Homeಮುಖಪುಟಈ ಮಾಧ್ಯಮಗಳಿಗೆ ’ದೊಡ್ಡರೋಗ’ ಬಂದಿದೆಯೇ? ಅಂಕೆ ತಪ್ಪಿದ ಅಭಿವ್ಯಕ್ತಿಯೇ ನಾಗರಿಕತೆಯ ತಿರುಗು ಚಕ್ರಕ್ಕೆ ತಡೆದಿಮ್ಮೆ! 

ಈ ಮಾಧ್ಯಮಗಳಿಗೆ ’ದೊಡ್ಡರೋಗ’ ಬಂದಿದೆಯೇ? ಅಂಕೆ ತಪ್ಪಿದ ಅಭಿವ್ಯಕ್ತಿಯೇ ನಾಗರಿಕತೆಯ ತಿರುಗು ಚಕ್ರಕ್ಕೆ ತಡೆದಿಮ್ಮೆ! 

ಇದೆಂತಹ ವಿಚಿತ್ರ ರೋಗವೆಂದರೆ ರೋಗದಿಂದ ಬಳಲುತ್ತಿರುವವನಿಗಿಂತಲೂ ಅವನ ಸುತ್ತು ಮುತ್ತಲಿನವರಿಗೆ ಮಾನಸಿಕ ನೋವು, ಮುಜುಗರವನ್ನು ಉಂಟು ಮಾಡುತ್ತದೆ. 

- Advertisement -
- Advertisement -

1949 ನವೆಂಬರ್ 25 ಸಂವಿಧಾನ ರಚನಾಸಭೆಯ ಕಡೆಯ ದಿನದ ಚರ್ಚೆ ಅತ್ಯಂತ ಮಹತ್ವಪೂರ್ಣವಾದದ್ದು. “ಧರ್ಮದೆಡಗಿನ ಭಕ್ತಿಯು ಮುಕ್ತಿಯನ್ನು ತಂದು ಕೊಡಬಹುದು. ಆದರೆ ರಾಜಕೀಯ ಭಕ್ತಿ, ವ್ಯಕ್ತಿ ಪೂಜೆ ಪ್ರಜಾಪ್ರಭುತ್ವದ ಕುಸಿತಕ್ಕೆ ಕಾರಣವಾಗುತ್ತದೆ ಮತ್ತು ಕ್ರಮೇಣ ನಿರಂಕುಶ ಆಡಳಿತಕ್ಕೆ ಎಡೆ ಮಾಡಿಕೊಡುತ್ತದೆ”. ಹಾಗೆಯೇ ಮಾಧ್ಯಮಗಳ ಕುರಿತು ವಿಶೇಷವಾಗಿ ಹೇಳಬೇಕಾದ್ದು ಏನೂ ಇಲ್ಲ. ಸಾಮಾನ್ಯ ಪ್ರಜೆಗೆ ಲಭಿಸುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳು ಮಾಧ್ಯಮಕ್ಕೂ ಅನ್ವಯವಾಗುತ್ತದೆ. ಸಂವಿಧಾನದ ವಿಧಿ 19(2) ರಲ್ಲಿ ಕಾಣಿಸಿರುವ ನಿಭಂದನೆಗಳು ಎಲ್ಲರಿಗೂ ಅನ್ವಯವಾಗಲಿವೆ ಎಂಬ ಮಾತುಗಳನ್ನು ಅಂಬೇಡ್ಕರ್ ಅವರು ಹೇಳಿದ್ದರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಮತ್ತು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿ ಮತ್ತು ಅವರ ಸಾಗಬೇಕಾದ ಹಾದಿಯನ್ನು ಬೊಟ್ಟು ಮಾಡಿ ತೋರಿದ್ದರು.

ರಾಜಕೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಕುರಿತು ಪ್ರಜೆಗಳಿಗೆ ಅಪಾರವಾದ ನಂಬಿಕೆಯಿದೆ. ಪ್ರಜಾಪ್ರಭುತ್ವದ ಕಾವಲು ನಾಯಿ ಎಂದೇ ಭಾವಿಸಲಾದ ಮಾಧ್ಯಮಗಳು ಬೊಗಳುವುದನ್ನು ಬಿಟ್ಟು ಆಳ್ಮೆಗಾರರ ತಲೆಕಾಯುವ ಸಾಕುನಾಯಿಯಾದರೆ ಮತ್ಯಾವ ಕಾವಲುಗಾರನನ್ನು ಹುಡುಕಿ ತರಬೇಕು. ದೇಶವೊಂದು ಕರೋನಾದಂತಹ ಅಸಾಧಾರಣ ಪಿಡುಗನ್ನು ಮಣಿಸಲು ಪ್ರಯತ್ನಿಸುವ ಸನ್ನಿವೇಶದಲ್ಲಿ ಮಾಧ್ಯಮಗಳು ತುಳಿದಿರುವ ಹಾದಿಯನ್ನು ನೋಡಿದಾಗ ಈ ಕೆಳಗಿನ ಸಂಗತಿ ನೆನಪಿಗೆ ಬರುತ್ತದೆ.

ವಯಕ್ತಿಕ ಬದುಕಿಗೋ, ಕೌಟುಂಬಿಕ ನೆಮ್ಮದಿಗೋ ಅಥವಾ ಸಾಮಾಜಿಕ ನೆಮ್ಮದಿಗೋ ಕಂಟಕನಾದವನ ಕುರಿತು ದೂಷಿಸುವಾಗ ‘ದೊಡ್ಡ ರೋಗ’ ಬಂದು ಒರಗಿ ಹೋಗಲಿ ಎಂದು ಹೇಳುವುದು ಜನಪದದಲ್ಲಿದೆ.

ಮನೆಯ ನೆಮ್ಮದಿಗೆ ಬೇಡವೆನಿಸಿದ ಸಂಗತಿಗಳನ್ನು ಎತ್ತಿ ತಲೆಬುಡವಿಲ್ಲದೇ ಚರ್ಚಿಸಿ ಆರ್ಭಟಿಸಿ ನಿತ್ಯನಿರಕವನ್ನು ಉಂಟುಮಾಡುವ  ಕುಟುಂಬದ ಸದಸ್ಯನ  ಅಥವಾ ಇತರರ ಆರ್ಭಟ ಕುರಿತು ಹೇಳುವಾಗಲೂ ಏನ್ ‘ದೊಡ್ಡ ರೋಗ’ ಇವನಿಗೆ ಎಂದು ಪ್ರಾಸಂಗಿಕವಾಗಿ ಹೇಳುವುದು ವಾಡಿಕೆಯಲ್ಲಿದೆ.

ಈ ದೊಡ್ಡ ರೋಗವೆಂದರೆ ಏನು ಎಂಬುದರ ಕುರಿತು ಜನಪದದಲ್ಲಿ ಅಧ್ಯಯನಗಳು ನೆಡದ ಬಗ್ಗೆ ಮಾಹಿತಿ ಲಭ್ಯವಿಲ್ಲ. ದೊಡ್ಡ ರೋಗವೆಂದರೆ ಮದ್ದು ಸಿಗದ, ವಾಸಿಯಾಗದ ಕಾಯಿಲೆ. ವೈದ್ಯಶಾಸ್ತ್ರ ಪರಿಣಿತರ ಅರಿವಿಗೆ ನಿಲುಕದ ಕಾಯಿಲೆ, ಅದರ ಸ್ವರೂಪವೇನು ಮತ್ತು ಉಂಟು ಮಾಡುವ ಪರಿಣಾಮಗಳೇನು ಎಂಬುದಲ್ಲ. ದೊಡ್ಡ ರೋಗವೆಂಬುದು ಪೀಡಕನ ಕೆಟ್ಟ ಮನಸ್ಥಿತಿಯನ್ನು ಸೂಚಿಸುವ ಗುಣವಾಚಕ.

ಇದೆಂತಹ ವಿಚಿತ್ರ ರೋಗವೆಂದರೆ ರೋಗದಿಂದ ಬಳಲುತ್ತಿರುವವನಿಗಿಂತಲೂ ಅವನ ಸುತ್ತು ಮುತ್ತಲಿನವರಿಗೆ ಮಾನಸಿಕ ನೋವು, ಮುಜುಗರವನ್ನು ಉಂಟು ಮಾಡುತ್ತದೆ.

ಈ ದೂಷಣೆಯ ಹಿಂದೆ ಕಂಟಕಪ್ರಾಯನಾದವನನ್ನು ಹೋಗಲಾಡಿಸುವುದಕ್ಕಿಂತಲೂ ಎದೆಯೊಳಗಿನ ಸಂಕಟವನ್ನು ಹೊರಗೆ ಹಾಕಿ ಎದೆಗೂಡನ್ನು ಹಗುರ ಮಾಡಿಕೊಳ್ಳುವ ಭಾವವೇ ಹೆಚ್ಚು. ಸಂಕಟಗಳ ಹೊರತಾಗಿಯೂ ನಮ್ಮ ಸಮಾಜ ತೊಂದರೆಗೆ ಕಾರಣನಾದ ವ್ಯಕ್ತಿಯ ಸಾವನ್ನು ಬಯಸುವುದಿಲ್ಲ. ಪೀಡಕನು ತನ್ನ ಧೋರಣೆಯನ್ನು ಬದಲಿಸಿದರೆ ಅವನನ್ನು ಮನ್ನಿಸುವ ದೊಡ್ಡ ಗುಣವೂ ಈ ಮಣ್ಣಿನೊಳಗೆ ಮಿಳಿತವಾಗಿದೆ. ಇಂತಹ ಸಾತ್ವಿಕ ಕೋಪವನ್ನು ನಮ್ಮ ಸಮಾಜವು ತಲತಲಾಂತರದಿಂದ ಸಲಹಿಕೊಂಡು ಬಂದಿದೆ.

ಈ ಮೇಲಿನದ್ದು ಕೌಟುಂಬಿಕ ಹಿನ್ನೆಲೆಯ ಚಿತ್ರಣವಾದರೆ.
ನಂಜುಪೂರಿತ ಮಾತುಗಳನ್ನಾಡಿ, ಸಮಾಜದ ನೆಮ್ಮದಿಗೆ ಧಕ್ಕೆ ತರುವ, ಟಿವಿ ನಿರೂಪಕರ, ರಾಜಕೀಯ ಮುಂದಾಳುಗಳ, ಧಾರ್ಮಿಕ ನಾಯಕರ ಚಿತ್ರಣವೇನೂ ಬೇರೆಯಲ್ಲ! ಈ ಪಾತ್ರಗಳೆಲ್ಲವೂ  ಕುಟುಂಬದ ನೆಮ್ಮದಿ ಕಲಕುವವನ ಪಾತ್ರಕ್ಕಿಂತ ಭಿನ್ನವಾಗಿಲ್ಲ. ಜನರ ಬವಣೆಗಳನ್ನು ಎತ್ತಿ ತೋರಿ ಆಳ್ಮೆಗಾರರ ಕಣ್ಣ ತೆರಸಬೇಕಾದವರೇ ಆಳ್ಮೆಗಾರರಿಗೆ ಜೋಗುಳವಾಡಿದರೆ, ಧಮನಿತರು ಯಾರ ಮೊರೆಯೋಗಬೇಕು ಎಂಬ ಪ್ರಶ್ನೆಗೆ ಉತ್ತರವಿದೆಯೇ!

ದೇಶದ ಹೊಸ್ತಿಲನ್ನು ದಾಟಿ ಒಳನುಸುಳುಕೋರನಂತೆ ಬಂದೆರಗಿದ ಸಾಂಕ್ರಾಮಿಕ ಪಿಡುಗು ಯಾವುದೇ ಮತ, ಜಾತಿ ಭೇದವಿಲ್ಲದೆ ಎಲ್ಲರ ಎದೆಗೂಡೊಳಗೆ ಸೇರಲು ಹವಣಿಸಿದೆ‌. ಇಂತಹ ವಿಷಮ ಪರಿಸ್ಥಿತಿಯಲ್ಲಿ ಒಂದೆಡೆ ಆಳ್ಮೆಗಾರರನ್ನು ಅಗತ್ಯಕ್ಕಿಂತಲೂ ಹೆಚ್ಚು ವೈಭವೀಕರಿಸಿ ಮೈಮರೆಯಲು ಬಿಡುವುದು. ಮತ್ತೊಂದೆಡೆ ಸಾಂಕ್ರಾಮಿಕ ರೋಗದ ಸೊಂಕಿಗೆ ಒಂದು ಜನಾಂಗವನ್ನು ತಳಕು ಹಾಕುವುದು.

ಧರ್ಮ, ಜನಾಂಗ, ಜಾತಿ, ಲಿಂಗಾಧಾರಿತ ದೂಷಣೆಗಳೂ ಮತ್ತು ತಾರತಮ್ಯಗಳು ಬೆಳಕಿಗೆ ಬಂದೊಡನೆಯೇ ಸಂವಿಧಾನದ ಆಶಯಗಳನ್ನು ಉಳಿಸಿಕೊಳ್ಳಲು ಆಳ್ಮೆಗಾರರರು ತಮ್ಮ ಅಧಿಕಾರವನ್ನು ಬಳಸಿ ಪ್ರಜಾಸತ್ತೆಯ ಸಾರ್ವಭೌಮತೆಯನ್ನು ಎತ್ತಿ ಹಿಡಿಯಬೇಕು. ಕಷ್ಟ ಕಾಲದಲ್ಲಿ ದನಿಯಿಲ್ಲದವರ, ಧಮನಿತರ ಪರವಾಗಿ ನಿಲ್ಲದೇ ಹೋಗುವ ಆಳ್ಮೆಗಾರರ ಸಾಮಾಜಿಕ ಬದ್ಧತೆಯೂ ಪ್ರಶ್ನಾರ್ಹವಾದದ್ದು.

ಇಂತಹ ಮನಸ್ಥಿತಿಯನ್ನು ಕುರಿತು ನೆನದಾಗಲೆಲ್ಲ
ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ
ಧರೆ ಹತ್ತಿ ಉರಿದಡೆ ನಿಲಲುಬಾರದು.
ಏರಿ ನೀರುಂಬಡೆ
ಬೇಲಿ ಕೆಯ್ಯ ಮೇವಡೆ
ನಾರಿ ತನ್ನ ಮನೆಯಲ್ಲಿ ಕಳುವಡೆ
ತಾಯವಾಲು ನಂಜಾಗಿ ಕೊಲುವಡೆ
ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ
ಎಂಬ ಅಣ್ಣನ ಕುಹಕ ನೆನಪಿಗೆ ಬರುತ್ತದೆ.

ವಸ್ತುನಿಷ್ಠ ಮತ್ತು ರಚನಾತ್ಮಕ ವಿಮರ್ಶೆಯನ್ನು ಕೈಬಿಟ್ಟು ಸರ್ಕಾರದ ಧ್ವನಿವರ್ಧಕವಾದ ಮಾಧ್ಯಮಗಳಿಗೆ ಅಂದು ಸಂವಿಧಾನ ರಚನಾ ಸಭೆಯಲ್ಲಿ ಉಲ್ಲೇಖಿಸಿದಂತೆ “ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳ ಸ್ವೇಚ್ಛಾಚಾರದ ಬಳಕೆ ಒಳಿತಿಗಿಂತಲೂ ಕೆಡುಕನ್ನು ಮಾಡಬಲ್ಲದು ಎಂಬ ಅಂಬೇಡ್ಕರ್ ಅವರ ನಿಲುವು ಎಲ್ಲಾ ಕಾಲಕ್ಕೂ ಸಲ್ಲುತ್ತದೆ. ತನ್ನ ಪಾಲಿನ ನೈತಿಕ ಹೊಣೆಗಾರಿಕೆಯನ್ನು ಮನಗಾಣದೇ, ಅಂಕೆ ಮೀರಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳನ್ನು ಬಳಸುವ ಮಾಧ್ಯಮಗಳು ಮತ್ತು ಪ್ರಜೆಗಳ ಮಹಾಮೌನವೇ ಪ್ರಜಾಪ್ರಭುತ್ವದ ಮಹಾಪಾತಕಿಗಳು. ಇದನ್ನು  ಅರಿಯದೇ ಹೋದರೆ ನಾವೆಲ್ಲರೂ ನಾಗರಿಕತೆಯ ತಿರುಗು ಚಕ್ರಕ್ಕೆ ತಡೆದಿಮ್ಮೆಯಾಗಬಲ್ಲೆವು! .

ಕೆ.ಬಿ.ಕೆ.ಸ್ವಾಮಿ

(ಲೇಖಕರು ಯುವ ಬರಹಗಾರರು. ಅಭಿಪ್ರಾಯಗಳು ವಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...