Homeಮುಖಪುಟ“ಡಿವೈಡ್ ಆಂಡ್ ರೂಲ್ ಪಾಲಿಸಿ”ಯ ಜನಕರು ವೈದಿಕರೇ ಹೊರತು ಬ್ರಿಟಿಶರಲ್ಲ.

“ಡಿವೈಡ್ ಆಂಡ್ ರೂಲ್ ಪಾಲಿಸಿ”ಯ ಜನಕರು ವೈದಿಕರೇ ಹೊರತು ಬ್ರಿಟಿಶರಲ್ಲ.

- Advertisement -
- Advertisement -

ಒಂದು ಪತ್ರ

ಮಾನ್ಯರೇ,
“ಡಿವೈಡ್ ಆಂಡ್ ರೂಲ್ ಪಾಲಿಸಿ” ಅರ್ಥಾತ್ ವಿಭಜಿಸಿ ಆಳು ಎಂಬ ರಾಜನೀತಿ ಬ್ರಿಟಿಷರದ್ದು ಎಂಬ ಆರೋಪ ಯಾವಾಗಲೂ ಕೇಳಿ ಬರುತ್ತದೆ. ಆದರೆ ಮೂಲತಃ “ವಿಭಜಿಸಿ ಆಳು” ಎಂಬ ಕುತ್ಸಿತ ನೀತಿಯ ಜನಕರು ವೈದಿಕರೇ ಹೊರತು ಬ್ರಿಟಿಶರಲ್ಲ.

ಮೂರು ಸಾವಿರ ವರ್ಷಗಳ ಹಿಂದೆ ವೈದಿಕರು ಇದೇ ಡಿವೈಡ್ & ರೂಲ್ ಪಾಲಿಸಿ ಸಮಾಜದಲ್ಲಿ ಬಿತ್ತಲು “ವರ್ಣ” ಗಳನ್ನು ನಯವಾಗಿ ಸೃಷ್ಟಿಸಿ ಜಾರಿಗೊಳಿಸಿದರು. ನಂತರ ಕುಲಕಸುಬು ಆಧಾರದಲ್ಲಿ ಜಾತಿ-ಉಪಜಾತಿಗಳನ್ನು ಹುಟ್ಟು ಹಾಕಿ ಮೇಲು-ಕೀಳು ಎಂಬ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆ ಜಾರಿಗೆ ತಂದು ಜಾತಿ-ಜಾತಿಯೊಳಗೆ ಪಂಥ-ಪಂಥ ಗಳೊಳಗೆ ದ್ವೇಷ ಹುಟ್ಟಿಸಿ ತಮ್ಮ ಬೇಳೆ ಬೇಯಿಸಿಕೊಂಡರು.

ವೈದಿಕರು ತಾವೇ ಚಿತ್ರವಿಚಿತ್ರ ಮನುಷ್ಯ ಮತ್ತು ಪ್ರಾಣಿ ರೂಪದ ದೇವರ ಕಲ್ಪನೆ ಹುಟ್ಟು ಹಾಕಿ ಕೊನೆಗೆ ಆ ದೇವರೊಳಗೂ ಮೇಲು-ಕೀಳು ಹೆಣ್ಣು-ಗಂಡು ಎಂಬ ವಿಭಜನೆ ಮಾಡಿ, ಆ ವಿಚಿತ್ರ ಸ್ವರೂಪದ ದೇವರುಗಳ ಹೆಸರಲ್ಲಿ ಜನರು ತಮ್ಮ ತಮ್ಮಲ್ಲೇ ಕಚ್ಚಾಡುವಂತೆ ಷಡ್ಯಂತ್ರ ರಚಿಸಿ ಯಶಸ್ವಿಯಾದರು. ಎಲ್ಲಾ ಬಿಟ್ಟು ದೇವಸ್ಥಾನದ ಆನೆಯ ಹಣೆಗೆ ಯಾವ ವಿನ್ಯಾಸದ ನಾಮ ಹಾಕಬೇಕು ಎಂಬ ಬಗ್ಗೆಯೂ ಒಮ್ಮತ ಹುಟ್ಟದಂತಹಾ ಮಾನಸಿಕತೆ ಸಮಾಜದಲ್ಲಿ ಹುಟ್ಟು ಹಾಕಿದವರೂ ಈ ವೈದಿಕರೇ!

ಬ್ರಿಟಿಷರು ಭಾರತಕ್ಕೆ ಬಂದಾಗ ಅವರು ಇಂತಹಾ 6200 ಜಾತಿಗಳಿರುವ ವೈದಿಕ ಧರ್ಮ ನೋಡಿ ಆಘಾತಗೊಂಡರು ಹಾಗೂ ಕೇವಲ 3% ಇರುವ ಬ್ರಾಹ್ಮಣರು ಜಾತಿ-ಉಪಜಾತಿ- ವರ್ಗ-ಪಂಥಗಳ ಮೂಲಕ 97% ಜನರನ್ನು ಮಾನಸಿಕ ದಾಸ್ಯಕ್ಕೆ ಒಳಪಡಿಸಿಕೊಂಡು ಸಮಾಜವನ್ನು ತಮ್ಮ ಮುಷ್ಟಿಯಲ್ಲಿ ಇಟ್ಟಿಕೊಂಡಿರುವುದನ್ನು ಕಂಡು ಬುದ್ದಿವಂತ ಬ್ರಿಟಿಷರು ತಾವೂ ಅದನ್ನೇ ಅನುಸರಿಸಿ ಹಿಂದೂ-ಮುಸ್ಲಿಂ ಒಡಕು ಹುಟ್ಟು ಹಾಕಿದರು. ಈ ಒಡಕನ್ನೇ ಸಂಘ ಪರಿವಾರ ಇಂದು ಬಂಡವಾಳ ಮಾಡಿಕೊಂಡು ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತಿರುವುದು.

ಹಳೆಯದರೊಂದಿಗೆ ಆಧುನಿಕತೆ ಸಹಾ ಇರಲಿ ಎಂಬಂತೆ ಬಿ‌ಜೆ‌ಪಿಯವರಿಂದ ಇವಿಎಂ ತಿರುಚಾಟ ಸಹಾ ನಡೆಯುತ್ತಿದೆ ಬಿಡಿ. ಆದರೆ ಈ ಇವಿಎಂ ತಿರುಚಾಟದ ವಿರುದ್ಧ ಯಾರೂ ದನಿ ಎತ್ತದಂತೆ ಕಾಂಗ್ರೆಸ್ಸಿನೊಳಗಿನ ಆರೆಸ್ಸೆಸ್ಸಿಗರು ತಡೆಯುತ್ತಿದ್ದಾರೆ. ಹಾಗಾಗಿ ಬಿ‌ಜೆ‌ಪಿಯ ಇವಿಎಂ ವಂಚನೆಯ ವಿರುದ್ಧದ ಹೋರಾಟವೂ ಜಾತಿಯ ಸ್ವರೂಪ ಪಡೆದು ಈಗ ಚುನಾವಣೆಯಲ್ಲಿ ಮತಪತ್ರ/ ಬ್ಯಾಲೆಟ್ ಪೇಪರ್ ಮರಳಿ ತರುವುದಕ್ಕಾಗಿ ನಡೆಯುತ್ತಿರುವ ಹೋರಾಟ ಕೇವಲ ದಲಿತ ಸಂಘಟನೆಗಳಿಗೆ ಮಾತ್ರ ಸೀಮಿತವಾಗುವಂತೆ ಎಲ್ಲಾ ವಿರೋಧ ಪಕ್ಷಗಳ ಒಳಗೆ ತೂರಿಕೊಂಡಿರುವ ಆರೆಸ್ಸೆಸ್ಸಿಗರು ನೋಡಿಕೊಂಡಿದ್ದಾರೆ. ಈ ರೀತಿ ವಿರೋಧ ಪಕ್ಷದೊಳಗೂ ಈ ವೈದಿಕರ ಡಿವೈಡ್ ಆಂಡ್ ರೂಲ್ ನೀತಿ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಇದಕ್ಕೆಲ್ಲಾ ಬ್ರಿಟಿಷರನ್ನು ದೂರಲು ಸಾಧ್ಯವೇ!

ತಮ್ಮ ವಿಶ್ವಾಸಿ,
ಪ್ರವೀಣ್ ಎಸ್ ಶೆಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...