HomeUncategorizedಸತ್ಯವನ್ನೇ ಹೇಳುತ್ತಿದ್ದೇನೆ, ಮುಖ್ಯಮಂತ್ರಿಗಳೇ, ನೀವು ಒಳ್ಳೇವ್ರು..!!

ಸತ್ಯವನ್ನೇ ಹೇಳುತ್ತಿದ್ದೇನೆ, ಮುಖ್ಯಮಂತ್ರಿಗಳೇ, ನೀವು ಒಳ್ಳೇವ್ರು..!!

ರಾಜ್ಯದ ಮುಖ್ಯಮಂತ್ರಿಯನ್ನು ತಮ್ಮ ಜಾತಿಯ ಬೆಂಬಲದಿಂದ ಅವಮಾನಿಸಿದ್ದು ತೀರ ಖಂಡನೀಯ. ಇದು ಪ್ರಜಾಪ್ರಭುತ್ವದ ವಿರೋಧ ನಡೆಯೂ ಕೂಡ

- Advertisement -
- Advertisement -

ರಾಜ್ಯದ ನೂತನ ಜಗದ್ಗುರು ಪೀಠದ ಸ್ವಾಮೀಜಿಯೊಬ್ಬರು ರಾಜ್ಯದ ಮುಖ್ಯಮಂತ್ರಿಗಳಿಗೆ ಸಾವಿರಾರು ಜನತೆ ಸೇರಿರುವ ಬಹಿರಂಗ ಸಭೆಯ ವೇದಿಕೆ ಮೇಲೆ ಅಧಿಕಾರವರ್ಗವನ್ನು ‘ಅವಾಜ್’ ಹಾಕುವ ಮೂಲಕ ಅವಾಂತರ ಸೃಷ್ಟಿಸಿಕೊಂಡ‌ ಘಟನೆ ಒಂದು ರಾಜಕೀಯ‌ ವಲಯದಲ್ಲಿ ಭಾರಿ ಚರ್ಚೆಗೆ ಒಳಪಟ್ಟಿದೆ.

“ಮುಖ್ಯಮಂತ್ರಿಗಳೇ , ನೀವು ಒಳ್ಳೇವ್ರು…!
ಪಂಚಮಸಾಲಿ ಸಮುದಾಯದ ಪ್ರಶ್ನಾತೀತ ನಾಯಕ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಲೇಬೇಕು..! ನಿಮ್ಮ ಬೆನ್ನಿಗೆ ಬೆನ್ನೆಲುಬಾಗಿ ನಿಂತು ನಿಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವ ಮುರುಗೇಶ್ ನಿರಾಣಿಗೆ ಕೈ ಬಿಡ್ಬೇಡಿ..!
ನಮ್ಮ ಸಮುದಾಯದ 13 ಜನ ಶಾಸಕರಲ್ಲಿ ಕನಿಷ್ಠ
4 ಜನರಿಗೆ ಮಂತ್ರಿಸ್ಥಾನ ಕೊಡಲೇಬೇಕು..!
ಒಂದು ವೇಳ ನೀವು ಪಂಚಮಸಾಲಿ ಸಮುದಾಯದ ಕೈಬಿಟ್ಟರೇ ಅಖಂಡ ಪಂಚಮಸಾಲಿ ಸಮುದಾಯ ನಿಮ್ಮನ್ನು  ಕೈಬಿಡುತ್ತೆ…!!”

ಎಂದು ಪಕ್ಕದ ಕುರ್ಚಿಯ ಮೇಲೆ ಕುಳಿತ ರಾಜ್ಯದ ಮುಖ್ಯಮಂತ್ರಿಗಳಿಗೆ ಸಮುದಾಯಪರ ಬ್ಯಾಟಿಂಗ್ ನಡೆಸಿದ ಸ್ವಾಮೀಜಿಯೊಬ್ಬರ ‘ಬೆದರಿಕೆ’ಯ ಮಾತುಗಳು ಯಡಿಯೂರಪ್ಪನವರ ಕೆಂಡಾಮಂಡಲವಾಗಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಪರ – ವಿರೋಧ ವ್ಯಕ್ತವಾಗುತ್ತಿದೆ.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ‌‌ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ತಮ್ಮ ನಾಯಕರ ಏಳಿಗೆ, ಹಿತಾಸಕ್ತಿ ಬಯಸಿ ರಾಜಕೀಯ ತೆವಲು ತೀರಿಸಿಕೊಳ್ಳಲು ಸಮುದಾಯವನ್ನು ಬಳಸಿಕೊಳ್ಳಲು ಮುಂದಾದರು.

ಅಷ್ಟಕ್ಕೂ ಈ ಸ್ವಾಮೀಜಿ ಮಠಾಧೀಶರೋ ಅಥವಾ ರಾಜಕಾರಣಿಯೋ ಎಂಬ ಸಂಶಯ ರಾಜ್ಯದ ಜನತೆಗೆ ಗಾಢವಾಗಿ ಕಾಡುತ್ತದೆ. ರಾಜ್ಯದ ಮುಖ್ಯಮಂತ್ರಿಗಳ ಜೊತೆ ಹೇಗೆ ಮಾತಾಡಬೇಕೆನ್ನುವ ಕನಿಷ್ಠ ನೈತಿಕತೆ ಇಲ್ಲದವರು ಅದೇಗೆ ಸ್ವಾಮೀಜಿಯಾದರು?
ಇದು ಕಾವಿಯ ಮಹಿಮೆಯೋ ಅಥವಾ ತಮ್ಮ ಸಮುದಾಯ ಬೆಂಬಲದ ”ಅಹಂ’ ಇದಕ್ಕೆ ಮೂಲ ಕಾರಣ ಎನ್ನಬಹುದು. ಈ ರೀತಿಯ ‘ಪಾಲು’ ಕೇಳುವ ಧೈರ್ಯ ಬಹುತೇಕ ಕಾವಿಧಾರಿಗಳು ಕರಗತ ಮಾಡಿಕೊಂಡಿದ್ದಾರೆ. ಇದು ಕಾವಿ – ಖಾದಿಗಳು ಪರಸ್ಪರ ಕೊಂಡುಕೊಳ್ಳುವಿಕೆ ಪ್ರಕ್ರಿಯೆಯಾಗಿದೆ.

ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಮಠಾಧೀಶರಾದ ಇವರು ಅದೆಷ್ಟು ವಚನ ಓದಿದ್ದಾರೋ ಗೊತ್ತಿಲ್ಲ, ಬಹುಶಃ ಇವರು ವಚನ ಸಾಹಿತ್ಯ ಆಳವಾಗಿ ಅಧ್ಯಯನ ಕೈಗೊಂಡಿದರೆ
ಈ ರೀತಿ ಜಾತಿವಾದಿ ರಾಜಕೀಯ ಹಾಗೂ ರಾಜಕಾರಣಿಗಳ ಪರ ನಿಂತು ಅಂಗಲಾಚುತ್ತಿರಲಿಲ್ಲ ಅನ್ಸುತ್ತೆ. ಕೇವಲ ಪಂಚಮಸಾಲಿ ಸಮುದಾಯಕ್ಕೆ ಮಾತ್ರ  ಸೀಮಿತ ಎಂದು ಮಂತ್ರಿ ಸ್ಥಾನ ಕೊಡಬೇಕೆಂದು ಬೆದರಿಸುವ ಈ ಸ್ವಾಮೀಜಿಗಳು ಲಿಂಗಾಯತ ಮಠದ ಸ್ವಾಮೀಜಿ ಎಂದು ಹೇಳಲು ಸಾಧ್ಯವೇ?

ಬಸವ ತತ್ವ ಸಿದ್ಧಾಂತ‌ ಸೂಕ್ಷ್ಮವಾಗಿ  ಅರ್ಥೈಸಿಕೊಳ್ಳದವರು ಮಠಾಧೀಶರಾಗಲು
ಅರ್ಹರೇ? ‘ಲಿಂಗಾಯತ’ ಎಂಬುದು ಜಾತಿಯಲ್ಲ,
ಜಾತಿ ಮತ ಪಂಥ ಹಾಗೂ ಲಿಂಗರಹಿತವಾದ ‘
ಸಕಲ ಜೀವಾತ್ಮರಿಗೂ ಲೇಸು ಬಯಸುವ’
ಮಾನವೀಯತೆ ನೆಲೆಗಟ್ಟಿನ‌ ಅದೊಂದು
ಧರ್ಮ. ಆದರೆ ಹಿರಿಯ‌ ಮಠಾಧೀಶರ ಬುದ್ಧಿವಂತಿಕೆಯಿಂದ ಲಿಂಗಾಯತ ಎನ್ನುವ ಮೂಲ ಪರಿಕಲ್ಪನೆ ಮರೆಮಾಚಿಸುವ ಮೂಲಕ ಜಾತಿಗೊಂದು ಮಠ ಸ್ಥಾಪಿಸಿದರು. ಅಂತಹ ಮಠಗಳಿಗೆ ಜಾತಿಗೊಬ್ಬ ಮಠಾಧೀಶರನ್ನು ನೇಮಿಸುವ ಮೂಲಕ ಲಿಂಗಾಯತ ಧರ್ಮವನ್ನು ವೈದಿಕ ಧರ್ಮದ ಭಾಗವಾಗಿ ಗುರುತಿಸಿದರು! ಇಂತಹ ಪೀಠಗಳಲ್ಲಿ ಪಂಚಮಸಾಲಿ ಕೂಡ ಒಂದು. ಮಾಧ್ಯಮಗಳ ಮೂಲಕ ಜನಮಾನಸದಲ್ಲಿ ಗುರುತಿಸಿಕೊಂಡಿರುವ ಶ್ವಾಸಗುರು‌ ಸ್ವಾಮೀಜಿ ನಂತರದ ದಿನಗಳಲ್ಲಿ ಪಂಚಮಸಾಲಿ ಪೀಠಕ್ಕೆ ಹೊಸ ‘ಜಗದ್ಗುರು’ವಾಗಿ‌ ಬಡ್ತಿ ಪಡೆದರು.

ರಾಜ್ಯದ ಮುಖ್ಯಮಂತ್ರಿಯನ್ನು ತಮ್ಮ ಜಾತಿಯ ಬೆಂಬಲದಿಂದ ಅವಮಾನಿಸಿದ್ದು ತೀರ ಖಂಡನೀಯ. ಇದು ಪ್ರಜಾಪ್ರಭುತ್ವದ ವಿರೋಧ ನಡೆಯೂ ಕೂಡ. ಸಂವಿಧಾನ ಬದ್ಧವಾಗಿ ಆಯ್ಕೆಯಾದ ಪ್ರತಿನಿಧಿಗೆ ಕನಿಷ್ಠ ಗೌರವ ನೀಡದ ಸ್ವಾಮೀಜಿಯೊಬ್ಬರು ತನ್ನ ಮಠ ಹಾಗೂ ಸಮುದಾಯದಕ್ಕೆ ಸೀಮಿತವಾಗಿ ಬೇಡಿಕೆ ಮಂಡಿಸುವ ತಾಕತ್ತು ಧರ್ಮ ಕಲಿಸುವುದಿಲ್ಲ.

ಮಠಾಧೀಶರಾದವರು ‘ಎನಗಿಂತ ಕಿರಿಯರಿಲ್ಲ ಶಿವಭಕ್ತರಿಗಿಂತ ಹಿರಿಯರಿಲ್ಲ’ ಎನ್ನುವ ತತ್ವದಲ್ಲಿ ಮುನ್ನಡೆದು ಇತರರಿಗೂ ಮಾದರಿಯಾಗಬೇಕು.
ಆದರೆ ಕೂತಲ್ಲೇ ಮೈಕ್ ನಲ್ಲಿ ಅಸಭ್ಯವಾಗಿ ಏರು ದನಿಯಲ್ಲಿ ಮಾತನಾಡಿ ಮುಖ್ಯಮಂತ್ರಿಗೆ ಅವಮಾನಿಸುವ ಧೈರ್ಯ ಹೇಗೆ ಬಂದಿರಬಹುದು?

ಸರ್ಕಾರಕ್ಕೆ ತಮ್ಮ ಸಮುದಾಯ ಹಾಗೂ ಜಾತಿಗಳಿಗೆ ಸವಲತ್ತು ಕೇಳುವ ಹಕ್ಕನ್ನು ಸಂವಿಧಾನ ನೀಡಿದೆ. ಯಾವುದೇ ಸರ್ಕಾರ ಹಾಗೂ ರಾಜಕಾರಣಿಗಳಿಗೆ ಸಲಹೆ ಸೂಚನೆಗಳನ್ನು ನೀಡುವ ಅಧಿಕಾರ ಕೂಡ ಮಠಾಧೀಶರಿಗಿದೆ. ಆದರೆ ರಾಜಕೀಯ ಹಸ್ತಕ್ಷೇಪ ಮಾಡುವಂತಿಲ್ಲ. ಹಾಗೇನಾದರೂ ಮಾಡಿದರೆ ಕಾವಿ ಕಳಚಿಟ್ಪು ನೇರವಾಗಿ ರಾಜಕಾರಣ ಮಾಡಲು ಖಾದಿ ಧರಿಸಬೇಕು? ಆದರೆ ಧಾರ್ಮಿಕ ಬೋಧನೆಯ ಸ್ವಾಮೀಜಿ ತನ್ನ ಜಾತಿಯ ಒಬ್ಬರನ್ನ ಮಂತ್ರಿ ಮಾಡಲೇಬೇಕು ಎಂದು ಅಂತ ಧಮ್ಕಿ ಹಾಕಿ ಹಕ್ಕೊತ್ತಾಯ ಮೂಲಕ ಆಮಿಷ ತೋರಿಸೋದು ಕಾನೂನು ಬಾಹಿರ ಅಲ್ಲವೇ?

ಬಸವಣ್ಣರ ಕಟ್ಟಲು ಬಯಸಿದ ಲಿಂಗಾಯತ ಸಿದ್ಧಾಂತವೇ ಬೇರೆ.ಈ ಸ್ವಾಮೀಜಿಗಳ ಸಿದ್ಧಾಂತವೇ ಬೇರೆಯಾಗಿದೆ. ಮೊದಲಿಗೆ ಬಸವ ಸಿದ್ಧಾಂತದಲ್ಲಿ  ಮಠವೂ ಇಲ್ಲ, ಕಾವಿಯೂ ಇಲ್ಲ. ಆದರೆ ಜಾತಿ ಲೆಕ್ಕಾಚಾರದಲ್ಲಿ ಜಾತಿಗೊಂದು ಜಾತ್ರೆ ಮಾಡಲು ಮಠೀಯ ವ್ಯವಸ್ಥೆ ಜಾರಿಗೊಳಿಸಿದರು. ಇಂತಹ ಕಾವಿಧಾರಿಗಳ ನಡುವೆಯೂ ಸಿದ್ಧಗಂಗಾ ಶ್ರೀ, ತೋಂಟದಾರ್ಯ ಶ್ರೀಗಳು, ಭಾಲ್ಕಿಯ ಚನ್ನಬಸವ ಪಟ್ಟದೇವರ ಭಿನ್ನವಾಗಿ ಕಂಡು ಸಮನ್ವಯತೆಗೆ ಮಾದರಿಯಾದವರು.

ವಚನಾನಂದ ಶ್ರೀಗಳು ಬಹುಶಃ ತಮ್ಮ ಸಮುದಾಯದ ಏಳಿಗೆ ಬಯಸಿ ಒಂದಿಷ್ಟು ಪೂರಕ ಯೋಜನೆ ರೂಪಿಸುವಂತೆ ಸಲಹೆ ನೀಡಬಹುದಿತ್ತು. ತಮ್ಮ ಭಾಗದ ರೈತರ ಕೃಷಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಆಗ್ರಹಿಸಬಹುದಿತ್ತು. ಉಳಿದ ಜಾತಿಗಳ ಬಗ್ಗೆ ನಿರ್ಲಕ್ಷ್ಯ ತೋರಿದರೂ ತಮ್ಮ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಪ್ರತ್ಯೇಕ ಅನುದಾನವಾದರೂ ಕೇಳಿದರೆ??  ನೀವು ನಿಜವಾಗ್ಲೂ ಜನಪರ ‘ಶ್ವಾಸಗುರು’ ಎನಿಸಿಕೊಳ್ಳುತ್ತಿದ್ದೀರಿ. ಇನ್ನಾದರೂ ಬದಲಾಗಿ ‘ಇವನಮ್ಮವ’ ಎನ್ನುವ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಬೇಕಿದೆ.

ಚುನಾವಣೆಯಲ್ಲಿ ಮಠ ಪೀಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಸಲಹೆಯಂತೆ ಟಿಕೇಟ್ ಹಂಚುವ ರಾಜಕಾರಣಿಗಳು ಕಾವಿಗೆ ಹೆದರದೆ ಇರುವವರೇ?
ಜಾತಿ‌, ಧರ್ಮಾಧಾರಿತ‌ವಾಗಿ ಬದಲಾದ ಇಂದಿನ ರಾಜಕೀಯ ವ್ಯವಸ್ಥೆಯನ್ನು ಮಠ‌ – ಪೀಠಗಳೇ ನಿರ್ಣಾಯಕವಾಗಿವೆ.

ಇಂದಿನ ಬಹುತೇಕ ಎಲ್ಲಾ ಮಠಗಳು ರಾಜಕೀಯ ತಾಣಗಳಾಗಿ ಪರಿವರ್ತನೆಯಾಗಿವೆ. ಚುನಾವಣೆಗಳಲ್ಲಿ ಪಕ್ಷಗಳ ಗೆಲುವಿಗಾಗಿ ಹರಸಾಹಸಪಟ್ಟು ಬೆಂಬಲ ಘೋಷಿಸುವ ಮಠಾಧೀಪತಿಗಳು ನಂತರದ ದಿನಗಳಲ್ಲಿ ತಮ್ಮ ಕಸರತ್ತಿನ ಪಾಲು ಕೇಳದೇ ಇರಬಹುದೇ? ಧರ್ಮದ ಹೆಸರಿನಲ್ಲಿ ಜಾತಿ ರಾಜಕಾರಣ ನಡೆಸುವ ಮಠಾಧೀಶರು ತಮ್ಮ ಮಠ – ಪೀಠ ಬೆಳವಣಿಗೆಗಾಗಿ ಎಲ್ಲಾ ರೀತಿಯ ಸಾಹಸಗಳನ್ನು ಮಾಡಲು ಮುಂದಾಗುತ್ತಾರೆ.

ಮಂತ್ರಿ ಸ್ಥಾನ ತೊರೆದು ನಾಲ್ಕು ತಿಂಗಳ ಉಪವಾಸ ವನವಾಸ ಅನುಭವಿಸಿ ಮುಖ್ಯಮಂತ್ರಿ ‌ಮಾಡಿದ
17 ಶಾಸಕರಿಗೆ ಹೇಗೆ ಸಚಿವ‌ ಸ್ಥಾನ ಕೊಡಬೇಕೆಂಬ ಸಂಕಷ್ಟದಲ್ಲಿರುವ ಯಡಿಯೂರಪ್ಪನವರಿಗೆ ವಚನಾನಂದ ಸ್ವಾಮೀಜಿಯ ‘ಗರ್ ಗುರ್’ ಮಾತುಗಳು ನಿರಾಸೆ ಮೂಡಿಸಿದವು. ಕೊನೆಗೆ
“ನನ್ನ ಪರಿ‌ಸ್ಥಿತಿ‌ ಅರ್ಥೈಸಿಕೊಳ್ಳಿ,‌ ಎಲ್ಲರೂ ‌ನನಗೆ ಅಷ್ಟೇ ಸಮ,ಸಲಹೆ ನೀಡಬಹುದು ಹೊರತು ಬೆದರಿಕೆ ಅಲ್ಲ, ನೀವು ಬಯಸಿದರೆ ನಾಳೆಯೇ ರಾಜಿನಾಮೆ ಕೊಡುತ್ತೇನೆ” ಎಂದು ಸ್ವಾಮೀಜಿಗೆ ಸರಿಯಾಗೇ ಉತ್ತರಿಸಿದರೂ ಒಳಗೊಳಗೆ ಸಂಪುಟ ವಿಸ್ತರಣೆಯ ಭಯ ಮತ್ತೆ ಕಾಡುತ್ತಿತ್ತು.

ಇಂದಿನ ರಾಜಕೀಯ ವ್ಯವಸ್ಥೆ ಕಾವಿಧಾರಿಗಳ ನಿರ್ದೇಶನದಂತೆ ಮುನ್ನಡೆಯುತ್ತಿರುವಾಗ ಇಂತಹ ಬೆಳವಣಿಗೆಗಳು ಸಾಮಾನ್ಯವಾಗಿ ಹುಟ್ಟಿಕೊಳ್ಳುತ್ತವೆ ಎಂಬುದು ಈ ಘಟನೆ ಮತ್ತೊಮ್ಮೆ ಸಾಕ್ಷಿಯಾಗಿ ‌ನೋಡಬಹುದು.

(ಲೇಖಕರು ಶಿಕ್ಷಕರು ಮತ್ತು ಬರಹಗಾರರು. ಅಭಿಪ್ರಾಯಗಳು ಅವರ ಸ್ವಂತದ್ದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಮುದಾಯಕ್ಕೆ ಸೀಮಿತವಾದ ಸ್ವಾಮೀಜಿ ಜಗದ್ಗುರು ಆಗಲು ಹೇಗೆ ಸಾಧ್ಯ?

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...