Homeಆರೋಗ್ಯವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

- Advertisement -
- Advertisement -

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಎರಡು ಪ್ರತಿಷ್ಠಿತ ಅಂತರರಾಷ್ಟ್ರೀಯ ವಿಜ್ಞಾನ ಪತ್ರಿಕಗೆಳಾದ ‘ಸೈನ್ಸ್’ ಮತ್ತು ‘ಸೆಲ್’ ಪತ್ರಿಕೆಗಳು ಭಾರತೀಯರ ಪುರಾತನ ಇತಿಹಾಸಕ್ಕೆ ಸಂಬಂಧಿಸಿದ ಬಹುಮುಖ್ಯವಾದ ಎರಡು ವರದಿಗಳನ್ನು ಪ್ರಕಟಿಸಿದವು. ದುರದೃಷ್ಟವಶಾತ್ ಇದು ನಮ್ಮ ಮಾಧ್ಯಮಗಳಲ್ಲಿ ಮತ್ತು ಅಕಡೆಮಿಕ್ ವಲಯಗಳಲ್ಲಿ ಎಷ್ಟು ಪ್ರಾಮುಖ್ಯತೆ ಪಡೆದುಕೊಳ್ಳಬೇಕಿತ್ತೋ ಅಷ್ಟನ್ನು ಪಡೆದುಕೊಳ್ಳಲೇ ಇಲ್ಲ. ಇದರಲ್ಲಿ ಹಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡಿರುವುದು ಮೇಲ್ನೋಟಕ್ಕೇ ತಿಳಿಯುತ್ತದೆ.

ಭಾರತದ ಪ್ರಾಚೀನ ಇತಿಹಾಸದ ಬಗ್ಗೆ ಇದುವರೆಗೂ ಇತಿಹಾಸಕಾರರಲ್ಲಿ ಒಮ್ಮತವಿಲ್ಲ. ಇಲ್ಲಿ ಎಡ-ಬಲ ದೃಷ್ಟಿಕೋನಗಳು ಇತಿಹಾಸ ರಚನೆಯ ಮೇಲೆ ಗಾಢವಾದ ಪ್ರಭಾವ ಹೊಂದಿವೆ. ಬಲಪಂಥೀಯ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಬಹಳ ಆದ್ಯತೆಯ ಮೇಲೆ ಇತಿಹಾಸ ರಚನೆಯ ಅಂಗಗಳ ಮೇಲೆ ಕೆಂಗಣ್ಣು ಬೀರುತ್ತದೆ. ಹಿಂದೆ 2002-03ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆರ್‌ಎಸ್‍ಎಸ್ ಸೂತ್ರಧಾರಿಗಳು ಉನ್ನತ ಮಟ್ಟದ ಇತಿಹಾಸದ ಅಂಗಗಳಲ್ಲಿದ್ದ, ತಮ್ಮ ದೃಷ್ಟಿಕೋನಕ್ಕೆ ಸರಿ ಹೊಂದದವರನ್ನೆಲ್ಲಾ ಬದಲಿಸಿದ್ದರು. ಈಗ ನರೇಂದ್ರ ಮೋದಿಯ ಅಧಿಕಾರದಲ್ಲಿ ಇನ್ನೂ ಹತ್ತು ಹೆಜ್ಜೆ ಮುಂದೆ ಹೋಗಿದ್ದಾರೆ. ವೇದಕಾಲದಲ್ಲಿ ಇತ್ತೆಂದು ಹೇಳಲಾಗುವ ‘ಸರಸ್ವತಿ’ ನದಿಯ ಕುರಿತು ಸಂಶೋಧನೆ ನಡೆಸಲು ಇವರು ಕೈಗೊಂಡಿರುವ ಕ್ರಮ ಇದಕ್ಕೆ ಇತ್ತೀಚಿನ ನಿದರ್ಶನ.

ಆದರೆ ಇದುವರೆಗೆ ಯಾವುದನ್ನು ಇತಿಹಾಸಕಾರರಿಂದ, ಪ್ರಾಕ್ತನಶಾತ್ರಜ್ಞರಿಂದ, ಭಾಷಾತಜ್ಞರಿಂದ ಮಾಡಲು ಸಾಧ್ಯವಿರಲಿಲ್ಲವೋ ಅದನ್ನು ಇಂದಿನ ತಳಿ ವಿಜ್ಞಾನ ಬಹುತೇಕ ಸಾಧಿಸಿದೆ ಎನ್ನಬಹುದು. ಅದು ಮನುಷ್ಯನ ಇತಿಹಾಸಕ್ಕೆ ವಿಜ್ಞಾನದ ಸ್ಪರ್ಶ ನೀಡಿಯಾದರೂ ಅಲ್ಲಗಳೆಯಲಾಗದಂತಹ ಮಾನವ ಇತಿಹಾಸವನ್ನು ನಿರೂಪಿಸುವ ಕೆಲಸ. ವಂಶವಾಹಿಗಳ ಸಂಶೋಧನೆಯಲ್ಲಿ ಇದು ಇಂದು ಸಾಧ್ಯವಾಗಿದೆ.

ವಂಶವಾಹಿಗಳ (ಜೀನ್ಸ್) ಕುರಿತ ಮನುಷ್ಯನ ತಿಳಿವಳಿಕೆಗೆ ಶತಮಾನಗಳ ಇತಿಹಾಸವಿದ್ದರೂ ಅವುಗಳಲ್ಲಿ ಅಡಗಿರುವ ಅಗಾಧ ಮಾಹಿತಿಯನ್ನು ಮನುಕುಲದ ಇತಿಹಾಸ ಶೋಧನೆಗೆ ಬಳಸುವ ಪ್ರಕ್ರಿಯೆ ಶುರುವಾಗಿದ್ದು ಮಾತ್ರ ತೀರಾ ಇತ್ತೀಚೆಗೆ. ನಮ್ಮ ಜೀವಕೋಶಗಳ ನ್ಯೂಕ್ಲಿಯಸ್ ಒಳಗಿನ ವರ್ಣತಂತುಗಳನ್ನು ರೂಪಿಸಿರುವ ನಾಲ್ಕು ರಾಸಾಯನಿಕ ನ್ಯೂಕ್ಲಿಯೋಟೈಡ್‍ಗಳಿಂದ (ಎ-ಸಿ-ಟಿ-ಜಿ- ಅಡೆನೈನ್, ಸೈಟೊಸಿನ್, ಥೈಮೈನ್, ಗುವಾನಿನ್) ರಚಿತವಾದ ಸುರುಳಿಯಾಕಾರದ ಡಿಎನ್‍ಎ ಎಳೆಗಳು ತಮ್ಮೊಳಗೆ ಲಕ್ಷಾಂತರ ವರ್ಷಗಳ ಇತಿಹಾಸವನ್ನೇ ಅಡಗಿಸಿಕೊಂಡಿರುತ್ತವೆ ಎಂಬುದು ವಿಸ್ಮಯವೆನಿಸಿದರೂ ಸತ್ಯ ಸಂಗತಿ. ಇದನ್ನು ಮನುಷ್ಯ ಸರಿಯಾಗಿ ಮನವರಿಕೆ ಮಾಡಿಕೊಂಡಿದ್ದು ಕೇವಲ ಎರಡು ದಶಕಗಳ ಈಚೆಗೆ ಎನ್ನಬಹುದು. 2001ರಲ್ಲಿ ವಿಜ್ಞಾನಿಗಳು ಮಾನವ ಜಿನೋಮ್ ಯೋಜನೆಯ (ಜಿನೋಮ್ ಎಂದರೆ ಒಂದು ಜೀವಿಯ ವಂಶವಾಹಿಗಳ ಒಟ್ಟು ಜೋಡಣೆ) ಮೂಲಕ ಅಧ್ಯಯನ ನಡೆಸಲು ತೊಡಗಿದಂದಿನಿಂದ ನಂತರದ ಈ ಎರಡು ದಶಕಗಳಲ್ಲಿ ಅಗಾಧ ಮಾಹಿತಿಯನ್ನು ತಳಿ ವಿಜ್ಞಾನಿಗಳು ಕಲೆಹಾಕಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ ಪ್ರಪಂಚದ ಬಹುತೇಕ ಎಲ್ಲಾ ಜನಾಂಗೀಯ ಹಾಗೂ ಪ್ರಾದೇಶಿಕ ಭಿನ್ನತೆಗಳ ಜನರ ಡಿಎನ್‍ಎ ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಅವು ಒದಗಿಸಿರುವ ಮಾಹಿತಿ, ತಿಳುವಳಿಕೆಯನ್ನು ತಳಿ ವಿಜ್ಞಾನಿ ಡೇವಿಡ್ ರೀಚ್ ಡಿಎನ್‍ಎಯನ್ನು ಮನುಷ್ಯನ ಗತ ಇತಿಹಾಸದ ವಿವಿಧ ಹಂತಗಳ ಕುರಿತು ಮಾಹಿತಿಯನ್ನು ಒದಗಿಸುವ ‘ಪುರಾತನ ಡಿಎನ್‍ಎ’ ಎಂದೇ ಕರೆದಿದ್ದಾರೆ. ಈ ‘ಪುರಾತನ ಡಿಎನ್‍ಎ’ ನಮ್ಮ ಗತ ಇತಿಹಾಸವನ್ನು ಶೋಧಿಸಿ ಒರೆಗೆ ಹಚ್ಚಲು ಬೇಕಾದ ಅಮೂಲ್ಯ ಸಾಮಗ್ರಿಯನ್ನು ಒದಗಿಸುತ್ತದೆ. ಸದ್ಯದ ಮಟ್ಟಿಗೆ ಇಡೀ ಜಗತ್ತಿನಲ್ಲಿ ಮನುಷ್ಯನ ಚರಿತ್ರೆಯಲ್ಲಿ ನಡೆದಿರುವ ಎಲ್ಲಾ ವಲಸೆಗಳ ಇತಿಹಾಸವನ್ನು, ವಲಸೆಗಳ ಸ್ವರೂಪಗಳನ್ನು, ಜನಾಂಗೀಯ ಸಂಬಂಧಗಳನ್ನು ಸ್ಪಷ ರೂಪದಲ್ಲಿ ಮುಂದಿಡಲು ಈ ‘ಪುರಾತನ ಡಿಎನ್‍ಎ’ ಯಶಸ್ವಿಯಾಗಿದೆ ಎನ್ನಬಹುದು.

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

ಭಾರತದ ಮಟ್ಟಿಗೆ ಹೇಳುವುದಾದರೆ ಇದುವರೆಗೆ ನಡೆದಿರುವ ಪುರಾತನ ಡಿಎನ್‍ಎ ಸಂಶೋಧನೆಗಳು ಭಾರತದ ಪ್ರಾಚೀನ ಜನಾಂಗೀಯ ವಲಸೆಗಳ ಕುರಿತು, ಇಲ್ಲಿ ಸಂಭವಿಸಿರುವ ಜನಾಂಗೀಯ ಸಂಕರಗಳ ಕುರಿತು, ಯಾವಜನಾಂಗೀಯ, ಭಾಷಿಕ ಸಮುದಾಯಗಳು ಯಾರ ಮೇಲೆ ಯಾವ ಕಾಲಘಟ್ಟದಲ್ಲಿ ಆಕ್ರಮಣಕಾರಿಯಾಗಿ ವರ್ತಿಸಿದವು ಎಂಬ ಕುರಿತು, ಇಲ್ಲಿ ಜಾತಿಗಳು ಯಾವಾಗ, ಹೇಗೆ ಹುಟ್ಟಿಕೊಂಡವು ಎಂಬ ಕುರಿತು, ಈ ಜಾತಿಕಟ್ಟು ಕಟ್ಟಳೆಗಳು ಉಂಟು ಮಾಡಿರುವ ಜೈವಿಕ ಪರಿಣಾಮಗಳ ಕುರಿತು, ಹೀಗೆ ನಾನಾ ಚಾರಿತ್ರಿಕ ಸಂಗತಿಗಳ ಕುರಿತು ಬೆಳಕು ಚೆಲ್ಲಿವೆ. ಈ ಸಂಶೋಧನೆಗಳ ಬೆಳಕಿನಲ್ಲಿ ನಾವು ನಮ್ಮ ದೇಶದ ಚರಿತ್ರೆಯನ್ನು ಮತ್ತಷ್ಟು ನಿಖರವಾಗಿ ಕಟ್ಟಿಕೊಳ್ಳಬಹುದಾಗಿದೆ.

ಕಳೆದ ಒಂದು ದಶಕಕ್ಕೂ ಹೆಚ್ಚಿನ ಕಾಲಾವಧಿಯಲ್ಲಿ ನಡೆದಿರುವ ಭಾರತೀಯರ ಕುರಿತ ಡಿಎನ್‍ಎ ಸಂಶೋಧನಗೆಳನ್ನು ಆಳವಾಗಿ ಅಧ್ಯಯನ ನಡೆಸಿ ಅದರ ಸಾರವನ್ನು ಸೊಗಸಾಗಿ ನಿರೂಪಿಸಿದವರು ಟೋನಿ ಜೋಸೆಫ್. ಅವರುತಮ್ಮ ‘ಅರ್ಲಿ ಇಂಡಿಯನ್ಸ್” ಎಂಬ ಕೃತಿಯಲ್ಲಿ ಈ ತಳಿ ವಿಜ್ಞಾನ ಭಾರತೀಯರ ಇತಿಹಾಸದ ಕುರಿತು ಏನು ಹೇಳುತ್ತದೆ ಎಂಬುದನ್ನು ಸರಳವಾಗಿ ವಿವರಿಸಿದ್ದಾರೆ. ಹಾಗೆಯೇ ಈ ಎಲ್ಲಾ ಸಂಶೋಧನೆಗಳಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿರುವ ಡೇವಿಡ್ ರೀಚ್ ಬರೆದ “ಹೂ ವಿ ಆರ್ ಅಂಡ್ ಹೌ ವಿ ಗಾಟ್ ಹಿಯರ್’ ಎಂಬ ಕೃತಿಯಲ್ಲಿ ಇಡೀಜಗತ್ತಿನ ವಲಸೆಗಳ ಕುರಿತು ಡಿಎನ್‍ಎ ಸಂಶೋಧನೆ ಅರುಹಿದ ಮಾಹಿತಿಗಳನ್ನು ನೀಡಿದ್ದಾರೆ. ಇದರಲ್ಲಿ ಭಾರತದ ಪ್ರಾಚೀನ ಕಾಲದ ವಲಸೆಗಳ ಕುರಿತು ಸಹ ವಿವರವಾಗಿ ಒಂದು ಅಧ್ಯಾಯದಲ್ಲಿ ಬರೆದಿದ್ದಾರೆ.

ಈ ಪುಸ್ತಕ ಪ್ರಕಟವಾದ ನಂತರದಲ್ಲಿಯೇ ಆರಂಭದಲ್ಲಿ ಹೇಳಿದ ವರದಿಗಳು ಬಿಡುಗಡೆಯಾಗಿರುವುದು.

ಇಂದು ನಮ್ಮ ಸಮಾಜದಲ್ಲಿನ ಅನೇಕ ಸಂಕ್ಷೋಭೆಗಳಿಗೆ, ಜನಾಂಗೀಯ ಮತ್ತು ಧಾರ್ಮಿಕ ಹಿಂಸೆಗಳಿಗೆ ಭಾರತದ ‘ಚರಿತ್ರೆಯನ್ನು ತಿರುಚಿ, ವಿಕೃತಗೊಳಿಸಿ’ ಅವುಗಳನ್ನೇ ಸತ್ಯವೆಂದು ಜನರಿಗೆ ನಂಬಿಸಿರುವುದು ಮುಖ್ಯಕಾರಣ. ಬಲಪಂಥೀಯ ಶಕ್ತಿಗಳು ಚರಿತ್ರೆಯನ್ನು ಒಂದು ಹತಾರವಾಗಿ ಬಳಸಿಕೊಂಡ ಪರಿ ಇದು. ಹೀಗಾಗಿ ಜನರಿಗೆ ಚರಿತ್ರೆಯ ಕುರಿತ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ವಾಸ್ತವ ಚರಿತ್ರೆಯನ್ನು ಹೇಳುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಇತ್ತೀಚಿನ ಡಿಎನ್‍ಎ ಸಂಶೋಧನೆಗಳು ಹೆಚ್ಚಿನ ಬಲವನ್ನು ನೀಡಿವೆ. ಅವುಗಳನ್ನು ಜನರ ಬಳಿಗೆ ಹೇಗೆ ಕೊಂಡೊಯ್ಯುತ್ತೇವೆ ಎನ್ನುವುದೇ ಈಗ ನಮ್ಮ ಮುಂದಿರುವ ಪ್ರಶ್ನೆ.

(ಮುಂದಿನ ವಾರದ ನ್ಯಾಯಪಥ ಸಂಚಿಕೆಯಲ್ಲಿ ನಿರೀಕ್ಷಿಸಿ: ಡೇವಿಡ್ ರೀಚ್ ಅವರ ಜೊತೆಗೆ ಗಣೇಶ್ ದೇವಿ ಸಂವಾದ)


ಇದನ್ನು ಓದಿ: ದಿನವೊಂದರಲ್ಲಿ 62,538 ಪ್ರಕರಣಗಳ ವರದಿ: 20 ಲಕ್ಷ ದಾಟಿದ ಭಾರತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...