Homeಮುಖಪುಟಈ ಮಾಧ್ಯಮಗಳಿಗೆ ’ದೊಡ್ಡರೋಗ’ ಬಂದಿದೆಯೇ? ಅಂಕೆ ತಪ್ಪಿದ ಅಭಿವ್ಯಕ್ತಿಯೇ ನಾಗರಿಕತೆಯ ತಿರುಗು ಚಕ್ರಕ್ಕೆ ತಡೆದಿಮ್ಮೆ! 

ಈ ಮಾಧ್ಯಮಗಳಿಗೆ ’ದೊಡ್ಡರೋಗ’ ಬಂದಿದೆಯೇ? ಅಂಕೆ ತಪ್ಪಿದ ಅಭಿವ್ಯಕ್ತಿಯೇ ನಾಗರಿಕತೆಯ ತಿರುಗು ಚಕ್ರಕ್ಕೆ ತಡೆದಿಮ್ಮೆ! 

ಇದೆಂತಹ ವಿಚಿತ್ರ ರೋಗವೆಂದರೆ ರೋಗದಿಂದ ಬಳಲುತ್ತಿರುವವನಿಗಿಂತಲೂ ಅವನ ಸುತ್ತು ಮುತ್ತಲಿನವರಿಗೆ ಮಾನಸಿಕ ನೋವು, ಮುಜುಗರವನ್ನು ಉಂಟು ಮಾಡುತ್ತದೆ. 

- Advertisement -
- Advertisement -

1949 ನವೆಂಬರ್ 25 ಸಂವಿಧಾನ ರಚನಾಸಭೆಯ ಕಡೆಯ ದಿನದ ಚರ್ಚೆ ಅತ್ಯಂತ ಮಹತ್ವಪೂರ್ಣವಾದದ್ದು. “ಧರ್ಮದೆಡಗಿನ ಭಕ್ತಿಯು ಮುಕ್ತಿಯನ್ನು ತಂದು ಕೊಡಬಹುದು. ಆದರೆ ರಾಜಕೀಯ ಭಕ್ತಿ, ವ್ಯಕ್ತಿ ಪೂಜೆ ಪ್ರಜಾಪ್ರಭುತ್ವದ ಕುಸಿತಕ್ಕೆ ಕಾರಣವಾಗುತ್ತದೆ ಮತ್ತು ಕ್ರಮೇಣ ನಿರಂಕುಶ ಆಡಳಿತಕ್ಕೆ ಎಡೆ ಮಾಡಿಕೊಡುತ್ತದೆ”. ಹಾಗೆಯೇ ಮಾಧ್ಯಮಗಳ ಕುರಿತು ವಿಶೇಷವಾಗಿ ಹೇಳಬೇಕಾದ್ದು ಏನೂ ಇಲ್ಲ. ಸಾಮಾನ್ಯ ಪ್ರಜೆಗೆ ಲಭಿಸುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳು ಮಾಧ್ಯಮಕ್ಕೂ ಅನ್ವಯವಾಗುತ್ತದೆ. ಸಂವಿಧಾನದ ವಿಧಿ 19(2) ರಲ್ಲಿ ಕಾಣಿಸಿರುವ ನಿಭಂದನೆಗಳು ಎಲ್ಲರಿಗೂ ಅನ್ವಯವಾಗಲಿವೆ ಎಂಬ ಮಾತುಗಳನ್ನು ಅಂಬೇಡ್ಕರ್ ಅವರು ಹೇಳಿದ್ದರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಮತ್ತು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿ ಮತ್ತು ಅವರ ಸಾಗಬೇಕಾದ ಹಾದಿಯನ್ನು ಬೊಟ್ಟು ಮಾಡಿ ತೋರಿದ್ದರು.

ರಾಜಕೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಕುರಿತು ಪ್ರಜೆಗಳಿಗೆ ಅಪಾರವಾದ ನಂಬಿಕೆಯಿದೆ. ಪ್ರಜಾಪ್ರಭುತ್ವದ ಕಾವಲು ನಾಯಿ ಎಂದೇ ಭಾವಿಸಲಾದ ಮಾಧ್ಯಮಗಳು ಬೊಗಳುವುದನ್ನು ಬಿಟ್ಟು ಆಳ್ಮೆಗಾರರ ತಲೆಕಾಯುವ ಸಾಕುನಾಯಿಯಾದರೆ ಮತ್ಯಾವ ಕಾವಲುಗಾರನನ್ನು ಹುಡುಕಿ ತರಬೇಕು. ದೇಶವೊಂದು ಕರೋನಾದಂತಹ ಅಸಾಧಾರಣ ಪಿಡುಗನ್ನು ಮಣಿಸಲು ಪ್ರಯತ್ನಿಸುವ ಸನ್ನಿವೇಶದಲ್ಲಿ ಮಾಧ್ಯಮಗಳು ತುಳಿದಿರುವ ಹಾದಿಯನ್ನು ನೋಡಿದಾಗ ಈ ಕೆಳಗಿನ ಸಂಗತಿ ನೆನಪಿಗೆ ಬರುತ್ತದೆ.

ವಯಕ್ತಿಕ ಬದುಕಿಗೋ, ಕೌಟುಂಬಿಕ ನೆಮ್ಮದಿಗೋ ಅಥವಾ ಸಾಮಾಜಿಕ ನೆಮ್ಮದಿಗೋ ಕಂಟಕನಾದವನ ಕುರಿತು ದೂಷಿಸುವಾಗ ‘ದೊಡ್ಡ ರೋಗ’ ಬಂದು ಒರಗಿ ಹೋಗಲಿ ಎಂದು ಹೇಳುವುದು ಜನಪದದಲ್ಲಿದೆ.

ಮನೆಯ ನೆಮ್ಮದಿಗೆ ಬೇಡವೆನಿಸಿದ ಸಂಗತಿಗಳನ್ನು ಎತ್ತಿ ತಲೆಬುಡವಿಲ್ಲದೇ ಚರ್ಚಿಸಿ ಆರ್ಭಟಿಸಿ ನಿತ್ಯನಿರಕವನ್ನು ಉಂಟುಮಾಡುವ  ಕುಟುಂಬದ ಸದಸ್ಯನ  ಅಥವಾ ಇತರರ ಆರ್ಭಟ ಕುರಿತು ಹೇಳುವಾಗಲೂ ಏನ್ ‘ದೊಡ್ಡ ರೋಗ’ ಇವನಿಗೆ ಎಂದು ಪ್ರಾಸಂಗಿಕವಾಗಿ ಹೇಳುವುದು ವಾಡಿಕೆಯಲ್ಲಿದೆ.

ಈ ದೊಡ್ಡ ರೋಗವೆಂದರೆ ಏನು ಎಂಬುದರ ಕುರಿತು ಜನಪದದಲ್ಲಿ ಅಧ್ಯಯನಗಳು ನೆಡದ ಬಗ್ಗೆ ಮಾಹಿತಿ ಲಭ್ಯವಿಲ್ಲ. ದೊಡ್ಡ ರೋಗವೆಂದರೆ ಮದ್ದು ಸಿಗದ, ವಾಸಿಯಾಗದ ಕಾಯಿಲೆ. ವೈದ್ಯಶಾಸ್ತ್ರ ಪರಿಣಿತರ ಅರಿವಿಗೆ ನಿಲುಕದ ಕಾಯಿಲೆ, ಅದರ ಸ್ವರೂಪವೇನು ಮತ್ತು ಉಂಟು ಮಾಡುವ ಪರಿಣಾಮಗಳೇನು ಎಂಬುದಲ್ಲ. ದೊಡ್ಡ ರೋಗವೆಂಬುದು ಪೀಡಕನ ಕೆಟ್ಟ ಮನಸ್ಥಿತಿಯನ್ನು ಸೂಚಿಸುವ ಗುಣವಾಚಕ.

ಇದೆಂತಹ ವಿಚಿತ್ರ ರೋಗವೆಂದರೆ ರೋಗದಿಂದ ಬಳಲುತ್ತಿರುವವನಿಗಿಂತಲೂ ಅವನ ಸುತ್ತು ಮುತ್ತಲಿನವರಿಗೆ ಮಾನಸಿಕ ನೋವು, ಮುಜುಗರವನ್ನು ಉಂಟು ಮಾಡುತ್ತದೆ.

ಈ ದೂಷಣೆಯ ಹಿಂದೆ ಕಂಟಕಪ್ರಾಯನಾದವನನ್ನು ಹೋಗಲಾಡಿಸುವುದಕ್ಕಿಂತಲೂ ಎದೆಯೊಳಗಿನ ಸಂಕಟವನ್ನು ಹೊರಗೆ ಹಾಕಿ ಎದೆಗೂಡನ್ನು ಹಗುರ ಮಾಡಿಕೊಳ್ಳುವ ಭಾವವೇ ಹೆಚ್ಚು. ಸಂಕಟಗಳ ಹೊರತಾಗಿಯೂ ನಮ್ಮ ಸಮಾಜ ತೊಂದರೆಗೆ ಕಾರಣನಾದ ವ್ಯಕ್ತಿಯ ಸಾವನ್ನು ಬಯಸುವುದಿಲ್ಲ. ಪೀಡಕನು ತನ್ನ ಧೋರಣೆಯನ್ನು ಬದಲಿಸಿದರೆ ಅವನನ್ನು ಮನ್ನಿಸುವ ದೊಡ್ಡ ಗುಣವೂ ಈ ಮಣ್ಣಿನೊಳಗೆ ಮಿಳಿತವಾಗಿದೆ. ಇಂತಹ ಸಾತ್ವಿಕ ಕೋಪವನ್ನು ನಮ್ಮ ಸಮಾಜವು ತಲತಲಾಂತರದಿಂದ ಸಲಹಿಕೊಂಡು ಬಂದಿದೆ.

ಈ ಮೇಲಿನದ್ದು ಕೌಟುಂಬಿಕ ಹಿನ್ನೆಲೆಯ ಚಿತ್ರಣವಾದರೆ.
ನಂಜುಪೂರಿತ ಮಾತುಗಳನ್ನಾಡಿ, ಸಮಾಜದ ನೆಮ್ಮದಿಗೆ ಧಕ್ಕೆ ತರುವ, ಟಿವಿ ನಿರೂಪಕರ, ರಾಜಕೀಯ ಮುಂದಾಳುಗಳ, ಧಾರ್ಮಿಕ ನಾಯಕರ ಚಿತ್ರಣವೇನೂ ಬೇರೆಯಲ್ಲ! ಈ ಪಾತ್ರಗಳೆಲ್ಲವೂ  ಕುಟುಂಬದ ನೆಮ್ಮದಿ ಕಲಕುವವನ ಪಾತ್ರಕ್ಕಿಂತ ಭಿನ್ನವಾಗಿಲ್ಲ. ಜನರ ಬವಣೆಗಳನ್ನು ಎತ್ತಿ ತೋರಿ ಆಳ್ಮೆಗಾರರ ಕಣ್ಣ ತೆರಸಬೇಕಾದವರೇ ಆಳ್ಮೆಗಾರರಿಗೆ ಜೋಗುಳವಾಡಿದರೆ, ಧಮನಿತರು ಯಾರ ಮೊರೆಯೋಗಬೇಕು ಎಂಬ ಪ್ರಶ್ನೆಗೆ ಉತ್ತರವಿದೆಯೇ!

ದೇಶದ ಹೊಸ್ತಿಲನ್ನು ದಾಟಿ ಒಳನುಸುಳುಕೋರನಂತೆ ಬಂದೆರಗಿದ ಸಾಂಕ್ರಾಮಿಕ ಪಿಡುಗು ಯಾವುದೇ ಮತ, ಜಾತಿ ಭೇದವಿಲ್ಲದೆ ಎಲ್ಲರ ಎದೆಗೂಡೊಳಗೆ ಸೇರಲು ಹವಣಿಸಿದೆ‌. ಇಂತಹ ವಿಷಮ ಪರಿಸ್ಥಿತಿಯಲ್ಲಿ ಒಂದೆಡೆ ಆಳ್ಮೆಗಾರರನ್ನು ಅಗತ್ಯಕ್ಕಿಂತಲೂ ಹೆಚ್ಚು ವೈಭವೀಕರಿಸಿ ಮೈಮರೆಯಲು ಬಿಡುವುದು. ಮತ್ತೊಂದೆಡೆ ಸಾಂಕ್ರಾಮಿಕ ರೋಗದ ಸೊಂಕಿಗೆ ಒಂದು ಜನಾಂಗವನ್ನು ತಳಕು ಹಾಕುವುದು.

ಧರ್ಮ, ಜನಾಂಗ, ಜಾತಿ, ಲಿಂಗಾಧಾರಿತ ದೂಷಣೆಗಳೂ ಮತ್ತು ತಾರತಮ್ಯಗಳು ಬೆಳಕಿಗೆ ಬಂದೊಡನೆಯೇ ಸಂವಿಧಾನದ ಆಶಯಗಳನ್ನು ಉಳಿಸಿಕೊಳ್ಳಲು ಆಳ್ಮೆಗಾರರರು ತಮ್ಮ ಅಧಿಕಾರವನ್ನು ಬಳಸಿ ಪ್ರಜಾಸತ್ತೆಯ ಸಾರ್ವಭೌಮತೆಯನ್ನು ಎತ್ತಿ ಹಿಡಿಯಬೇಕು. ಕಷ್ಟ ಕಾಲದಲ್ಲಿ ದನಿಯಿಲ್ಲದವರ, ಧಮನಿತರ ಪರವಾಗಿ ನಿಲ್ಲದೇ ಹೋಗುವ ಆಳ್ಮೆಗಾರರ ಸಾಮಾಜಿಕ ಬದ್ಧತೆಯೂ ಪ್ರಶ್ನಾರ್ಹವಾದದ್ದು.

ಇಂತಹ ಮನಸ್ಥಿತಿಯನ್ನು ಕುರಿತು ನೆನದಾಗಲೆಲ್ಲ
ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ
ಧರೆ ಹತ್ತಿ ಉರಿದಡೆ ನಿಲಲುಬಾರದು.
ಏರಿ ನೀರುಂಬಡೆ
ಬೇಲಿ ಕೆಯ್ಯ ಮೇವಡೆ
ನಾರಿ ತನ್ನ ಮನೆಯಲ್ಲಿ ಕಳುವಡೆ
ತಾಯವಾಲು ನಂಜಾಗಿ ಕೊಲುವಡೆ
ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ
ಎಂಬ ಅಣ್ಣನ ಕುಹಕ ನೆನಪಿಗೆ ಬರುತ್ತದೆ.

ವಸ್ತುನಿಷ್ಠ ಮತ್ತು ರಚನಾತ್ಮಕ ವಿಮರ್ಶೆಯನ್ನು ಕೈಬಿಟ್ಟು ಸರ್ಕಾರದ ಧ್ವನಿವರ್ಧಕವಾದ ಮಾಧ್ಯಮಗಳಿಗೆ ಅಂದು ಸಂವಿಧಾನ ರಚನಾ ಸಭೆಯಲ್ಲಿ ಉಲ್ಲೇಖಿಸಿದಂತೆ “ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳ ಸ್ವೇಚ್ಛಾಚಾರದ ಬಳಕೆ ಒಳಿತಿಗಿಂತಲೂ ಕೆಡುಕನ್ನು ಮಾಡಬಲ್ಲದು ಎಂಬ ಅಂಬೇಡ್ಕರ್ ಅವರ ನಿಲುವು ಎಲ್ಲಾ ಕಾಲಕ್ಕೂ ಸಲ್ಲುತ್ತದೆ. ತನ್ನ ಪಾಲಿನ ನೈತಿಕ ಹೊಣೆಗಾರಿಕೆಯನ್ನು ಮನಗಾಣದೇ, ಅಂಕೆ ಮೀರಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳನ್ನು ಬಳಸುವ ಮಾಧ್ಯಮಗಳು ಮತ್ತು ಪ್ರಜೆಗಳ ಮಹಾಮೌನವೇ ಪ್ರಜಾಪ್ರಭುತ್ವದ ಮಹಾಪಾತಕಿಗಳು. ಇದನ್ನು  ಅರಿಯದೇ ಹೋದರೆ ನಾವೆಲ್ಲರೂ ನಾಗರಿಕತೆಯ ತಿರುಗು ಚಕ್ರಕ್ಕೆ ತಡೆದಿಮ್ಮೆಯಾಗಬಲ್ಲೆವು! .

ಕೆ.ಬಿ.ಕೆ.ಸ್ವಾಮಿ

(ಲೇಖಕರು ಯುವ ಬರಹಗಾರರು. ಅಭಿಪ್ರಾಯಗಳು ವಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...