HomeUncategorizedಸತ್ಯವನ್ನೇ ಹೇಳುತ್ತಿದ್ದೇನೆ, ಮುಖ್ಯಮಂತ್ರಿಗಳೇ, ನೀವು ಒಳ್ಳೇವ್ರು..!!

ಸತ್ಯವನ್ನೇ ಹೇಳುತ್ತಿದ್ದೇನೆ, ಮುಖ್ಯಮಂತ್ರಿಗಳೇ, ನೀವು ಒಳ್ಳೇವ್ರು..!!

ರಾಜ್ಯದ ಮುಖ್ಯಮಂತ್ರಿಯನ್ನು ತಮ್ಮ ಜಾತಿಯ ಬೆಂಬಲದಿಂದ ಅವಮಾನಿಸಿದ್ದು ತೀರ ಖಂಡನೀಯ. ಇದು ಪ್ರಜಾಪ್ರಭುತ್ವದ ವಿರೋಧ ನಡೆಯೂ ಕೂಡ

- Advertisement -
- Advertisement -

ರಾಜ್ಯದ ನೂತನ ಜಗದ್ಗುರು ಪೀಠದ ಸ್ವಾಮೀಜಿಯೊಬ್ಬರು ರಾಜ್ಯದ ಮುಖ್ಯಮಂತ್ರಿಗಳಿಗೆ ಸಾವಿರಾರು ಜನತೆ ಸೇರಿರುವ ಬಹಿರಂಗ ಸಭೆಯ ವೇದಿಕೆ ಮೇಲೆ ಅಧಿಕಾರವರ್ಗವನ್ನು ‘ಅವಾಜ್’ ಹಾಕುವ ಮೂಲಕ ಅವಾಂತರ ಸೃಷ್ಟಿಸಿಕೊಂಡ‌ ಘಟನೆ ಒಂದು ರಾಜಕೀಯ‌ ವಲಯದಲ್ಲಿ ಭಾರಿ ಚರ್ಚೆಗೆ ಒಳಪಟ್ಟಿದೆ.

“ಮುಖ್ಯಮಂತ್ರಿಗಳೇ , ನೀವು ಒಳ್ಳೇವ್ರು…!
ಪಂಚಮಸಾಲಿ ಸಮುದಾಯದ ಪ್ರಶ್ನಾತೀತ ನಾಯಕ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಲೇಬೇಕು..! ನಿಮ್ಮ ಬೆನ್ನಿಗೆ ಬೆನ್ನೆಲುಬಾಗಿ ನಿಂತು ನಿಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವ ಮುರುಗೇಶ್ ನಿರಾಣಿಗೆ ಕೈ ಬಿಡ್ಬೇಡಿ..!
ನಮ್ಮ ಸಮುದಾಯದ 13 ಜನ ಶಾಸಕರಲ್ಲಿ ಕನಿಷ್ಠ
4 ಜನರಿಗೆ ಮಂತ್ರಿಸ್ಥಾನ ಕೊಡಲೇಬೇಕು..!
ಒಂದು ವೇಳ ನೀವು ಪಂಚಮಸಾಲಿ ಸಮುದಾಯದ ಕೈಬಿಟ್ಟರೇ ಅಖಂಡ ಪಂಚಮಸಾಲಿ ಸಮುದಾಯ ನಿಮ್ಮನ್ನು  ಕೈಬಿಡುತ್ತೆ…!!”

ಎಂದು ಪಕ್ಕದ ಕುರ್ಚಿಯ ಮೇಲೆ ಕುಳಿತ ರಾಜ್ಯದ ಮುಖ್ಯಮಂತ್ರಿಗಳಿಗೆ ಸಮುದಾಯಪರ ಬ್ಯಾಟಿಂಗ್ ನಡೆಸಿದ ಸ್ವಾಮೀಜಿಯೊಬ್ಬರ ‘ಬೆದರಿಕೆ’ಯ ಮಾತುಗಳು ಯಡಿಯೂರಪ್ಪನವರ ಕೆಂಡಾಮಂಡಲವಾಗಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಪರ – ವಿರೋಧ ವ್ಯಕ್ತವಾಗುತ್ತಿದೆ.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ‌‌ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ತಮ್ಮ ನಾಯಕರ ಏಳಿಗೆ, ಹಿತಾಸಕ್ತಿ ಬಯಸಿ ರಾಜಕೀಯ ತೆವಲು ತೀರಿಸಿಕೊಳ್ಳಲು ಸಮುದಾಯವನ್ನು ಬಳಸಿಕೊಳ್ಳಲು ಮುಂದಾದರು.

ಅಷ್ಟಕ್ಕೂ ಈ ಸ್ವಾಮೀಜಿ ಮಠಾಧೀಶರೋ ಅಥವಾ ರಾಜಕಾರಣಿಯೋ ಎಂಬ ಸಂಶಯ ರಾಜ್ಯದ ಜನತೆಗೆ ಗಾಢವಾಗಿ ಕಾಡುತ್ತದೆ. ರಾಜ್ಯದ ಮುಖ್ಯಮಂತ್ರಿಗಳ ಜೊತೆ ಹೇಗೆ ಮಾತಾಡಬೇಕೆನ್ನುವ ಕನಿಷ್ಠ ನೈತಿಕತೆ ಇಲ್ಲದವರು ಅದೇಗೆ ಸ್ವಾಮೀಜಿಯಾದರು?
ಇದು ಕಾವಿಯ ಮಹಿಮೆಯೋ ಅಥವಾ ತಮ್ಮ ಸಮುದಾಯ ಬೆಂಬಲದ ”ಅಹಂ’ ಇದಕ್ಕೆ ಮೂಲ ಕಾರಣ ಎನ್ನಬಹುದು. ಈ ರೀತಿಯ ‘ಪಾಲು’ ಕೇಳುವ ಧೈರ್ಯ ಬಹುತೇಕ ಕಾವಿಧಾರಿಗಳು ಕರಗತ ಮಾಡಿಕೊಂಡಿದ್ದಾರೆ. ಇದು ಕಾವಿ – ಖಾದಿಗಳು ಪರಸ್ಪರ ಕೊಂಡುಕೊಳ್ಳುವಿಕೆ ಪ್ರಕ್ರಿಯೆಯಾಗಿದೆ.

ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಮಠಾಧೀಶರಾದ ಇವರು ಅದೆಷ್ಟು ವಚನ ಓದಿದ್ದಾರೋ ಗೊತ್ತಿಲ್ಲ, ಬಹುಶಃ ಇವರು ವಚನ ಸಾಹಿತ್ಯ ಆಳವಾಗಿ ಅಧ್ಯಯನ ಕೈಗೊಂಡಿದರೆ
ಈ ರೀತಿ ಜಾತಿವಾದಿ ರಾಜಕೀಯ ಹಾಗೂ ರಾಜಕಾರಣಿಗಳ ಪರ ನಿಂತು ಅಂಗಲಾಚುತ್ತಿರಲಿಲ್ಲ ಅನ್ಸುತ್ತೆ. ಕೇವಲ ಪಂಚಮಸಾಲಿ ಸಮುದಾಯಕ್ಕೆ ಮಾತ್ರ  ಸೀಮಿತ ಎಂದು ಮಂತ್ರಿ ಸ್ಥಾನ ಕೊಡಬೇಕೆಂದು ಬೆದರಿಸುವ ಈ ಸ್ವಾಮೀಜಿಗಳು ಲಿಂಗಾಯತ ಮಠದ ಸ್ವಾಮೀಜಿ ಎಂದು ಹೇಳಲು ಸಾಧ್ಯವೇ?

ಬಸವ ತತ್ವ ಸಿದ್ಧಾಂತ‌ ಸೂಕ್ಷ್ಮವಾಗಿ  ಅರ್ಥೈಸಿಕೊಳ್ಳದವರು ಮಠಾಧೀಶರಾಗಲು
ಅರ್ಹರೇ? ‘ಲಿಂಗಾಯತ’ ಎಂಬುದು ಜಾತಿಯಲ್ಲ,
ಜಾತಿ ಮತ ಪಂಥ ಹಾಗೂ ಲಿಂಗರಹಿತವಾದ ‘
ಸಕಲ ಜೀವಾತ್ಮರಿಗೂ ಲೇಸು ಬಯಸುವ’
ಮಾನವೀಯತೆ ನೆಲೆಗಟ್ಟಿನ‌ ಅದೊಂದು
ಧರ್ಮ. ಆದರೆ ಹಿರಿಯ‌ ಮಠಾಧೀಶರ ಬುದ್ಧಿವಂತಿಕೆಯಿಂದ ಲಿಂಗಾಯತ ಎನ್ನುವ ಮೂಲ ಪರಿಕಲ್ಪನೆ ಮರೆಮಾಚಿಸುವ ಮೂಲಕ ಜಾತಿಗೊಂದು ಮಠ ಸ್ಥಾಪಿಸಿದರು. ಅಂತಹ ಮಠಗಳಿಗೆ ಜಾತಿಗೊಬ್ಬ ಮಠಾಧೀಶರನ್ನು ನೇಮಿಸುವ ಮೂಲಕ ಲಿಂಗಾಯತ ಧರ್ಮವನ್ನು ವೈದಿಕ ಧರ್ಮದ ಭಾಗವಾಗಿ ಗುರುತಿಸಿದರು! ಇಂತಹ ಪೀಠಗಳಲ್ಲಿ ಪಂಚಮಸಾಲಿ ಕೂಡ ಒಂದು. ಮಾಧ್ಯಮಗಳ ಮೂಲಕ ಜನಮಾನಸದಲ್ಲಿ ಗುರುತಿಸಿಕೊಂಡಿರುವ ಶ್ವಾಸಗುರು‌ ಸ್ವಾಮೀಜಿ ನಂತರದ ದಿನಗಳಲ್ಲಿ ಪಂಚಮಸಾಲಿ ಪೀಠಕ್ಕೆ ಹೊಸ ‘ಜಗದ್ಗುರು’ವಾಗಿ‌ ಬಡ್ತಿ ಪಡೆದರು.

ರಾಜ್ಯದ ಮುಖ್ಯಮಂತ್ರಿಯನ್ನು ತಮ್ಮ ಜಾತಿಯ ಬೆಂಬಲದಿಂದ ಅವಮಾನಿಸಿದ್ದು ತೀರ ಖಂಡನೀಯ. ಇದು ಪ್ರಜಾಪ್ರಭುತ್ವದ ವಿರೋಧ ನಡೆಯೂ ಕೂಡ. ಸಂವಿಧಾನ ಬದ್ಧವಾಗಿ ಆಯ್ಕೆಯಾದ ಪ್ರತಿನಿಧಿಗೆ ಕನಿಷ್ಠ ಗೌರವ ನೀಡದ ಸ್ವಾಮೀಜಿಯೊಬ್ಬರು ತನ್ನ ಮಠ ಹಾಗೂ ಸಮುದಾಯದಕ್ಕೆ ಸೀಮಿತವಾಗಿ ಬೇಡಿಕೆ ಮಂಡಿಸುವ ತಾಕತ್ತು ಧರ್ಮ ಕಲಿಸುವುದಿಲ್ಲ.

ಮಠಾಧೀಶರಾದವರು ‘ಎನಗಿಂತ ಕಿರಿಯರಿಲ್ಲ ಶಿವಭಕ್ತರಿಗಿಂತ ಹಿರಿಯರಿಲ್ಲ’ ಎನ್ನುವ ತತ್ವದಲ್ಲಿ ಮುನ್ನಡೆದು ಇತರರಿಗೂ ಮಾದರಿಯಾಗಬೇಕು.
ಆದರೆ ಕೂತಲ್ಲೇ ಮೈಕ್ ನಲ್ಲಿ ಅಸಭ್ಯವಾಗಿ ಏರು ದನಿಯಲ್ಲಿ ಮಾತನಾಡಿ ಮುಖ್ಯಮಂತ್ರಿಗೆ ಅವಮಾನಿಸುವ ಧೈರ್ಯ ಹೇಗೆ ಬಂದಿರಬಹುದು?

ಸರ್ಕಾರಕ್ಕೆ ತಮ್ಮ ಸಮುದಾಯ ಹಾಗೂ ಜಾತಿಗಳಿಗೆ ಸವಲತ್ತು ಕೇಳುವ ಹಕ್ಕನ್ನು ಸಂವಿಧಾನ ನೀಡಿದೆ. ಯಾವುದೇ ಸರ್ಕಾರ ಹಾಗೂ ರಾಜಕಾರಣಿಗಳಿಗೆ ಸಲಹೆ ಸೂಚನೆಗಳನ್ನು ನೀಡುವ ಅಧಿಕಾರ ಕೂಡ ಮಠಾಧೀಶರಿಗಿದೆ. ಆದರೆ ರಾಜಕೀಯ ಹಸ್ತಕ್ಷೇಪ ಮಾಡುವಂತಿಲ್ಲ. ಹಾಗೇನಾದರೂ ಮಾಡಿದರೆ ಕಾವಿ ಕಳಚಿಟ್ಪು ನೇರವಾಗಿ ರಾಜಕಾರಣ ಮಾಡಲು ಖಾದಿ ಧರಿಸಬೇಕು? ಆದರೆ ಧಾರ್ಮಿಕ ಬೋಧನೆಯ ಸ್ವಾಮೀಜಿ ತನ್ನ ಜಾತಿಯ ಒಬ್ಬರನ್ನ ಮಂತ್ರಿ ಮಾಡಲೇಬೇಕು ಎಂದು ಅಂತ ಧಮ್ಕಿ ಹಾಕಿ ಹಕ್ಕೊತ್ತಾಯ ಮೂಲಕ ಆಮಿಷ ತೋರಿಸೋದು ಕಾನೂನು ಬಾಹಿರ ಅಲ್ಲವೇ?

ಬಸವಣ್ಣರ ಕಟ್ಟಲು ಬಯಸಿದ ಲಿಂಗಾಯತ ಸಿದ್ಧಾಂತವೇ ಬೇರೆ.ಈ ಸ್ವಾಮೀಜಿಗಳ ಸಿದ್ಧಾಂತವೇ ಬೇರೆಯಾಗಿದೆ. ಮೊದಲಿಗೆ ಬಸವ ಸಿದ್ಧಾಂತದಲ್ಲಿ  ಮಠವೂ ಇಲ್ಲ, ಕಾವಿಯೂ ಇಲ್ಲ. ಆದರೆ ಜಾತಿ ಲೆಕ್ಕಾಚಾರದಲ್ಲಿ ಜಾತಿಗೊಂದು ಜಾತ್ರೆ ಮಾಡಲು ಮಠೀಯ ವ್ಯವಸ್ಥೆ ಜಾರಿಗೊಳಿಸಿದರು. ಇಂತಹ ಕಾವಿಧಾರಿಗಳ ನಡುವೆಯೂ ಸಿದ್ಧಗಂಗಾ ಶ್ರೀ, ತೋಂಟದಾರ್ಯ ಶ್ರೀಗಳು, ಭಾಲ್ಕಿಯ ಚನ್ನಬಸವ ಪಟ್ಟದೇವರ ಭಿನ್ನವಾಗಿ ಕಂಡು ಸಮನ್ವಯತೆಗೆ ಮಾದರಿಯಾದವರು.

ವಚನಾನಂದ ಶ್ರೀಗಳು ಬಹುಶಃ ತಮ್ಮ ಸಮುದಾಯದ ಏಳಿಗೆ ಬಯಸಿ ಒಂದಿಷ್ಟು ಪೂರಕ ಯೋಜನೆ ರೂಪಿಸುವಂತೆ ಸಲಹೆ ನೀಡಬಹುದಿತ್ತು. ತಮ್ಮ ಭಾಗದ ರೈತರ ಕೃಷಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಆಗ್ರಹಿಸಬಹುದಿತ್ತು. ಉಳಿದ ಜಾತಿಗಳ ಬಗ್ಗೆ ನಿರ್ಲಕ್ಷ್ಯ ತೋರಿದರೂ ತಮ್ಮ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಪ್ರತ್ಯೇಕ ಅನುದಾನವಾದರೂ ಕೇಳಿದರೆ??  ನೀವು ನಿಜವಾಗ್ಲೂ ಜನಪರ ‘ಶ್ವಾಸಗುರು’ ಎನಿಸಿಕೊಳ್ಳುತ್ತಿದ್ದೀರಿ. ಇನ್ನಾದರೂ ಬದಲಾಗಿ ‘ಇವನಮ್ಮವ’ ಎನ್ನುವ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಬೇಕಿದೆ.

ಚುನಾವಣೆಯಲ್ಲಿ ಮಠ ಪೀಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಸಲಹೆಯಂತೆ ಟಿಕೇಟ್ ಹಂಚುವ ರಾಜಕಾರಣಿಗಳು ಕಾವಿಗೆ ಹೆದರದೆ ಇರುವವರೇ?
ಜಾತಿ‌, ಧರ್ಮಾಧಾರಿತ‌ವಾಗಿ ಬದಲಾದ ಇಂದಿನ ರಾಜಕೀಯ ವ್ಯವಸ್ಥೆಯನ್ನು ಮಠ‌ – ಪೀಠಗಳೇ ನಿರ್ಣಾಯಕವಾಗಿವೆ.

ಇಂದಿನ ಬಹುತೇಕ ಎಲ್ಲಾ ಮಠಗಳು ರಾಜಕೀಯ ತಾಣಗಳಾಗಿ ಪರಿವರ್ತನೆಯಾಗಿವೆ. ಚುನಾವಣೆಗಳಲ್ಲಿ ಪಕ್ಷಗಳ ಗೆಲುವಿಗಾಗಿ ಹರಸಾಹಸಪಟ್ಟು ಬೆಂಬಲ ಘೋಷಿಸುವ ಮಠಾಧೀಪತಿಗಳು ನಂತರದ ದಿನಗಳಲ್ಲಿ ತಮ್ಮ ಕಸರತ್ತಿನ ಪಾಲು ಕೇಳದೇ ಇರಬಹುದೇ? ಧರ್ಮದ ಹೆಸರಿನಲ್ಲಿ ಜಾತಿ ರಾಜಕಾರಣ ನಡೆಸುವ ಮಠಾಧೀಶರು ತಮ್ಮ ಮಠ – ಪೀಠ ಬೆಳವಣಿಗೆಗಾಗಿ ಎಲ್ಲಾ ರೀತಿಯ ಸಾಹಸಗಳನ್ನು ಮಾಡಲು ಮುಂದಾಗುತ್ತಾರೆ.

ಮಂತ್ರಿ ಸ್ಥಾನ ತೊರೆದು ನಾಲ್ಕು ತಿಂಗಳ ಉಪವಾಸ ವನವಾಸ ಅನುಭವಿಸಿ ಮುಖ್ಯಮಂತ್ರಿ ‌ಮಾಡಿದ
17 ಶಾಸಕರಿಗೆ ಹೇಗೆ ಸಚಿವ‌ ಸ್ಥಾನ ಕೊಡಬೇಕೆಂಬ ಸಂಕಷ್ಟದಲ್ಲಿರುವ ಯಡಿಯೂರಪ್ಪನವರಿಗೆ ವಚನಾನಂದ ಸ್ವಾಮೀಜಿಯ ‘ಗರ್ ಗುರ್’ ಮಾತುಗಳು ನಿರಾಸೆ ಮೂಡಿಸಿದವು. ಕೊನೆಗೆ
“ನನ್ನ ಪರಿ‌ಸ್ಥಿತಿ‌ ಅರ್ಥೈಸಿಕೊಳ್ಳಿ,‌ ಎಲ್ಲರೂ ‌ನನಗೆ ಅಷ್ಟೇ ಸಮ,ಸಲಹೆ ನೀಡಬಹುದು ಹೊರತು ಬೆದರಿಕೆ ಅಲ್ಲ, ನೀವು ಬಯಸಿದರೆ ನಾಳೆಯೇ ರಾಜಿನಾಮೆ ಕೊಡುತ್ತೇನೆ” ಎಂದು ಸ್ವಾಮೀಜಿಗೆ ಸರಿಯಾಗೇ ಉತ್ತರಿಸಿದರೂ ಒಳಗೊಳಗೆ ಸಂಪುಟ ವಿಸ್ತರಣೆಯ ಭಯ ಮತ್ತೆ ಕಾಡುತ್ತಿತ್ತು.

ಇಂದಿನ ರಾಜಕೀಯ ವ್ಯವಸ್ಥೆ ಕಾವಿಧಾರಿಗಳ ನಿರ್ದೇಶನದಂತೆ ಮುನ್ನಡೆಯುತ್ತಿರುವಾಗ ಇಂತಹ ಬೆಳವಣಿಗೆಗಳು ಸಾಮಾನ್ಯವಾಗಿ ಹುಟ್ಟಿಕೊಳ್ಳುತ್ತವೆ ಎಂಬುದು ಈ ಘಟನೆ ಮತ್ತೊಮ್ಮೆ ಸಾಕ್ಷಿಯಾಗಿ ‌ನೋಡಬಹುದು.

(ಲೇಖಕರು ಶಿಕ್ಷಕರು ಮತ್ತು ಬರಹಗಾರರು. ಅಭಿಪ್ರಾಯಗಳು ಅವರ ಸ್ವಂತದ್ದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಂದು ಸಮುದಾಯಕ್ಕೆ ಸೀಮಿತವಾದ ಸ್ವಾಮೀಜಿ ಜಗದ್ಗುರು ಆಗಲು ಹೇಗೆ ಸಾಧ್ಯ?

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...