Homeಆರೋಗ್ಯವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

- Advertisement -
- Advertisement -

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಎರಡು ಪ್ರತಿಷ್ಠಿತ ಅಂತರರಾಷ್ಟ್ರೀಯ ವಿಜ್ಞಾನ ಪತ್ರಿಕಗೆಳಾದ ‘ಸೈನ್ಸ್’ ಮತ್ತು ‘ಸೆಲ್’ ಪತ್ರಿಕೆಗಳು ಭಾರತೀಯರ ಪುರಾತನ ಇತಿಹಾಸಕ್ಕೆ ಸಂಬಂಧಿಸಿದ ಬಹುಮುಖ್ಯವಾದ ಎರಡು ವರದಿಗಳನ್ನು ಪ್ರಕಟಿಸಿದವು. ದುರದೃಷ್ಟವಶಾತ್ ಇದು ನಮ್ಮ ಮಾಧ್ಯಮಗಳಲ್ಲಿ ಮತ್ತು ಅಕಡೆಮಿಕ್ ವಲಯಗಳಲ್ಲಿ ಎಷ್ಟು ಪ್ರಾಮುಖ್ಯತೆ ಪಡೆದುಕೊಳ್ಳಬೇಕಿತ್ತೋ ಅಷ್ಟನ್ನು ಪಡೆದುಕೊಳ್ಳಲೇ ಇಲ್ಲ. ಇದರಲ್ಲಿ ಹಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡಿರುವುದು ಮೇಲ್ನೋಟಕ್ಕೇ ತಿಳಿಯುತ್ತದೆ.

ಭಾರತದ ಪ್ರಾಚೀನ ಇತಿಹಾಸದ ಬಗ್ಗೆ ಇದುವರೆಗೂ ಇತಿಹಾಸಕಾರರಲ್ಲಿ ಒಮ್ಮತವಿಲ್ಲ. ಇಲ್ಲಿ ಎಡ-ಬಲ ದೃಷ್ಟಿಕೋನಗಳು ಇತಿಹಾಸ ರಚನೆಯ ಮೇಲೆ ಗಾಢವಾದ ಪ್ರಭಾವ ಹೊಂದಿವೆ. ಬಲಪಂಥೀಯ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಬಹಳ ಆದ್ಯತೆಯ ಮೇಲೆ ಇತಿಹಾಸ ರಚನೆಯ ಅಂಗಗಳ ಮೇಲೆ ಕೆಂಗಣ್ಣು ಬೀರುತ್ತದೆ. ಹಿಂದೆ 2002-03ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆರ್‌ಎಸ್‍ಎಸ್ ಸೂತ್ರಧಾರಿಗಳು ಉನ್ನತ ಮಟ್ಟದ ಇತಿಹಾಸದ ಅಂಗಗಳಲ್ಲಿದ್ದ, ತಮ್ಮ ದೃಷ್ಟಿಕೋನಕ್ಕೆ ಸರಿ ಹೊಂದದವರನ್ನೆಲ್ಲಾ ಬದಲಿಸಿದ್ದರು. ಈಗ ನರೇಂದ್ರ ಮೋದಿಯ ಅಧಿಕಾರದಲ್ಲಿ ಇನ್ನೂ ಹತ್ತು ಹೆಜ್ಜೆ ಮುಂದೆ ಹೋಗಿದ್ದಾರೆ. ವೇದಕಾಲದಲ್ಲಿ ಇತ್ತೆಂದು ಹೇಳಲಾಗುವ ‘ಸರಸ್ವತಿ’ ನದಿಯ ಕುರಿತು ಸಂಶೋಧನೆ ನಡೆಸಲು ಇವರು ಕೈಗೊಂಡಿರುವ ಕ್ರಮ ಇದಕ್ಕೆ ಇತ್ತೀಚಿನ ನಿದರ್ಶನ.

ಆದರೆ ಇದುವರೆಗೆ ಯಾವುದನ್ನು ಇತಿಹಾಸಕಾರರಿಂದ, ಪ್ರಾಕ್ತನಶಾತ್ರಜ್ಞರಿಂದ, ಭಾಷಾತಜ್ಞರಿಂದ ಮಾಡಲು ಸಾಧ್ಯವಿರಲಿಲ್ಲವೋ ಅದನ್ನು ಇಂದಿನ ತಳಿ ವಿಜ್ಞಾನ ಬಹುತೇಕ ಸಾಧಿಸಿದೆ ಎನ್ನಬಹುದು. ಅದು ಮನುಷ್ಯನ ಇತಿಹಾಸಕ್ಕೆ ವಿಜ್ಞಾನದ ಸ್ಪರ್ಶ ನೀಡಿಯಾದರೂ ಅಲ್ಲಗಳೆಯಲಾಗದಂತಹ ಮಾನವ ಇತಿಹಾಸವನ್ನು ನಿರೂಪಿಸುವ ಕೆಲಸ. ವಂಶವಾಹಿಗಳ ಸಂಶೋಧನೆಯಲ್ಲಿ ಇದು ಇಂದು ಸಾಧ್ಯವಾಗಿದೆ.

ವಂಶವಾಹಿಗಳ (ಜೀನ್ಸ್) ಕುರಿತ ಮನುಷ್ಯನ ತಿಳಿವಳಿಕೆಗೆ ಶತಮಾನಗಳ ಇತಿಹಾಸವಿದ್ದರೂ ಅವುಗಳಲ್ಲಿ ಅಡಗಿರುವ ಅಗಾಧ ಮಾಹಿತಿಯನ್ನು ಮನುಕುಲದ ಇತಿಹಾಸ ಶೋಧನೆಗೆ ಬಳಸುವ ಪ್ರಕ್ರಿಯೆ ಶುರುವಾಗಿದ್ದು ಮಾತ್ರ ತೀರಾ ಇತ್ತೀಚೆಗೆ. ನಮ್ಮ ಜೀವಕೋಶಗಳ ನ್ಯೂಕ್ಲಿಯಸ್ ಒಳಗಿನ ವರ್ಣತಂತುಗಳನ್ನು ರೂಪಿಸಿರುವ ನಾಲ್ಕು ರಾಸಾಯನಿಕ ನ್ಯೂಕ್ಲಿಯೋಟೈಡ್‍ಗಳಿಂದ (ಎ-ಸಿ-ಟಿ-ಜಿ- ಅಡೆನೈನ್, ಸೈಟೊಸಿನ್, ಥೈಮೈನ್, ಗುವಾನಿನ್) ರಚಿತವಾದ ಸುರುಳಿಯಾಕಾರದ ಡಿಎನ್‍ಎ ಎಳೆಗಳು ತಮ್ಮೊಳಗೆ ಲಕ್ಷಾಂತರ ವರ್ಷಗಳ ಇತಿಹಾಸವನ್ನೇ ಅಡಗಿಸಿಕೊಂಡಿರುತ್ತವೆ ಎಂಬುದು ವಿಸ್ಮಯವೆನಿಸಿದರೂ ಸತ್ಯ ಸಂಗತಿ. ಇದನ್ನು ಮನುಷ್ಯ ಸರಿಯಾಗಿ ಮನವರಿಕೆ ಮಾಡಿಕೊಂಡಿದ್ದು ಕೇವಲ ಎರಡು ದಶಕಗಳ ಈಚೆಗೆ ಎನ್ನಬಹುದು. 2001ರಲ್ಲಿ ವಿಜ್ಞಾನಿಗಳು ಮಾನವ ಜಿನೋಮ್ ಯೋಜನೆಯ (ಜಿನೋಮ್ ಎಂದರೆ ಒಂದು ಜೀವಿಯ ವಂಶವಾಹಿಗಳ ಒಟ್ಟು ಜೋಡಣೆ) ಮೂಲಕ ಅಧ್ಯಯನ ನಡೆಸಲು ತೊಡಗಿದಂದಿನಿಂದ ನಂತರದ ಈ ಎರಡು ದಶಕಗಳಲ್ಲಿ ಅಗಾಧ ಮಾಹಿತಿಯನ್ನು ತಳಿ ವಿಜ್ಞಾನಿಗಳು ಕಲೆಹಾಕಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ ಪ್ರಪಂಚದ ಬಹುತೇಕ ಎಲ್ಲಾ ಜನಾಂಗೀಯ ಹಾಗೂ ಪ್ರಾದೇಶಿಕ ಭಿನ್ನತೆಗಳ ಜನರ ಡಿಎನ್‍ಎ ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಅವು ಒದಗಿಸಿರುವ ಮಾಹಿತಿ, ತಿಳುವಳಿಕೆಯನ್ನು ತಳಿ ವಿಜ್ಞಾನಿ ಡೇವಿಡ್ ರೀಚ್ ಡಿಎನ್‍ಎಯನ್ನು ಮನುಷ್ಯನ ಗತ ಇತಿಹಾಸದ ವಿವಿಧ ಹಂತಗಳ ಕುರಿತು ಮಾಹಿತಿಯನ್ನು ಒದಗಿಸುವ ‘ಪುರಾತನ ಡಿಎನ್‍ಎ’ ಎಂದೇ ಕರೆದಿದ್ದಾರೆ. ಈ ‘ಪುರಾತನ ಡಿಎನ್‍ಎ’ ನಮ್ಮ ಗತ ಇತಿಹಾಸವನ್ನು ಶೋಧಿಸಿ ಒರೆಗೆ ಹಚ್ಚಲು ಬೇಕಾದ ಅಮೂಲ್ಯ ಸಾಮಗ್ರಿಯನ್ನು ಒದಗಿಸುತ್ತದೆ. ಸದ್ಯದ ಮಟ್ಟಿಗೆ ಇಡೀ ಜಗತ್ತಿನಲ್ಲಿ ಮನುಷ್ಯನ ಚರಿತ್ರೆಯಲ್ಲಿ ನಡೆದಿರುವ ಎಲ್ಲಾ ವಲಸೆಗಳ ಇತಿಹಾಸವನ್ನು, ವಲಸೆಗಳ ಸ್ವರೂಪಗಳನ್ನು, ಜನಾಂಗೀಯ ಸಂಬಂಧಗಳನ್ನು ಸ್ಪಷ ರೂಪದಲ್ಲಿ ಮುಂದಿಡಲು ಈ ‘ಪುರಾತನ ಡಿಎನ್‍ಎ’ ಯಶಸ್ವಿಯಾಗಿದೆ ಎನ್ನಬಹುದು.

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

ಭಾರತದ ಮಟ್ಟಿಗೆ ಹೇಳುವುದಾದರೆ ಇದುವರೆಗೆ ನಡೆದಿರುವ ಪುರಾತನ ಡಿಎನ್‍ಎ ಸಂಶೋಧನೆಗಳು ಭಾರತದ ಪ್ರಾಚೀನ ಜನಾಂಗೀಯ ವಲಸೆಗಳ ಕುರಿತು, ಇಲ್ಲಿ ಸಂಭವಿಸಿರುವ ಜನಾಂಗೀಯ ಸಂಕರಗಳ ಕುರಿತು, ಯಾವಜನಾಂಗೀಯ, ಭಾಷಿಕ ಸಮುದಾಯಗಳು ಯಾರ ಮೇಲೆ ಯಾವ ಕಾಲಘಟ್ಟದಲ್ಲಿ ಆಕ್ರಮಣಕಾರಿಯಾಗಿ ವರ್ತಿಸಿದವು ಎಂಬ ಕುರಿತು, ಇಲ್ಲಿ ಜಾತಿಗಳು ಯಾವಾಗ, ಹೇಗೆ ಹುಟ್ಟಿಕೊಂಡವು ಎಂಬ ಕುರಿತು, ಈ ಜಾತಿಕಟ್ಟು ಕಟ್ಟಳೆಗಳು ಉಂಟು ಮಾಡಿರುವ ಜೈವಿಕ ಪರಿಣಾಮಗಳ ಕುರಿತು, ಹೀಗೆ ನಾನಾ ಚಾರಿತ್ರಿಕ ಸಂಗತಿಗಳ ಕುರಿತು ಬೆಳಕು ಚೆಲ್ಲಿವೆ. ಈ ಸಂಶೋಧನೆಗಳ ಬೆಳಕಿನಲ್ಲಿ ನಾವು ನಮ್ಮ ದೇಶದ ಚರಿತ್ರೆಯನ್ನು ಮತ್ತಷ್ಟು ನಿಖರವಾಗಿ ಕಟ್ಟಿಕೊಳ್ಳಬಹುದಾಗಿದೆ.

ಕಳೆದ ಒಂದು ದಶಕಕ್ಕೂ ಹೆಚ್ಚಿನ ಕಾಲಾವಧಿಯಲ್ಲಿ ನಡೆದಿರುವ ಭಾರತೀಯರ ಕುರಿತ ಡಿಎನ್‍ಎ ಸಂಶೋಧನಗೆಳನ್ನು ಆಳವಾಗಿ ಅಧ್ಯಯನ ನಡೆಸಿ ಅದರ ಸಾರವನ್ನು ಸೊಗಸಾಗಿ ನಿರೂಪಿಸಿದವರು ಟೋನಿ ಜೋಸೆಫ್. ಅವರುತಮ್ಮ ‘ಅರ್ಲಿ ಇಂಡಿಯನ್ಸ್” ಎಂಬ ಕೃತಿಯಲ್ಲಿ ಈ ತಳಿ ವಿಜ್ಞಾನ ಭಾರತೀಯರ ಇತಿಹಾಸದ ಕುರಿತು ಏನು ಹೇಳುತ್ತದೆ ಎಂಬುದನ್ನು ಸರಳವಾಗಿ ವಿವರಿಸಿದ್ದಾರೆ. ಹಾಗೆಯೇ ಈ ಎಲ್ಲಾ ಸಂಶೋಧನೆಗಳಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿರುವ ಡೇವಿಡ್ ರೀಚ್ ಬರೆದ “ಹೂ ವಿ ಆರ್ ಅಂಡ್ ಹೌ ವಿ ಗಾಟ್ ಹಿಯರ್’ ಎಂಬ ಕೃತಿಯಲ್ಲಿ ಇಡೀಜಗತ್ತಿನ ವಲಸೆಗಳ ಕುರಿತು ಡಿಎನ್‍ಎ ಸಂಶೋಧನೆ ಅರುಹಿದ ಮಾಹಿತಿಗಳನ್ನು ನೀಡಿದ್ದಾರೆ. ಇದರಲ್ಲಿ ಭಾರತದ ಪ್ರಾಚೀನ ಕಾಲದ ವಲಸೆಗಳ ಕುರಿತು ಸಹ ವಿವರವಾಗಿ ಒಂದು ಅಧ್ಯಾಯದಲ್ಲಿ ಬರೆದಿದ್ದಾರೆ.

ಈ ಪುಸ್ತಕ ಪ್ರಕಟವಾದ ನಂತರದಲ್ಲಿಯೇ ಆರಂಭದಲ್ಲಿ ಹೇಳಿದ ವರದಿಗಳು ಬಿಡುಗಡೆಯಾಗಿರುವುದು.

ಇಂದು ನಮ್ಮ ಸಮಾಜದಲ್ಲಿನ ಅನೇಕ ಸಂಕ್ಷೋಭೆಗಳಿಗೆ, ಜನಾಂಗೀಯ ಮತ್ತು ಧಾರ್ಮಿಕ ಹಿಂಸೆಗಳಿಗೆ ಭಾರತದ ‘ಚರಿತ್ರೆಯನ್ನು ತಿರುಚಿ, ವಿಕೃತಗೊಳಿಸಿ’ ಅವುಗಳನ್ನೇ ಸತ್ಯವೆಂದು ಜನರಿಗೆ ನಂಬಿಸಿರುವುದು ಮುಖ್ಯಕಾರಣ. ಬಲಪಂಥೀಯ ಶಕ್ತಿಗಳು ಚರಿತ್ರೆಯನ್ನು ಒಂದು ಹತಾರವಾಗಿ ಬಳಸಿಕೊಂಡ ಪರಿ ಇದು. ಹೀಗಾಗಿ ಜನರಿಗೆ ಚರಿತ್ರೆಯ ಕುರಿತ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ವಾಸ್ತವ ಚರಿತ್ರೆಯನ್ನು ಹೇಳುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಇತ್ತೀಚಿನ ಡಿಎನ್‍ಎ ಸಂಶೋಧನೆಗಳು ಹೆಚ್ಚಿನ ಬಲವನ್ನು ನೀಡಿವೆ. ಅವುಗಳನ್ನು ಜನರ ಬಳಿಗೆ ಹೇಗೆ ಕೊಂಡೊಯ್ಯುತ್ತೇವೆ ಎನ್ನುವುದೇ ಈಗ ನಮ್ಮ ಮುಂದಿರುವ ಪ್ರಶ್ನೆ.

(ಮುಂದಿನ ವಾರದ ನ್ಯಾಯಪಥ ಸಂಚಿಕೆಯಲ್ಲಿ ನಿರೀಕ್ಷಿಸಿ: ಡೇವಿಡ್ ರೀಚ್ ಅವರ ಜೊತೆಗೆ ಗಣೇಶ್ ದೇವಿ ಸಂವಾದ)


ಇದನ್ನು ಓದಿ: ದಿನವೊಂದರಲ್ಲಿ 62,538 ಪ್ರಕರಣಗಳ ವರದಿ: 20 ಲಕ್ಷ ದಾಟಿದ ಭಾರತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...