Homeಮುಖಪುಟನಿಮ್ಮ ಸಹೋದ್ಯೋಗಿಗಳೊಂದಿಗೆ ಅನುಭೂತಿಯಿಂದಿದ್ದೀರಾ? ಇದರಿಂದಾಗುವ ಪ್ರಯೋಜನ ಗೊತ್ತೆ?

ನಿಮ್ಮ ಸಹೋದ್ಯೋಗಿಗಳೊಂದಿಗೆ ಅನುಭೂತಿಯಿಂದಿದ್ದೀರಾ? ಇದರಿಂದಾಗುವ ಪ್ರಯೋಜನ ಗೊತ್ತೆ?

ನಿಮ್ಮ ಸಹೋದ್ಯೋಗಿಗಳಿಂದ ಸಹಾಯ ಎದುರು ನೋಡುವುದಕ್ಕಿಂತ ಮುಂಚೆ ನೀವು ಅವರಿಗೆ ಎಷ್ಟು ಸಹಾಯ ನೀಡುತ್ತಿದ್ದೀರೆಂಬುದನ್ನು ಅವಲೋಕಿಸಿ. ಅನುಭೂತಿ ಎರಡು ದಿಕ್ಕಿನ ದಾರಿ.

- Advertisement -
- Advertisement -

ಜೀವನ ಕಲೆಗಳು ಅಂಕಣ: 8  ಅನುಭೂತಿ (Empathy) -2

ಅನುಭೂತಿ ಎನ್ನುವುದು ಕೇವಲದುಃಖ ಅಥವಾ ಸಂತೋಷದ ಕ್ಷಣಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವುದಷ್ಟೇ ಅಲ್ಲ, ಇದು ದೈನಂದಿನ ಕಲೆ. ಇದು ಮನೆ, ಶಾಲೆ/ಕಾಲೇಜು ಹಾಗೂ ಕೆಲಸದ ಸ್ಥಳದಲ್ಲಿ ಯಾವಾಗಲೂ ಕಾಣುವಂತಾಗಬೇಕು. ನಿಮ್ಮ ಕೆಲಸ/ಕಲಿಕೆಯ ಸ್ಥಳದಲ್ಲಿ ಅನುಭೂತಿ ಕಾಣುತ್ತಿದೆಯೇ? ಅನುಭೂತಿಯ ವಾತಾವರಣದ ಕೊರತೆಯಿಂದಾಗಿ ಇರುವ ಜನರು ದೂರವಾಗುತ್ತಿದ್ದಾರೆಯೇ? ಶಾಲೆ/ಕಾಲೇಜು/ಕಚೇರಿಯಲ್ಲಿ ಒಬ್ಬರನ್ನೊಬ್ಬರು ಅವರ ಮೊದಲನೇ ಹೆಸರಿನಿಂದ ಸಂಬೋಧಿಸುತ್ತಾರೋ, ಅಡ್ಡನಾಮದಿಂದಲೋ, ಅವರ ಹುದ್ದೆಯಿಂದ ಕರೆಯುತ್ತಾರೋ, ಅವರಿಗೆ ಸ್ವಭಾವಕ್ಕನುಗುಣವಾಗಿ ಇಟ್ಟಿರುವ ಅನ್ವರ್ಥನಾಮದಿಂದಲೋ, ಯೋಚಿಸಿ ನೋಡಿ.

ಶಾಲೆ/ಕಾಲೇಜು/ಕಚೇರಿಗಳಲ್ಲಿ ಅನುಭೂತಿಯನ್ನು ವ್ಯವಸ್ಥಾಪಕ ಮಂಡಳಿಯ ಆದೇಶದಿಂದಾಗಲೀ, ಸರಕಾರದ ಒಂದು ಸುತ್ತೋಲೆಯಿಂದಾಗಲೀ ಸೃಷ್ಟಿಸಲಾಗುವುದಿಲ್ಲ. ಅನುಭೂತಿ ಮೇಲಿನಿಂದ ಕೆಳಕ್ಕೆ ಜಾರಿಕೊಂಡು ಬರುವುದಿಲ್ಲ. ಇದನ್ನು ಅಲ್ಲಿಯ ಸಹಪಾಠಿ/ಸಹೋದ್ಯೋಗಿಗಳೇ ಸೇರಿ ನಿರ್ಮಿಸಬೇಕು. ಪ್ರತಿಯೋರ್ವರೂ ವೈಯುಕ್ತಿಕ ಮಟ್ಟದಲ್ಲಿ ಅನುಭೂತಿಯನ್ನು ತೋರಿಸಿದ್ದೇ ಆದರೆ ಕೆಲಸದ ವಾತಾವರಣ ಮಾರನೆಯ ದಿನದಿಂದಲೇ ಬದಲಾಗಲು ಪ್ರಾರಂಭವಾಗುತ್ತದೆ.

“ಬಿಸಿನೆಸ್ ಸಾಲ್ವರ್ಸ್” 2017ರ ವರದಿಯ ಪ್ರಕಾರ ಅನುಭೂತಿ ಕೆಲಸಗಾರರ ಉತ್ಪಾದನಾ ಸಾಮರ್ಥ್ಯ, ಕರ್ತವ್ಯ ಹಾಗೂ ಕಂಪನಿಯ ಪರವಾಗಿ ಅವರ ನಿಷ್ಠೆಯ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದಿದೆ. ವರದಿಯ ಪ್ರಕಾರ:

ಅನುಭೂತಿಯ ವಾತಾವರಣ ಇರುವಂತಹ ಕಚೇರಿಯಲ್ಲಿ 77% ಕೆಲಸಗಾರರು ಹಣದ ಆಮಿಶ (ಓವರ್ ಟೈಂ) ಇಲ್ಲದೆ ಹೆಚ್ಚಿನ ಸಮಯ ಕೆಲಸಕ್ಕೆ ನೀಡಲು ಸಿದ್ಧರಾಗಿದ್ದರು. 60% ಕೆಲಸಗಾರರು ಕಂಪನಿಯ ಆರ್ಥಿಕ ಸ್ಥಿತಿ ಚೆನ್ನಾಗಿರದಿದ್ದಲ್ಲಿ ಸಂಬಳ ಕಡಿತಕ್ಕೂ ಸಿದ್ಧರಾಗಿದ್ದರು. ಸಂದರ್ಶಿಸಿದ 92% ಮಾನವ ಸಂಪನ್ಮೂಲ ಅಧಿಕಾರಿಗಳು ಅನುಭೂತಿಯ ವಾತಾವರಣ ತಮ್ಮ ಕಂಪನಿಯ ಕೆಲಸಗಾರರನ್ನು ಹಿಡಿದಿಟ್ಟುಕೊಳ್ಳಲು ದೊಡ್ಡ ಕಾರಣ ಎಂದರು. 1980ರಿಂದ 1995ರವರೆಗೆ ಹುಟ್ಟಿದ 80% ಯುವಕರು ತಮ್ಮ ಕಚೇರಿಯಲ್ಲಿ ಅನುಭೂತಿಯ ವಾತಾವರಣವಿಲ್ಲದಿದ್ದರೆ ಕೆಲಸ ಬಿಡುವುದಾಗಿ ಹೇಳಿದರು. ನಿವೃತ್ತಿಯ ಅಂಚಿನಲ್ಲಿರುವ 66% ಜನರೂ ಕೂಡ ಇದೇ ಪ್ರತಿಕ್ರಿಯೆ ನೀಡಿದರು.

ಕಚೇರಿಯಲ್ಲಿ ಅನುಭೂತಿ ಸೃಷ್ಟಿಸುವುದು ಅಷ್ಟು ಸುಲಭದ ಮಾತಲ್ಲ. ಅನುಭೂತಿಯ ವಾತಾವರಣವನ್ನು ಅಳೆಯಲು ಸುಲಭವಾದ ಮಾಪಕಯಂತ್ರಗಳಿಲ್ಲ. ಸರ್ವೇಕ್ಷಣೆ ಅಥವಾ ಮಾನವ ಸಂಪನ್ಮೂಲ ವಿಭಾಗದ ಕಾರ್ಯಾಗಾರ/ಪ್ರಶ್ನೆಪತ್ರಿಕೆಗಳಿಂದ ಸ್ವಲ್ಪ ಮಾಹಿತಿ ಸಿಗಬಹುದು ಆದರೆ ಹಲವು ಮುಖ್ಯ ಅಂಶಗಳು ಅಳೆಯಲು ಕೈಗೆ ಸಿಗುವುದಿಲ್ಲ.

ಕೆಳಗಿನ ಕಲೆಗಳು ನಿಮ್ಮ ಸಹೋದ್ಯೋಗಿ/ಸಹಪಾಠಿಗಳ ನಡುವಣ ಸಂಬಂಧ ಹೆಚ್ಚಿಸಲು ಸಹಾಯಕವಾಗಬಹುದು.

1. ಕೇಳಿಸಿಕೊಳ್ಳುವ ಕಲೆಯನ್ನು ಬಲಪಡಿಸಿಕೊಳ್ಳಿ: ನಿಮ್ಮ ಸಹೋದ್ಯೋಗಿ/ಸಹಪಾಠಿ ಏನಾದರೂ ಹೇಳಲು ಬಯಸಿದಲ್ಲಿ ನೀವು ನಿಜವಾಗಿಯೂ ಅವರು ಹೇಳಿದ್ದನ್ನು ಕೇವಲ ಆಲಿಸುತ್ತಿದ್ದೀರೋ ಅಥವಾ ಗಮನವಿಟ್ಟು ಅರ್ಥಮಾಡಿಕೊಳ್ಳಲು ಪ್ರಯತ್ನ ಪಡುತ್ತಿದ್ದೀರೋ ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಳ್ಳಿ. ಇದು ಕೇವಲ ಆಡುವ ಮಾತಿಗೆ/ದೂರಧ್ವನಿ ಸಂಭಾಷಣೆಗೆ ಸೀಮಿತವಾಗಿಲ್ಲ, ಕಚೇರಿಯ ಎಸ್.ಎಂ.ಎಸ್./ಎ-ಮೇಲ್, ವಾಟ್ಸಾಪ್ ವೈಯುಕ್ತಿಕ/ಗುಂಪು ಸಂದೇಶಗಳೂ ಇದರಲ್ಲಿ ಸೇರಿವೆ.

2. ಸರಿಯಾದ ಪ್ರಶ್ನೆ ಕೇಳುವ ಕಲೆ ವೃದ್ಧಿಸಿಕೊಳ್ಳಿ: ಇದರಿಂದ ನಿಮ್ಮ ಸಹೋದ್ಯೋಗಿ/ಸಹಪಾಠಿಯ ನಿಜವಾದ ಸಮಸ್ಯೆ ಏನು ಎಂಬುದು ತಿಳಿಯುತ್ತದೆ. ನೀಡಿದ ಉತ್ತರ ಅಥವಾ ಅವರು ಕೇಳಿದ ಪ್ರಶ್ನೆ ನಿಮಗೆ ಅರ್ಥವಾಗದಿದ್ದಲ್ಲಿ ಅದನ್ನು ಬಿಡಿಸಿ ಹೇಳುವಂತೆ ತಿಳಿಸಿ.

3. ಅವರ ಸ್ಥಳದಲ್ಲಿ ನೀವಿದ್ದರೆ ನಿಮಗೆ ಏನನಿಸುತ್ತಿತ್ತು ಯೋಚಿಸಿ: ಇನ್ನೊಬ್ಬರ ಕಷ್ಟ ಅರಿತುಕೊಳ್ಳುವ ಪ್ರಯತ್ನ ನೀವು ಮಾಡಿತ್ತಿದ್ದೀರೆಂಬ ಸಂದೇಶ ಅವರಿಗೆ ಕೂಡಲೇ ರವಾನಿಸಿ. ಅವರನ್ನು ನೇರ ಮಾತುಕತೆಗೆ ಕರೆಯಿರಿ, ಸಮಯ ಸ್ಥಳ ನಿರ್ಧರಿಸಿ. ಮುಖಾಮುಖಿಯಾಗುವುದರಿಂದ ಹಲವು ಪ್ರಶ್ನೆಗಳು ತಾವಾಗಿಯೇ ಉತ್ತರಿಸಲ್ಪಡುತ್ತವೆ.

4. ಸಹೋದ್ಯೋಗಿ/ಸಹಪಾಠಿಗಳ ಬಗ್ಗೆ ಒಮ್ಮೆಲೇ ನಿಮ್ಮ ಉಹಾಪೋಹದ ನಿರ್ಧಾರಕ್ಕೆ ಬರಬೇಡಿ: ಹೇಳಿದ ಕೆಲಸ ಸರಿಯಾಗಿ ಮಾಡುತ್ತಿಲ್ಲ ಎಂದು ತಿಳಿದಾಗ ಅವರಿಗೆ ಇನ್ಯಾವ ತೊಂದರೆ ಇದೆ ತಿಳಿದುಕೊಳ್ಳಲು ಪ್ರಯತ್ನಿಸಿ.

5. ಸಮಸ್ಯೆಗಳನ್ನು ಬಗೆಹರಿಸುವಾಗ ಆದ್ಯತೆಯ ಮೇಲೆ ಗಮನ ಕೊಡಿ: ಎಲ್ಲಾ ಸಮಸ್ಯೆಗಳಿಗೂ ಒಂದೇ ಸಮನಾದ ತುರ್ತು ಇರುವುದಿಲ್ಲ. ಮೊದಲು ಬಂದ ಸಮಸ್ಯೆಗೆ ಮೊದಲು ಪರಿಹಾರ ಎನ್ನುವುದೂ ಸರಿಯಲ್ಲ. ಆದ್ದರಿಂದ ಸಮಸ್ಯೆಯ ಗಂಭೀರತೆಗೆ ಅನುಗುಣವಾಗಿ ಅದರ ಪರಿಹಾರಕ್ಕೆ ಗಮನ/ಸಮಯ ನೀಡಿ.

6. ನಿಮ್ಮ ಸಹೋದ್ಯೋಗಿ/ಸಹಪಾಠಿಗಳನ್ನು ದೂರವಿಡಬೇಡಿ: ಆದರೆ ತೀರಾ ಸನಿಹತೆಯ ಅವಶ್ಯಕತೆಯೂ ಇಲ್ಲ. ಅವರ ಬಗ್ಗೆ ವೈಯುಕ್ತಿಕ, ಕುಟುಂಬದ ಮಾಹಿತಿ ಇರಲಿ ಆದರೆ ನೀವು ಅವರ ಮೇಲೆ ಬೇಹುಗಾರಿಕೆ ನಡೆಸುತ್ತಿದ್ದೀರಿಎಂಬ ಭಾವನೆ ಅವರಿಗೆ ಬರದಿರಲಿ. ಅವರ ಇ-ಮೇಲ್ ಸಂದೇಶಕ್ಕೆ ಉತ್ತರಿಸುವಾಗ ಅವರ ಹೆಸರನ್ನು ಬಳಸಿ, ಅವರ ವಿಭಾಗದ ಹೆಸರಿಗೆ ಉತ್ತರಿಸಬೇಡಿ. ಕಚೇರಿಯಲ್ಲೂ ವೈಯುಕ್ತಿಕ ಮತ್ತು ಸಾಂಸ್ಥಿಕ ವಿಷಯಗಳನ್ನು ಬೆರೆಸಬೇಡಿ.

7. ವ್ಯಕ್ತಿಗಳಿಗೆ ಭಾವನೆಗಳಿರುತ್ತವೆ: ಕಂಪನಿಯ ಟಾರ್ಗೆಟ್, ಡೆಡ್ಲೈನ್, ಲಾಭ-ನಷ್ಟದ ಒತ್ತಡದಲ್ಲಿ ಮುಖ್ಯವಾಗಿ ತಂಡದ ಜನರಿಗೆ ಭಾವನೆಗಳಿರುತ್ತವೆ ಎಂಬುದನ್ನು ಮರೆಯಬೇಡಿ. ಆದ್ದರಿಂದ ನಿಮ್ಮ ಸಹೋದ್ಯೋಗಿ/ಸಹಪಾಠಿಗಳ ಮೇಲಿನ ಕಟು ಟಿಪ್ಪಣಿಗಳನ್ನು ಮೃದುವಾಗಿರಿಸಿ.

8. ಕೆಲವೊಮ್ಮೆ ತಲೆಯ ಬದಲಿಗೆ ಹೃದಯ ಉಪಯೋಗಿಸಿ: ಇಂಗ್ಲಿಷಿನಲ್ಲಿ ಇದನ್ನು “ಥಿಂಕ್ ವಿತ್ ಯುವರ್ ಹಾರ್ಟ್” ಎನ್ನುತ್ತಾರೆ.

9. ನಿಮ್ಮ ಸ್ವಂತ ಪೂರ್ವಾಗ್ರಹ: ನಿಮ್ಮ ಸಾಂಸ್ಕೃತಿಕ ಪಕ್ಷಪಾತವೇನಾದರೂ ಅನುಭೂತಿಗೆ ಅಡ್ಡ ಬರುತ್ತಿದೆಯೇ, ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಿ.

10. ಸಹೋದ್ಯೋಗಿಗಳಿಂದ ಪ್ರತ್ಯಾದಾನ: ಫೀಡ್-ಬ್ಯಾಕ್ ಸ್ವೀಕರಿಸಿ. ಕೆಲವು ನೇರವಾಗಿ ಬರದಿರಬಹುದು, ಅಪ್ರತ್ಯಕ್ಷವಾಗಿ ಬಂದ ಟೀಕೆ ಟಿಪ್ಪಣಿಗಳನ್ನೂ ಗುರುತುಹಾಕಿಕೊಳ್ಳಿ. ಅದೇ ರೀತಿ ನೀವು ನೀಡಿದ ಫೀಡ್-ಬ್ಯಾಕ್/ಟೀಕೆ/ಟಿಪ್ಪಣಿ ಹೇಗೆ ಕೆಲಸ ಮಾಡುತ್ತಿದೆ ಅದನ್ನೂ ತಿಳಿದುಕೊಳ್ಳಿ

11. ಸ್ಥಳ ಬದಲಾಯಿಸಿ: ಸಹೋದ್ಯೋಗಿ/ಸಹಪಾಠಿಗಳೊಂದಿಗೆ ಕಚೇರಿಯಿಂದ ಹೊರಗೆ ಪ್ರವಾಸಕ್ಕೆ ಹೋಗಿ. ಅವರನ್ನು ಅರಿತುಕೊಳ್ಳಲು ಸಮಯ ಮತ್ತು ಅವಕಾಶ ದೊರೆಯುತ್ತದೆ.

12. ಅನುಭೂತಿ ಒಂದು ರಾತ್ರಿಯಲ್ಲಿ ಆಗುವ ಬದಲಾವಣೆ ಅಲ್ಲ: ಇದು ನೂರಡಿಯ ವೇಗದ ಓಟವಲ್ಲ, 26 ಮೈಲಿಯ ಮ್ಯಾರಥಾನ್. ಒಬ್ಬ ವ್ಯಕ್ತಿ ಅಥವಾ ಒಂದು ಪರಿಸ್ಥಿತಿಯಲ್ಲಿ ಆದ ಕಹಿ ನೆನಪಿನಿಂದ ನಿಮ್ಮ ಮುಂದಿನ ಕೆಲಸ ಕೆಡದಂತೆ ಜಾಗೃತೆ ವಹಿಸಿ.

ನಿಮ್ಮ ಸಹೋದ್ಯೋಗಿಗಳಿಂದ ಸಹಾಯ ಎದುರು ನೋಡುವುದಕ್ಕಿಂತ ಮುಂಚೆ ನೀವು ಅವರಿಗೆ ಎಷ್ಟು ಸಹಾಯ ನೀಡುತ್ತಿದ್ದೀರೆಂಬುದನ್ನು ಅವಲೋಕಿಸಿ. ಅನುಭೂತಿ ಎರಡು ದಿಕ್ಕಿನ ದಾರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...