Homeಮುಖಪುಟಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

- Advertisement -
- Advertisement -

ಬಾಬಾಗೌಡ ಪಾಟೀಲರು 1998ರ ಸುಮಾರಿಗೆ ಬಿಜೆಪಿ ಸೇರಿದರು, ಸಚಿವರಾದರು ಮತ್ತು ಈ ನಂತರದಲ್ಲಿ ಮತ್ತೆ ರೈತ ಹೋರಾಟಕ್ಕೆ ಬೆಂಬಲವಾಗಿ ಓಡಾಡಿದರು ಎಂಬುದನ್ನು ಬದಿಗಿಟ್ಟು, ಅವರ ಆರಂಭಿಕ ಹೋರಾಟಗಳ ಬಗ್ಗೆ ನೋಡೋಣ.

ಕರ್ನಾಟಕದಲ್ಲಿ ಚಳುವಳಿ ಕಟ್ಟುತ್ತಿರುವ ಎಲ್ಲ ಸಂಘಟನೆಗಳಿಗೂ ಇದರಲ್ಲಿ ಒಂದಿಷ್ಟು ವಿಷಯ ಇವೆ ಅನಿಸುತ್ತದೆ.

‘ಅಲ್ರೀ, ಟೊಮಾಟೋ ಸಾಸ್‌ಗೆ ಅವರೇ ರೇಟ್ ಫಿಕ್ಸ್ ಮಾಡ್ತಾರ. ಅದಕ್ಕ ಜನ ಮಾತಿಲ್ಲದ ರೊಕ್ಕ ಕೊಟ್ ತಗೋತಾರ. ಇನ್ಮ್ಯಾಲ ಟೊಮೆಟೊಕ್ಕೆ ನಾವಾ ರೇಟು ಫಿಕ್ಸ್ ಮಾಡೋ ಹಂಗಾಗಬೇಕು’ ಹೀಗೆ ಉತ್ತರ ಕರ್ನಾಟಕದ ಅದರಲ್ಲೂ ಮುಖ್ಯವಾಗಿ ಮುಂಬೈ ಕರ್ನಾಟಕದಲ್ಲಿ ಬಾಬಾಗೌಡರು ಅಂದು ಕೆಂಡದುಂಡೆಯಂತೆ ಗುಡುಗುತ್ತಿದ್ದರು. ಶಾಲಾ ಬಾಲಕರಾಗಿದ್ದಾಗ ಮತ್ತು ‘ವಕ್ಕಲ್ತನ’ ಹಿನ್ನೆಲೆಯ ನಮಗೆಲ್ಲ ಇದು ರೋಮಾಂಚನ ಸೃಷ್ಟಿಸಿದ್ದಲ್ಲದೇ, ಕ್ರಮೇಣ ಗ್ರಾಮೀಣ ಭಾರತಕ್ಕೆ ಆಗುತ್ತಿದ್ದ ಅನ್ಯಾಯದ ಬಗ್ಗೆ ಯೋಚನೆ ಮಾಡುವಂತೆ ಮಾಡುತ್ತಿತ್ತು.

ನೀವು ಗಮನಿಸಿ ನೋಡಿ, ಈಗೆಲ್ಲಾದರೂ ರಾಕೇಶ್ ಟಿಕಾಯತ್‌ರು ಚುನಾವಣೆಗೆ ನಿಂತರೆ ಗೆಲ್ಲಬಹುದಾ ಎಂಬ ಪ್ರಶ್ನೆಯನ್ನು ಊಹಿಸಿಕೊಳ್ಳಿ. ಉತ್ತರ ಕನ್ನಡದ ಸಂಸತ್ ಚುನಾವಣೆಗೆ ನಿಂತಾಗ ಶಿವರಾಮ ಕಾರಂತರ ಪರ ಎಲ್ಲ ಪ್ರಗತಿಪರ ಸಂಘಟನೆಗಳ ಬೆಂಬಲವಿತ್ತು. ಆದರೆ, ಫಲಿತಾಂಶ ಬಂದಾಗ ಕಾರಂತರು ಮೂರನೇ ಸ್ಥಾನದಲ್ಲಿದ್ದರು.

ಮತ್ತೆ ಸಂಘಟನೆಗಳ ವಿಷಯಕ್ಕೆ ಬರೋಣ, ಈ ಸಲ ಆಮ್ ಆದ್ಮಿ, ಎಸ್‌ಡಿಪಿಐ, ಕರ್ಮಾಟಕ ರಾಷ್ಟ್ರೀಯ ಸಮಿತಿ ಮುಂತಾದ ಸಂಘಟನೆಗಳು ಇತ್ತೀಚಿನ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾರಿ ಅಲ್ಲದಿದ್ದರೂ ಗಮನಾರ್ಹ ಸಾಧನೆ ಮಾಡಿವೆ.

ಆದರೆ, ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

ಬೆಳಗಾವಿಯ ಬೈಲಹೊಂಗಲದ ಚಿಕ್ಕ ಬಾಗೇವಾಡಿಯ ಪಾಟೀಲರು ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಅದಕ್ಕೆ ಅಂಟಿಕೊಂಡ ಧಾರವಾಡ ಗ್ರಾಮೀಣ ಕ್ಷೇತ್ರ ಎರಡರಲ್ಲೂ ಗೆಲ್ಲುತ್ತಾರೆ! ನಂತರ ಧಾರವಾಡ ಗ್ರಾಮೀಣದಲ್ಲಿ ಪ್ರೊಫೆಸರ್ ನಂಜುಂಡಸ್ವಾಮಿ ಗೆಲ್ಲುಲು ಸಹಕರಿಸುತ್ತಾರೆ.

ತಾತ್ವಿಕ ರೂಪು ಮತ್ತು ತಳಮಟ್ಟದ ಸಂಘಟನೆ

ಪ್ರೊಫೆಸರ್ ನಂಜುಂಡಸ್ವಾಮಿ ರಾಜ್ಯದಲ್ಲಿ ರೈತ ರೈತ ಸಂಘಟನೆ ಕಟ್ಟಿದ ಪಿತಾಮಹ ಎಂಬುದರಲ್ಲಿ ಎರಡು ಮಾತಿಲ್ಲ ಮತ್ತು ಇರಲೇಬಾರದು. ಆದರೆ ಸಂಘಟನೆ ಮಾಡುವ ಹೊಣೆ ಕೆಳಮಟ್ಟದ ಕಾರ್ಯಕರ್ತರ ಮೇಲಿರುತ್ತದೆ. ‘ಬೈಲಹೊಂಗಲದ ಚಿಕ್ಕ ಬಾಗೆವಾಡಿಯ ಭೂ ಮಾಲೀಕ ಕುಟುಂಬದ ಹಿನ್ನೆಲೆಯ ಬಾಬಾಗೌಡ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಅದ್ಭುತವಾಗಿ ರೈತರನ್ನು ಸಂಘಟಿಸಿದರು’ ಎನ್ನುತ್ತಾರೆ ಪತ್ರಕರ್ತ ರುಷಿಕೇಶ್ ದೇಸಾಯಿ.

‘ತಾಲೂಕು ಕಚೇರಿಗಳಿಗೇ ಜನ ಹೋಗಲು ಹೆದರುತ್ತಿದ್ದ ಕಾಲವದು. ಬಾಬಾಗೌಡರ ಗುಡುಗು ಹೇಗಿತ್ತೆಂದರೆ ಜನ ಸೀದಾ ತಹಸೀಲ್ದಾರ್ ಎದುರು ನಿಂತು ಪ್ರಶ್ನೆ ಕೇಳಲು ಆರಂಭಿಸಿದರು. ಊರೂರಲ್ಲಿ ‘ಗ್ರಾಮದ ಜನರ ಅನುಮತಿ ಇಲ್ಲದೇ ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರವೇಶವಿಲ್ಲ’ ಎಂಬ ಬೋರ್ಡುಗಳು ಕಾಣಿಸಿಕೊಂಡವು ಎನ್ನುತ್ತಾರೆ ಬೆಳಗಾವಿ- ಧಾರವಾಡಗಳಲ್ಲಿ ಹಿಂದೆಲ್ಲ ಅನೇಕ ಚಳುವಳಿಗಳನ್ನು ನಡೆಸಿದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ. ವೆಂಕನಗೌಡ ಪಾಟೀಲರು.

“ಒಂದು ನೋಟು, ಒಂದು ರೊಟ್ಟಿ, ಒಂದು ವೋಟು” ಎಂದು ಚುನಾವಣೆ ಮಾಡಿ ಅವರು ಎರಡು ಕ್ಷೇತ್ರದಲ್ಲಿ ಗೆದ್ದಿದ್ದರು ಎಂಬುದು ಈಗಿನ ಚಳವಳಿಗಳಿಗೆ ಸ್ಫೂರ್ತಿ ಆಗುತ್ತದೆ ಎನ್ನುತ್ತಾರೆ ಚಳುವಳಿ ಹಿನ್ನೆಲೆಯ ಡಾ. ಪಾಟೀಲ್…

ರೈತ ಸಂಘಟನೆಯಲ್ಲಿ ಉಂಟಾದ ಭಿನ್ನಮತಗಳು, ಮುಂದೆ ಬಾಬಾಗೌಡರು ಬಿಜೆಪಿ ಸೇರಿದ ಸ್ಥಿತಿ ಈ ಬಗ್ಗೆ ಬೇಕೆಂತಲೇ ಇಲ್ಲಿ ಚರ್ಚೆ ಮಾಡಿಲ್ಲ. ಅದು ಈಗಿನ ಅಗತ್ಯವೂ ಅಲ್ಲ. ಬಾಬಾಗೌಡ ಪಾಲೀಲರಿಗೆ ಶ್ರಧ್ದಾಂಜಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...