Homeಮುಖಪುಟಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

- Advertisement -
- Advertisement -

ಬಾಬಾಗೌಡ ಪಾಟೀಲರು 1998ರ ಸುಮಾರಿಗೆ ಬಿಜೆಪಿ ಸೇರಿದರು, ಸಚಿವರಾದರು ಮತ್ತು ಈ ನಂತರದಲ್ಲಿ ಮತ್ತೆ ರೈತ ಹೋರಾಟಕ್ಕೆ ಬೆಂಬಲವಾಗಿ ಓಡಾಡಿದರು ಎಂಬುದನ್ನು ಬದಿಗಿಟ್ಟು, ಅವರ ಆರಂಭಿಕ ಹೋರಾಟಗಳ ಬಗ್ಗೆ ನೋಡೋಣ.

ಕರ್ನಾಟಕದಲ್ಲಿ ಚಳುವಳಿ ಕಟ್ಟುತ್ತಿರುವ ಎಲ್ಲ ಸಂಘಟನೆಗಳಿಗೂ ಇದರಲ್ಲಿ ಒಂದಿಷ್ಟು ವಿಷಯ ಇವೆ ಅನಿಸುತ್ತದೆ.

‘ಅಲ್ರೀ, ಟೊಮಾಟೋ ಸಾಸ್‌ಗೆ ಅವರೇ ರೇಟ್ ಫಿಕ್ಸ್ ಮಾಡ್ತಾರ. ಅದಕ್ಕ ಜನ ಮಾತಿಲ್ಲದ ರೊಕ್ಕ ಕೊಟ್ ತಗೋತಾರ. ಇನ್ಮ್ಯಾಲ ಟೊಮೆಟೊಕ್ಕೆ ನಾವಾ ರೇಟು ಫಿಕ್ಸ್ ಮಾಡೋ ಹಂಗಾಗಬೇಕು’ ಹೀಗೆ ಉತ್ತರ ಕರ್ನಾಟಕದ ಅದರಲ್ಲೂ ಮುಖ್ಯವಾಗಿ ಮುಂಬೈ ಕರ್ನಾಟಕದಲ್ಲಿ ಬಾಬಾಗೌಡರು ಅಂದು ಕೆಂಡದುಂಡೆಯಂತೆ ಗುಡುಗುತ್ತಿದ್ದರು. ಶಾಲಾ ಬಾಲಕರಾಗಿದ್ದಾಗ ಮತ್ತು ‘ವಕ್ಕಲ್ತನ’ ಹಿನ್ನೆಲೆಯ ನಮಗೆಲ್ಲ ಇದು ರೋಮಾಂಚನ ಸೃಷ್ಟಿಸಿದ್ದಲ್ಲದೇ, ಕ್ರಮೇಣ ಗ್ರಾಮೀಣ ಭಾರತಕ್ಕೆ ಆಗುತ್ತಿದ್ದ ಅನ್ಯಾಯದ ಬಗ್ಗೆ ಯೋಚನೆ ಮಾಡುವಂತೆ ಮಾಡುತ್ತಿತ್ತು.

ನೀವು ಗಮನಿಸಿ ನೋಡಿ, ಈಗೆಲ್ಲಾದರೂ ರಾಕೇಶ್ ಟಿಕಾಯತ್‌ರು ಚುನಾವಣೆಗೆ ನಿಂತರೆ ಗೆಲ್ಲಬಹುದಾ ಎಂಬ ಪ್ರಶ್ನೆಯನ್ನು ಊಹಿಸಿಕೊಳ್ಳಿ. ಉತ್ತರ ಕನ್ನಡದ ಸಂಸತ್ ಚುನಾವಣೆಗೆ ನಿಂತಾಗ ಶಿವರಾಮ ಕಾರಂತರ ಪರ ಎಲ್ಲ ಪ್ರಗತಿಪರ ಸಂಘಟನೆಗಳ ಬೆಂಬಲವಿತ್ತು. ಆದರೆ, ಫಲಿತಾಂಶ ಬಂದಾಗ ಕಾರಂತರು ಮೂರನೇ ಸ್ಥಾನದಲ್ಲಿದ್ದರು.

ಮತ್ತೆ ಸಂಘಟನೆಗಳ ವಿಷಯಕ್ಕೆ ಬರೋಣ, ಈ ಸಲ ಆಮ್ ಆದ್ಮಿ, ಎಸ್‌ಡಿಪಿಐ, ಕರ್ಮಾಟಕ ರಾಷ್ಟ್ರೀಯ ಸಮಿತಿ ಮುಂತಾದ ಸಂಘಟನೆಗಳು ಇತ್ತೀಚಿನ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾರಿ ಅಲ್ಲದಿದ್ದರೂ ಗಮನಾರ್ಹ ಸಾಧನೆ ಮಾಡಿವೆ.

ಆದರೆ, ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

ಬೆಳಗಾವಿಯ ಬೈಲಹೊಂಗಲದ ಚಿಕ್ಕ ಬಾಗೇವಾಡಿಯ ಪಾಟೀಲರು ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಅದಕ್ಕೆ ಅಂಟಿಕೊಂಡ ಧಾರವಾಡ ಗ್ರಾಮೀಣ ಕ್ಷೇತ್ರ ಎರಡರಲ್ಲೂ ಗೆಲ್ಲುತ್ತಾರೆ! ನಂತರ ಧಾರವಾಡ ಗ್ರಾಮೀಣದಲ್ಲಿ ಪ್ರೊಫೆಸರ್ ನಂಜುಂಡಸ್ವಾಮಿ ಗೆಲ್ಲುಲು ಸಹಕರಿಸುತ್ತಾರೆ.

ತಾತ್ವಿಕ ರೂಪು ಮತ್ತು ತಳಮಟ್ಟದ ಸಂಘಟನೆ

ಪ್ರೊಫೆಸರ್ ನಂಜುಂಡಸ್ವಾಮಿ ರಾಜ್ಯದಲ್ಲಿ ರೈತ ರೈತ ಸಂಘಟನೆ ಕಟ್ಟಿದ ಪಿತಾಮಹ ಎಂಬುದರಲ್ಲಿ ಎರಡು ಮಾತಿಲ್ಲ ಮತ್ತು ಇರಲೇಬಾರದು. ಆದರೆ ಸಂಘಟನೆ ಮಾಡುವ ಹೊಣೆ ಕೆಳಮಟ್ಟದ ಕಾರ್ಯಕರ್ತರ ಮೇಲಿರುತ್ತದೆ. ‘ಬೈಲಹೊಂಗಲದ ಚಿಕ್ಕ ಬಾಗೆವಾಡಿಯ ಭೂ ಮಾಲೀಕ ಕುಟುಂಬದ ಹಿನ್ನೆಲೆಯ ಬಾಬಾಗೌಡ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಅದ್ಭುತವಾಗಿ ರೈತರನ್ನು ಸಂಘಟಿಸಿದರು’ ಎನ್ನುತ್ತಾರೆ ಪತ್ರಕರ್ತ ರುಷಿಕೇಶ್ ದೇಸಾಯಿ.

‘ತಾಲೂಕು ಕಚೇರಿಗಳಿಗೇ ಜನ ಹೋಗಲು ಹೆದರುತ್ತಿದ್ದ ಕಾಲವದು. ಬಾಬಾಗೌಡರ ಗುಡುಗು ಹೇಗಿತ್ತೆಂದರೆ ಜನ ಸೀದಾ ತಹಸೀಲ್ದಾರ್ ಎದುರು ನಿಂತು ಪ್ರಶ್ನೆ ಕೇಳಲು ಆರಂಭಿಸಿದರು. ಊರೂರಲ್ಲಿ ‘ಗ್ರಾಮದ ಜನರ ಅನುಮತಿ ಇಲ್ಲದೇ ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರವೇಶವಿಲ್ಲ’ ಎಂಬ ಬೋರ್ಡುಗಳು ಕಾಣಿಸಿಕೊಂಡವು ಎನ್ನುತ್ತಾರೆ ಬೆಳಗಾವಿ- ಧಾರವಾಡಗಳಲ್ಲಿ ಹಿಂದೆಲ್ಲ ಅನೇಕ ಚಳುವಳಿಗಳನ್ನು ನಡೆಸಿದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ. ವೆಂಕನಗೌಡ ಪಾಟೀಲರು.

“ಒಂದು ನೋಟು, ಒಂದು ರೊಟ್ಟಿ, ಒಂದು ವೋಟು” ಎಂದು ಚುನಾವಣೆ ಮಾಡಿ ಅವರು ಎರಡು ಕ್ಷೇತ್ರದಲ್ಲಿ ಗೆದ್ದಿದ್ದರು ಎಂಬುದು ಈಗಿನ ಚಳವಳಿಗಳಿಗೆ ಸ್ಫೂರ್ತಿ ಆಗುತ್ತದೆ ಎನ್ನುತ್ತಾರೆ ಚಳುವಳಿ ಹಿನ್ನೆಲೆಯ ಡಾ. ಪಾಟೀಲ್…

ರೈತ ಸಂಘಟನೆಯಲ್ಲಿ ಉಂಟಾದ ಭಿನ್ನಮತಗಳು, ಮುಂದೆ ಬಾಬಾಗೌಡರು ಬಿಜೆಪಿ ಸೇರಿದ ಸ್ಥಿತಿ ಈ ಬಗ್ಗೆ ಬೇಕೆಂತಲೇ ಇಲ್ಲಿ ಚರ್ಚೆ ಮಾಡಿಲ್ಲ. ಅದು ಈಗಿನ ಅಗತ್ಯವೂ ಅಲ್ಲ. ಬಾಬಾಗೌಡ ಪಾಲೀಲರಿಗೆ ಶ್ರಧ್ದಾಂಜಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...