Homeಮುಖಪುಟಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

- Advertisement -
- Advertisement -

ಬಾಬಾಗೌಡ ಪಾಟೀಲರು 1998ರ ಸುಮಾರಿಗೆ ಬಿಜೆಪಿ ಸೇರಿದರು, ಸಚಿವರಾದರು ಮತ್ತು ಈ ನಂತರದಲ್ಲಿ ಮತ್ತೆ ರೈತ ಹೋರಾಟಕ್ಕೆ ಬೆಂಬಲವಾಗಿ ಓಡಾಡಿದರು ಎಂಬುದನ್ನು ಬದಿಗಿಟ್ಟು, ಅವರ ಆರಂಭಿಕ ಹೋರಾಟಗಳ ಬಗ್ಗೆ ನೋಡೋಣ.

ಕರ್ನಾಟಕದಲ್ಲಿ ಚಳುವಳಿ ಕಟ್ಟುತ್ತಿರುವ ಎಲ್ಲ ಸಂಘಟನೆಗಳಿಗೂ ಇದರಲ್ಲಿ ಒಂದಿಷ್ಟು ವಿಷಯ ಇವೆ ಅನಿಸುತ್ತದೆ.

‘ಅಲ್ರೀ, ಟೊಮಾಟೋ ಸಾಸ್‌ಗೆ ಅವರೇ ರೇಟ್ ಫಿಕ್ಸ್ ಮಾಡ್ತಾರ. ಅದಕ್ಕ ಜನ ಮಾತಿಲ್ಲದ ರೊಕ್ಕ ಕೊಟ್ ತಗೋತಾರ. ಇನ್ಮ್ಯಾಲ ಟೊಮೆಟೊಕ್ಕೆ ನಾವಾ ರೇಟು ಫಿಕ್ಸ್ ಮಾಡೋ ಹಂಗಾಗಬೇಕು’ ಹೀಗೆ ಉತ್ತರ ಕರ್ನಾಟಕದ ಅದರಲ್ಲೂ ಮುಖ್ಯವಾಗಿ ಮುಂಬೈ ಕರ್ನಾಟಕದಲ್ಲಿ ಬಾಬಾಗೌಡರು ಅಂದು ಕೆಂಡದುಂಡೆಯಂತೆ ಗುಡುಗುತ್ತಿದ್ದರು. ಶಾಲಾ ಬಾಲಕರಾಗಿದ್ದಾಗ ಮತ್ತು ‘ವಕ್ಕಲ್ತನ’ ಹಿನ್ನೆಲೆಯ ನಮಗೆಲ್ಲ ಇದು ರೋಮಾಂಚನ ಸೃಷ್ಟಿಸಿದ್ದಲ್ಲದೇ, ಕ್ರಮೇಣ ಗ್ರಾಮೀಣ ಭಾರತಕ್ಕೆ ಆಗುತ್ತಿದ್ದ ಅನ್ಯಾಯದ ಬಗ್ಗೆ ಯೋಚನೆ ಮಾಡುವಂತೆ ಮಾಡುತ್ತಿತ್ತು.

ನೀವು ಗಮನಿಸಿ ನೋಡಿ, ಈಗೆಲ್ಲಾದರೂ ರಾಕೇಶ್ ಟಿಕಾಯತ್‌ರು ಚುನಾವಣೆಗೆ ನಿಂತರೆ ಗೆಲ್ಲಬಹುದಾ ಎಂಬ ಪ್ರಶ್ನೆಯನ್ನು ಊಹಿಸಿಕೊಳ್ಳಿ. ಉತ್ತರ ಕನ್ನಡದ ಸಂಸತ್ ಚುನಾವಣೆಗೆ ನಿಂತಾಗ ಶಿವರಾಮ ಕಾರಂತರ ಪರ ಎಲ್ಲ ಪ್ರಗತಿಪರ ಸಂಘಟನೆಗಳ ಬೆಂಬಲವಿತ್ತು. ಆದರೆ, ಫಲಿತಾಂಶ ಬಂದಾಗ ಕಾರಂತರು ಮೂರನೇ ಸ್ಥಾನದಲ್ಲಿದ್ದರು.

ಮತ್ತೆ ಸಂಘಟನೆಗಳ ವಿಷಯಕ್ಕೆ ಬರೋಣ, ಈ ಸಲ ಆಮ್ ಆದ್ಮಿ, ಎಸ್‌ಡಿಪಿಐ, ಕರ್ಮಾಟಕ ರಾಷ್ಟ್ರೀಯ ಸಮಿತಿ ಮುಂತಾದ ಸಂಘಟನೆಗಳು ಇತ್ತೀಚಿನ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾರಿ ಅಲ್ಲದಿದ್ದರೂ ಗಮನಾರ್ಹ ಸಾಧನೆ ಮಾಡಿವೆ.

ಆದರೆ, ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

ಬೆಳಗಾವಿಯ ಬೈಲಹೊಂಗಲದ ಚಿಕ್ಕ ಬಾಗೇವಾಡಿಯ ಪಾಟೀಲರು ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಅದಕ್ಕೆ ಅಂಟಿಕೊಂಡ ಧಾರವಾಡ ಗ್ರಾಮೀಣ ಕ್ಷೇತ್ರ ಎರಡರಲ್ಲೂ ಗೆಲ್ಲುತ್ತಾರೆ! ನಂತರ ಧಾರವಾಡ ಗ್ರಾಮೀಣದಲ್ಲಿ ಪ್ರೊಫೆಸರ್ ನಂಜುಂಡಸ್ವಾಮಿ ಗೆಲ್ಲುಲು ಸಹಕರಿಸುತ್ತಾರೆ.

ತಾತ್ವಿಕ ರೂಪು ಮತ್ತು ತಳಮಟ್ಟದ ಸಂಘಟನೆ

ಪ್ರೊಫೆಸರ್ ನಂಜುಂಡಸ್ವಾಮಿ ರಾಜ್ಯದಲ್ಲಿ ರೈತ ರೈತ ಸಂಘಟನೆ ಕಟ್ಟಿದ ಪಿತಾಮಹ ಎಂಬುದರಲ್ಲಿ ಎರಡು ಮಾತಿಲ್ಲ ಮತ್ತು ಇರಲೇಬಾರದು. ಆದರೆ ಸಂಘಟನೆ ಮಾಡುವ ಹೊಣೆ ಕೆಳಮಟ್ಟದ ಕಾರ್ಯಕರ್ತರ ಮೇಲಿರುತ್ತದೆ. ‘ಬೈಲಹೊಂಗಲದ ಚಿಕ್ಕ ಬಾಗೆವಾಡಿಯ ಭೂ ಮಾಲೀಕ ಕುಟುಂಬದ ಹಿನ್ನೆಲೆಯ ಬಾಬಾಗೌಡ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಅದ್ಭುತವಾಗಿ ರೈತರನ್ನು ಸಂಘಟಿಸಿದರು’ ಎನ್ನುತ್ತಾರೆ ಪತ್ರಕರ್ತ ರುಷಿಕೇಶ್ ದೇಸಾಯಿ.

‘ತಾಲೂಕು ಕಚೇರಿಗಳಿಗೇ ಜನ ಹೋಗಲು ಹೆದರುತ್ತಿದ್ದ ಕಾಲವದು. ಬಾಬಾಗೌಡರ ಗುಡುಗು ಹೇಗಿತ್ತೆಂದರೆ ಜನ ಸೀದಾ ತಹಸೀಲ್ದಾರ್ ಎದುರು ನಿಂತು ಪ್ರಶ್ನೆ ಕೇಳಲು ಆರಂಭಿಸಿದರು. ಊರೂರಲ್ಲಿ ‘ಗ್ರಾಮದ ಜನರ ಅನುಮತಿ ಇಲ್ಲದೇ ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರವೇಶವಿಲ್ಲ’ ಎಂಬ ಬೋರ್ಡುಗಳು ಕಾಣಿಸಿಕೊಂಡವು ಎನ್ನುತ್ತಾರೆ ಬೆಳಗಾವಿ- ಧಾರವಾಡಗಳಲ್ಲಿ ಹಿಂದೆಲ್ಲ ಅನೇಕ ಚಳುವಳಿಗಳನ್ನು ನಡೆಸಿದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ. ವೆಂಕನಗೌಡ ಪಾಟೀಲರು.

“ಒಂದು ನೋಟು, ಒಂದು ರೊಟ್ಟಿ, ಒಂದು ವೋಟು” ಎಂದು ಚುನಾವಣೆ ಮಾಡಿ ಅವರು ಎರಡು ಕ್ಷೇತ್ರದಲ್ಲಿ ಗೆದ್ದಿದ್ದರು ಎಂಬುದು ಈಗಿನ ಚಳವಳಿಗಳಿಗೆ ಸ್ಫೂರ್ತಿ ಆಗುತ್ತದೆ ಎನ್ನುತ್ತಾರೆ ಚಳುವಳಿ ಹಿನ್ನೆಲೆಯ ಡಾ. ಪಾಟೀಲ್…

ರೈತ ಸಂಘಟನೆಯಲ್ಲಿ ಉಂಟಾದ ಭಿನ್ನಮತಗಳು, ಮುಂದೆ ಬಾಬಾಗೌಡರು ಬಿಜೆಪಿ ಸೇರಿದ ಸ್ಥಿತಿ ಈ ಬಗ್ಗೆ ಬೇಕೆಂತಲೇ ಇಲ್ಲಿ ಚರ್ಚೆ ಮಾಡಿಲ್ಲ. ಅದು ಈಗಿನ ಅಗತ್ಯವೂ ಅಲ್ಲ. ಬಾಬಾಗೌಡ ಪಾಲೀಲರಿಗೆ ಶ್ರಧ್ದಾಂಜಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...