Homeಮುಖಪುಟಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

- Advertisement -
- Advertisement -

ಬಾಬಾಗೌಡ ಪಾಟೀಲರು 1998ರ ಸುಮಾರಿಗೆ ಬಿಜೆಪಿ ಸೇರಿದರು, ಸಚಿವರಾದರು ಮತ್ತು ಈ ನಂತರದಲ್ಲಿ ಮತ್ತೆ ರೈತ ಹೋರಾಟಕ್ಕೆ ಬೆಂಬಲವಾಗಿ ಓಡಾಡಿದರು ಎಂಬುದನ್ನು ಬದಿಗಿಟ್ಟು, ಅವರ ಆರಂಭಿಕ ಹೋರಾಟಗಳ ಬಗ್ಗೆ ನೋಡೋಣ.

ಕರ್ನಾಟಕದಲ್ಲಿ ಚಳುವಳಿ ಕಟ್ಟುತ್ತಿರುವ ಎಲ್ಲ ಸಂಘಟನೆಗಳಿಗೂ ಇದರಲ್ಲಿ ಒಂದಿಷ್ಟು ವಿಷಯ ಇವೆ ಅನಿಸುತ್ತದೆ.

‘ಅಲ್ರೀ, ಟೊಮಾಟೋ ಸಾಸ್‌ಗೆ ಅವರೇ ರೇಟ್ ಫಿಕ್ಸ್ ಮಾಡ್ತಾರ. ಅದಕ್ಕ ಜನ ಮಾತಿಲ್ಲದ ರೊಕ್ಕ ಕೊಟ್ ತಗೋತಾರ. ಇನ್ಮ್ಯಾಲ ಟೊಮೆಟೊಕ್ಕೆ ನಾವಾ ರೇಟು ಫಿಕ್ಸ್ ಮಾಡೋ ಹಂಗಾಗಬೇಕು’ ಹೀಗೆ ಉತ್ತರ ಕರ್ನಾಟಕದ ಅದರಲ್ಲೂ ಮುಖ್ಯವಾಗಿ ಮುಂಬೈ ಕರ್ನಾಟಕದಲ್ಲಿ ಬಾಬಾಗೌಡರು ಅಂದು ಕೆಂಡದುಂಡೆಯಂತೆ ಗುಡುಗುತ್ತಿದ್ದರು. ಶಾಲಾ ಬಾಲಕರಾಗಿದ್ದಾಗ ಮತ್ತು ‘ವಕ್ಕಲ್ತನ’ ಹಿನ್ನೆಲೆಯ ನಮಗೆಲ್ಲ ಇದು ರೋಮಾಂಚನ ಸೃಷ್ಟಿಸಿದ್ದಲ್ಲದೇ, ಕ್ರಮೇಣ ಗ್ರಾಮೀಣ ಭಾರತಕ್ಕೆ ಆಗುತ್ತಿದ್ದ ಅನ್ಯಾಯದ ಬಗ್ಗೆ ಯೋಚನೆ ಮಾಡುವಂತೆ ಮಾಡುತ್ತಿತ್ತು.

ನೀವು ಗಮನಿಸಿ ನೋಡಿ, ಈಗೆಲ್ಲಾದರೂ ರಾಕೇಶ್ ಟಿಕಾಯತ್‌ರು ಚುನಾವಣೆಗೆ ನಿಂತರೆ ಗೆಲ್ಲಬಹುದಾ ಎಂಬ ಪ್ರಶ್ನೆಯನ್ನು ಊಹಿಸಿಕೊಳ್ಳಿ. ಉತ್ತರ ಕನ್ನಡದ ಸಂಸತ್ ಚುನಾವಣೆಗೆ ನಿಂತಾಗ ಶಿವರಾಮ ಕಾರಂತರ ಪರ ಎಲ್ಲ ಪ್ರಗತಿಪರ ಸಂಘಟನೆಗಳ ಬೆಂಬಲವಿತ್ತು. ಆದರೆ, ಫಲಿತಾಂಶ ಬಂದಾಗ ಕಾರಂತರು ಮೂರನೇ ಸ್ಥಾನದಲ್ಲಿದ್ದರು.

ಮತ್ತೆ ಸಂಘಟನೆಗಳ ವಿಷಯಕ್ಕೆ ಬರೋಣ, ಈ ಸಲ ಆಮ್ ಆದ್ಮಿ, ಎಸ್‌ಡಿಪಿಐ, ಕರ್ಮಾಟಕ ರಾಷ್ಟ್ರೀಯ ಸಮಿತಿ ಮುಂತಾದ ಸಂಘಟನೆಗಳು ಇತ್ತೀಚಿನ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾರಿ ಅಲ್ಲದಿದ್ದರೂ ಗಮನಾರ್ಹ ಸಾಧನೆ ಮಾಡಿವೆ.

ಆದರೆ, ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

ಬೆಳಗಾವಿಯ ಬೈಲಹೊಂಗಲದ ಚಿಕ್ಕ ಬಾಗೇವಾಡಿಯ ಪಾಟೀಲರು ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಅದಕ್ಕೆ ಅಂಟಿಕೊಂಡ ಧಾರವಾಡ ಗ್ರಾಮೀಣ ಕ್ಷೇತ್ರ ಎರಡರಲ್ಲೂ ಗೆಲ್ಲುತ್ತಾರೆ! ನಂತರ ಧಾರವಾಡ ಗ್ರಾಮೀಣದಲ್ಲಿ ಪ್ರೊಫೆಸರ್ ನಂಜುಂಡಸ್ವಾಮಿ ಗೆಲ್ಲುಲು ಸಹಕರಿಸುತ್ತಾರೆ.

ತಾತ್ವಿಕ ರೂಪು ಮತ್ತು ತಳಮಟ್ಟದ ಸಂಘಟನೆ

ಪ್ರೊಫೆಸರ್ ನಂಜುಂಡಸ್ವಾಮಿ ರಾಜ್ಯದಲ್ಲಿ ರೈತ ರೈತ ಸಂಘಟನೆ ಕಟ್ಟಿದ ಪಿತಾಮಹ ಎಂಬುದರಲ್ಲಿ ಎರಡು ಮಾತಿಲ್ಲ ಮತ್ತು ಇರಲೇಬಾರದು. ಆದರೆ ಸಂಘಟನೆ ಮಾಡುವ ಹೊಣೆ ಕೆಳಮಟ್ಟದ ಕಾರ್ಯಕರ್ತರ ಮೇಲಿರುತ್ತದೆ. ‘ಬೈಲಹೊಂಗಲದ ಚಿಕ್ಕ ಬಾಗೆವಾಡಿಯ ಭೂ ಮಾಲೀಕ ಕುಟುಂಬದ ಹಿನ್ನೆಲೆಯ ಬಾಬಾಗೌಡ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಅದ್ಭುತವಾಗಿ ರೈತರನ್ನು ಸಂಘಟಿಸಿದರು’ ಎನ್ನುತ್ತಾರೆ ಪತ್ರಕರ್ತ ರುಷಿಕೇಶ್ ದೇಸಾಯಿ.

‘ತಾಲೂಕು ಕಚೇರಿಗಳಿಗೇ ಜನ ಹೋಗಲು ಹೆದರುತ್ತಿದ್ದ ಕಾಲವದು. ಬಾಬಾಗೌಡರ ಗುಡುಗು ಹೇಗಿತ್ತೆಂದರೆ ಜನ ಸೀದಾ ತಹಸೀಲ್ದಾರ್ ಎದುರು ನಿಂತು ಪ್ರಶ್ನೆ ಕೇಳಲು ಆರಂಭಿಸಿದರು. ಊರೂರಲ್ಲಿ ‘ಗ್ರಾಮದ ಜನರ ಅನುಮತಿ ಇಲ್ಲದೇ ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರವೇಶವಿಲ್ಲ’ ಎಂಬ ಬೋರ್ಡುಗಳು ಕಾಣಿಸಿಕೊಂಡವು ಎನ್ನುತ್ತಾರೆ ಬೆಳಗಾವಿ- ಧಾರವಾಡಗಳಲ್ಲಿ ಹಿಂದೆಲ್ಲ ಅನೇಕ ಚಳುವಳಿಗಳನ್ನು ನಡೆಸಿದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ. ವೆಂಕನಗೌಡ ಪಾಟೀಲರು.

“ಒಂದು ನೋಟು, ಒಂದು ರೊಟ್ಟಿ, ಒಂದು ವೋಟು” ಎಂದು ಚುನಾವಣೆ ಮಾಡಿ ಅವರು ಎರಡು ಕ್ಷೇತ್ರದಲ್ಲಿ ಗೆದ್ದಿದ್ದರು ಎಂಬುದು ಈಗಿನ ಚಳವಳಿಗಳಿಗೆ ಸ್ಫೂರ್ತಿ ಆಗುತ್ತದೆ ಎನ್ನುತ್ತಾರೆ ಚಳುವಳಿ ಹಿನ್ನೆಲೆಯ ಡಾ. ಪಾಟೀಲ್…

ರೈತ ಸಂಘಟನೆಯಲ್ಲಿ ಉಂಟಾದ ಭಿನ್ನಮತಗಳು, ಮುಂದೆ ಬಾಬಾಗೌಡರು ಬಿಜೆಪಿ ಸೇರಿದ ಸ್ಥಿತಿ ಈ ಬಗ್ಗೆ ಬೇಕೆಂತಲೇ ಇಲ್ಲಿ ಚರ್ಚೆ ಮಾಡಿಲ್ಲ. ಅದು ಈಗಿನ ಅಗತ್ಯವೂ ಅಲ್ಲ. ಬಾಬಾಗೌಡ ಪಾಲೀಲರಿಗೆ ಶ್ರಧ್ದಾಂಜಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...