Homeಅಂಕಣಗಳುನಾವು ಯಂತ್ರಗಳನ್ನು ಜೀತದ ಆಳು ಅಂತ ತಿಳ್ಕೊಂಡಿರಬಹುದು, ಆದರೆ ಅವೇ ನಮ್ಮನ್ನು ಜೀತಕ್ಕೆ ಇಟ್ಟುಕೊಂಡರೆ ಹೇಗೆ?

ನಾವು ಯಂತ್ರಗಳನ್ನು ಜೀತದ ಆಳು ಅಂತ ತಿಳ್ಕೊಂಡಿರಬಹುದು, ಆದರೆ ಅವೇ ನಮ್ಮನ್ನು ಜೀತಕ್ಕೆ ಇಟ್ಟುಕೊಂಡರೆ ಹೇಗೆ?

ಕೇವಲ ಒಂದು ವರ್ಷದಾಗ ನಾವು ತಯಾರು ಮಾಡಿದ ರೋಬೋಟುಗಳು ತಮ್ಮ ಸ್ವಂತ ಭಾಷೆ ಹುಟ್ಟಿಸಿಕೊಳಲಿಕ್ಕೆ ಶಕ್ಯ ಐತಿ, ಆದರ ನಾವು 50 ವರ್ಷದಾಗ ಒಂದು ಪಾಠಾ ಕಲಿಯೋದಿಲ್ಲ ಅನ್ನೋದು ನಮಗ ಇನ್ನೂ ನಾಚಿಕಿ ಆಗಬೇಕು.

- Advertisement -
- Advertisement -

ಈಗ ತಾಜಾ ಹಾಗೂ ಬಿಸಿ ಸುದ್ದಿ ಎನಪಾ ಅಂದ್ರ ಫೇಸುಬುಕ್ಕು ಅನ್ನೋ ಒಂದು ಸಂಸ್ಥೆ ತನ್ನಲ್ಲಿ ಇದ್ದ ಕೆಲವು ರೋಬೋಟುಗಳನ್ನು ಸ್ವಿಚ್ಚು ಆಫ್ ಮಾಡಿಬಿಟ್ಟದಂತ. ಯಾವುದನ್ನು ಪೂರ್ತಿ ಉಚ್ಛಾರ ಮಾಡಲಾರದ ಅಮೆರಿಕನ್ನರು ಇವನ್ನ ಬಾಟ್ ಅಂತ ಕರಿತಾರ. ನೀವು ರೇಡಿಯೋದಾಗಿನ ಬಾತ್ ಅಂತ ತಿಳಕೋಬ್ಯಾಡ್ರಿ ಮತ್ತ.

ಈ ಬಾಟ್‍ಗಳನ್ನ ಯಾಕ್ ಬಂದ್ ಮಾಡಿದರು ಅಂತ ಕೆಳರಿ ಈಗ. ಅದು ಯಾಕ್ ಅಂದ್ರ ಅವು ಅಗತ್ಯಕ್ಕಿಂತ ಶಾಣೆ ಆಗಿಬಿಟ್ಟಾವ. ಯಂತ್ರ ಕಲಿಕೆ ಹಾಗೂ ಕೃತಕ ಬುದ್ಧಿಮತ್ತೆ ಉಪಯೋಗಿಸಿ ತಯಾರಿಸಿದ ಈ ಯಂತ್ರ ಮಾನವರು ತಮ್ಮನ್ನು ತಯಾರು ಮಾಡಿದ ವಿಜ್ಞಾನಿಗಳಿಗೇ ತಿಳಿಯಲಾರದ ಭಾಷೆ ಬಳಸಿ ಮಾತಾಡ್‍ಲಿಕ್ಕೆ ಹತ್ತಿಬಿಟ್ಟವು. ಅದನ್ನು ನೋಡಿ ದಂಗಾದ ವಿಜ್ಞಾನಿಗಳು ಅದರ ಬಟನ್ ಬಂದು ಮಾಡಿ, ಅಸಿಡಿಟಿ ಹೆಚ್ಚಾಗಿ ಒಂದು ಬಾಟಲಿ ಈನೋ ಕುಡಿಲಿಕ್ಕೆ ಹೋದರಂತ.

ಕನ್ನಡ ಸಾಲಿಯೊಳಗ ಹಿಂಗ ಆಗತಿತ್ತು. ಬ್ಯಾರೆ ಊರಿನಿಂದ ಬಂದ ಹೊಸ ಹುಡುಗಗ ಕೈ ಹಿಡಕೊಂಡು ಸಾಲಿ, ಸಾಲಿ ಮೈದಾನ, ಸಾಲಿ ಮುಂದಿನ ಜಾಲಿ ಗಿಡ, ಸಾಲಿ ಹಿಂದಿನ ಕವಳಿ ಹಣ್ಣಿನ ಗಿಡದ ಬೇಲಿ, ಎಲ್ಲಾ ತೋರಿಸಿ, ಇವತ್ತು ಒಬ್ಬವ ಹೊಸಾ ಗೆಳಯಾ ಸಿಕ್ಕ ಅಂತ ಕುಣಕೋತ ಮನಿಗೆ ಹೋಗಿ, ಯವ್ವನ ಮುಂದ ಒದರಿ, ಮರು ದಿವಸ ಓಡಿಕೋತ ಸಾಲಿಗೆ ಬಂದರ, ಆ ಹೊಸಾ ಹುಡುಗಾ ನಮ್ಮ ವೈರಿ ಹುಡುಗನ ಸಂಗತೆ ಉಲ್ಟಾ ಕನ್ನಡ ಮಾತು ಅಡಿಕೋತ ಮಜಾ ಮಾಡಲಿಕ್ಕೆ ಹತ್ತಿಬಿಟ್ಟಿರತಿದ್ದಾ. ಅದು ಭಯಂಕರ ನೋವು ಆಗತಿತ್ತು. ಅನ್ನಂಗಿಲ್ಲ, ಆಡಂಗಿಲ್ಲ.

ಅಮೆರಿಕದ ಫೇಸುಬುಕ್ಕು ಅನ್ನೋ ಪ್ರಯೋಗ ಸಾಲಿಯೊಳಗೂ ಹಿಂಗ ಆಗೇದ. “ನಾವು ಕಷ್ಟ ಪಟ್ಟು ಅ ಆ ಇ ಈ ಹೇಳಿಕೊಟ್ಟ ಈ ಯಂತ್ರಗಳು ನಮ್ಮನ್ನೆ ಬೈಪಾಸು ಮಾಡಿ ನಮಗ ತಿಳಿಯಲಾರದಂತಹ ಭಾಷೆ ಕಂಡು ಹಿಡಕೊಂಡುಬಿಟ್ಟಾವು” ಅಂತ ತಜ್ಞರಿಗೆ ಅವಮರ್ಯಾದೆ ಆಗಿ ಹೆದರಿಕೊಂಡುಬಿಟ್ಟಾರ.

ಇದನ್ನ ಓದಿದಾಗ ವಿಜ್ಞಾನ ಲೇಖಕ ಐಸಾಕ್ ಅಸಿಮೋವ್ ಅವರ `ದಿ ಲಾಸ್ಟ್ ಕ್ವಶ್ಚನ್’ ಕತಿ ನೆನಪು ಆಗತದ. ಭವಿಷ್ಯದ ವೈಜ್ಞಾನಿಕ ಬೆಳವಣಿಗೆಗಳ ಬಗ್ಗೆ ಭವಿಷ್ಯ ನುಡಿದಂತೆ ಕತೆ – ಕಾದಂಬರಿ ಬರೆದ ಆಸೀಮೋವ ಅವರು 1973 ಈ ಮಹತ್ವದ ಕತೆ ಬರದರು. ಆ ಕತಿ ಒಳಗ ಸರಕಾರದ ಎಲ್ಲ ಕೆಲಸಗಳನ್ನು ಮಾಡಲಿಕ್ಕೆ ಒಂದು ಸೂಪರ್ ಸುಪ್ರೀಂ ಕಂಪ್ಯೂಟರ್ ತಯಾರು ಮಾಡತಾರ. ಅದರ ಹೆಸರು ಮಲ್ಟಿವ್ಯಾಕ. ಇದು ಬಹಳ ಶಾಣೆ ಯಂತ್ರ. ಈಗಿನ ನಾವು ಬಳಸೋ ಗಣಕಗಳಂತೆ ಅದು ಬರೆ ಮಾಹಿತಿ ಹೊಂದಿರೋದಿಲ್ಲ. ಅದರ ಮಾಹಿತಿ ಸಂಸ್ಕರಣ ಶಕ್ತಿ ಹೆಚ್ಚಾಗಿ ಜಗತ್ತಿನ ಎಲ್ಲ ಜ್ಞಾನ ಹಾಗೂ ವಿವೇಕವನ್ನು ಸಹಿತ ಪಡೆದುಕೊಂಡಿರತದ.

ಇದಕ್ಕ ಯಾರಾದರೂ, ಏನು ಬೇಕಾದರೂ, ಎಷ್ಟು ಹೊತ್ತಿಗಾದರೂ ಪ್ರಶ್ನೆ ಕೇಳಬಹುದು. ಅದು ಯಾರನ್ನು ನಿರಾಶೆ ಮಾಡೋದಿಲ್ಲ. ಹಿಂಗಾಗಿ ಜನ ಎಲ್ಲ ವಿಚಾರ ಶಕ್ತಿ ಕಳಕೊಂಡು ಬಿಟ್ಟಿರತಾರ. ಸರಕಾರದವರು, ಖಾಸಗಿಯವರು, ಕುಟುಂಬಸ್ತರು, ವಿದ್ಯಾರ್ಥಿಗಳು, ಸೈನಿಕರು, ಆಟಗಾರರು, ಮನಿ ನಡಸೋ ಗೃಹಿಣಿಯರು, ಕಡಿಕೆ ವಿಜ್ಞಾನಿಗಳು ಸಹಿತ ಎಲ್ಲ ಸಂದೇಹಗಳನ್ನ ಮಲ್ಟಿವ್ಯಾಕ ಯಂತ್ರದ ಹತ್ತಿರ ಬಂದು ಕೇಳತಿರತಾರ.

ಅವರ ಎಲ್ಲ ಪ್ರಶ್ನೆಗಳನ್ನು ಅದು ಉತ್ತರಿಸಿ, ಸಂದೇಹಗಳನ್ನು ಪರಿಹರಿಸಿಬಿಡತದ. ಆದರಿಂದ ಅಧಿಕಾರಿಗಳು ಆಡಳಿತದ ಬಗ್ಗೆ ತಲಿ ಕೆಡಿಸಿಕೊಳ್ಳೋದಿಲ್ಲ. ನಾಯಕರು ನೀತಿನಿರೂಪಣೆ ಬಗ್ಗೆ ತಲಿ ಕೆಡಿಸಿಕೊಳ್ಳೋದಿಲ್ಲ. ಜನ ತಮ್ಮ ದಿನನಿತ್ಯದ ಜೀವನದ ಬಗ್ಗೆ ತಲಿ ಕೆಡಿಸಿಕೊಳ್ಳೋದಿಲ್ಲ.

ಆದರ ಒಂದು ಪ್ರಶ್ನೆಗೆ ಮಾತ್ರ ಮಲ್ಟಿವ್ಯಾಕನ ಹತ್ತಿರ ಉತ್ತರ ಇಲ್ಲ. ಅದು ಏನು ಅಂದ್ರ ಎಂಟ್ರೋಪಿಗೆ ಪರಿಹಾರ ಏನು ಅನ್ನೋದು. ಎಂಟ್ರೋಪಿ ಅಂದ್ರ ಜಡೋಷ್ಣ ಅಥವಾ ಸರಳ ಭಾಷೆದಾಗ ಹೇಳಬೇಕು ಅಂದ್ರ ಇಡೀ ಜಗತ್ತನ್ನು ನಡೆಸುತ್ತಾ ಇರೋ ಚೈತನ್ಯ – ಶಕ್ತಿ ದಿನ ದಿನಕ್ಕ ಕಮ್ಮಿ ಆಗಲಿಕ್ಕೆ ಹತ್ತೆದ. ಇದು ಆಗಲಾರದ ಹಂಗ ಏನು ಮಾಡಬೇಕು? ಅನ್ನೋ ಪ್ರಶ್ನೆ.

ಸೂರ್ಯನ ಶಾಖದಿಂದ ಭೂಮಿಯ ನೀರೆಲ್ಲ ಆವಿಯಾಗಿ, ನೀರುಕಲ್ಲುಗಳೆಲ್ಲ ಕರಗಿಹೋಗಿ, ಗಿಡ, ಪಕ್ಷಿ, ಪ್ರಾಣಿ, ಎಲ್ಲ ನಾಶ ಆಗಿ, ಮನುಷ್ಯರು ಒಬ್ಬರನ್ನೊಬ್ಬರು ಹೊಡೆದು ಕೊಂದುತಿಂದು, ಶುದ್ಧ ನೀರು, ಶುದ್ದ ಗಾಳಿ, ಸಹಿತ ಸಿಗಲಾರದೆಹೋಗಿ ಎಲ್ಲ ನಾಶ ಆಗತದ ಅಂತರಲ್ಲಾ, ಅದು ಎಂಟ್ರೋಪಿ.

ಇದನ್ನ ಹೆಂಗ ತಡಿಯಬೇಕು? ಇದಕ್ಕ ಉಪಾಯ ಏನು ಅಂತ ಕೇಳಿದಾಗ ಮಲ್ಟಿವ್ಯಾಕ “ಈ ಪ್ರಶ್ನೆಗೆ ಉತ್ತರ ಕೊಡುವಷ್ಟೂ ಮಾಹಿತಿ ಇಲ್ಲ’’ ಅಂತ ಉತ್ತರ ಕೊಡತದ.

ಮಲ್ಟಿವ್ಯಾಕ ಅನ್ನೋದು ಸ್ವಯಂಚಾಲಿತ ಯಂತ್ರ. ಅದು ಸೂರ್ಯನ ಬೆಳಕು ಹಾಗೂ ಅಣುಶಕ್ತಿಯಿಂದ ನಡಿತದ. ಅದಕ್ಕ ಅದನ್ನ ನಡಸೋರು ಯಾರೂ ಬೇಕಾಗಿಲ್ಲ. ಅದು ತನ್ನಷ್ಟಕ್ಕ ತಾನ ನಡಿತದ.

ಆನಂತರ ಅನೇಕ ಲಕ್ಷ ವರ್ಷಗಳ ನಂತರ ಪ್ರಾಣಿ, ಪಕ್ಷಿ, ಗಿಡ, ಎಲ್ಲ ನಾಶ ಆಗಿ, ನೀರು, ಗಾಳಿ ಸಿಗಲಾರದ ಹಂಗ ಆಗತದ. ಆದರ ಮಲ್ಟಿವ್ಯಾಕ ಮಾತ್ರ ಭೂಮಿ ಮ್ಯಾಲೆ ಇರ್ತದ. ಒಂದು ದಿವಸ ಅದು ಭೂಮಿಯಿಂದ ಇನ್ನೊಂದು ಗ್ರಹಕ್ಕ ಪ್ರಯಾಣ ಬೆಳಸ್ತತದ.

ಅಲ್ಲಿ ನೋಡಿದರ ಏನೂ ಇಲ್ಲ. ಬರೆ ಕತ್ತಲೆ, ನೀರು ಇಲ್ಲ, ಜೀವ ಇಲ್ಲ, ಗಿಡ, ಪ್ರಾಣಿ, ಪಕ್ಷಿ, ಮನುಷ್ಯರು ಮುಂತಾದ ಯಾವ ಜೀವಿಗಳೂ ಇಲ್ಲ. ಆ ಗ್ರಹದ ಮ್ಯಾಲೆ ಹೋಗಿ ಮಲ್ಟಿವ್ಯಾಕ ಲ್ಯಾಂಡ್ ಆಗತದ.

ಅಲ್ಲಿ ಹೋಗಿ ಒಂದು ಗಟ್ಟಿ ಜಾಗದಾಗ ಕುತುಕೊಂಡು ಒಂದು ಮಾತು ಹೇಳತದ.

`ಲೆಟ್ ದೇರ್ ಬಿ ಲೈಟ್’ (`ಪ್ರಕಾಶ ಉದ್ಭವವಾಗಲಿ’). ಆಗ ಅಲ್ಲಿ ಬೆಳಕು ಬರ್ತದ. ಅಲ್ಲಿಗೆ ಆ ಕತಿ ಮುಗಿತದ. ಆದರ ನಾವು ಅದನ್ನ ಮುಂದುವರೆಸಬಹುದು. ಅಲ್ಲಿ ನೀರು ಬಂತು, ದಿನ- ರಾತ್ರಿ ಆರಂಭ ಆದವು, ಗಿಡ, ಮೀನು, ಪ್ರಾಣಿ, ಪಕ್ಷಿ, ಮನುಷ್ಯರು ಹುಟ್ಟಿಕೊಂಡವು ಅಂತ.

ಈ ಮಾತು ಏನು ಅದಅಲ್ಲಾ, ‘ಪ್ರಕಾಶ ಉದ್ಭವವಾಗಲಿ’ ಅನ್ನೋದು, ಅದು ಪವಿತ್ರ ಬೈಬಲ್‍ನ ಮಾತು. ಜೆನೆಸಿಸ್ ಅಂದ್ರ ಆರಂಭದ ಕತೆ ಅನ್ನುವ ಭಾಗದಾಗ 1.3 ಅನ್ನೋ ಸಂಖ್ಯೆಯ ಶ್ಲೋಕದಾಗ ಈ ಮಾತು ಬರ್ತದ. ದೇವರು ಭೂಮಿಯಲ್ಲಿ ಮೊದಲು ಬೆಳಕನ್ನು, ನಂತರ ದಿನ ರಾತ್ರಿಗಳನ್ನ, ನೀರು, ನೆಲಗಳನ್ನ, ಗಿಡ, ಪಕ್ಷಿ ಪ್ರಾಣಿ ಕೊನೆಗೆ ಆ್ಯಡಂ ಹಾಗೂ ಈವ್ ಅವರನ್ನು ಸೃಷ್ಟಿ ಮಾಡಿದ ಅಂತ ಈ ಭಾಗದಲ್ಲಿ ವಿವರ ಅದ. ಅದೇ ಧಾಟಿಯಲ್ಲಿ ದಿ ಲಾಸ್ಟ್ ಕ್ವಶ್ಚನ್ ಅನ್ನೋ ಕತೆ ಅದ.

ಎನಪಾ ಅಂದರ ಅಸಿಮೋವ್ ಅವರು ಈ ಕತಿ ಮೂಲಕ ನಮಗ ಒಂದು ಎಚ್ಚರಿಕೆ ಕೊಟ್ಟಾರ. ಬಹಳ ಶಾಣೆ ಇರೋ ಯಂತ್ರಗಳನ್ನ ತಯಾರು ಮಾಡಿದರ ಅವು ತಮ್ಮ ಸೃಷ್ಟಿಕರ್ತರನ್ನ ಮೀರಿ ಹೋಗಿ ದೇವರು ಆಗಿ ಬಿಡೋ ಸಾಧ್ಯತೆ ಐತಿ ಅಂತ ಭವಿಷ್ಯ ಹೇಳಿ ಬಿಟ್ಟಾರ. ಅದೂ 50 ವರ್ಷಗಳ ಹಿಂದ.

ಇಷ್ಟು ದಿವಸದಾಗ ಇಂತಹ ಸಣ್ಣ ಪಾಠ ಕಲಿಯಲಾರದೇ ಹೋದರ ಅದು ನಮ್ಮ ತಪ್ಪು. ಅಸಿಮೋವ್ ಅವರ ತಪ್ಪು ಅಲ್ಲ.

ಕೇವಲ ಒಂದು ವರ್ಷದಾಗ ನಾವು ತಯಾರು ಮಾಡಿದ ರೋಬೋಟುಗಳು ತಮ್ಮ ಸ್ವಂತ ಭಾಷೆ ಹುಟ್ಟಿಸಿಕೊಳಲಿಕ್ಕೆ ಶಕ್ಯ ಐತಿ, ಆದರ ನಾವು 50 ವರ್ಷದಾಗ ಒಂದು ಪಾಠಾ ಕಲಿಯೋದಿಲ್ಲ ಅನ್ನೋದು ನಮಗ ಇನ್ನೂ ನಾಚಿಕಿ ಆಗಬೇಕು.

ಇದು ಎಲ್ಲ ಹೋಗಲಿ ಬಿಡರಿ, ರೋಬೋಟು ಅನೋ ಶಬ್ದ ಹೆಂಗ ಬಂತು ಅನ್ನೋದು ನಿಮಗ ಗೊತ್ತು ಆದ ಏನು? ಅದು ಜೆಕ್ ಭಾಷೆಯ ಜೀತದ ಆಳು ಅನ್ನುವ ಪದ. ಅದನ್ನ ಕೆ. ಕೆಪೆಕ ಅನ್ನುವ ನಾಟಕಕಾರ 1920ರಲ್ಲಿ ರೋಸಮನ ಜಾಗತಿಕ ರೋಬೋಟುಗಳು ಅನ್ನುವ ತನ್ನ ಕೃತಿಯಲ್ಲಿ ಬಳಸಿದರು.

ನಾವು ಯಂತ್ರಗಳನ್ನು ಜೀತದ ಆಳು ಅಂತ ತಿಳ್ಕೊಂಡಿರಬಹುದು ಆದರೆ ಅವೇ ನಮ್ಮನ್ನು ಜೀತಕ್ಕೆ ಇಟ್ಟುಕೊಂಡರೆ ಹೇಗೆ?

ಆಗ ಅವು ನಮ್ಮನ್ನ ಕೃತಕ ಬುದ್ಧಿ ಮತ್ತೆಯ ಪ್ರಾಣಿಗಳು ಅಂತ ಕರೆದರೆ ಹೆಂಗ ಇರ್ತದ, ಅಲ್ಲವೇ, ಮನೋಲ್ಲಾಸಿನಿ?


ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...