Homeಮುಖಪುಟಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

- Advertisement -
- Advertisement -

ಬಾಬಾಗೌಡ ಪಾಟೀಲರು 1998ರ ಸುಮಾರಿಗೆ ಬಿಜೆಪಿ ಸೇರಿದರು, ಸಚಿವರಾದರು ಮತ್ತು ಈ ನಂತರದಲ್ಲಿ ಮತ್ತೆ ರೈತ ಹೋರಾಟಕ್ಕೆ ಬೆಂಬಲವಾಗಿ ಓಡಾಡಿದರು ಎಂಬುದನ್ನು ಬದಿಗಿಟ್ಟು, ಅವರ ಆರಂಭಿಕ ಹೋರಾಟಗಳ ಬಗ್ಗೆ ನೋಡೋಣ.

ಕರ್ನಾಟಕದಲ್ಲಿ ಚಳುವಳಿ ಕಟ್ಟುತ್ತಿರುವ ಎಲ್ಲ ಸಂಘಟನೆಗಳಿಗೂ ಇದರಲ್ಲಿ ಒಂದಿಷ್ಟು ವಿಷಯ ಇವೆ ಅನಿಸುತ್ತದೆ.

‘ಅಲ್ರೀ, ಟೊಮಾಟೋ ಸಾಸ್‌ಗೆ ಅವರೇ ರೇಟ್ ಫಿಕ್ಸ್ ಮಾಡ್ತಾರ. ಅದಕ್ಕ ಜನ ಮಾತಿಲ್ಲದ ರೊಕ್ಕ ಕೊಟ್ ತಗೋತಾರ. ಇನ್ಮ್ಯಾಲ ಟೊಮೆಟೊಕ್ಕೆ ನಾವಾ ರೇಟು ಫಿಕ್ಸ್ ಮಾಡೋ ಹಂಗಾಗಬೇಕು’ ಹೀಗೆ ಉತ್ತರ ಕರ್ನಾಟಕದ ಅದರಲ್ಲೂ ಮುಖ್ಯವಾಗಿ ಮುಂಬೈ ಕರ್ನಾಟಕದಲ್ಲಿ ಬಾಬಾಗೌಡರು ಅಂದು ಕೆಂಡದುಂಡೆಯಂತೆ ಗುಡುಗುತ್ತಿದ್ದರು. ಶಾಲಾ ಬಾಲಕರಾಗಿದ್ದಾಗ ಮತ್ತು ‘ವಕ್ಕಲ್ತನ’ ಹಿನ್ನೆಲೆಯ ನಮಗೆಲ್ಲ ಇದು ರೋಮಾಂಚನ ಸೃಷ್ಟಿಸಿದ್ದಲ್ಲದೇ, ಕ್ರಮೇಣ ಗ್ರಾಮೀಣ ಭಾರತಕ್ಕೆ ಆಗುತ್ತಿದ್ದ ಅನ್ಯಾಯದ ಬಗ್ಗೆ ಯೋಚನೆ ಮಾಡುವಂತೆ ಮಾಡುತ್ತಿತ್ತು.

ನೀವು ಗಮನಿಸಿ ನೋಡಿ, ಈಗೆಲ್ಲಾದರೂ ರಾಕೇಶ್ ಟಿಕಾಯತ್‌ರು ಚುನಾವಣೆಗೆ ನಿಂತರೆ ಗೆಲ್ಲಬಹುದಾ ಎಂಬ ಪ್ರಶ್ನೆಯನ್ನು ಊಹಿಸಿಕೊಳ್ಳಿ. ಉತ್ತರ ಕನ್ನಡದ ಸಂಸತ್ ಚುನಾವಣೆಗೆ ನಿಂತಾಗ ಶಿವರಾಮ ಕಾರಂತರ ಪರ ಎಲ್ಲ ಪ್ರಗತಿಪರ ಸಂಘಟನೆಗಳ ಬೆಂಬಲವಿತ್ತು. ಆದರೆ, ಫಲಿತಾಂಶ ಬಂದಾಗ ಕಾರಂತರು ಮೂರನೇ ಸ್ಥಾನದಲ್ಲಿದ್ದರು.

ಮತ್ತೆ ಸಂಘಟನೆಗಳ ವಿಷಯಕ್ಕೆ ಬರೋಣ, ಈ ಸಲ ಆಮ್ ಆದ್ಮಿ, ಎಸ್‌ಡಿಪಿಐ, ಕರ್ಮಾಟಕ ರಾಷ್ಟ್ರೀಯ ಸಮಿತಿ ಮುಂತಾದ ಸಂಘಟನೆಗಳು ಇತ್ತೀಚಿನ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾರಿ ಅಲ್ಲದಿದ್ದರೂ ಗಮನಾರ್ಹ ಸಾಧನೆ ಮಾಡಿವೆ.

ಆದರೆ, ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

ಬೆಳಗಾವಿಯ ಬೈಲಹೊಂಗಲದ ಚಿಕ್ಕ ಬಾಗೇವಾಡಿಯ ಪಾಟೀಲರು ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಅದಕ್ಕೆ ಅಂಟಿಕೊಂಡ ಧಾರವಾಡ ಗ್ರಾಮೀಣ ಕ್ಷೇತ್ರ ಎರಡರಲ್ಲೂ ಗೆಲ್ಲುತ್ತಾರೆ! ನಂತರ ಧಾರವಾಡ ಗ್ರಾಮೀಣದಲ್ಲಿ ಪ್ರೊಫೆಸರ್ ನಂಜುಂಡಸ್ವಾಮಿ ಗೆಲ್ಲುಲು ಸಹಕರಿಸುತ್ತಾರೆ.

ತಾತ್ವಿಕ ರೂಪು ಮತ್ತು ತಳಮಟ್ಟದ ಸಂಘಟನೆ

ಪ್ರೊಫೆಸರ್ ನಂಜುಂಡಸ್ವಾಮಿ ರಾಜ್ಯದಲ್ಲಿ ರೈತ ರೈತ ಸಂಘಟನೆ ಕಟ್ಟಿದ ಪಿತಾಮಹ ಎಂಬುದರಲ್ಲಿ ಎರಡು ಮಾತಿಲ್ಲ ಮತ್ತು ಇರಲೇಬಾರದು. ಆದರೆ ಸಂಘಟನೆ ಮಾಡುವ ಹೊಣೆ ಕೆಳಮಟ್ಟದ ಕಾರ್ಯಕರ್ತರ ಮೇಲಿರುತ್ತದೆ. ‘ಬೈಲಹೊಂಗಲದ ಚಿಕ್ಕ ಬಾಗೆವಾಡಿಯ ಭೂ ಮಾಲೀಕ ಕುಟುಂಬದ ಹಿನ್ನೆಲೆಯ ಬಾಬಾಗೌಡ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಅದ್ಭುತವಾಗಿ ರೈತರನ್ನು ಸಂಘಟಿಸಿದರು’ ಎನ್ನುತ್ತಾರೆ ಪತ್ರಕರ್ತ ರುಷಿಕೇಶ್ ದೇಸಾಯಿ.

‘ತಾಲೂಕು ಕಚೇರಿಗಳಿಗೇ ಜನ ಹೋಗಲು ಹೆದರುತ್ತಿದ್ದ ಕಾಲವದು. ಬಾಬಾಗೌಡರ ಗುಡುಗು ಹೇಗಿತ್ತೆಂದರೆ ಜನ ಸೀದಾ ತಹಸೀಲ್ದಾರ್ ಎದುರು ನಿಂತು ಪ್ರಶ್ನೆ ಕೇಳಲು ಆರಂಭಿಸಿದರು. ಊರೂರಲ್ಲಿ ‘ಗ್ರಾಮದ ಜನರ ಅನುಮತಿ ಇಲ್ಲದೇ ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರವೇಶವಿಲ್ಲ’ ಎಂಬ ಬೋರ್ಡುಗಳು ಕಾಣಿಸಿಕೊಂಡವು ಎನ್ನುತ್ತಾರೆ ಬೆಳಗಾವಿ- ಧಾರವಾಡಗಳಲ್ಲಿ ಹಿಂದೆಲ್ಲ ಅನೇಕ ಚಳುವಳಿಗಳನ್ನು ನಡೆಸಿದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ. ವೆಂಕನಗೌಡ ಪಾಟೀಲರು.

“ಒಂದು ನೋಟು, ಒಂದು ರೊಟ್ಟಿ, ಒಂದು ವೋಟು” ಎಂದು ಚುನಾವಣೆ ಮಾಡಿ ಅವರು ಎರಡು ಕ್ಷೇತ್ರದಲ್ಲಿ ಗೆದ್ದಿದ್ದರು ಎಂಬುದು ಈಗಿನ ಚಳವಳಿಗಳಿಗೆ ಸ್ಫೂರ್ತಿ ಆಗುತ್ತದೆ ಎನ್ನುತ್ತಾರೆ ಚಳುವಳಿ ಹಿನ್ನೆಲೆಯ ಡಾ. ಪಾಟೀಲ್…

ರೈತ ಸಂಘಟನೆಯಲ್ಲಿ ಉಂಟಾದ ಭಿನ್ನಮತಗಳು, ಮುಂದೆ ಬಾಬಾಗೌಡರು ಬಿಜೆಪಿ ಸೇರಿದ ಸ್ಥಿತಿ ಈ ಬಗ್ಗೆ ಬೇಕೆಂತಲೇ ಇಲ್ಲಿ ಚರ್ಚೆ ಮಾಡಿಲ್ಲ. ಅದು ಈಗಿನ ಅಗತ್ಯವೂ ಅಲ್ಲ. ಬಾಬಾಗೌಡ ಪಾಲೀಲರಿಗೆ ಶ್ರಧ್ದಾಂಜಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...