Homeಅಂಕಣಗಳುನಾವು ಯಂತ್ರಗಳನ್ನು ಜೀತದ ಆಳು ಅಂತ ತಿಳ್ಕೊಂಡಿರಬಹುದು, ಆದರೆ ಅವೇ ನಮ್ಮನ್ನು ಜೀತಕ್ಕೆ ಇಟ್ಟುಕೊಂಡರೆ ಹೇಗೆ?

ನಾವು ಯಂತ್ರಗಳನ್ನು ಜೀತದ ಆಳು ಅಂತ ತಿಳ್ಕೊಂಡಿರಬಹುದು, ಆದರೆ ಅವೇ ನಮ್ಮನ್ನು ಜೀತಕ್ಕೆ ಇಟ್ಟುಕೊಂಡರೆ ಹೇಗೆ?

ಕೇವಲ ಒಂದು ವರ್ಷದಾಗ ನಾವು ತಯಾರು ಮಾಡಿದ ರೋಬೋಟುಗಳು ತಮ್ಮ ಸ್ವಂತ ಭಾಷೆ ಹುಟ್ಟಿಸಿಕೊಳಲಿಕ್ಕೆ ಶಕ್ಯ ಐತಿ, ಆದರ ನಾವು 50 ವರ್ಷದಾಗ ಒಂದು ಪಾಠಾ ಕಲಿಯೋದಿಲ್ಲ ಅನ್ನೋದು ನಮಗ ಇನ್ನೂ ನಾಚಿಕಿ ಆಗಬೇಕು.

- Advertisement -
- Advertisement -

ಈಗ ತಾಜಾ ಹಾಗೂ ಬಿಸಿ ಸುದ್ದಿ ಎನಪಾ ಅಂದ್ರ ಫೇಸುಬುಕ್ಕು ಅನ್ನೋ ಒಂದು ಸಂಸ್ಥೆ ತನ್ನಲ್ಲಿ ಇದ್ದ ಕೆಲವು ರೋಬೋಟುಗಳನ್ನು ಸ್ವಿಚ್ಚು ಆಫ್ ಮಾಡಿಬಿಟ್ಟದಂತ. ಯಾವುದನ್ನು ಪೂರ್ತಿ ಉಚ್ಛಾರ ಮಾಡಲಾರದ ಅಮೆರಿಕನ್ನರು ಇವನ್ನ ಬಾಟ್ ಅಂತ ಕರಿತಾರ. ನೀವು ರೇಡಿಯೋದಾಗಿನ ಬಾತ್ ಅಂತ ತಿಳಕೋಬ್ಯಾಡ್ರಿ ಮತ್ತ.

ಈ ಬಾಟ್‍ಗಳನ್ನ ಯಾಕ್ ಬಂದ್ ಮಾಡಿದರು ಅಂತ ಕೆಳರಿ ಈಗ. ಅದು ಯಾಕ್ ಅಂದ್ರ ಅವು ಅಗತ್ಯಕ್ಕಿಂತ ಶಾಣೆ ಆಗಿಬಿಟ್ಟಾವ. ಯಂತ್ರ ಕಲಿಕೆ ಹಾಗೂ ಕೃತಕ ಬುದ್ಧಿಮತ್ತೆ ಉಪಯೋಗಿಸಿ ತಯಾರಿಸಿದ ಈ ಯಂತ್ರ ಮಾನವರು ತಮ್ಮನ್ನು ತಯಾರು ಮಾಡಿದ ವಿಜ್ಞಾನಿಗಳಿಗೇ ತಿಳಿಯಲಾರದ ಭಾಷೆ ಬಳಸಿ ಮಾತಾಡ್‍ಲಿಕ್ಕೆ ಹತ್ತಿಬಿಟ್ಟವು. ಅದನ್ನು ನೋಡಿ ದಂಗಾದ ವಿಜ್ಞಾನಿಗಳು ಅದರ ಬಟನ್ ಬಂದು ಮಾಡಿ, ಅಸಿಡಿಟಿ ಹೆಚ್ಚಾಗಿ ಒಂದು ಬಾಟಲಿ ಈನೋ ಕುಡಿಲಿಕ್ಕೆ ಹೋದರಂತ.

ಕನ್ನಡ ಸಾಲಿಯೊಳಗ ಹಿಂಗ ಆಗತಿತ್ತು. ಬ್ಯಾರೆ ಊರಿನಿಂದ ಬಂದ ಹೊಸ ಹುಡುಗಗ ಕೈ ಹಿಡಕೊಂಡು ಸಾಲಿ, ಸಾಲಿ ಮೈದಾನ, ಸಾಲಿ ಮುಂದಿನ ಜಾಲಿ ಗಿಡ, ಸಾಲಿ ಹಿಂದಿನ ಕವಳಿ ಹಣ್ಣಿನ ಗಿಡದ ಬೇಲಿ, ಎಲ್ಲಾ ತೋರಿಸಿ, ಇವತ್ತು ಒಬ್ಬವ ಹೊಸಾ ಗೆಳಯಾ ಸಿಕ್ಕ ಅಂತ ಕುಣಕೋತ ಮನಿಗೆ ಹೋಗಿ, ಯವ್ವನ ಮುಂದ ಒದರಿ, ಮರು ದಿವಸ ಓಡಿಕೋತ ಸಾಲಿಗೆ ಬಂದರ, ಆ ಹೊಸಾ ಹುಡುಗಾ ನಮ್ಮ ವೈರಿ ಹುಡುಗನ ಸಂಗತೆ ಉಲ್ಟಾ ಕನ್ನಡ ಮಾತು ಅಡಿಕೋತ ಮಜಾ ಮಾಡಲಿಕ್ಕೆ ಹತ್ತಿಬಿಟ್ಟಿರತಿದ್ದಾ. ಅದು ಭಯಂಕರ ನೋವು ಆಗತಿತ್ತು. ಅನ್ನಂಗಿಲ್ಲ, ಆಡಂಗಿಲ್ಲ.

ಅಮೆರಿಕದ ಫೇಸುಬುಕ್ಕು ಅನ್ನೋ ಪ್ರಯೋಗ ಸಾಲಿಯೊಳಗೂ ಹಿಂಗ ಆಗೇದ. “ನಾವು ಕಷ್ಟ ಪಟ್ಟು ಅ ಆ ಇ ಈ ಹೇಳಿಕೊಟ್ಟ ಈ ಯಂತ್ರಗಳು ನಮ್ಮನ್ನೆ ಬೈಪಾಸು ಮಾಡಿ ನಮಗ ತಿಳಿಯಲಾರದಂತಹ ಭಾಷೆ ಕಂಡು ಹಿಡಕೊಂಡುಬಿಟ್ಟಾವು” ಅಂತ ತಜ್ಞರಿಗೆ ಅವಮರ್ಯಾದೆ ಆಗಿ ಹೆದರಿಕೊಂಡುಬಿಟ್ಟಾರ.

ಇದನ್ನ ಓದಿದಾಗ ವಿಜ್ಞಾನ ಲೇಖಕ ಐಸಾಕ್ ಅಸಿಮೋವ್ ಅವರ `ದಿ ಲಾಸ್ಟ್ ಕ್ವಶ್ಚನ್’ ಕತಿ ನೆನಪು ಆಗತದ. ಭವಿಷ್ಯದ ವೈಜ್ಞಾನಿಕ ಬೆಳವಣಿಗೆಗಳ ಬಗ್ಗೆ ಭವಿಷ್ಯ ನುಡಿದಂತೆ ಕತೆ – ಕಾದಂಬರಿ ಬರೆದ ಆಸೀಮೋವ ಅವರು 1973 ಈ ಮಹತ್ವದ ಕತೆ ಬರದರು. ಆ ಕತಿ ಒಳಗ ಸರಕಾರದ ಎಲ್ಲ ಕೆಲಸಗಳನ್ನು ಮಾಡಲಿಕ್ಕೆ ಒಂದು ಸೂಪರ್ ಸುಪ್ರೀಂ ಕಂಪ್ಯೂಟರ್ ತಯಾರು ಮಾಡತಾರ. ಅದರ ಹೆಸರು ಮಲ್ಟಿವ್ಯಾಕ. ಇದು ಬಹಳ ಶಾಣೆ ಯಂತ್ರ. ಈಗಿನ ನಾವು ಬಳಸೋ ಗಣಕಗಳಂತೆ ಅದು ಬರೆ ಮಾಹಿತಿ ಹೊಂದಿರೋದಿಲ್ಲ. ಅದರ ಮಾಹಿತಿ ಸಂಸ್ಕರಣ ಶಕ್ತಿ ಹೆಚ್ಚಾಗಿ ಜಗತ್ತಿನ ಎಲ್ಲ ಜ್ಞಾನ ಹಾಗೂ ವಿವೇಕವನ್ನು ಸಹಿತ ಪಡೆದುಕೊಂಡಿರತದ.

ಇದಕ್ಕ ಯಾರಾದರೂ, ಏನು ಬೇಕಾದರೂ, ಎಷ್ಟು ಹೊತ್ತಿಗಾದರೂ ಪ್ರಶ್ನೆ ಕೇಳಬಹುದು. ಅದು ಯಾರನ್ನು ನಿರಾಶೆ ಮಾಡೋದಿಲ್ಲ. ಹಿಂಗಾಗಿ ಜನ ಎಲ್ಲ ವಿಚಾರ ಶಕ್ತಿ ಕಳಕೊಂಡು ಬಿಟ್ಟಿರತಾರ. ಸರಕಾರದವರು, ಖಾಸಗಿಯವರು, ಕುಟುಂಬಸ್ತರು, ವಿದ್ಯಾರ್ಥಿಗಳು, ಸೈನಿಕರು, ಆಟಗಾರರು, ಮನಿ ನಡಸೋ ಗೃಹಿಣಿಯರು, ಕಡಿಕೆ ವಿಜ್ಞಾನಿಗಳು ಸಹಿತ ಎಲ್ಲ ಸಂದೇಹಗಳನ್ನ ಮಲ್ಟಿವ್ಯಾಕ ಯಂತ್ರದ ಹತ್ತಿರ ಬಂದು ಕೇಳತಿರತಾರ.

ಅವರ ಎಲ್ಲ ಪ್ರಶ್ನೆಗಳನ್ನು ಅದು ಉತ್ತರಿಸಿ, ಸಂದೇಹಗಳನ್ನು ಪರಿಹರಿಸಿಬಿಡತದ. ಆದರಿಂದ ಅಧಿಕಾರಿಗಳು ಆಡಳಿತದ ಬಗ್ಗೆ ತಲಿ ಕೆಡಿಸಿಕೊಳ್ಳೋದಿಲ್ಲ. ನಾಯಕರು ನೀತಿನಿರೂಪಣೆ ಬಗ್ಗೆ ತಲಿ ಕೆಡಿಸಿಕೊಳ್ಳೋದಿಲ್ಲ. ಜನ ತಮ್ಮ ದಿನನಿತ್ಯದ ಜೀವನದ ಬಗ್ಗೆ ತಲಿ ಕೆಡಿಸಿಕೊಳ್ಳೋದಿಲ್ಲ.

ಆದರ ಒಂದು ಪ್ರಶ್ನೆಗೆ ಮಾತ್ರ ಮಲ್ಟಿವ್ಯಾಕನ ಹತ್ತಿರ ಉತ್ತರ ಇಲ್ಲ. ಅದು ಏನು ಅಂದ್ರ ಎಂಟ್ರೋಪಿಗೆ ಪರಿಹಾರ ಏನು ಅನ್ನೋದು. ಎಂಟ್ರೋಪಿ ಅಂದ್ರ ಜಡೋಷ್ಣ ಅಥವಾ ಸರಳ ಭಾಷೆದಾಗ ಹೇಳಬೇಕು ಅಂದ್ರ ಇಡೀ ಜಗತ್ತನ್ನು ನಡೆಸುತ್ತಾ ಇರೋ ಚೈತನ್ಯ – ಶಕ್ತಿ ದಿನ ದಿನಕ್ಕ ಕಮ್ಮಿ ಆಗಲಿಕ್ಕೆ ಹತ್ತೆದ. ಇದು ಆಗಲಾರದ ಹಂಗ ಏನು ಮಾಡಬೇಕು? ಅನ್ನೋ ಪ್ರಶ್ನೆ.

ಸೂರ್ಯನ ಶಾಖದಿಂದ ಭೂಮಿಯ ನೀರೆಲ್ಲ ಆವಿಯಾಗಿ, ನೀರುಕಲ್ಲುಗಳೆಲ್ಲ ಕರಗಿಹೋಗಿ, ಗಿಡ, ಪಕ್ಷಿ, ಪ್ರಾಣಿ, ಎಲ್ಲ ನಾಶ ಆಗಿ, ಮನುಷ್ಯರು ಒಬ್ಬರನ್ನೊಬ್ಬರು ಹೊಡೆದು ಕೊಂದುತಿಂದು, ಶುದ್ಧ ನೀರು, ಶುದ್ದ ಗಾಳಿ, ಸಹಿತ ಸಿಗಲಾರದೆಹೋಗಿ ಎಲ್ಲ ನಾಶ ಆಗತದ ಅಂತರಲ್ಲಾ, ಅದು ಎಂಟ್ರೋಪಿ.

ಇದನ್ನ ಹೆಂಗ ತಡಿಯಬೇಕು? ಇದಕ್ಕ ಉಪಾಯ ಏನು ಅಂತ ಕೇಳಿದಾಗ ಮಲ್ಟಿವ್ಯಾಕ “ಈ ಪ್ರಶ್ನೆಗೆ ಉತ್ತರ ಕೊಡುವಷ್ಟೂ ಮಾಹಿತಿ ಇಲ್ಲ’’ ಅಂತ ಉತ್ತರ ಕೊಡತದ.

ಮಲ್ಟಿವ್ಯಾಕ ಅನ್ನೋದು ಸ್ವಯಂಚಾಲಿತ ಯಂತ್ರ. ಅದು ಸೂರ್ಯನ ಬೆಳಕು ಹಾಗೂ ಅಣುಶಕ್ತಿಯಿಂದ ನಡಿತದ. ಅದಕ್ಕ ಅದನ್ನ ನಡಸೋರು ಯಾರೂ ಬೇಕಾಗಿಲ್ಲ. ಅದು ತನ್ನಷ್ಟಕ್ಕ ತಾನ ನಡಿತದ.

ಆನಂತರ ಅನೇಕ ಲಕ್ಷ ವರ್ಷಗಳ ನಂತರ ಪ್ರಾಣಿ, ಪಕ್ಷಿ, ಗಿಡ, ಎಲ್ಲ ನಾಶ ಆಗಿ, ನೀರು, ಗಾಳಿ ಸಿಗಲಾರದ ಹಂಗ ಆಗತದ. ಆದರ ಮಲ್ಟಿವ್ಯಾಕ ಮಾತ್ರ ಭೂಮಿ ಮ್ಯಾಲೆ ಇರ್ತದ. ಒಂದು ದಿವಸ ಅದು ಭೂಮಿಯಿಂದ ಇನ್ನೊಂದು ಗ್ರಹಕ್ಕ ಪ್ರಯಾಣ ಬೆಳಸ್ತತದ.

ಅಲ್ಲಿ ನೋಡಿದರ ಏನೂ ಇಲ್ಲ. ಬರೆ ಕತ್ತಲೆ, ನೀರು ಇಲ್ಲ, ಜೀವ ಇಲ್ಲ, ಗಿಡ, ಪ್ರಾಣಿ, ಪಕ್ಷಿ, ಮನುಷ್ಯರು ಮುಂತಾದ ಯಾವ ಜೀವಿಗಳೂ ಇಲ್ಲ. ಆ ಗ್ರಹದ ಮ್ಯಾಲೆ ಹೋಗಿ ಮಲ್ಟಿವ್ಯಾಕ ಲ್ಯಾಂಡ್ ಆಗತದ.

ಅಲ್ಲಿ ಹೋಗಿ ಒಂದು ಗಟ್ಟಿ ಜಾಗದಾಗ ಕುತುಕೊಂಡು ಒಂದು ಮಾತು ಹೇಳತದ.

`ಲೆಟ್ ದೇರ್ ಬಿ ಲೈಟ್’ (`ಪ್ರಕಾಶ ಉದ್ಭವವಾಗಲಿ’). ಆಗ ಅಲ್ಲಿ ಬೆಳಕು ಬರ್ತದ. ಅಲ್ಲಿಗೆ ಆ ಕತಿ ಮುಗಿತದ. ಆದರ ನಾವು ಅದನ್ನ ಮುಂದುವರೆಸಬಹುದು. ಅಲ್ಲಿ ನೀರು ಬಂತು, ದಿನ- ರಾತ್ರಿ ಆರಂಭ ಆದವು, ಗಿಡ, ಮೀನು, ಪ್ರಾಣಿ, ಪಕ್ಷಿ, ಮನುಷ್ಯರು ಹುಟ್ಟಿಕೊಂಡವು ಅಂತ.

ಈ ಮಾತು ಏನು ಅದಅಲ್ಲಾ, ‘ಪ್ರಕಾಶ ಉದ್ಭವವಾಗಲಿ’ ಅನ್ನೋದು, ಅದು ಪವಿತ್ರ ಬೈಬಲ್‍ನ ಮಾತು. ಜೆನೆಸಿಸ್ ಅಂದ್ರ ಆರಂಭದ ಕತೆ ಅನ್ನುವ ಭಾಗದಾಗ 1.3 ಅನ್ನೋ ಸಂಖ್ಯೆಯ ಶ್ಲೋಕದಾಗ ಈ ಮಾತು ಬರ್ತದ. ದೇವರು ಭೂಮಿಯಲ್ಲಿ ಮೊದಲು ಬೆಳಕನ್ನು, ನಂತರ ದಿನ ರಾತ್ರಿಗಳನ್ನ, ನೀರು, ನೆಲಗಳನ್ನ, ಗಿಡ, ಪಕ್ಷಿ ಪ್ರಾಣಿ ಕೊನೆಗೆ ಆ್ಯಡಂ ಹಾಗೂ ಈವ್ ಅವರನ್ನು ಸೃಷ್ಟಿ ಮಾಡಿದ ಅಂತ ಈ ಭಾಗದಲ್ಲಿ ವಿವರ ಅದ. ಅದೇ ಧಾಟಿಯಲ್ಲಿ ದಿ ಲಾಸ್ಟ್ ಕ್ವಶ್ಚನ್ ಅನ್ನೋ ಕತೆ ಅದ.

ಎನಪಾ ಅಂದರ ಅಸಿಮೋವ್ ಅವರು ಈ ಕತಿ ಮೂಲಕ ನಮಗ ಒಂದು ಎಚ್ಚರಿಕೆ ಕೊಟ್ಟಾರ. ಬಹಳ ಶಾಣೆ ಇರೋ ಯಂತ್ರಗಳನ್ನ ತಯಾರು ಮಾಡಿದರ ಅವು ತಮ್ಮ ಸೃಷ್ಟಿಕರ್ತರನ್ನ ಮೀರಿ ಹೋಗಿ ದೇವರು ಆಗಿ ಬಿಡೋ ಸಾಧ್ಯತೆ ಐತಿ ಅಂತ ಭವಿಷ್ಯ ಹೇಳಿ ಬಿಟ್ಟಾರ. ಅದೂ 50 ವರ್ಷಗಳ ಹಿಂದ.

ಇಷ್ಟು ದಿವಸದಾಗ ಇಂತಹ ಸಣ್ಣ ಪಾಠ ಕಲಿಯಲಾರದೇ ಹೋದರ ಅದು ನಮ್ಮ ತಪ್ಪು. ಅಸಿಮೋವ್ ಅವರ ತಪ್ಪು ಅಲ್ಲ.

ಕೇವಲ ಒಂದು ವರ್ಷದಾಗ ನಾವು ತಯಾರು ಮಾಡಿದ ರೋಬೋಟುಗಳು ತಮ್ಮ ಸ್ವಂತ ಭಾಷೆ ಹುಟ್ಟಿಸಿಕೊಳಲಿಕ್ಕೆ ಶಕ್ಯ ಐತಿ, ಆದರ ನಾವು 50 ವರ್ಷದಾಗ ಒಂದು ಪಾಠಾ ಕಲಿಯೋದಿಲ್ಲ ಅನ್ನೋದು ನಮಗ ಇನ್ನೂ ನಾಚಿಕಿ ಆಗಬೇಕು.

ಇದು ಎಲ್ಲ ಹೋಗಲಿ ಬಿಡರಿ, ರೋಬೋಟು ಅನೋ ಶಬ್ದ ಹೆಂಗ ಬಂತು ಅನ್ನೋದು ನಿಮಗ ಗೊತ್ತು ಆದ ಏನು? ಅದು ಜೆಕ್ ಭಾಷೆಯ ಜೀತದ ಆಳು ಅನ್ನುವ ಪದ. ಅದನ್ನ ಕೆ. ಕೆಪೆಕ ಅನ್ನುವ ನಾಟಕಕಾರ 1920ರಲ್ಲಿ ರೋಸಮನ ಜಾಗತಿಕ ರೋಬೋಟುಗಳು ಅನ್ನುವ ತನ್ನ ಕೃತಿಯಲ್ಲಿ ಬಳಸಿದರು.

ನಾವು ಯಂತ್ರಗಳನ್ನು ಜೀತದ ಆಳು ಅಂತ ತಿಳ್ಕೊಂಡಿರಬಹುದು ಆದರೆ ಅವೇ ನಮ್ಮನ್ನು ಜೀತಕ್ಕೆ ಇಟ್ಟುಕೊಂಡರೆ ಹೇಗೆ?

ಆಗ ಅವು ನಮ್ಮನ್ನ ಕೃತಕ ಬುದ್ಧಿ ಮತ್ತೆಯ ಪ್ರಾಣಿಗಳು ಅಂತ ಕರೆದರೆ ಹೆಂಗ ಇರ್ತದ, ಅಲ್ಲವೇ, ಮನೋಲ್ಲಾಸಿನಿ?


ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...