Homeಆರೋಗ್ಯವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

- Advertisement -
- Advertisement -

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಎರಡು ಪ್ರತಿಷ್ಠಿತ ಅಂತರರಾಷ್ಟ್ರೀಯ ವಿಜ್ಞಾನ ಪತ್ರಿಕಗೆಳಾದ ‘ಸೈನ್ಸ್’ ಮತ್ತು ‘ಸೆಲ್’ ಪತ್ರಿಕೆಗಳು ಭಾರತೀಯರ ಪುರಾತನ ಇತಿಹಾಸಕ್ಕೆ ಸಂಬಂಧಿಸಿದ ಬಹುಮುಖ್ಯವಾದ ಎರಡು ವರದಿಗಳನ್ನು ಪ್ರಕಟಿಸಿದವು. ದುರದೃಷ್ಟವಶಾತ್ ಇದು ನಮ್ಮ ಮಾಧ್ಯಮಗಳಲ್ಲಿ ಮತ್ತು ಅಕಡೆಮಿಕ್ ವಲಯಗಳಲ್ಲಿ ಎಷ್ಟು ಪ್ರಾಮುಖ್ಯತೆ ಪಡೆದುಕೊಳ್ಳಬೇಕಿತ್ತೋ ಅಷ್ಟನ್ನು ಪಡೆದುಕೊಳ್ಳಲೇ ಇಲ್ಲ. ಇದರಲ್ಲಿ ಹಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡಿರುವುದು ಮೇಲ್ನೋಟಕ್ಕೇ ತಿಳಿಯುತ್ತದೆ.

ಭಾರತದ ಪ್ರಾಚೀನ ಇತಿಹಾಸದ ಬಗ್ಗೆ ಇದುವರೆಗೂ ಇತಿಹಾಸಕಾರರಲ್ಲಿ ಒಮ್ಮತವಿಲ್ಲ. ಇಲ್ಲಿ ಎಡ-ಬಲ ದೃಷ್ಟಿಕೋನಗಳು ಇತಿಹಾಸ ರಚನೆಯ ಮೇಲೆ ಗಾಢವಾದ ಪ್ರಭಾವ ಹೊಂದಿವೆ. ಬಲಪಂಥೀಯ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಬಹಳ ಆದ್ಯತೆಯ ಮೇಲೆ ಇತಿಹಾಸ ರಚನೆಯ ಅಂಗಗಳ ಮೇಲೆ ಕೆಂಗಣ್ಣು ಬೀರುತ್ತದೆ. ಹಿಂದೆ 2002-03ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆರ್‌ಎಸ್‍ಎಸ್ ಸೂತ್ರಧಾರಿಗಳು ಉನ್ನತ ಮಟ್ಟದ ಇತಿಹಾಸದ ಅಂಗಗಳಲ್ಲಿದ್ದ, ತಮ್ಮ ದೃಷ್ಟಿಕೋನಕ್ಕೆ ಸರಿ ಹೊಂದದವರನ್ನೆಲ್ಲಾ ಬದಲಿಸಿದ್ದರು. ಈಗ ನರೇಂದ್ರ ಮೋದಿಯ ಅಧಿಕಾರದಲ್ಲಿ ಇನ್ನೂ ಹತ್ತು ಹೆಜ್ಜೆ ಮುಂದೆ ಹೋಗಿದ್ದಾರೆ. ವೇದಕಾಲದಲ್ಲಿ ಇತ್ತೆಂದು ಹೇಳಲಾಗುವ ‘ಸರಸ್ವತಿ’ ನದಿಯ ಕುರಿತು ಸಂಶೋಧನೆ ನಡೆಸಲು ಇವರು ಕೈಗೊಂಡಿರುವ ಕ್ರಮ ಇದಕ್ಕೆ ಇತ್ತೀಚಿನ ನಿದರ್ಶನ.

ಆದರೆ ಇದುವರೆಗೆ ಯಾವುದನ್ನು ಇತಿಹಾಸಕಾರರಿಂದ, ಪ್ರಾಕ್ತನಶಾತ್ರಜ್ಞರಿಂದ, ಭಾಷಾತಜ್ಞರಿಂದ ಮಾಡಲು ಸಾಧ್ಯವಿರಲಿಲ್ಲವೋ ಅದನ್ನು ಇಂದಿನ ತಳಿ ವಿಜ್ಞಾನ ಬಹುತೇಕ ಸಾಧಿಸಿದೆ ಎನ್ನಬಹುದು. ಅದು ಮನುಷ್ಯನ ಇತಿಹಾಸಕ್ಕೆ ವಿಜ್ಞಾನದ ಸ್ಪರ್ಶ ನೀಡಿಯಾದರೂ ಅಲ್ಲಗಳೆಯಲಾಗದಂತಹ ಮಾನವ ಇತಿಹಾಸವನ್ನು ನಿರೂಪಿಸುವ ಕೆಲಸ. ವಂಶವಾಹಿಗಳ ಸಂಶೋಧನೆಯಲ್ಲಿ ಇದು ಇಂದು ಸಾಧ್ಯವಾಗಿದೆ.

ವಂಶವಾಹಿಗಳ (ಜೀನ್ಸ್) ಕುರಿತ ಮನುಷ್ಯನ ತಿಳಿವಳಿಕೆಗೆ ಶತಮಾನಗಳ ಇತಿಹಾಸವಿದ್ದರೂ ಅವುಗಳಲ್ಲಿ ಅಡಗಿರುವ ಅಗಾಧ ಮಾಹಿತಿಯನ್ನು ಮನುಕುಲದ ಇತಿಹಾಸ ಶೋಧನೆಗೆ ಬಳಸುವ ಪ್ರಕ್ರಿಯೆ ಶುರುವಾಗಿದ್ದು ಮಾತ್ರ ತೀರಾ ಇತ್ತೀಚೆಗೆ. ನಮ್ಮ ಜೀವಕೋಶಗಳ ನ್ಯೂಕ್ಲಿಯಸ್ ಒಳಗಿನ ವರ್ಣತಂತುಗಳನ್ನು ರೂಪಿಸಿರುವ ನಾಲ್ಕು ರಾಸಾಯನಿಕ ನ್ಯೂಕ್ಲಿಯೋಟೈಡ್‍ಗಳಿಂದ (ಎ-ಸಿ-ಟಿ-ಜಿ- ಅಡೆನೈನ್, ಸೈಟೊಸಿನ್, ಥೈಮೈನ್, ಗುವಾನಿನ್) ರಚಿತವಾದ ಸುರುಳಿಯಾಕಾರದ ಡಿಎನ್‍ಎ ಎಳೆಗಳು ತಮ್ಮೊಳಗೆ ಲಕ್ಷಾಂತರ ವರ್ಷಗಳ ಇತಿಹಾಸವನ್ನೇ ಅಡಗಿಸಿಕೊಂಡಿರುತ್ತವೆ ಎಂಬುದು ವಿಸ್ಮಯವೆನಿಸಿದರೂ ಸತ್ಯ ಸಂಗತಿ. ಇದನ್ನು ಮನುಷ್ಯ ಸರಿಯಾಗಿ ಮನವರಿಕೆ ಮಾಡಿಕೊಂಡಿದ್ದು ಕೇವಲ ಎರಡು ದಶಕಗಳ ಈಚೆಗೆ ಎನ್ನಬಹುದು. 2001ರಲ್ಲಿ ವಿಜ್ಞಾನಿಗಳು ಮಾನವ ಜಿನೋಮ್ ಯೋಜನೆಯ (ಜಿನೋಮ್ ಎಂದರೆ ಒಂದು ಜೀವಿಯ ವಂಶವಾಹಿಗಳ ಒಟ್ಟು ಜೋಡಣೆ) ಮೂಲಕ ಅಧ್ಯಯನ ನಡೆಸಲು ತೊಡಗಿದಂದಿನಿಂದ ನಂತರದ ಈ ಎರಡು ದಶಕಗಳಲ್ಲಿ ಅಗಾಧ ಮಾಹಿತಿಯನ್ನು ತಳಿ ವಿಜ್ಞಾನಿಗಳು ಕಲೆಹಾಕಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ ಪ್ರಪಂಚದ ಬಹುತೇಕ ಎಲ್ಲಾ ಜನಾಂಗೀಯ ಹಾಗೂ ಪ್ರಾದೇಶಿಕ ಭಿನ್ನತೆಗಳ ಜನರ ಡಿಎನ್‍ಎ ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಅವು ಒದಗಿಸಿರುವ ಮಾಹಿತಿ, ತಿಳುವಳಿಕೆಯನ್ನು ತಳಿ ವಿಜ್ಞಾನಿ ಡೇವಿಡ್ ರೀಚ್ ಡಿಎನ್‍ಎಯನ್ನು ಮನುಷ್ಯನ ಗತ ಇತಿಹಾಸದ ವಿವಿಧ ಹಂತಗಳ ಕುರಿತು ಮಾಹಿತಿಯನ್ನು ಒದಗಿಸುವ ‘ಪುರಾತನ ಡಿಎನ್‍ಎ’ ಎಂದೇ ಕರೆದಿದ್ದಾರೆ. ಈ ‘ಪುರಾತನ ಡಿಎನ್‍ಎ’ ನಮ್ಮ ಗತ ಇತಿಹಾಸವನ್ನು ಶೋಧಿಸಿ ಒರೆಗೆ ಹಚ್ಚಲು ಬೇಕಾದ ಅಮೂಲ್ಯ ಸಾಮಗ್ರಿಯನ್ನು ಒದಗಿಸುತ್ತದೆ. ಸದ್ಯದ ಮಟ್ಟಿಗೆ ಇಡೀ ಜಗತ್ತಿನಲ್ಲಿ ಮನುಷ್ಯನ ಚರಿತ್ರೆಯಲ್ಲಿ ನಡೆದಿರುವ ಎಲ್ಲಾ ವಲಸೆಗಳ ಇತಿಹಾಸವನ್ನು, ವಲಸೆಗಳ ಸ್ವರೂಪಗಳನ್ನು, ಜನಾಂಗೀಯ ಸಂಬಂಧಗಳನ್ನು ಸ್ಪಷ ರೂಪದಲ್ಲಿ ಮುಂದಿಡಲು ಈ ‘ಪುರಾತನ ಡಿಎನ್‍ಎ’ ಯಶಸ್ವಿಯಾಗಿದೆ ಎನ್ನಬಹುದು.

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

ಭಾರತದ ಮಟ್ಟಿಗೆ ಹೇಳುವುದಾದರೆ ಇದುವರೆಗೆ ನಡೆದಿರುವ ಪುರಾತನ ಡಿಎನ್‍ಎ ಸಂಶೋಧನೆಗಳು ಭಾರತದ ಪ್ರಾಚೀನ ಜನಾಂಗೀಯ ವಲಸೆಗಳ ಕುರಿತು, ಇಲ್ಲಿ ಸಂಭವಿಸಿರುವ ಜನಾಂಗೀಯ ಸಂಕರಗಳ ಕುರಿತು, ಯಾವಜನಾಂಗೀಯ, ಭಾಷಿಕ ಸಮುದಾಯಗಳು ಯಾರ ಮೇಲೆ ಯಾವ ಕಾಲಘಟ್ಟದಲ್ಲಿ ಆಕ್ರಮಣಕಾರಿಯಾಗಿ ವರ್ತಿಸಿದವು ಎಂಬ ಕುರಿತು, ಇಲ್ಲಿ ಜಾತಿಗಳು ಯಾವಾಗ, ಹೇಗೆ ಹುಟ್ಟಿಕೊಂಡವು ಎಂಬ ಕುರಿತು, ಈ ಜಾತಿಕಟ್ಟು ಕಟ್ಟಳೆಗಳು ಉಂಟು ಮಾಡಿರುವ ಜೈವಿಕ ಪರಿಣಾಮಗಳ ಕುರಿತು, ಹೀಗೆ ನಾನಾ ಚಾರಿತ್ರಿಕ ಸಂಗತಿಗಳ ಕುರಿತು ಬೆಳಕು ಚೆಲ್ಲಿವೆ. ಈ ಸಂಶೋಧನೆಗಳ ಬೆಳಕಿನಲ್ಲಿ ನಾವು ನಮ್ಮ ದೇಶದ ಚರಿತ್ರೆಯನ್ನು ಮತ್ತಷ್ಟು ನಿಖರವಾಗಿ ಕಟ್ಟಿಕೊಳ್ಳಬಹುದಾಗಿದೆ.

ಕಳೆದ ಒಂದು ದಶಕಕ್ಕೂ ಹೆಚ್ಚಿನ ಕಾಲಾವಧಿಯಲ್ಲಿ ನಡೆದಿರುವ ಭಾರತೀಯರ ಕುರಿತ ಡಿಎನ್‍ಎ ಸಂಶೋಧನಗೆಳನ್ನು ಆಳವಾಗಿ ಅಧ್ಯಯನ ನಡೆಸಿ ಅದರ ಸಾರವನ್ನು ಸೊಗಸಾಗಿ ನಿರೂಪಿಸಿದವರು ಟೋನಿ ಜೋಸೆಫ್. ಅವರುತಮ್ಮ ‘ಅರ್ಲಿ ಇಂಡಿಯನ್ಸ್” ಎಂಬ ಕೃತಿಯಲ್ಲಿ ಈ ತಳಿ ವಿಜ್ಞಾನ ಭಾರತೀಯರ ಇತಿಹಾಸದ ಕುರಿತು ಏನು ಹೇಳುತ್ತದೆ ಎಂಬುದನ್ನು ಸರಳವಾಗಿ ವಿವರಿಸಿದ್ದಾರೆ. ಹಾಗೆಯೇ ಈ ಎಲ್ಲಾ ಸಂಶೋಧನೆಗಳಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿರುವ ಡೇವಿಡ್ ರೀಚ್ ಬರೆದ “ಹೂ ವಿ ಆರ್ ಅಂಡ್ ಹೌ ವಿ ಗಾಟ್ ಹಿಯರ್’ ಎಂಬ ಕೃತಿಯಲ್ಲಿ ಇಡೀಜಗತ್ತಿನ ವಲಸೆಗಳ ಕುರಿತು ಡಿಎನ್‍ಎ ಸಂಶೋಧನೆ ಅರುಹಿದ ಮಾಹಿತಿಗಳನ್ನು ನೀಡಿದ್ದಾರೆ. ಇದರಲ್ಲಿ ಭಾರತದ ಪ್ರಾಚೀನ ಕಾಲದ ವಲಸೆಗಳ ಕುರಿತು ಸಹ ವಿವರವಾಗಿ ಒಂದು ಅಧ್ಯಾಯದಲ್ಲಿ ಬರೆದಿದ್ದಾರೆ.

ಈ ಪುಸ್ತಕ ಪ್ರಕಟವಾದ ನಂತರದಲ್ಲಿಯೇ ಆರಂಭದಲ್ಲಿ ಹೇಳಿದ ವರದಿಗಳು ಬಿಡುಗಡೆಯಾಗಿರುವುದು.

ಇಂದು ನಮ್ಮ ಸಮಾಜದಲ್ಲಿನ ಅನೇಕ ಸಂಕ್ಷೋಭೆಗಳಿಗೆ, ಜನಾಂಗೀಯ ಮತ್ತು ಧಾರ್ಮಿಕ ಹಿಂಸೆಗಳಿಗೆ ಭಾರತದ ‘ಚರಿತ್ರೆಯನ್ನು ತಿರುಚಿ, ವಿಕೃತಗೊಳಿಸಿ’ ಅವುಗಳನ್ನೇ ಸತ್ಯವೆಂದು ಜನರಿಗೆ ನಂಬಿಸಿರುವುದು ಮುಖ್ಯಕಾರಣ. ಬಲಪಂಥೀಯ ಶಕ್ತಿಗಳು ಚರಿತ್ರೆಯನ್ನು ಒಂದು ಹತಾರವಾಗಿ ಬಳಸಿಕೊಂಡ ಪರಿ ಇದು. ಹೀಗಾಗಿ ಜನರಿಗೆ ಚರಿತ್ರೆಯ ಕುರಿತ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ವಾಸ್ತವ ಚರಿತ್ರೆಯನ್ನು ಹೇಳುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಇತ್ತೀಚಿನ ಡಿಎನ್‍ಎ ಸಂಶೋಧನೆಗಳು ಹೆಚ್ಚಿನ ಬಲವನ್ನು ನೀಡಿವೆ. ಅವುಗಳನ್ನು ಜನರ ಬಳಿಗೆ ಹೇಗೆ ಕೊಂಡೊಯ್ಯುತ್ತೇವೆ ಎನ್ನುವುದೇ ಈಗ ನಮ್ಮ ಮುಂದಿರುವ ಪ್ರಶ್ನೆ.

(ಮುಂದಿನ ವಾರದ ನ್ಯಾಯಪಥ ಸಂಚಿಕೆಯಲ್ಲಿ ನಿರೀಕ್ಷಿಸಿ: ಡೇವಿಡ್ ರೀಚ್ ಅವರ ಜೊತೆಗೆ ಗಣೇಶ್ ದೇವಿ ಸಂವಾದ)


ಇದನ್ನು ಓದಿ: ದಿನವೊಂದರಲ್ಲಿ 62,538 ಪ್ರಕರಣಗಳ ವರದಿ: 20 ಲಕ್ಷ ದಾಟಿದ ಭಾರತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...