Homeಮುಖಪುಟ“ಡಿವೈಡ್ ಆಂಡ್ ರೂಲ್ ಪಾಲಿಸಿ”ಯ ಜನಕರು ವೈದಿಕರೇ ಹೊರತು ಬ್ರಿಟಿಶರಲ್ಲ.

“ಡಿವೈಡ್ ಆಂಡ್ ರೂಲ್ ಪಾಲಿಸಿ”ಯ ಜನಕರು ವೈದಿಕರೇ ಹೊರತು ಬ್ರಿಟಿಶರಲ್ಲ.

- Advertisement -
- Advertisement -

ಒಂದು ಪತ್ರ

ಮಾನ್ಯರೇ,
“ಡಿವೈಡ್ ಆಂಡ್ ರೂಲ್ ಪಾಲಿಸಿ” ಅರ್ಥಾತ್ ವಿಭಜಿಸಿ ಆಳು ಎಂಬ ರಾಜನೀತಿ ಬ್ರಿಟಿಷರದ್ದು ಎಂಬ ಆರೋಪ ಯಾವಾಗಲೂ ಕೇಳಿ ಬರುತ್ತದೆ. ಆದರೆ ಮೂಲತಃ “ವಿಭಜಿಸಿ ಆಳು” ಎಂಬ ಕುತ್ಸಿತ ನೀತಿಯ ಜನಕರು ವೈದಿಕರೇ ಹೊರತು ಬ್ರಿಟಿಶರಲ್ಲ.

ಮೂರು ಸಾವಿರ ವರ್ಷಗಳ ಹಿಂದೆ ವೈದಿಕರು ಇದೇ ಡಿವೈಡ್ & ರೂಲ್ ಪಾಲಿಸಿ ಸಮಾಜದಲ್ಲಿ ಬಿತ್ತಲು “ವರ್ಣ” ಗಳನ್ನು ನಯವಾಗಿ ಸೃಷ್ಟಿಸಿ ಜಾರಿಗೊಳಿಸಿದರು. ನಂತರ ಕುಲಕಸುಬು ಆಧಾರದಲ್ಲಿ ಜಾತಿ-ಉಪಜಾತಿಗಳನ್ನು ಹುಟ್ಟು ಹಾಕಿ ಮೇಲು-ಕೀಳು ಎಂಬ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆ ಜಾರಿಗೆ ತಂದು ಜಾತಿ-ಜಾತಿಯೊಳಗೆ ಪಂಥ-ಪಂಥ ಗಳೊಳಗೆ ದ್ವೇಷ ಹುಟ್ಟಿಸಿ ತಮ್ಮ ಬೇಳೆ ಬೇಯಿಸಿಕೊಂಡರು.

ವೈದಿಕರು ತಾವೇ ಚಿತ್ರವಿಚಿತ್ರ ಮನುಷ್ಯ ಮತ್ತು ಪ್ರಾಣಿ ರೂಪದ ದೇವರ ಕಲ್ಪನೆ ಹುಟ್ಟು ಹಾಕಿ ಕೊನೆಗೆ ಆ ದೇವರೊಳಗೂ ಮೇಲು-ಕೀಳು ಹೆಣ್ಣು-ಗಂಡು ಎಂಬ ವಿಭಜನೆ ಮಾಡಿ, ಆ ವಿಚಿತ್ರ ಸ್ವರೂಪದ ದೇವರುಗಳ ಹೆಸರಲ್ಲಿ ಜನರು ತಮ್ಮ ತಮ್ಮಲ್ಲೇ ಕಚ್ಚಾಡುವಂತೆ ಷಡ್ಯಂತ್ರ ರಚಿಸಿ ಯಶಸ್ವಿಯಾದರು. ಎಲ್ಲಾ ಬಿಟ್ಟು ದೇವಸ್ಥಾನದ ಆನೆಯ ಹಣೆಗೆ ಯಾವ ವಿನ್ಯಾಸದ ನಾಮ ಹಾಕಬೇಕು ಎಂಬ ಬಗ್ಗೆಯೂ ಒಮ್ಮತ ಹುಟ್ಟದಂತಹಾ ಮಾನಸಿಕತೆ ಸಮಾಜದಲ್ಲಿ ಹುಟ್ಟು ಹಾಕಿದವರೂ ಈ ವೈದಿಕರೇ!

ಬ್ರಿಟಿಷರು ಭಾರತಕ್ಕೆ ಬಂದಾಗ ಅವರು ಇಂತಹಾ 6200 ಜಾತಿಗಳಿರುವ ವೈದಿಕ ಧರ್ಮ ನೋಡಿ ಆಘಾತಗೊಂಡರು ಹಾಗೂ ಕೇವಲ 3% ಇರುವ ಬ್ರಾಹ್ಮಣರು ಜಾತಿ-ಉಪಜಾತಿ- ವರ್ಗ-ಪಂಥಗಳ ಮೂಲಕ 97% ಜನರನ್ನು ಮಾನಸಿಕ ದಾಸ್ಯಕ್ಕೆ ಒಳಪಡಿಸಿಕೊಂಡು ಸಮಾಜವನ್ನು ತಮ್ಮ ಮುಷ್ಟಿಯಲ್ಲಿ ಇಟ್ಟಿಕೊಂಡಿರುವುದನ್ನು ಕಂಡು ಬುದ್ದಿವಂತ ಬ್ರಿಟಿಷರು ತಾವೂ ಅದನ್ನೇ ಅನುಸರಿಸಿ ಹಿಂದೂ-ಮುಸ್ಲಿಂ ಒಡಕು ಹುಟ್ಟು ಹಾಕಿದರು. ಈ ಒಡಕನ್ನೇ ಸಂಘ ಪರಿವಾರ ಇಂದು ಬಂಡವಾಳ ಮಾಡಿಕೊಂಡು ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತಿರುವುದು.

ಹಳೆಯದರೊಂದಿಗೆ ಆಧುನಿಕತೆ ಸಹಾ ಇರಲಿ ಎಂಬಂತೆ ಬಿ‌ಜೆ‌ಪಿಯವರಿಂದ ಇವಿಎಂ ತಿರುಚಾಟ ಸಹಾ ನಡೆಯುತ್ತಿದೆ ಬಿಡಿ. ಆದರೆ ಈ ಇವಿಎಂ ತಿರುಚಾಟದ ವಿರುದ್ಧ ಯಾರೂ ದನಿ ಎತ್ತದಂತೆ ಕಾಂಗ್ರೆಸ್ಸಿನೊಳಗಿನ ಆರೆಸ್ಸೆಸ್ಸಿಗರು ತಡೆಯುತ್ತಿದ್ದಾರೆ. ಹಾಗಾಗಿ ಬಿ‌ಜೆ‌ಪಿಯ ಇವಿಎಂ ವಂಚನೆಯ ವಿರುದ್ಧದ ಹೋರಾಟವೂ ಜಾತಿಯ ಸ್ವರೂಪ ಪಡೆದು ಈಗ ಚುನಾವಣೆಯಲ್ಲಿ ಮತಪತ್ರ/ ಬ್ಯಾಲೆಟ್ ಪೇಪರ್ ಮರಳಿ ತರುವುದಕ್ಕಾಗಿ ನಡೆಯುತ್ತಿರುವ ಹೋರಾಟ ಕೇವಲ ದಲಿತ ಸಂಘಟನೆಗಳಿಗೆ ಮಾತ್ರ ಸೀಮಿತವಾಗುವಂತೆ ಎಲ್ಲಾ ವಿರೋಧ ಪಕ್ಷಗಳ ಒಳಗೆ ತೂರಿಕೊಂಡಿರುವ ಆರೆಸ್ಸೆಸ್ಸಿಗರು ನೋಡಿಕೊಂಡಿದ್ದಾರೆ. ಈ ರೀತಿ ವಿರೋಧ ಪಕ್ಷದೊಳಗೂ ಈ ವೈದಿಕರ ಡಿವೈಡ್ ಆಂಡ್ ರೂಲ್ ನೀತಿ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಇದಕ್ಕೆಲ್ಲಾ ಬ್ರಿಟಿಷರನ್ನು ದೂರಲು ಸಾಧ್ಯವೇ!

ತಮ್ಮ ವಿಶ್ವಾಸಿ,
ಪ್ರವೀಣ್ ಎಸ್ ಶೆಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...