Homeಮುಖಪುಟಈ ಮಾಧ್ಯಮಗಳಿಗೆ ’ದೊಡ್ಡರೋಗ’ ಬಂದಿದೆಯೇ? ಅಂಕೆ ತಪ್ಪಿದ ಅಭಿವ್ಯಕ್ತಿಯೇ ನಾಗರಿಕತೆಯ ತಿರುಗು ಚಕ್ರಕ್ಕೆ ತಡೆದಿಮ್ಮೆ! 

ಈ ಮಾಧ್ಯಮಗಳಿಗೆ ’ದೊಡ್ಡರೋಗ’ ಬಂದಿದೆಯೇ? ಅಂಕೆ ತಪ್ಪಿದ ಅಭಿವ್ಯಕ್ತಿಯೇ ನಾಗರಿಕತೆಯ ತಿರುಗು ಚಕ್ರಕ್ಕೆ ತಡೆದಿಮ್ಮೆ! 

ಇದೆಂತಹ ವಿಚಿತ್ರ ರೋಗವೆಂದರೆ ರೋಗದಿಂದ ಬಳಲುತ್ತಿರುವವನಿಗಿಂತಲೂ ಅವನ ಸುತ್ತು ಮುತ್ತಲಿನವರಿಗೆ ಮಾನಸಿಕ ನೋವು, ಮುಜುಗರವನ್ನು ಉಂಟು ಮಾಡುತ್ತದೆ. 

- Advertisement -
- Advertisement -

1949 ನವೆಂಬರ್ 25 ಸಂವಿಧಾನ ರಚನಾಸಭೆಯ ಕಡೆಯ ದಿನದ ಚರ್ಚೆ ಅತ್ಯಂತ ಮಹತ್ವಪೂರ್ಣವಾದದ್ದು. “ಧರ್ಮದೆಡಗಿನ ಭಕ್ತಿಯು ಮುಕ್ತಿಯನ್ನು ತಂದು ಕೊಡಬಹುದು. ಆದರೆ ರಾಜಕೀಯ ಭಕ್ತಿ, ವ್ಯಕ್ತಿ ಪೂಜೆ ಪ್ರಜಾಪ್ರಭುತ್ವದ ಕುಸಿತಕ್ಕೆ ಕಾರಣವಾಗುತ್ತದೆ ಮತ್ತು ಕ್ರಮೇಣ ನಿರಂಕುಶ ಆಡಳಿತಕ್ಕೆ ಎಡೆ ಮಾಡಿಕೊಡುತ್ತದೆ”. ಹಾಗೆಯೇ ಮಾಧ್ಯಮಗಳ ಕುರಿತು ವಿಶೇಷವಾಗಿ ಹೇಳಬೇಕಾದ್ದು ಏನೂ ಇಲ್ಲ. ಸಾಮಾನ್ಯ ಪ್ರಜೆಗೆ ಲಭಿಸುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳು ಮಾಧ್ಯಮಕ್ಕೂ ಅನ್ವಯವಾಗುತ್ತದೆ. ಸಂವಿಧಾನದ ವಿಧಿ 19(2) ರಲ್ಲಿ ಕಾಣಿಸಿರುವ ನಿಭಂದನೆಗಳು ಎಲ್ಲರಿಗೂ ಅನ್ವಯವಾಗಲಿವೆ ಎಂಬ ಮಾತುಗಳನ್ನು ಅಂಬೇಡ್ಕರ್ ಅವರು ಹೇಳಿದ್ದರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಮತ್ತು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿ ಮತ್ತು ಅವರ ಸಾಗಬೇಕಾದ ಹಾದಿಯನ್ನು ಬೊಟ್ಟು ಮಾಡಿ ತೋರಿದ್ದರು.

ರಾಜಕೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಕುರಿತು ಪ್ರಜೆಗಳಿಗೆ ಅಪಾರವಾದ ನಂಬಿಕೆಯಿದೆ. ಪ್ರಜಾಪ್ರಭುತ್ವದ ಕಾವಲು ನಾಯಿ ಎಂದೇ ಭಾವಿಸಲಾದ ಮಾಧ್ಯಮಗಳು ಬೊಗಳುವುದನ್ನು ಬಿಟ್ಟು ಆಳ್ಮೆಗಾರರ ತಲೆಕಾಯುವ ಸಾಕುನಾಯಿಯಾದರೆ ಮತ್ಯಾವ ಕಾವಲುಗಾರನನ್ನು ಹುಡುಕಿ ತರಬೇಕು. ದೇಶವೊಂದು ಕರೋನಾದಂತಹ ಅಸಾಧಾರಣ ಪಿಡುಗನ್ನು ಮಣಿಸಲು ಪ್ರಯತ್ನಿಸುವ ಸನ್ನಿವೇಶದಲ್ಲಿ ಮಾಧ್ಯಮಗಳು ತುಳಿದಿರುವ ಹಾದಿಯನ್ನು ನೋಡಿದಾಗ ಈ ಕೆಳಗಿನ ಸಂಗತಿ ನೆನಪಿಗೆ ಬರುತ್ತದೆ.

ವಯಕ್ತಿಕ ಬದುಕಿಗೋ, ಕೌಟುಂಬಿಕ ನೆಮ್ಮದಿಗೋ ಅಥವಾ ಸಾಮಾಜಿಕ ನೆಮ್ಮದಿಗೋ ಕಂಟಕನಾದವನ ಕುರಿತು ದೂಷಿಸುವಾಗ ‘ದೊಡ್ಡ ರೋಗ’ ಬಂದು ಒರಗಿ ಹೋಗಲಿ ಎಂದು ಹೇಳುವುದು ಜನಪದದಲ್ಲಿದೆ.

ಮನೆಯ ನೆಮ್ಮದಿಗೆ ಬೇಡವೆನಿಸಿದ ಸಂಗತಿಗಳನ್ನು ಎತ್ತಿ ತಲೆಬುಡವಿಲ್ಲದೇ ಚರ್ಚಿಸಿ ಆರ್ಭಟಿಸಿ ನಿತ್ಯನಿರಕವನ್ನು ಉಂಟುಮಾಡುವ  ಕುಟುಂಬದ ಸದಸ್ಯನ  ಅಥವಾ ಇತರರ ಆರ್ಭಟ ಕುರಿತು ಹೇಳುವಾಗಲೂ ಏನ್ ‘ದೊಡ್ಡ ರೋಗ’ ಇವನಿಗೆ ಎಂದು ಪ್ರಾಸಂಗಿಕವಾಗಿ ಹೇಳುವುದು ವಾಡಿಕೆಯಲ್ಲಿದೆ.

ಈ ದೊಡ್ಡ ರೋಗವೆಂದರೆ ಏನು ಎಂಬುದರ ಕುರಿತು ಜನಪದದಲ್ಲಿ ಅಧ್ಯಯನಗಳು ನೆಡದ ಬಗ್ಗೆ ಮಾಹಿತಿ ಲಭ್ಯವಿಲ್ಲ. ದೊಡ್ಡ ರೋಗವೆಂದರೆ ಮದ್ದು ಸಿಗದ, ವಾಸಿಯಾಗದ ಕಾಯಿಲೆ. ವೈದ್ಯಶಾಸ್ತ್ರ ಪರಿಣಿತರ ಅರಿವಿಗೆ ನಿಲುಕದ ಕಾಯಿಲೆ, ಅದರ ಸ್ವರೂಪವೇನು ಮತ್ತು ಉಂಟು ಮಾಡುವ ಪರಿಣಾಮಗಳೇನು ಎಂಬುದಲ್ಲ. ದೊಡ್ಡ ರೋಗವೆಂಬುದು ಪೀಡಕನ ಕೆಟ್ಟ ಮನಸ್ಥಿತಿಯನ್ನು ಸೂಚಿಸುವ ಗುಣವಾಚಕ.

ಇದೆಂತಹ ವಿಚಿತ್ರ ರೋಗವೆಂದರೆ ರೋಗದಿಂದ ಬಳಲುತ್ತಿರುವವನಿಗಿಂತಲೂ ಅವನ ಸುತ್ತು ಮುತ್ತಲಿನವರಿಗೆ ಮಾನಸಿಕ ನೋವು, ಮುಜುಗರವನ್ನು ಉಂಟು ಮಾಡುತ್ತದೆ.

ಈ ದೂಷಣೆಯ ಹಿಂದೆ ಕಂಟಕಪ್ರಾಯನಾದವನನ್ನು ಹೋಗಲಾಡಿಸುವುದಕ್ಕಿಂತಲೂ ಎದೆಯೊಳಗಿನ ಸಂಕಟವನ್ನು ಹೊರಗೆ ಹಾಕಿ ಎದೆಗೂಡನ್ನು ಹಗುರ ಮಾಡಿಕೊಳ್ಳುವ ಭಾವವೇ ಹೆಚ್ಚು. ಸಂಕಟಗಳ ಹೊರತಾಗಿಯೂ ನಮ್ಮ ಸಮಾಜ ತೊಂದರೆಗೆ ಕಾರಣನಾದ ವ್ಯಕ್ತಿಯ ಸಾವನ್ನು ಬಯಸುವುದಿಲ್ಲ. ಪೀಡಕನು ತನ್ನ ಧೋರಣೆಯನ್ನು ಬದಲಿಸಿದರೆ ಅವನನ್ನು ಮನ್ನಿಸುವ ದೊಡ್ಡ ಗುಣವೂ ಈ ಮಣ್ಣಿನೊಳಗೆ ಮಿಳಿತವಾಗಿದೆ. ಇಂತಹ ಸಾತ್ವಿಕ ಕೋಪವನ್ನು ನಮ್ಮ ಸಮಾಜವು ತಲತಲಾಂತರದಿಂದ ಸಲಹಿಕೊಂಡು ಬಂದಿದೆ.

ಈ ಮೇಲಿನದ್ದು ಕೌಟುಂಬಿಕ ಹಿನ್ನೆಲೆಯ ಚಿತ್ರಣವಾದರೆ.
ನಂಜುಪೂರಿತ ಮಾತುಗಳನ್ನಾಡಿ, ಸಮಾಜದ ನೆಮ್ಮದಿಗೆ ಧಕ್ಕೆ ತರುವ, ಟಿವಿ ನಿರೂಪಕರ, ರಾಜಕೀಯ ಮುಂದಾಳುಗಳ, ಧಾರ್ಮಿಕ ನಾಯಕರ ಚಿತ್ರಣವೇನೂ ಬೇರೆಯಲ್ಲ! ಈ ಪಾತ್ರಗಳೆಲ್ಲವೂ  ಕುಟುಂಬದ ನೆಮ್ಮದಿ ಕಲಕುವವನ ಪಾತ್ರಕ್ಕಿಂತ ಭಿನ್ನವಾಗಿಲ್ಲ. ಜನರ ಬವಣೆಗಳನ್ನು ಎತ್ತಿ ತೋರಿ ಆಳ್ಮೆಗಾರರ ಕಣ್ಣ ತೆರಸಬೇಕಾದವರೇ ಆಳ್ಮೆಗಾರರಿಗೆ ಜೋಗುಳವಾಡಿದರೆ, ಧಮನಿತರು ಯಾರ ಮೊರೆಯೋಗಬೇಕು ಎಂಬ ಪ್ರಶ್ನೆಗೆ ಉತ್ತರವಿದೆಯೇ!

ದೇಶದ ಹೊಸ್ತಿಲನ್ನು ದಾಟಿ ಒಳನುಸುಳುಕೋರನಂತೆ ಬಂದೆರಗಿದ ಸಾಂಕ್ರಾಮಿಕ ಪಿಡುಗು ಯಾವುದೇ ಮತ, ಜಾತಿ ಭೇದವಿಲ್ಲದೆ ಎಲ್ಲರ ಎದೆಗೂಡೊಳಗೆ ಸೇರಲು ಹವಣಿಸಿದೆ‌. ಇಂತಹ ವಿಷಮ ಪರಿಸ್ಥಿತಿಯಲ್ಲಿ ಒಂದೆಡೆ ಆಳ್ಮೆಗಾರರನ್ನು ಅಗತ್ಯಕ್ಕಿಂತಲೂ ಹೆಚ್ಚು ವೈಭವೀಕರಿಸಿ ಮೈಮರೆಯಲು ಬಿಡುವುದು. ಮತ್ತೊಂದೆಡೆ ಸಾಂಕ್ರಾಮಿಕ ರೋಗದ ಸೊಂಕಿಗೆ ಒಂದು ಜನಾಂಗವನ್ನು ತಳಕು ಹಾಕುವುದು.

ಧರ್ಮ, ಜನಾಂಗ, ಜಾತಿ, ಲಿಂಗಾಧಾರಿತ ದೂಷಣೆಗಳೂ ಮತ್ತು ತಾರತಮ್ಯಗಳು ಬೆಳಕಿಗೆ ಬಂದೊಡನೆಯೇ ಸಂವಿಧಾನದ ಆಶಯಗಳನ್ನು ಉಳಿಸಿಕೊಳ್ಳಲು ಆಳ್ಮೆಗಾರರರು ತಮ್ಮ ಅಧಿಕಾರವನ್ನು ಬಳಸಿ ಪ್ರಜಾಸತ್ತೆಯ ಸಾರ್ವಭೌಮತೆಯನ್ನು ಎತ್ತಿ ಹಿಡಿಯಬೇಕು. ಕಷ್ಟ ಕಾಲದಲ್ಲಿ ದನಿಯಿಲ್ಲದವರ, ಧಮನಿತರ ಪರವಾಗಿ ನಿಲ್ಲದೇ ಹೋಗುವ ಆಳ್ಮೆಗಾರರ ಸಾಮಾಜಿಕ ಬದ್ಧತೆಯೂ ಪ್ರಶ್ನಾರ್ಹವಾದದ್ದು.

ಇಂತಹ ಮನಸ್ಥಿತಿಯನ್ನು ಕುರಿತು ನೆನದಾಗಲೆಲ್ಲ
ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ
ಧರೆ ಹತ್ತಿ ಉರಿದಡೆ ನಿಲಲುಬಾರದು.
ಏರಿ ನೀರುಂಬಡೆ
ಬೇಲಿ ಕೆಯ್ಯ ಮೇವಡೆ
ನಾರಿ ತನ್ನ ಮನೆಯಲ್ಲಿ ಕಳುವಡೆ
ತಾಯವಾಲು ನಂಜಾಗಿ ಕೊಲುವಡೆ
ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ
ಎಂಬ ಅಣ್ಣನ ಕುಹಕ ನೆನಪಿಗೆ ಬರುತ್ತದೆ.

ವಸ್ತುನಿಷ್ಠ ಮತ್ತು ರಚನಾತ್ಮಕ ವಿಮರ್ಶೆಯನ್ನು ಕೈಬಿಟ್ಟು ಸರ್ಕಾರದ ಧ್ವನಿವರ್ಧಕವಾದ ಮಾಧ್ಯಮಗಳಿಗೆ ಅಂದು ಸಂವಿಧಾನ ರಚನಾ ಸಭೆಯಲ್ಲಿ ಉಲ್ಲೇಖಿಸಿದಂತೆ “ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳ ಸ್ವೇಚ್ಛಾಚಾರದ ಬಳಕೆ ಒಳಿತಿಗಿಂತಲೂ ಕೆಡುಕನ್ನು ಮಾಡಬಲ್ಲದು ಎಂಬ ಅಂಬೇಡ್ಕರ್ ಅವರ ನಿಲುವು ಎಲ್ಲಾ ಕಾಲಕ್ಕೂ ಸಲ್ಲುತ್ತದೆ. ತನ್ನ ಪಾಲಿನ ನೈತಿಕ ಹೊಣೆಗಾರಿಕೆಯನ್ನು ಮನಗಾಣದೇ, ಅಂಕೆ ಮೀರಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳನ್ನು ಬಳಸುವ ಮಾಧ್ಯಮಗಳು ಮತ್ತು ಪ್ರಜೆಗಳ ಮಹಾಮೌನವೇ ಪ್ರಜಾಪ್ರಭುತ್ವದ ಮಹಾಪಾತಕಿಗಳು. ಇದನ್ನು  ಅರಿಯದೇ ಹೋದರೆ ನಾವೆಲ್ಲರೂ ನಾಗರಿಕತೆಯ ತಿರುಗು ಚಕ್ರಕ್ಕೆ ತಡೆದಿಮ್ಮೆಯಾಗಬಲ್ಲೆವು! .

ಕೆ.ಬಿ.ಕೆ.ಸ್ವಾಮಿ

(ಲೇಖಕರು ಯುವ ಬರಹಗಾರರು. ಅಭಿಪ್ರಾಯಗಳು ವಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...