವೇ ಕೆಲಸ ಮಾಡುತ್ತಿದೆ.

  • ಮಲ್ಲನಗೌಡರ್ ಪಿ.ಕೆ
  • ಆಧಾರ: ದಿ ಪ್ರಿಂಟ್

ಇದನ್ನೂ ಓದಿ: ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...