Homeಅಂಕಣಗಳುನಾವು ಯಂತ್ರಗಳನ್ನು ಜೀತದ ಆಳು ಅಂತ ತಿಳ್ಕೊಂಡಿರಬಹುದು, ಆದರೆ ಅವೇ ನಮ್ಮನ್ನು ಜೀತಕ್ಕೆ ಇಟ್ಟುಕೊಂಡರೆ ಹೇಗೆ?

ನಾವು ಯಂತ್ರಗಳನ್ನು ಜೀತದ ಆಳು ಅಂತ ತಿಳ್ಕೊಂಡಿರಬಹುದು, ಆದರೆ ಅವೇ ನಮ್ಮನ್ನು ಜೀತಕ್ಕೆ ಇಟ್ಟುಕೊಂಡರೆ ಹೇಗೆ?

ಕೇವಲ ಒಂದು ವರ್ಷದಾಗ ನಾವು ತಯಾರು ಮಾಡಿದ ರೋಬೋಟುಗಳು ತಮ್ಮ ಸ್ವಂತ ಭಾಷೆ ಹುಟ್ಟಿಸಿಕೊಳಲಿಕ್ಕೆ ಶಕ್ಯ ಐತಿ, ಆದರ ನಾವು 50 ವರ್ಷದಾಗ ಒಂದು ಪಾಠಾ ಕಲಿಯೋದಿಲ್ಲ ಅನ್ನೋದು ನಮಗ ಇನ್ನೂ ನಾಚಿಕಿ ಆಗಬೇಕು.

- Advertisement -
- Advertisement -

ಈಗ ತಾಜಾ ಹಾಗೂ ಬಿಸಿ ಸುದ್ದಿ ಎನಪಾ ಅಂದ್ರ ಫೇಸುಬುಕ್ಕು ಅನ್ನೋ ಒಂದು ಸಂಸ್ಥೆ ತನ್ನಲ್ಲಿ ಇದ್ದ ಕೆಲವು ರೋಬೋಟುಗಳನ್ನು ಸ್ವಿಚ್ಚು ಆಫ್ ಮಾಡಿಬಿಟ್ಟದಂತ. ಯಾವುದನ್ನು ಪೂರ್ತಿ ಉಚ್ಛಾರ ಮಾಡಲಾರದ ಅಮೆರಿಕನ್ನರು ಇವನ್ನ ಬಾಟ್ ಅಂತ ಕರಿತಾರ. ನೀವು ರೇಡಿಯೋದಾಗಿನ ಬಾತ್ ಅಂತ ತಿಳಕೋಬ್ಯಾಡ್ರಿ ಮತ್ತ.

ಈ ಬಾಟ್‍ಗಳನ್ನ ಯಾಕ್ ಬಂದ್ ಮಾಡಿದರು ಅಂತ ಕೆಳರಿ ಈಗ. ಅದು ಯಾಕ್ ಅಂದ್ರ ಅವು ಅಗತ್ಯಕ್ಕಿಂತ ಶಾಣೆ ಆಗಿಬಿಟ್ಟಾವ. ಯಂತ್ರ ಕಲಿಕೆ ಹಾಗೂ ಕೃತಕ ಬುದ್ಧಿಮತ್ತೆ ಉಪಯೋಗಿಸಿ ತಯಾರಿಸಿದ ಈ ಯಂತ್ರ ಮಾನವರು ತಮ್ಮನ್ನು ತಯಾರು ಮಾಡಿದ ವಿಜ್ಞಾನಿಗಳಿಗೇ ತಿಳಿಯಲಾರದ ಭಾಷೆ ಬಳಸಿ ಮಾತಾಡ್‍ಲಿಕ್ಕೆ ಹತ್ತಿಬಿಟ್ಟವು. ಅದನ್ನು ನೋಡಿ ದಂಗಾದ ವಿಜ್ಞಾನಿಗಳು ಅದರ ಬಟನ್ ಬಂದು ಮಾಡಿ, ಅಸಿಡಿಟಿ ಹೆಚ್ಚಾಗಿ ಒಂದು ಬಾಟಲಿ ಈನೋ ಕುಡಿಲಿಕ್ಕೆ ಹೋದರಂತ.

ಕನ್ನಡ ಸಾಲಿಯೊಳಗ ಹಿಂಗ ಆಗತಿತ್ತು. ಬ್ಯಾರೆ ಊರಿನಿಂದ ಬಂದ ಹೊಸ ಹುಡುಗಗ ಕೈ ಹಿಡಕೊಂಡು ಸಾಲಿ, ಸಾಲಿ ಮೈದಾನ, ಸಾಲಿ ಮುಂದಿನ ಜಾಲಿ ಗಿಡ, ಸಾಲಿ ಹಿಂದಿನ ಕವಳಿ ಹಣ್ಣಿನ ಗಿಡದ ಬೇಲಿ, ಎಲ್ಲಾ ತೋರಿಸಿ, ಇವತ್ತು ಒಬ್ಬವ ಹೊಸಾ ಗೆಳಯಾ ಸಿಕ್ಕ ಅಂತ ಕುಣಕೋತ ಮನಿಗೆ ಹೋಗಿ, ಯವ್ವನ ಮುಂದ ಒದರಿ, ಮರು ದಿವಸ ಓಡಿಕೋತ ಸಾಲಿಗೆ ಬಂದರ, ಆ ಹೊಸಾ ಹುಡುಗಾ ನಮ್ಮ ವೈರಿ ಹುಡುಗನ ಸಂಗತೆ ಉಲ್ಟಾ ಕನ್ನಡ ಮಾತು ಅಡಿಕೋತ ಮಜಾ ಮಾಡಲಿಕ್ಕೆ ಹತ್ತಿಬಿಟ್ಟಿರತಿದ್ದಾ. ಅದು ಭಯಂಕರ ನೋವು ಆಗತಿತ್ತು. ಅನ್ನಂಗಿಲ್ಲ, ಆಡಂಗಿಲ್ಲ.

ಅಮೆರಿಕದ ಫೇಸುಬುಕ್ಕು ಅನ್ನೋ ಪ್ರಯೋಗ ಸಾಲಿಯೊಳಗೂ ಹಿಂಗ ಆಗೇದ. “ನಾವು ಕಷ್ಟ ಪಟ್ಟು ಅ ಆ ಇ ಈ ಹೇಳಿಕೊಟ್ಟ ಈ ಯಂತ್ರಗಳು ನಮ್ಮನ್ನೆ ಬೈಪಾಸು ಮಾಡಿ ನಮಗ ತಿಳಿಯಲಾರದಂತಹ ಭಾಷೆ ಕಂಡು ಹಿಡಕೊಂಡುಬಿಟ್ಟಾವು” ಅಂತ ತಜ್ಞರಿಗೆ ಅವಮರ್ಯಾದೆ ಆಗಿ ಹೆದರಿಕೊಂಡುಬಿಟ್ಟಾರ.

ಇದನ್ನ ಓದಿದಾಗ ವಿಜ್ಞಾನ ಲೇಖಕ ಐಸಾಕ್ ಅಸಿಮೋವ್ ಅವರ `ದಿ ಲಾಸ್ಟ್ ಕ್ವಶ್ಚನ್’ ಕತಿ ನೆನಪು ಆಗತದ. ಭವಿಷ್ಯದ ವೈಜ್ಞಾನಿಕ ಬೆಳವಣಿಗೆಗಳ ಬಗ್ಗೆ ಭವಿಷ್ಯ ನುಡಿದಂತೆ ಕತೆ – ಕಾದಂಬರಿ ಬರೆದ ಆಸೀಮೋವ ಅವರು 1973 ಈ ಮಹತ್ವದ ಕತೆ ಬರದರು. ಆ ಕತಿ ಒಳಗ ಸರಕಾರದ ಎಲ್ಲ ಕೆಲಸಗಳನ್ನು ಮಾಡಲಿಕ್ಕೆ ಒಂದು ಸೂಪರ್ ಸುಪ್ರೀಂ ಕಂಪ್ಯೂಟರ್ ತಯಾರು ಮಾಡತಾರ. ಅದರ ಹೆಸರು ಮಲ್ಟಿವ್ಯಾಕ. ಇದು ಬಹಳ ಶಾಣೆ ಯಂತ್ರ. ಈಗಿನ ನಾವು ಬಳಸೋ ಗಣಕಗಳಂತೆ ಅದು ಬರೆ ಮಾಹಿತಿ ಹೊಂದಿರೋದಿಲ್ಲ. ಅದರ ಮಾಹಿತಿ ಸಂಸ್ಕರಣ ಶಕ್ತಿ ಹೆಚ್ಚಾಗಿ ಜಗತ್ತಿನ ಎಲ್ಲ ಜ್ಞಾನ ಹಾಗೂ ವಿವೇಕವನ್ನು ಸಹಿತ ಪಡೆದುಕೊಂಡಿರತದ.

ಇದಕ್ಕ ಯಾರಾದರೂ, ಏನು ಬೇಕಾದರೂ, ಎಷ್ಟು ಹೊತ್ತಿಗಾದರೂ ಪ್ರಶ್ನೆ ಕೇಳಬಹುದು. ಅದು ಯಾರನ್ನು ನಿರಾಶೆ ಮಾಡೋದಿಲ್ಲ. ಹಿಂಗಾಗಿ ಜನ ಎಲ್ಲ ವಿಚಾರ ಶಕ್ತಿ ಕಳಕೊಂಡು ಬಿಟ್ಟಿರತಾರ. ಸರಕಾರದವರು, ಖಾಸಗಿಯವರು, ಕುಟುಂಬಸ್ತರು, ವಿದ್ಯಾರ್ಥಿಗಳು, ಸೈನಿಕರು, ಆಟಗಾರರು, ಮನಿ ನಡಸೋ ಗೃಹಿಣಿಯರು, ಕಡಿಕೆ ವಿಜ್ಞಾನಿಗಳು ಸಹಿತ ಎಲ್ಲ ಸಂದೇಹಗಳನ್ನ ಮಲ್ಟಿವ್ಯಾಕ ಯಂತ್ರದ ಹತ್ತಿರ ಬಂದು ಕೇಳತಿರತಾರ.

ಅವರ ಎಲ್ಲ ಪ್ರಶ್ನೆಗಳನ್ನು ಅದು ಉತ್ತರಿಸಿ, ಸಂದೇಹಗಳನ್ನು ಪರಿಹರಿಸಿಬಿಡತದ. ಆದರಿಂದ ಅಧಿಕಾರಿಗಳು ಆಡಳಿತದ ಬಗ್ಗೆ ತಲಿ ಕೆಡಿಸಿಕೊಳ್ಳೋದಿಲ್ಲ. ನಾಯಕರು ನೀತಿನಿರೂಪಣೆ ಬಗ್ಗೆ ತಲಿ ಕೆಡಿಸಿಕೊಳ್ಳೋದಿಲ್ಲ. ಜನ ತಮ್ಮ ದಿನನಿತ್ಯದ ಜೀವನದ ಬಗ್ಗೆ ತಲಿ ಕೆಡಿಸಿಕೊಳ್ಳೋದಿಲ್ಲ.

ಆದರ ಒಂದು ಪ್ರಶ್ನೆಗೆ ಮಾತ್ರ ಮಲ್ಟಿವ್ಯಾಕನ ಹತ್ತಿರ ಉತ್ತರ ಇಲ್ಲ. ಅದು ಏನು ಅಂದ್ರ ಎಂಟ್ರೋಪಿಗೆ ಪರಿಹಾರ ಏನು ಅನ್ನೋದು. ಎಂಟ್ರೋಪಿ ಅಂದ್ರ ಜಡೋಷ್ಣ ಅಥವಾ ಸರಳ ಭಾಷೆದಾಗ ಹೇಳಬೇಕು ಅಂದ್ರ ಇಡೀ ಜಗತ್ತನ್ನು ನಡೆಸುತ್ತಾ ಇರೋ ಚೈತನ್ಯ – ಶಕ್ತಿ ದಿನ ದಿನಕ್ಕ ಕಮ್ಮಿ ಆಗಲಿಕ್ಕೆ ಹತ್ತೆದ. ಇದು ಆಗಲಾರದ ಹಂಗ ಏನು ಮಾಡಬೇಕು? ಅನ್ನೋ ಪ್ರಶ್ನೆ.

ಸೂರ್ಯನ ಶಾಖದಿಂದ ಭೂಮಿಯ ನೀರೆಲ್ಲ ಆವಿಯಾಗಿ, ನೀರುಕಲ್ಲುಗಳೆಲ್ಲ ಕರಗಿಹೋಗಿ, ಗಿಡ, ಪಕ್ಷಿ, ಪ್ರಾಣಿ, ಎಲ್ಲ ನಾಶ ಆಗಿ, ಮನುಷ್ಯರು ಒಬ್ಬರನ್ನೊಬ್ಬರು ಹೊಡೆದು ಕೊಂದುತಿಂದು, ಶುದ್ಧ ನೀರು, ಶುದ್ದ ಗಾಳಿ, ಸಹಿತ ಸಿಗಲಾರದೆಹೋಗಿ ಎಲ್ಲ ನಾಶ ಆಗತದ ಅಂತರಲ್ಲಾ, ಅದು ಎಂಟ್ರೋಪಿ.

ಇದನ್ನ ಹೆಂಗ ತಡಿಯಬೇಕು? ಇದಕ್ಕ ಉಪಾಯ ಏನು ಅಂತ ಕೇಳಿದಾಗ ಮಲ್ಟಿವ್ಯಾಕ “ಈ ಪ್ರಶ್ನೆಗೆ ಉತ್ತರ ಕೊಡುವಷ್ಟೂ ಮಾಹಿತಿ ಇಲ್ಲ’’ ಅಂತ ಉತ್ತರ ಕೊಡತದ.

ಮಲ್ಟಿವ್ಯಾಕ ಅನ್ನೋದು ಸ್ವಯಂಚಾಲಿತ ಯಂತ್ರ. ಅದು ಸೂರ್ಯನ ಬೆಳಕು ಹಾಗೂ ಅಣುಶಕ್ತಿಯಿಂದ ನಡಿತದ. ಅದಕ್ಕ ಅದನ್ನ ನಡಸೋರು ಯಾರೂ ಬೇಕಾಗಿಲ್ಲ. ಅದು ತನ್ನಷ್ಟಕ್ಕ ತಾನ ನಡಿತದ.

ಆನಂತರ ಅನೇಕ ಲಕ್ಷ ವರ್ಷಗಳ ನಂತರ ಪ್ರಾಣಿ, ಪಕ್ಷಿ, ಗಿಡ, ಎಲ್ಲ ನಾಶ ಆಗಿ, ನೀರು, ಗಾಳಿ ಸಿಗಲಾರದ ಹಂಗ ಆಗತದ. ಆದರ ಮಲ್ಟಿವ್ಯಾಕ ಮಾತ್ರ ಭೂಮಿ ಮ್ಯಾಲೆ ಇರ್ತದ. ಒಂದು ದಿವಸ ಅದು ಭೂಮಿಯಿಂದ ಇನ್ನೊಂದು ಗ್ರಹಕ್ಕ ಪ್ರಯಾಣ ಬೆಳಸ್ತತದ.

ಅಲ್ಲಿ ನೋಡಿದರ ಏನೂ ಇಲ್ಲ. ಬರೆ ಕತ್ತಲೆ, ನೀರು ಇಲ್ಲ, ಜೀವ ಇಲ್ಲ, ಗಿಡ, ಪ್ರಾಣಿ, ಪಕ್ಷಿ, ಮನುಷ್ಯರು ಮುಂತಾದ ಯಾವ ಜೀವಿಗಳೂ ಇಲ್ಲ. ಆ ಗ್ರಹದ ಮ್ಯಾಲೆ ಹೋಗಿ ಮಲ್ಟಿವ್ಯಾಕ ಲ್ಯಾಂಡ್ ಆಗತದ.

ಅಲ್ಲಿ ಹೋಗಿ ಒಂದು ಗಟ್ಟಿ ಜಾಗದಾಗ ಕುತುಕೊಂಡು ಒಂದು ಮಾತು ಹೇಳತದ.

`ಲೆಟ್ ದೇರ್ ಬಿ ಲೈಟ್’ (`ಪ್ರಕಾಶ ಉದ್ಭವವಾಗಲಿ’). ಆಗ ಅಲ್ಲಿ ಬೆಳಕು ಬರ್ತದ. ಅಲ್ಲಿಗೆ ಆ ಕತಿ ಮುಗಿತದ. ಆದರ ನಾವು ಅದನ್ನ ಮುಂದುವರೆಸಬಹುದು. ಅಲ್ಲಿ ನೀರು ಬಂತು, ದಿನ- ರಾತ್ರಿ ಆರಂಭ ಆದವು, ಗಿಡ, ಮೀನು, ಪ್ರಾಣಿ, ಪಕ್ಷಿ, ಮನುಷ್ಯರು ಹುಟ್ಟಿಕೊಂಡವು ಅಂತ.

ಈ ಮಾತು ಏನು ಅದಅಲ್ಲಾ, ‘ಪ್ರಕಾಶ ಉದ್ಭವವಾಗಲಿ’ ಅನ್ನೋದು, ಅದು ಪವಿತ್ರ ಬೈಬಲ್‍ನ ಮಾತು. ಜೆನೆಸಿಸ್ ಅಂದ್ರ ಆರಂಭದ ಕತೆ ಅನ್ನುವ ಭಾಗದಾಗ 1.3 ಅನ್ನೋ ಸಂಖ್ಯೆಯ ಶ್ಲೋಕದಾಗ ಈ ಮಾತು ಬರ್ತದ. ದೇವರು ಭೂಮಿಯಲ್ಲಿ ಮೊದಲು ಬೆಳಕನ್ನು, ನಂತರ ದಿನ ರಾತ್ರಿಗಳನ್ನ, ನೀರು, ನೆಲಗಳನ್ನ, ಗಿಡ, ಪಕ್ಷಿ ಪ್ರಾಣಿ ಕೊನೆಗೆ ಆ್ಯಡಂ ಹಾಗೂ ಈವ್ ಅವರನ್ನು ಸೃಷ್ಟಿ ಮಾಡಿದ ಅಂತ ಈ ಭಾಗದಲ್ಲಿ ವಿವರ ಅದ. ಅದೇ ಧಾಟಿಯಲ್ಲಿ ದಿ ಲಾಸ್ಟ್ ಕ್ವಶ್ಚನ್ ಅನ್ನೋ ಕತೆ ಅದ.

ಎನಪಾ ಅಂದರ ಅಸಿಮೋವ್ ಅವರು ಈ ಕತಿ ಮೂಲಕ ನಮಗ ಒಂದು ಎಚ್ಚರಿಕೆ ಕೊಟ್ಟಾರ. ಬಹಳ ಶಾಣೆ ಇರೋ ಯಂತ್ರಗಳನ್ನ ತಯಾರು ಮಾಡಿದರ ಅವು ತಮ್ಮ ಸೃಷ್ಟಿಕರ್ತರನ್ನ ಮೀರಿ ಹೋಗಿ ದೇವರು ಆಗಿ ಬಿಡೋ ಸಾಧ್ಯತೆ ಐತಿ ಅಂತ ಭವಿಷ್ಯ ಹೇಳಿ ಬಿಟ್ಟಾರ. ಅದೂ 50 ವರ್ಷಗಳ ಹಿಂದ.

ಇಷ್ಟು ದಿವಸದಾಗ ಇಂತಹ ಸಣ್ಣ ಪಾಠ ಕಲಿಯಲಾರದೇ ಹೋದರ ಅದು ನಮ್ಮ ತಪ್ಪು. ಅಸಿಮೋವ್ ಅವರ ತಪ್ಪು ಅಲ್ಲ.

ಕೇವಲ ಒಂದು ವರ್ಷದಾಗ ನಾವು ತಯಾರು ಮಾಡಿದ ರೋಬೋಟುಗಳು ತಮ್ಮ ಸ್ವಂತ ಭಾಷೆ ಹುಟ್ಟಿಸಿಕೊಳಲಿಕ್ಕೆ ಶಕ್ಯ ಐತಿ, ಆದರ ನಾವು 50 ವರ್ಷದಾಗ ಒಂದು ಪಾಠಾ ಕಲಿಯೋದಿಲ್ಲ ಅನ್ನೋದು ನಮಗ ಇನ್ನೂ ನಾಚಿಕಿ ಆಗಬೇಕು.

ಇದು ಎಲ್ಲ ಹೋಗಲಿ ಬಿಡರಿ, ರೋಬೋಟು ಅನೋ ಶಬ್ದ ಹೆಂಗ ಬಂತು ಅನ್ನೋದು ನಿಮಗ ಗೊತ್ತು ಆದ ಏನು? ಅದು ಜೆಕ್ ಭಾಷೆಯ ಜೀತದ ಆಳು ಅನ್ನುವ ಪದ. ಅದನ್ನ ಕೆ. ಕೆಪೆಕ ಅನ್ನುವ ನಾಟಕಕಾರ 1920ರಲ್ಲಿ ರೋಸಮನ ಜಾಗತಿಕ ರೋಬೋಟುಗಳು ಅನ್ನುವ ತನ್ನ ಕೃತಿಯಲ್ಲಿ ಬಳಸಿದರು.

ನಾವು ಯಂತ್ರಗಳನ್ನು ಜೀತದ ಆಳು ಅಂತ ತಿಳ್ಕೊಂಡಿರಬಹುದು ಆದರೆ ಅವೇ ನಮ್ಮನ್ನು ಜೀತಕ್ಕೆ ಇಟ್ಟುಕೊಂಡರೆ ಹೇಗೆ?

ಆಗ ಅವು ನಮ್ಮನ್ನ ಕೃತಕ ಬುದ್ಧಿ ಮತ್ತೆಯ ಪ್ರಾಣಿಗಳು ಅಂತ ಕರೆದರೆ ಹೆಂಗ ಇರ್ತದ, ಅಲ್ಲವೇ, ಮನೋಲ್ಲಾಸಿನಿ?


ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....