Homeಆರೋಗ್ಯವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

- Advertisement -
- Advertisement -

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಎರಡು ಪ್ರತಿಷ್ಠಿತ ಅಂತರರಾಷ್ಟ್ರೀಯ ವಿಜ್ಞಾನ ಪತ್ರಿಕಗೆಳಾದ ‘ಸೈನ್ಸ್’ ಮತ್ತು ‘ಸೆಲ್’ ಪತ್ರಿಕೆಗಳು ಭಾರತೀಯರ ಪುರಾತನ ಇತಿಹಾಸಕ್ಕೆ ಸಂಬಂಧಿಸಿದ ಬಹುಮುಖ್ಯವಾದ ಎರಡು ವರದಿಗಳನ್ನು ಪ್ರಕಟಿಸಿದವು. ದುರದೃಷ್ಟವಶಾತ್ ಇದು ನಮ್ಮ ಮಾಧ್ಯಮಗಳಲ್ಲಿ ಮತ್ತು ಅಕಡೆಮಿಕ್ ವಲಯಗಳಲ್ಲಿ ಎಷ್ಟು ಪ್ರಾಮುಖ್ಯತೆ ಪಡೆದುಕೊಳ್ಳಬೇಕಿತ್ತೋ ಅಷ್ಟನ್ನು ಪಡೆದುಕೊಳ್ಳಲೇ ಇಲ್ಲ. ಇದರಲ್ಲಿ ಹಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡಿರುವುದು ಮೇಲ್ನೋಟಕ್ಕೇ ತಿಳಿಯುತ್ತದೆ.

ಭಾರತದ ಪ್ರಾಚೀನ ಇತಿಹಾಸದ ಬಗ್ಗೆ ಇದುವರೆಗೂ ಇತಿಹಾಸಕಾರರಲ್ಲಿ ಒಮ್ಮತವಿಲ್ಲ. ಇಲ್ಲಿ ಎಡ-ಬಲ ದೃಷ್ಟಿಕೋನಗಳು ಇತಿಹಾಸ ರಚನೆಯ ಮೇಲೆ ಗಾಢವಾದ ಪ್ರಭಾವ ಹೊಂದಿವೆ. ಬಲಪಂಥೀಯ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಬಹಳ ಆದ್ಯತೆಯ ಮೇಲೆ ಇತಿಹಾಸ ರಚನೆಯ ಅಂಗಗಳ ಮೇಲೆ ಕೆಂಗಣ್ಣು ಬೀರುತ್ತದೆ. ಹಿಂದೆ 2002-03ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆರ್‌ಎಸ್‍ಎಸ್ ಸೂತ್ರಧಾರಿಗಳು ಉನ್ನತ ಮಟ್ಟದ ಇತಿಹಾಸದ ಅಂಗಗಳಲ್ಲಿದ್ದ, ತಮ್ಮ ದೃಷ್ಟಿಕೋನಕ್ಕೆ ಸರಿ ಹೊಂದದವರನ್ನೆಲ್ಲಾ ಬದಲಿಸಿದ್ದರು. ಈಗ ನರೇಂದ್ರ ಮೋದಿಯ ಅಧಿಕಾರದಲ್ಲಿ ಇನ್ನೂ ಹತ್ತು ಹೆಜ್ಜೆ ಮುಂದೆ ಹೋಗಿದ್ದಾರೆ. ವೇದಕಾಲದಲ್ಲಿ ಇತ್ತೆಂದು ಹೇಳಲಾಗುವ ‘ಸರಸ್ವತಿ’ ನದಿಯ ಕುರಿತು ಸಂಶೋಧನೆ ನಡೆಸಲು ಇವರು ಕೈಗೊಂಡಿರುವ ಕ್ರಮ ಇದಕ್ಕೆ ಇತ್ತೀಚಿನ ನಿದರ್ಶನ.

ಆದರೆ ಇದುವರೆಗೆ ಯಾವುದನ್ನು ಇತಿಹಾಸಕಾರರಿಂದ, ಪ್ರಾಕ್ತನಶಾತ್ರಜ್ಞರಿಂದ, ಭಾಷಾತಜ್ಞರಿಂದ ಮಾಡಲು ಸಾಧ್ಯವಿರಲಿಲ್ಲವೋ ಅದನ್ನು ಇಂದಿನ ತಳಿ ವಿಜ್ಞಾನ ಬಹುತೇಕ ಸಾಧಿಸಿದೆ ಎನ್ನಬಹುದು. ಅದು ಮನುಷ್ಯನ ಇತಿಹಾಸಕ್ಕೆ ವಿಜ್ಞಾನದ ಸ್ಪರ್ಶ ನೀಡಿಯಾದರೂ ಅಲ್ಲಗಳೆಯಲಾಗದಂತಹ ಮಾನವ ಇತಿಹಾಸವನ್ನು ನಿರೂಪಿಸುವ ಕೆಲಸ. ವಂಶವಾಹಿಗಳ ಸಂಶೋಧನೆಯಲ್ಲಿ ಇದು ಇಂದು ಸಾಧ್ಯವಾಗಿದೆ.

ವಂಶವಾಹಿಗಳ (ಜೀನ್ಸ್) ಕುರಿತ ಮನುಷ್ಯನ ತಿಳಿವಳಿಕೆಗೆ ಶತಮಾನಗಳ ಇತಿಹಾಸವಿದ್ದರೂ ಅವುಗಳಲ್ಲಿ ಅಡಗಿರುವ ಅಗಾಧ ಮಾಹಿತಿಯನ್ನು ಮನುಕುಲದ ಇತಿಹಾಸ ಶೋಧನೆಗೆ ಬಳಸುವ ಪ್ರಕ್ರಿಯೆ ಶುರುವಾಗಿದ್ದು ಮಾತ್ರ ತೀರಾ ಇತ್ತೀಚೆಗೆ. ನಮ್ಮ ಜೀವಕೋಶಗಳ ನ್ಯೂಕ್ಲಿಯಸ್ ಒಳಗಿನ ವರ್ಣತಂತುಗಳನ್ನು ರೂಪಿಸಿರುವ ನಾಲ್ಕು ರಾಸಾಯನಿಕ ನ್ಯೂಕ್ಲಿಯೋಟೈಡ್‍ಗಳಿಂದ (ಎ-ಸಿ-ಟಿ-ಜಿ- ಅಡೆನೈನ್, ಸೈಟೊಸಿನ್, ಥೈಮೈನ್, ಗುವಾನಿನ್) ರಚಿತವಾದ ಸುರುಳಿಯಾಕಾರದ ಡಿಎನ್‍ಎ ಎಳೆಗಳು ತಮ್ಮೊಳಗೆ ಲಕ್ಷಾಂತರ ವರ್ಷಗಳ ಇತಿಹಾಸವನ್ನೇ ಅಡಗಿಸಿಕೊಂಡಿರುತ್ತವೆ ಎಂಬುದು ವಿಸ್ಮಯವೆನಿಸಿದರೂ ಸತ್ಯ ಸಂಗತಿ. ಇದನ್ನು ಮನುಷ್ಯ ಸರಿಯಾಗಿ ಮನವರಿಕೆ ಮಾಡಿಕೊಂಡಿದ್ದು ಕೇವಲ ಎರಡು ದಶಕಗಳ ಈಚೆಗೆ ಎನ್ನಬಹುದು. 2001ರಲ್ಲಿ ವಿಜ್ಞಾನಿಗಳು ಮಾನವ ಜಿನೋಮ್ ಯೋಜನೆಯ (ಜಿನೋಮ್ ಎಂದರೆ ಒಂದು ಜೀವಿಯ ವಂಶವಾಹಿಗಳ ಒಟ್ಟು ಜೋಡಣೆ) ಮೂಲಕ ಅಧ್ಯಯನ ನಡೆಸಲು ತೊಡಗಿದಂದಿನಿಂದ ನಂತರದ ಈ ಎರಡು ದಶಕಗಳಲ್ಲಿ ಅಗಾಧ ಮಾಹಿತಿಯನ್ನು ತಳಿ ವಿಜ್ಞಾನಿಗಳು ಕಲೆಹಾಕಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ ಪ್ರಪಂಚದ ಬಹುತೇಕ ಎಲ್ಲಾ ಜನಾಂಗೀಯ ಹಾಗೂ ಪ್ರಾದೇಶಿಕ ಭಿನ್ನತೆಗಳ ಜನರ ಡಿಎನ್‍ಎ ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಅವು ಒದಗಿಸಿರುವ ಮಾಹಿತಿ, ತಿಳುವಳಿಕೆಯನ್ನು ತಳಿ ವಿಜ್ಞಾನಿ ಡೇವಿಡ್ ರೀಚ್ ಡಿಎನ್‍ಎಯನ್ನು ಮನುಷ್ಯನ ಗತ ಇತಿಹಾಸದ ವಿವಿಧ ಹಂತಗಳ ಕುರಿತು ಮಾಹಿತಿಯನ್ನು ಒದಗಿಸುವ ‘ಪುರಾತನ ಡಿಎನ್‍ಎ’ ಎಂದೇ ಕರೆದಿದ್ದಾರೆ. ಈ ‘ಪುರಾತನ ಡಿಎನ್‍ಎ’ ನಮ್ಮ ಗತ ಇತಿಹಾಸವನ್ನು ಶೋಧಿಸಿ ಒರೆಗೆ ಹಚ್ಚಲು ಬೇಕಾದ ಅಮೂಲ್ಯ ಸಾಮಗ್ರಿಯನ್ನು ಒದಗಿಸುತ್ತದೆ. ಸದ್ಯದ ಮಟ್ಟಿಗೆ ಇಡೀ ಜಗತ್ತಿನಲ್ಲಿ ಮನುಷ್ಯನ ಚರಿತ್ರೆಯಲ್ಲಿ ನಡೆದಿರುವ ಎಲ್ಲಾ ವಲಸೆಗಳ ಇತಿಹಾಸವನ್ನು, ವಲಸೆಗಳ ಸ್ವರೂಪಗಳನ್ನು, ಜನಾಂಗೀಯ ಸಂಬಂಧಗಳನ್ನು ಸ್ಪಷ ರೂಪದಲ್ಲಿ ಮುಂದಿಡಲು ಈ ‘ಪುರಾತನ ಡಿಎನ್‍ಎ’ ಯಶಸ್ವಿಯಾಗಿದೆ ಎನ್ನಬಹುದು.

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

ಭಾರತದ ಮಟ್ಟಿಗೆ ಹೇಳುವುದಾದರೆ ಇದುವರೆಗೆ ನಡೆದಿರುವ ಪುರಾತನ ಡಿಎನ್‍ಎ ಸಂಶೋಧನೆಗಳು ಭಾರತದ ಪ್ರಾಚೀನ ಜನಾಂಗೀಯ ವಲಸೆಗಳ ಕುರಿತು, ಇಲ್ಲಿ ಸಂಭವಿಸಿರುವ ಜನಾಂಗೀಯ ಸಂಕರಗಳ ಕುರಿತು, ಯಾವಜನಾಂಗೀಯ, ಭಾಷಿಕ ಸಮುದಾಯಗಳು ಯಾರ ಮೇಲೆ ಯಾವ ಕಾಲಘಟ್ಟದಲ್ಲಿ ಆಕ್ರಮಣಕಾರಿಯಾಗಿ ವರ್ತಿಸಿದವು ಎಂಬ ಕುರಿತು, ಇಲ್ಲಿ ಜಾತಿಗಳು ಯಾವಾಗ, ಹೇಗೆ ಹುಟ್ಟಿಕೊಂಡವು ಎಂಬ ಕುರಿತು, ಈ ಜಾತಿಕಟ್ಟು ಕಟ್ಟಳೆಗಳು ಉಂಟು ಮಾಡಿರುವ ಜೈವಿಕ ಪರಿಣಾಮಗಳ ಕುರಿತು, ಹೀಗೆ ನಾನಾ ಚಾರಿತ್ರಿಕ ಸಂಗತಿಗಳ ಕುರಿತು ಬೆಳಕು ಚೆಲ್ಲಿವೆ. ಈ ಸಂಶೋಧನೆಗಳ ಬೆಳಕಿನಲ್ಲಿ ನಾವು ನಮ್ಮ ದೇಶದ ಚರಿತ್ರೆಯನ್ನು ಮತ್ತಷ್ಟು ನಿಖರವಾಗಿ ಕಟ್ಟಿಕೊಳ್ಳಬಹುದಾಗಿದೆ.

ಕಳೆದ ಒಂದು ದಶಕಕ್ಕೂ ಹೆಚ್ಚಿನ ಕಾಲಾವಧಿಯಲ್ಲಿ ನಡೆದಿರುವ ಭಾರತೀಯರ ಕುರಿತ ಡಿಎನ್‍ಎ ಸಂಶೋಧನಗೆಳನ್ನು ಆಳವಾಗಿ ಅಧ್ಯಯನ ನಡೆಸಿ ಅದರ ಸಾರವನ್ನು ಸೊಗಸಾಗಿ ನಿರೂಪಿಸಿದವರು ಟೋನಿ ಜೋಸೆಫ್. ಅವರುತಮ್ಮ ‘ಅರ್ಲಿ ಇಂಡಿಯನ್ಸ್” ಎಂಬ ಕೃತಿಯಲ್ಲಿ ಈ ತಳಿ ವಿಜ್ಞಾನ ಭಾರತೀಯರ ಇತಿಹಾಸದ ಕುರಿತು ಏನು ಹೇಳುತ್ತದೆ ಎಂಬುದನ್ನು ಸರಳವಾಗಿ ವಿವರಿಸಿದ್ದಾರೆ. ಹಾಗೆಯೇ ಈ ಎಲ್ಲಾ ಸಂಶೋಧನೆಗಳಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿರುವ ಡೇವಿಡ್ ರೀಚ್ ಬರೆದ “ಹೂ ವಿ ಆರ್ ಅಂಡ್ ಹೌ ವಿ ಗಾಟ್ ಹಿಯರ್’ ಎಂಬ ಕೃತಿಯಲ್ಲಿ ಇಡೀಜಗತ್ತಿನ ವಲಸೆಗಳ ಕುರಿತು ಡಿಎನ್‍ಎ ಸಂಶೋಧನೆ ಅರುಹಿದ ಮಾಹಿತಿಗಳನ್ನು ನೀಡಿದ್ದಾರೆ. ಇದರಲ್ಲಿ ಭಾರತದ ಪ್ರಾಚೀನ ಕಾಲದ ವಲಸೆಗಳ ಕುರಿತು ಸಹ ವಿವರವಾಗಿ ಒಂದು ಅಧ್ಯಾಯದಲ್ಲಿ ಬರೆದಿದ್ದಾರೆ.

ಈ ಪುಸ್ತಕ ಪ್ರಕಟವಾದ ನಂತರದಲ್ಲಿಯೇ ಆರಂಭದಲ್ಲಿ ಹೇಳಿದ ವರದಿಗಳು ಬಿಡುಗಡೆಯಾಗಿರುವುದು.

ಇಂದು ನಮ್ಮ ಸಮಾಜದಲ್ಲಿನ ಅನೇಕ ಸಂಕ್ಷೋಭೆಗಳಿಗೆ, ಜನಾಂಗೀಯ ಮತ್ತು ಧಾರ್ಮಿಕ ಹಿಂಸೆಗಳಿಗೆ ಭಾರತದ ‘ಚರಿತ್ರೆಯನ್ನು ತಿರುಚಿ, ವಿಕೃತಗೊಳಿಸಿ’ ಅವುಗಳನ್ನೇ ಸತ್ಯವೆಂದು ಜನರಿಗೆ ನಂಬಿಸಿರುವುದು ಮುಖ್ಯಕಾರಣ. ಬಲಪಂಥೀಯ ಶಕ್ತಿಗಳು ಚರಿತ್ರೆಯನ್ನು ಒಂದು ಹತಾರವಾಗಿ ಬಳಸಿಕೊಂಡ ಪರಿ ಇದು. ಹೀಗಾಗಿ ಜನರಿಗೆ ಚರಿತ್ರೆಯ ಕುರಿತ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ವಾಸ್ತವ ಚರಿತ್ರೆಯನ್ನು ಹೇಳುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಇತ್ತೀಚಿನ ಡಿಎನ್‍ಎ ಸಂಶೋಧನೆಗಳು ಹೆಚ್ಚಿನ ಬಲವನ್ನು ನೀಡಿವೆ. ಅವುಗಳನ್ನು ಜನರ ಬಳಿಗೆ ಹೇಗೆ ಕೊಂಡೊಯ್ಯುತ್ತೇವೆ ಎನ್ನುವುದೇ ಈಗ ನಮ್ಮ ಮುಂದಿರುವ ಪ್ರಶ್ನೆ.

(ಮುಂದಿನ ವಾರದ ನ್ಯಾಯಪಥ ಸಂಚಿಕೆಯಲ್ಲಿ ನಿರೀಕ್ಷಿಸಿ: ಡೇವಿಡ್ ರೀಚ್ ಅವರ ಜೊತೆಗೆ ಗಣೇಶ್ ದೇವಿ ಸಂವಾದ)


ಇದನ್ನು ಓದಿ: ದಿನವೊಂದರಲ್ಲಿ 62,538 ಪ್ರಕರಣಗಳ ವರದಿ: 20 ಲಕ್ಷ ದಾಟಿದ ಭಾರತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...