Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿಚಳ್ಳೆ ಹಣ್ಣಿನ ಮರದ ಮಹಿಮೆ: ಚಳ್ಳೆ ಹಣ್ಣಿನ ಉಪಯೋಗಗಳು

ಚಳ್ಳೆ ಹಣ್ಣಿನ ಮರದ ಮಹಿಮೆ: ಚಳ್ಳೆ ಹಣ್ಣಿನ ಉಪಯೋಗಗಳು

ನಮ್ಮ ಹಳ್ಳಿಯವರು "ಸರಿಯಾಗಿ ಚಳ್ಳೆ ಹಣ್ಣು ತಿನ್ನಿಸಿದೆ” ಎಂಬ ನುಡಿಗಟ್ಟು ಬಳಸುತ್ತಾರೆ. ನಾನು ಯಾರಿಗೂ ಚಳ್ಳೆಹಣ್ಣು ತಿನ್ನಿಸಿಲ್ಲ, ಆದರೆ ..

- Advertisement -
- Advertisement -

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ… ಭಾಗ-9 

ನಾವು ಈ ಮರವನ್ನು ಕಡಿಯದೆ ಉಳಿಸಿಕೊಂಡಿರುವುದಕ್ಕೆ ಜನ ನಗುತ್ತಾರೆ. ಈ ಮರವನ್ನು ಕಡಿಯದೆ ಯಾಕೆ ಮರವಾಗಲು ಬಿಟ್ಟಿದ್ದಾರೆ ಎಂಬುದು ಇವರ ನಗೆಗೆ ಕಾರಣ.  ಏಕೆಂದರೆ ಅವರ ಪ್ರಕಾರ ಇದು “ಹಣ್ಣಿಗೆ ಹಣ್ಣಿನ ಮರವಲ್ಲ, ಮುಟ್ಟಿಗೆ ಮುಟ್ಟಿನ ಮರವಲ್ಲ, ಹೀಗಿರುವಾಗ ಸುಮ್ಮನೆ ಜಾಗ ತಿನ್ನುವ ಈ ಮರ ವೇಸ್ಟ್”.‌

ಈ ಮರವೂ ನಾವು ನೆಟ್ಟು ನೀರುಣಿಸಿ ಬೆಳೆಸಿದ್ದಲ್ಲ, ಹಕ್ಕಿ ತನ್ನ ಹಿಕ್ಕೆಯ ಜೊತೆ ಬೀಜ ಉದುರಿಸಿ ಉತ್ಪತ್ತಿ ಮಾಡಿದ ಮರ. ಈ ಮರವೀಗ ನಮ್ಮ ಅಚ್ಚುಮೆಚ್ಚು. ಬೇರೆಲ್ಲ ಹಣ್ಣಿನ ಮರಗಳಿಗಿಂತಲೂ ವಿಶೇಷ ಗೌರವ.

ಈ ಚಳ್ಳೆ ಹಣ್ಣುಗಳನ್ನು ನಾವು ಸಣ್ಣ ಹುಡುಗರಾಗಿದ್ದಾಗ ಗೊಣ್ಣೆ ಹಣ್ಣಿನ ಹೆಸರಿನಲ್ಲಿ ನಲುಬಿಕೊಂಡು ತಿಂದ ನೆನಪು. ಗೊಣ್ಣೆ ಹಣ್ಣು, ಸೊಳ್ಳೆ ಹಣ್ಣು, ಚಳ್ಳೆ ಹಣ್ಣು ಎಂಬ ಹೆಸರುಗಳಿಂದ ಕರೆಯಲ್ಪಡುವ ಈ ಹಣ್ಣು ಹೆಚ್ಚು ಬಳಕೆಯ ಹಣ್ಣಲ್ಲ. ಉದಾಸೀನಕ್ಕೆ ಒಳಗಾಗಿರುವ ಅನೇಕ ಒಳ್ಳೆಯ ಹಣ್ಣುಗಳಲ್ಲಿ ಇದೂ ಒಂದು ಎನ್ನಬಹುದು.

ಒಗರು ಮಿಶ್ರಿತ, ಸಾಧಾರಣ ಸಿಹಿಯ, ತಿಳಿ ಕಂದು ಬಣ್ಣದ ಈ ಹಣ್ಣುನ್ನು ತಿನ್ನಲು ರೂಢಿ ಮಾಡಿಕೊಂಡರೆ, ಇಷ್ಟವಾಗತೊಡಗುತ್ತದೆ. ಗಟ್ಟಿ ಬೀಜವುಳ್ಳ, ಲೋಳೆಯಂತೆ ಬಾಯಿಗೆ ಅಂಟಿಕೊಂಡು ನಲುಬಲು ಒತ್ತಾಯಿಸುವ ಈ ಹಣ್ಣು ಹಣ್ಣುಗಳಲ್ಲೇ ವಿಶಿಷ್ಟವಾದುದು. ಅಪಾರ ಜೀವ ಸತ್ವದಿಂದ ಕೂಡಿರುವ ಈ ಹಣ್ಣನ್ನು ಮಕ್ಕಳಿಗೆ ರೂಢಿ ಮಾಡಿಸಿದರೆ ಬಬಲ್‌ ಗಮ್‌ ಕಾಯಿಲೆಯಿಂದ ಹುಷಾರು ಮಾಡಬಹುದು.

ದೊಡ್ಡ ಅಂದರೆ ದ್ರಾಕ್ಷಿ ಗಾತ್ರದ, ಸಣ್ಣ ಅಂದರೆ ಅವರೆ ಕಾಳು ಗಾತ್ರದ ಹೀಗೆ ಎರಡು ಬಗೆಯ ಪ್ರಭೇದಗಳಿವೆ. ಏಪ್ರಿಲ್‌ ಮೇ ತಿಂಗಳಲ್ಲಿ ಕಾಯಿ, ಜೂನ್‌ ಜುಲೈ ತಿಂಗಳಲ್ಲಿ ಹಣ್ಣು ಲಭ್ಯ.

ಒಮ್ಮೆ ನಾಟಕ ನೋಡಲೆಂದು ಸಾಣೆಹಳ್ಳಿಗೆ ಹೋಗಿದ್ದಾಗ ಮಠದಲ್ಲಿ ಊಟಕ್ಕೆ ಒಂದು ಬಗೆಯ ಉಪ್ಪಿನಕಾಯಿ ಇಟ್ಟರು. ನಮ್ಮ ತುಮಕೂರು ಸೀಮೆಯ ಜನಕ್ಕೆ ಗೊತ್ತಿಲ್ಲದ ಹೊಸರುಚಿಯ ಉಪ್ಪಿನಕಾಯಿ ಅದಾಗಿತ್ತು. ನನ್ನ ಹೆಂಡತಿ ಆ ಬಗೆಗೆ ವಿಚಾರಿಸಲಾಗಿ ಅದು “ಚಳ್ಳೆಕಾಯಿ” ಉಪ್ಪಿನಕಾಯಿ  ಎಂದು ಗೊತ್ತಾಯಿತು. ತಕ್ಷಣವೇ ನಮ್ಮ ತೋಟದ ಆ ಚಳ್ಳೆ ಹಣ್ಣಿನ ಮರ ನಮ್ಮ ಮನಸ್ಸಿನಲ್ಲಿ ಮಾವಿನ ಮರಕ್ಕಿಂತ ಎತ್ತರ ಬೆಳೆದು ನಿಂತಿತ್ತು. ಎಂಥ ವಿಶಿಷ್ಟ ರುಚಿ, ಏನು ಮಜವಾದ ಒಗರು. ಲೈಕ್‌ ಅಟ್‌ ಫಸ್ಟ್‌ ಟೇಸ್ಟ್‌ ಎನ್ನಬಹುದು. ನಾವೂ ಆ ಮರವನ್ನು ಕಡಿಯದೆ ಗೌರವದಿಂದ ಉಳಿಸಿಕೊಂಡದ್ದಕ್ಕೆ ಹೆಮ್ಮೆ ಎನಿಸಿತು.

ಊರಿಗೆ ಮರಳಿದ್ದೇ ತಡ ನಾವಿಬ್ಬರೂ ಆ ಮರದ ಬಳಿ ಹೋಗಿ, ಚಳ್ಳೆ ಹೀಚುಗಳಿಂದ ಜೋಲಾಡುತ್ತಿದ್ದ ಆ ಮರವನ್ನು ನೇವರಿಸಿ ಬಂದೆವು. ಅಂದಿನಿಂದ ಪ್ರತಿ ವರ್ಷ ಚಳ್ಳೆಕಾಯಿಯ ಉಪ್ಪಿನಕಾಯಿ ನಮ್ಮ ಮಾವು, ಅಮಟೆ, ನಿಂಬೆ, ಯಳ್ಳಿ, ಹುಣಿಸೆ ಮುಂತಾದ ಉಪ್ಪಿನಕಾಯಿಗಳ ಸಾಲಿನಲ್ಲಿ ಉನ್ನತ ಸ್ಥಾನ ಪಡೆಯಿತು. ಮನೆಗೆ ಬಂದವರಿಗೆಲ್ಲ ಇದರ ರುಚಿಯನ್ನು ತೋರಿಸುವ ಪರಿಪಾಠ ನಡೆದಿದೆ.

ಈ ಮಧ್ಯೆ ಮರದಲ್ಲಿ ಇನ್ನು ಉಳಿದಿದ್ದ ಹಣ್ಣುಗಳನ್ನು ಬಿಡಿಸಿ ಬೆಲ್ಲದೊಂದಿಗೆ ಬೆರಸಿ ವೈನ್‌ ತಯಾರಿಸುವ ಪ್ರಯತ್ನ ಮಾಡಿದೆ. ಮೊದಲು ಹಣ್ಣುಗಳನ್ನು ಒಂದು ಮಡಕೆಗೆ ಕಿವುಚಿ ಬೀಜ ಬೇರ್ಪಡಿಸಿ ಅದಕ್ಕೆ ಎರಡರಷ್ಟು ಪುಡಿಮಾಡಿಟ್ಟುಕೊಂಡ ಬೆಲ್ಲ ಸೇರಿಸಿದೆ. ಇದಕ್ಕೆ ಈಸ್ಟ್‌ ಬೆರೆಸುವ ಗೋಚಿಗೆ ಹೋಗಲಿಲ್ಲ. ಮಡಕೆಯ ಮುಚ್ಚಳ ಮುಚ್ಚಿ ಒಂದು ತಿಂಗಳವರೆಗೆ ಇಟ್ಟು ವಾರಕ್ಕೊಮ್ಮೆ ತಿರುವುತ್ತಾ ಬಂದೆ. ನಂತರ ಇಳಿದುಕೊಂಡಿದ್ದ ಚಳ್ಳೆ ಹಣ್ಣಿನ ರಸವನ್ನು ಸುರಿದುಕೊಂಡು ಬಾಟಲ್‌ನಲ್ಲಿ ಸಂಗ್ರಹಿಸಿದೆ. ಗಟ್ಟಿಯಾಗಿ ಜೇನುತುಪ್ಪದಂತಿರುವ ಈ ರಸವನ್ನು ಸ್ವಲ್ಪ ನೀರು ಬೆರೆಸಿಕೊಂಡು ಕುಡಿದರೆ ಒಳ್ಳೆಯದು. ಎಷ್ಟು ದಿನ ಇಟ್ಟರೂ ಕೆಡುವುದಿಲ್ಲ. ಮನೆಗೆ ಬಂದ ಗೆಳೆಯರಿಗೆ ಈ ಬಗೆಯ ಪೇಯವನ್ನು ಜೂಸ್‌ ಹೆಸರಿನಲ್ಲಿ ಕೊಟ್ಟು ಕುಡಿಸಿದ್ದೇವೆ. ನಮ್ಮ ಜನಪದರು ಯಾರನ್ನಾದರು ಪಿಗ್ಗಿ ಬೀಳಿಸುವುದಕ್ಕೆ ತಮಾಷೆಯಾಗಿ “ಸರಿಯಾಗಿ ಚಳ್ಳೆ ಹಣ್ಣು ತಿನ್ನಿಸಿದೆ” ಎಂಬ ನುಡಿಗಟ್ಟು ಬಳಸುತ್ತಾರೆ. ನಾನು ಯಾರಿಗೂ ಚಳ್ಳೆಹಣ್ಣು ತಿನ್ನಿಸಿಲ್ಲ, ಆದರೆ …

ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-3: ಶಂಖದ ಹುಳುವಿನ ಮಾಮೇರಿ ಸೈನ್ಯದ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಚಳ್ಳೆಹಣ್ಣಿನ ಉಪ್ಪಿನಕಾಯಿ ವಿಷಯ ಓದಿ ಆಶ್ಚರ್ಯವಾಯಿತು. ನಮಗೆ ಮಾವಿನಕಾಯಿ, ಮಿಡಿ ಮಾವಿನಕಾಯಿ, ನಿಂಬೆ ಉಪ್ಪಿನಕಾಯಿ ಗೊತ್ತು‌. ಚಳ್ಳೆಹಣ್ಣಿನ ಉಪ್ಪಿನಕಾಯಿ ಹೇಗಿರಬಹುದು ಅಂತಾ ಆಲೋಚಿಸುತ್ತಿದ್ದೇನೆ.
    ನನಗೆ ಅರ್ಧ ಕೆಜಿಯಷ್ಟು ಚಳ್ಳೆಹಣ್ಣಿನ ಉಪ್ಪಿನಕಾಯಿಯನ್ನ ಅಂಚೆ ಇಲ್ಲವೇ ಕೂರಿಯರ್ ಮೂಲಕ ಕಳುಹಿಸಿ ಜೊಡುವಿರಾ. ಪೋನ್ ಪೇ ಮೂಲಕ ಹಣ ಸಂದಾಯ ಮಾಡುತ್ತೇನೆ.
    ವ್ಯವಹಾರ ಅನ್ನಬೇಡಿ ಆಹಾರ ಸಂಸ್ಕೃತಿಗಳ ಪರಿಚಯಿಸುವಿಕೆ ಎಂದು ಭಾವಿಸಲು ಮನವಿ.
    ಮೊಬೈಲ್ ಸಂಖ್ಯೆ: 98869 40339.

  2. ಚಳ್ಳೆಹಣ್ಣು ನನಗೂ ಗೊತ್ತು ನಮ್ಮ ತೋಟದ ಮೂಲೆಯಲ್ಲಿ ಒಂದು ದೊಡ್ಡ ಮರವಿತ್ತು. ಗೊಂಚಲು ಗೊಂಚಲು ಕಾಯಿ ಇರುತ್ತಿದ್ದವು. ಕಾಯಿಯಲ್ಲಿ ತುಂಬಾ ಲೋಳೆ, ಹಣ್ಣಿನಲ್ಲಿ ಕಡಿಮೆ ಲೋಳೆಯಿದ್ದ ನೆನಪು. ಉಪ್ಪಿನಕಾಯಿಯಲ್ಲಿ ಲೋಳೆಯೆ ಇರುವುದಿಲ್ಲ, ಏಕೆಂದರೆ ಉಪ್ಪಿನ ನೀರಿನಲ್ಲಿ ವಾರ ಹದಿನೈದು ದಿನಗಳವರೆಗೂ ಕಾಯಿಗಳನ್ನ ಬಿಟ್ಟಿರುತ್ತಾರೆ. ಹಣ್ಣು ಮತ್ತು ಉಪ್ಪಿನಕಾಯಿ ತಿನ್ನಲು ತುಂಬಾ ಚನ್ನಾಗಿರುತ್ತವೆ.ಅ ಮರ ಈಗಲೂ ನಮ್ಮ ತೋಟದಲ್ಲಿದೆ.

  3. I have heard the name of that fruit and the idiom connected to it right from childhood
    Today knowing more about it I really felt happy
    Thanks a lot

  4. ಗುರುಗಳೇ ಈ ಸೊಳ್ಳೆಹಣ್ಣಿನ ಮರಗಳು ನಮ್ಮೂರಿನ ತೋಟದ ಸಾಲುಗಳು ಉದಿ ಬದುಗಳಲ್ಲಿ ಬಹಳಷ್ಟಿದ್ದವು ನಾವು ಚಿಕ್ಕವರಿದ್ದಾಗ ನವಳುತ್ತ ನವಳುತ್ತ ತಿಂದ ನೆನಪುಗಳು ಅಜರಾಮರ ಹಾಗೆ ನಮ್ಮ ಹರಿದ ಪುಸ್ತಕದ ಪುಟಗಳನ್ನು ಮತ್ತೆ ಜೋಡಿಸಲು ಈ ಗೊಣ್ಣೆಹಣ್ಣಿನ ಅಂಟು ಬಳಸುತ್ತಿದ್ದುದು ಸ್ಮರಣೆಯಾಗುತ್ತಿದೆ. ಹಾಗೆಯೇ ಬಹಳಷ್ಟು ಬಾರಿ ಕಾರಾಹುಣ್ಣಿಮೆಯ ದಿನ ಎತ್ತುಗಳ ಕೊಂಬುಗಳನ್ನು ಸಿಂಗರಿಸಲು ಹುಣಸೆ ಬೀಜದ ಸರಿ ಮಾಡಲಿಲ್ಲವಾದರೆ ಇದೇ ಸೊಳ್ಳೆಹಣ್ಣಿನ ಅಂಟಿನ ಮೊರೆ ಹೋದದ್ದೂ ಉಂಟು. ಆದರೆ ಇಂದು ಬಹುತೇಕ ಮರಗಳು ಅಡಕೆಯೆಂಬ ಅನಾಗರೀಕ ಬೆಳೆಯ ಹಿಂದೆ ಬೀಳಲು ತೋಟ ಹೊಲಗಳಲ್ಲಿ ಬದುವಿನಂಚಿನ ಗಿಡ ಮರಗಳು ಸಮ್ಮೂಲವಾಗಿ ನಾಶವಾಗುತ್ತಿವೆ..

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...