Homeಮುಖಪುಟಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

- Advertisement -
- Advertisement -

ಬಾಬಾಗೌಡ ಪಾಟೀಲರು 1998ರ ಸುಮಾರಿಗೆ ಬಿಜೆಪಿ ಸೇರಿದರು, ಸಚಿವರಾದರು ಮತ್ತು ಈ ನಂತರದಲ್ಲಿ ಮತ್ತೆ ರೈತ ಹೋರಾಟಕ್ಕೆ ಬೆಂಬಲವಾಗಿ ಓಡಾಡಿದರು ಎಂಬುದನ್ನು ಬದಿಗಿಟ್ಟು, ಅವರ ಆರಂಭಿಕ ಹೋರಾಟಗಳ ಬಗ್ಗೆ ನೋಡೋಣ.

ಕರ್ನಾಟಕದಲ್ಲಿ ಚಳುವಳಿ ಕಟ್ಟುತ್ತಿರುವ ಎಲ್ಲ ಸಂಘಟನೆಗಳಿಗೂ ಇದರಲ್ಲಿ ಒಂದಿಷ್ಟು ವಿಷಯ ಇವೆ ಅನಿಸುತ್ತದೆ.

‘ಅಲ್ರೀ, ಟೊಮಾಟೋ ಸಾಸ್‌ಗೆ ಅವರೇ ರೇಟ್ ಫಿಕ್ಸ್ ಮಾಡ್ತಾರ. ಅದಕ್ಕ ಜನ ಮಾತಿಲ್ಲದ ರೊಕ್ಕ ಕೊಟ್ ತಗೋತಾರ. ಇನ್ಮ್ಯಾಲ ಟೊಮೆಟೊಕ್ಕೆ ನಾವಾ ರೇಟು ಫಿಕ್ಸ್ ಮಾಡೋ ಹಂಗಾಗಬೇಕು’ ಹೀಗೆ ಉತ್ತರ ಕರ್ನಾಟಕದ ಅದರಲ್ಲೂ ಮುಖ್ಯವಾಗಿ ಮುಂಬೈ ಕರ್ನಾಟಕದಲ್ಲಿ ಬಾಬಾಗೌಡರು ಅಂದು ಕೆಂಡದುಂಡೆಯಂತೆ ಗುಡುಗುತ್ತಿದ್ದರು. ಶಾಲಾ ಬಾಲಕರಾಗಿದ್ದಾಗ ಮತ್ತು ‘ವಕ್ಕಲ್ತನ’ ಹಿನ್ನೆಲೆಯ ನಮಗೆಲ್ಲ ಇದು ರೋಮಾಂಚನ ಸೃಷ್ಟಿಸಿದ್ದಲ್ಲದೇ, ಕ್ರಮೇಣ ಗ್ರಾಮೀಣ ಭಾರತಕ್ಕೆ ಆಗುತ್ತಿದ್ದ ಅನ್ಯಾಯದ ಬಗ್ಗೆ ಯೋಚನೆ ಮಾಡುವಂತೆ ಮಾಡುತ್ತಿತ್ತು.

ನೀವು ಗಮನಿಸಿ ನೋಡಿ, ಈಗೆಲ್ಲಾದರೂ ರಾಕೇಶ್ ಟಿಕಾಯತ್‌ರು ಚುನಾವಣೆಗೆ ನಿಂತರೆ ಗೆಲ್ಲಬಹುದಾ ಎಂಬ ಪ್ರಶ್ನೆಯನ್ನು ಊಹಿಸಿಕೊಳ್ಳಿ. ಉತ್ತರ ಕನ್ನಡದ ಸಂಸತ್ ಚುನಾವಣೆಗೆ ನಿಂತಾಗ ಶಿವರಾಮ ಕಾರಂತರ ಪರ ಎಲ್ಲ ಪ್ರಗತಿಪರ ಸಂಘಟನೆಗಳ ಬೆಂಬಲವಿತ್ತು. ಆದರೆ, ಫಲಿತಾಂಶ ಬಂದಾಗ ಕಾರಂತರು ಮೂರನೇ ಸ್ಥಾನದಲ್ಲಿದ್ದರು.

ಮತ್ತೆ ಸಂಘಟನೆಗಳ ವಿಷಯಕ್ಕೆ ಬರೋಣ, ಈ ಸಲ ಆಮ್ ಆದ್ಮಿ, ಎಸ್‌ಡಿಪಿಐ, ಕರ್ಮಾಟಕ ರಾಷ್ಟ್ರೀಯ ಸಮಿತಿ ಮುಂತಾದ ಸಂಘಟನೆಗಳು ಇತ್ತೀಚಿನ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾರಿ ಅಲ್ಲದಿದ್ದರೂ ಗಮನಾರ್ಹ ಸಾಧನೆ ಮಾಡಿವೆ.

ಆದರೆ, ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

ಬೆಳಗಾವಿಯ ಬೈಲಹೊಂಗಲದ ಚಿಕ್ಕ ಬಾಗೇವಾಡಿಯ ಪಾಟೀಲರು ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಅದಕ್ಕೆ ಅಂಟಿಕೊಂಡ ಧಾರವಾಡ ಗ್ರಾಮೀಣ ಕ್ಷೇತ್ರ ಎರಡರಲ್ಲೂ ಗೆಲ್ಲುತ್ತಾರೆ! ನಂತರ ಧಾರವಾಡ ಗ್ರಾಮೀಣದಲ್ಲಿ ಪ್ರೊಫೆಸರ್ ನಂಜುಂಡಸ್ವಾಮಿ ಗೆಲ್ಲುಲು ಸಹಕರಿಸುತ್ತಾರೆ.

ತಾತ್ವಿಕ ರೂಪು ಮತ್ತು ತಳಮಟ್ಟದ ಸಂಘಟನೆ

ಪ್ರೊಫೆಸರ್ ನಂಜುಂಡಸ್ವಾಮಿ ರಾಜ್ಯದಲ್ಲಿ ರೈತ ರೈತ ಸಂಘಟನೆ ಕಟ್ಟಿದ ಪಿತಾಮಹ ಎಂಬುದರಲ್ಲಿ ಎರಡು ಮಾತಿಲ್ಲ ಮತ್ತು ಇರಲೇಬಾರದು. ಆದರೆ ಸಂಘಟನೆ ಮಾಡುವ ಹೊಣೆ ಕೆಳಮಟ್ಟದ ಕಾರ್ಯಕರ್ತರ ಮೇಲಿರುತ್ತದೆ. ‘ಬೈಲಹೊಂಗಲದ ಚಿಕ್ಕ ಬಾಗೆವಾಡಿಯ ಭೂ ಮಾಲೀಕ ಕುಟುಂಬದ ಹಿನ್ನೆಲೆಯ ಬಾಬಾಗೌಡ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಅದ್ಭುತವಾಗಿ ರೈತರನ್ನು ಸಂಘಟಿಸಿದರು’ ಎನ್ನುತ್ತಾರೆ ಪತ್ರಕರ್ತ ರುಷಿಕೇಶ್ ದೇಸಾಯಿ.

‘ತಾಲೂಕು ಕಚೇರಿಗಳಿಗೇ ಜನ ಹೋಗಲು ಹೆದರುತ್ತಿದ್ದ ಕಾಲವದು. ಬಾಬಾಗೌಡರ ಗುಡುಗು ಹೇಗಿತ್ತೆಂದರೆ ಜನ ಸೀದಾ ತಹಸೀಲ್ದಾರ್ ಎದುರು ನಿಂತು ಪ್ರಶ್ನೆ ಕೇಳಲು ಆರಂಭಿಸಿದರು. ಊರೂರಲ್ಲಿ ‘ಗ್ರಾಮದ ಜನರ ಅನುಮತಿ ಇಲ್ಲದೇ ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರವೇಶವಿಲ್ಲ’ ಎಂಬ ಬೋರ್ಡುಗಳು ಕಾಣಿಸಿಕೊಂಡವು ಎನ್ನುತ್ತಾರೆ ಬೆಳಗಾವಿ- ಧಾರವಾಡಗಳಲ್ಲಿ ಹಿಂದೆಲ್ಲ ಅನೇಕ ಚಳುವಳಿಗಳನ್ನು ನಡೆಸಿದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ. ವೆಂಕನಗೌಡ ಪಾಟೀಲರು.

“ಒಂದು ನೋಟು, ಒಂದು ರೊಟ್ಟಿ, ಒಂದು ವೋಟು” ಎಂದು ಚುನಾವಣೆ ಮಾಡಿ ಅವರು ಎರಡು ಕ್ಷೇತ್ರದಲ್ಲಿ ಗೆದ್ದಿದ್ದರು ಎಂಬುದು ಈಗಿನ ಚಳವಳಿಗಳಿಗೆ ಸ್ಫೂರ್ತಿ ಆಗುತ್ತದೆ ಎನ್ನುತ್ತಾರೆ ಚಳುವಳಿ ಹಿನ್ನೆಲೆಯ ಡಾ. ಪಾಟೀಲ್…

ರೈತ ಸಂಘಟನೆಯಲ್ಲಿ ಉಂಟಾದ ಭಿನ್ನಮತಗಳು, ಮುಂದೆ ಬಾಬಾಗೌಡರು ಬಿಜೆಪಿ ಸೇರಿದ ಸ್ಥಿತಿ ಈ ಬಗ್ಗೆ ಬೇಕೆಂತಲೇ ಇಲ್ಲಿ ಚರ್ಚೆ ಮಾಡಿಲ್ಲ. ಅದು ಈಗಿನ ಅಗತ್ಯವೂ ಅಲ್ಲ. ಬಾಬಾಗೌಡ ಪಾಲೀಲರಿಗೆ ಶ್ರಧ್ದಾಂಜಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...