Homeಮುಖಪುಟಹಲಾಲ್, ಜಟ್ಕಾ ವಿವಾದದ ಸುಳಿಯಲ್ಲಿ - ದೇವನೂರ ಮಹಾದೇವ

ಹಲಾಲ್, ಜಟ್ಕಾ ವಿವಾದದ ಸುಳಿಯಲ್ಲಿ – ದೇವನೂರ ಮಹಾದೇವ

ಹಿಂದು-ಮುಸ್ಲಿಂ ಸಹಬಾಳ್ವೆಯ ಖಂಡುಗ ಹಾಲಿಗೆ ಒಂದು ಸೊಲಗ ವಿಷದ ಹೆಪ್ಪು ಹಾಕಿ ಸಮಾಜ ಛಿದ್ರಗೊಳಿಸಿ, ಧರ್ಮ ಕೋಮು ಧೃವೀಕರಣದ ಓಟು ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ.

- Advertisement -
- Advertisement -

ಇಂದು, ಮಾಂಸವನ್ನು ಎಂದೂ ತಿನ್ನದ ಪ.ಮಲ್ಲೇಶ್ ಅವರು ಹಲಾಲ್ ಮಾಂಸ ಕೊಂಡುಕೊಂಡಿದ್ದಾರೆ! ಇದು ನಿಜಕ್ಕೂ ಚಾರಿತ್ರಿಕ. ಮಲ್ಲೇಶ್ ಇಂದಿನ ವಿಷಮಯ ವಾತಾವರಣ ಕಂಡು ಜಿಗುಪ್ಸೆಗೊಂಡು ಈ ರೀತಿ ಅಭಿವ್ಯಕ್ತಿ ವ್ಯಕ್ತಪಡಿಸಿದ್ದಾರೆ. ನೊಂದವರಿಗೆ ಏನೋ ಒಂದಿಷ್ಟು ಸಾಂತ್ವಾನ ನೀಡಿದ್ದಾರೆ. ಇದು ಸಣ್ಣ ಕ್ರಿಯೆಯಾದರೂ ಅದು ಹಣತೆಯ ಬೆಳಕಿನಂತೆ.

ನಮ್ಮ ಹಳ್ಳಿ ಕಡೆ ಒಂದು ಮಾತಿದೆ – “ಆಯ್ದುಕೊಂಡು ತಿನ್ನೋ ಕೋಳಿಗೆ ಕಾಲು ಮುರಿಯಬಾರದು” ಅಂತ. ಹಾಗೇ ಇನ್ನೊಂದು ಮಾತೂ ಇದೆ – “ಹೊಟ್ಟೆಗೆ ಹೊಡೆಯಬಾರದು, ಅದು ಅಧರ್ಮ, ಪಾಪ” ಅಂತ. ಇಂದು ನಮ್ಮ ಸುತ್ತಮುತ್ತ ಇವೇ ಆಗುತ್ತಿವೆ. ಒಂದು ಉದಾಹರಣೆ – ಹಳೇಪೇಪರ್, ಖಾಲಿಬಾಟಲ್, ಹಾಲಿನ ಕವರ್ ಮಾರಲು ನಾನು ಕಾಯುತ್ತಿದ್ದೇನೆ. ಕೊಂಡುಕೊಳ್ಳುವವರು ಯಾರೊಬ್ಬರೂ ಕಾಣುತ್ತಿಲ್ಲ. ಕಲುಷಿತ ವಾತಾವರಣದಿಂದ ನಿಶ್ಯಬ್ಧರಾಗಿದ್ದಾರೆ. ಎಲ್ಲಿದ್ದಾರೋ ಏನು ಮಾಡುತ್ತಿದ್ದಾರೊ ಗೊತ್ತಿಲ್ಲ.

ಹಳೇಪೇಪರ್, ಹಾಲಿನ ಕವರ್, ಖಾಲಿ ಬಾಟಲ್ ಮಾರಾಟದಿಂದಾಗಿ ಇವುಗಳ ಪುನರ್ ಬಳಕೆಯಾಗುತ್ತಿತ್ತು. ಈಗ ಈ ಕಾಯಕ ನಿಂತಿದೆ. ಇದರಿಂದಾಗಿ, ಪೇಪರ್‌ಗಾಗಿ ಮರ ಕಡಿಯುವುದು ಹೆಚ್ಚುತ್ತದೆ. ಪರಿಣಾಮವಾಗಿ ಬಿಸಿಲು ಏರುತ್ತದೆ. ಕಾರ್ಬಲ್ ಡೈಆಕ್ಸೈಡ್ ಹೆಚ್ಚುತ್ತದೆ. ಭೂಮಿ ಬೇಯುತ್ತದೆ. ಪ್ಲಾಸ್ಟಿಕ್ ತ್ಯಾಜ್ಯ ಭೂಮಿಗೆ ಸೇರುವುದರಿಂದಲೂ ಭೂಮಿ ಅನಾರೋಗ್ಯವಾಗುತ್ತದೆ. ಇದನ್ನು ಸ್ವಲ್ಪಮಟ್ಟಿಗೆ ತಪ್ಪಿಸುತ್ತಿದ್ದ ಹಳೆಪೇಪರ್ ಮಾರಾಟದ ಕಾಯಕ ಜೀವಿಗಳು ಮಾಡುತ್ತಿದ್ದುದು ನಿಜಕ್ಕೂ ಭೂಮಿ ಸೇವೆ. ಇದೇ ದೇಶಸೇವೆ. ಇದು ಬಹುಶಃ ಆ ಕಾಯಕ ಜೀವಿಗಳಿಗೂ ಗೊತ್ತಿಲ್ಲ. ಸಮಾಜಕ್ಕೂ ಗೊತ್ತಿಲ್ಲ. ಇದು ದುರಂತ. ಆಯ್ತು, ಕಾವಿ ಬಟ್ಟೆ ತೊಟ್ಟು, ಇಂದು ಆರ್ಭಟಿಸುತ್ತಿರುವ ಮಠಮಾನ್ಯ ಸಂಘಟನೆಗಳು ತಮ್ಮ ಮರಿಗಳಿಂದ ‘ಅಹಂಕಾರ ನಿರಸನ ಕ್ರಿಯೆ’ಗಾಗಿ ಈ ಕಾಯಕ ಮಾಡಿಸಬಹುದಲ್ಲ?

ದ್ವೇಷ ಅಸಹನೆಯ ಕುಸಂಸ್ಕೃತಿಯ ರಂಗಪ್ರವೇಶವು ‘ಹಿಜಾಬ್ ನಿಷೇಧವಾಗಬೇಕು’ ಎಂಬ ದಾಂಧಲೆಯಿಂದ ಆರಂಭವಾಗುತ್ತದೆ. ಯಾರಿಗೊ ಒಬ್ಬರಿಗೆ ಕೋರ್ಟ್ ತೀರ್ಪು ವಿರುದ್ಧವಾದಾಗ ಆ ವ್ಯಕ್ತಿ ಹಾಗೂ ಆ ಕುಟುಂಬದವರು ಸಂಭ್ರಮಿಸಬೇಕಿತ್ತೆ? ಅವರು ತಮ್ಮ ದುಃಖಕ್ಕೆ ತಮ್ಮ ಮನೆ ಬಾಗಿಲು ಮುಚ್ಚಿಕೊಂಡು ಮೌನವಾದರು ಎಂದಿಟ್ಟುಕೊಳ್ಳೋಣ. ಇದು ನ್ಯಾಯಾಂಗದ ಆದೇಶ ಉಲ್ಲಂಘನೆಯಾಗುತ್ತದೆಯೆ? ಇಲ್ಲೂ ಇದೇ ರೀತಿ ಆಯ್ತು. ಹಿಜಾಬ್ ವಿರುದ್ಧ ಕೋರ್ಟ್ ತೀರ್ಪು ವಿರುದ್ಧವಾದಾಗ- 17-03-2022ರಂದು ಬಂದ್ ಸತ್ಯಾಗ್ರಹಕ್ಕೆ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕರೆ ನೀಡುತ್ತದೆ. ಮುಸ್ಲಿಂ ಸಂಘಟನೆಗಳ ಒಕ್ಕೂಟ ತಮ್ಮ ಕರಪತ್ರದಲ್ಲಿ ಹೀಗೆ ಹೇಳುತ್ತಾರೆ – “ಇಂದು ನಡೆಯುತ್ತಿರುವ ಬಂದ್ ಯಾರ ವಿರುದ್ಧವಾದುದೂ ಅಲ್ಲ. ಯಾರಿಗೂ ತೊಂದರೆ ಕೊಡುವಂಥದ್ದೂ ಅಲ್ಲ. ‘ಉಪವಾಸ ಸತ್ಯಾಗ್ರಹ’ದ ರೀತಿ ನಾವು ‘ಬಂದ್ ಸತ್ಯಾಗ್ರಹ’ ನಡೆಸುತ್ತಿದ್ದೇವೆ ಅಷ್ಟೆ. ನಾವು ನಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆಯದೆ ನಮಗಾಗಿರುವ ನೋವನ್ನು ಅಭಿವ್ಯಕ್ತಿ ಪಡಿಸುತ್ತಿದ್ದೇವೆ. ಯಾರಿಗೂ ಬಲವಂತ ಮಾಡುತ್ತಿಲ್ಲ. ಬೀದಿಗೆ ಇಳಿಯುತ್ತಿಲ್ಲ. ಘೋಷಣೆಯನ್ನೂ ಹಾಕುತ್ತಿಲ್ಲ. ನಾವು ಬಹಳ ಬಹಳ ನೊಂದಿದ್ದೇವೆ ಎಂದಷ್ಟೆ ಎಲ್ಲಾ ಧರ್ಮದ ಬಂಧುಗಳಿಗೆ ಹೇಳಬಯಸುತ್ತೇವೆ” – ಇದಿಷ್ಟೇ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಮಾತುಗಳು. ಹಾಗೆ ನೋಡುವುದಾದರೆ ಈ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಬಂದ್ ನಾಗರೀಕವಾದ ಒಂದು ಘನತೆಯ ಮಾದರಿಯನ್ನು ಸೃಷ್ಟಿಸಿದೆ. ಆದರೆ ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು ಎಂಬಂತೆ ಕೆಲವರಿಗೆ ಕಂಡಿದೆ! ಹಾಗಾಗಿ ಈ ಬಂದ್ ನೆಪಮಾಡಿಕೊಂಡು ಜಾತ್ರೆಯಲ್ಲಿ ಮುಸ್ಲಿಮ್ ವ್ಯಾಪಾರಕ್ಕೆ ತಗಾದೆ ತೆಗೆದರು. ಇಂದು ಆ ಗುಂಪೇ ಹಲಾಲ್ ಮಾಂಸಕ್ಕೆ ಮುಗಿಬಿದ್ದಿದ್ದಾರೆ. ಮಾಂಸ ತಿನ್ನದವರೇ ಹೆಚ್ಚಾಗಿ ಹಲಾಲ್ ಮಾಂಸಕ್ಕೆ ಯಕ್ಷಗಾನ, ನಾಟಕ ಮಾಡುತ್ತಿದ್ದಾರೆ. ಧರ್ಮದ ಮುಖವಾಡದಲ್ಲಿ ಅದರೊಳಗೆ ಅಧರ್ಮ, ದ್ವೇಷ ಕುಣಿದು ಕುಪ್ಪಳಿಸುತ್ತಿದೆ. ಯಾಕಾಗಿ? ಹಿಂದು-ಮುಸ್ಲಿಂ ಸಹಬಾಳ್ವೆಯ ಖಂಡುಗ ಹಾಲಿಗೆ ಒಂದು ಸೊಲಗ ವಿಷದ ಹೆಪ್ಪು ಹಾಕಿ ಸಮಾಜ ಛಿದ್ರಗೊಳಿಸಿ, ಧರ್ಮ ಕೋಮು ಧೃವೀಕರಣದ ಓಟು ಬ್ಯಾಂಕ್ ರಾಜಕಾರಣದ ಗೆಲುವಿಗಾಗಿ. ಇದಕ್ಕಾಗಿ ಅಧರ್ಮವೇ ಧರ್ಮದ ಮುಖವಾಡದಲ್ಲಿ ದ್ವೇಷ ಅಸಹನೆಯನ್ನು ಬಿತ್ತಿ, ಬೆಳೆದು, ಕೊಂದು, ಉಂಡು, ತಿಂದು ಕೊಬ್ಬುತ್ತಿದೆ. (ಇದನ್ನೆಲ್ಲಾ ನೋಡಿದಾಗ ಕುವೆಂಪು ಅವರು ಹೇಳಿದ ಒಂದು ರೂಪಕ ನೆನಪಾಗುತ್ತಿದೆ – “ಲಂಗೋಟಿ ಕಟ್ಟಿಕೊಂಡು ಕುಸ್ತಿ ಮಾಡುವವರೊಟ್ಟಿಗೆ ಕುಸ್ತಿ ಮಾಡಬಹುದು. ಆದರೆ ಲಂಗೋಟಿ ಬಿಚ್ಚಿ ಕುಸ್ತಿ ಮಾಡುವವರ ಜೊತೆ ಹೇಗೆ ಕುಸ್ತಿ ಮಾಡುವುದು? ನಾವು ಆ ನಿರ್ಲಜ್ಜ ಅಖಾಡಕ್ಕೆ ಹೋಗಲೇಬಾರದು”.) ಇಂದು ಲಂಗೋಟಿ ಇಲ್ಲದೆ, ನಿರ್ಲಜ್ಜವಾಗಿ ಕುಸ್ತಿ ಆಡುವವರೇ, ಎತ್ತ ನೋಡಿದರೂ ಕಾಣಿಸುತ್ತಿದ್ದಾರೆ. ನಾವು ಕುಸ್ತಿ ಆಡುವುದೆಂತು?

ನಾವು ಈ ಸರ್ಕಾರಕ್ಕೆ ಇದಿಷ್ಟನ್ನಾದರೂ ಕೇಳಬೇಕು – “ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ” ಇದೆಯಾ? ಇಲ್ಲವೇ ಇಲ್ಲ, ಬಿಲ್‌ಕುಲ್ ಕಾಣುತ್ತಿಲ್ಲ. ಛೂಬಿಟ್ಟ ಗುಂಪು, ತಾವೆ ಕಾನೂನು ಕೈಗೆತ್ತಿಕೊಂಡು, ತಾವೇ ನ್ಯಾಯಾಧೀಶರಂತೆ ಪೊಲೀಸ್‌ರಂತೆ ವರ್ತಿಸುತ್ತಿವೆ. ಆಯ್ತು, ಸರ್ಕಾರವಾದರೂ ಇದೆಯಾ? ನನಗಂತು ಇದೆ ಅಂತ ಅನ್ನಿಸುತ್ತಿಲ್ಲ. ಅಥವಾ ಬಜರಂಗದಳ, ಶ್ರೀರಾಮಸೇನೆ, ಕೆಲ ಮಠಗಳಿಗೆ ಸರ್ಕಾರವೇ ಕಣ್ಸನ್ನೆ ಮಾಡಿ ಲಾ & ಆರ್ಡರ್ ಹದಗೆಡಿಸಲು ಛೂ ಬಿಟ್ಟಿದಿಯಾ? ಇದಲ್ಲದೆ ಇನ್ನೇನು? ಬಜರಂಗದಳದ ಅಮಾಯಕ ಹುಡುಗರಿಗೆ ಉದ್ಯೋಗ ನೀಡಿದ್ದರೂ ಇಷ್ಟೆಲ್ಲಾ ಗಲಭೆ ಆಗುತ್ತಿರಲಿಲ್ಲ. ಈಗ ಇನ್ನೊಂದು ಪಿಶಾಚಿ ಇಣುಕುತ್ತಿದೆ – ಅದೇ ಪ್ರಾಣಿವಧೆ ಮಾಡುವಾಗ ಅದನ್ನು ಹೇಗೆ ಕೊಲ್ಲಬೇಕು ಅಂತ, ಕೆಲವರು ಮಾನವೀಯತೆಯಿಂದ ಕೊಲ್ಲಬೇಕು ಅಂತ ಅನ್ನುತ್ತಿದ್ದಾರೆ. ಪ್ರಾಣಿ ಕೊಲ್ಲುವುದೇ ಅದರ ಮಾಂಸ ತಿನ್ನುವುದಕ್ಕಾಗಿ. ಇದರಲ್ಲಿ ‘ಮಾನವೀಯತೆ’ ಪದಬಳಕೆ ಯಾಕೆ? ಪ್ರಾಣಿವಧೆ ಹೇಗೆ ಮಾಡಬೇಕೆಂಬ ಈ ವಿವಾದ ಹೆಚ್ಚಿದರೆ, ನೆನಪಿರಲಿ, ಅದರೊಳಗೆ ಮನುಷ್ಯ ವಧೆ ಬಚ್ಚಿಟ್ಟುಕೊಂಡಿದೆ. “ಒಂದು ಹಿಂದೂ ಹೆಣಬಿದ್ದರೆ ಅಲ್ಲಿ ಬಿಜೆಪಿ ಗೆಲವು ಗ್ಯಾರಂಟಿ” ಎಂಬ ಮನಸ್ಥಿತಿ ಇರುವಾಗ ಯಾವುದು ಅಸಾಧ್ಯ? ಮಾಂಸಾಹಾರಿಗಳು ಪ್ರಾಣಿವಧೆ ಮಾಡುತ್ತಿದ್ದರೆ ಸರ್ಕಾರ ನರಬಲಿ ಕೇಳುತ್ತಿದೆ, ತನ್ನ ಗೆಲುವಿಗಾಗಿ.

ಬೇಲಿಯೇ ಎದ್ದು ಹೊಲ ಮೇಯುತ್ತಾ ಇರುವಾಗ ಯಾರನ್ನು ಕೇಳುವುದು? ಉಳಿದಿರುವುದು ಒಂದೇ ದಾರಿ. ನಾಡಿನ ಯಾವುದೇ ಮೂಲೆಗೆ ಹೋದರೂ, ಯಾವುದೇ ಹಳ್ಳಿಗೆ ಹೋದರೂ ಸಕಲ ಹದಿನೆಂಟು ಜಾತಿ ಧರ್ಮಕ್ಕೆ ಸೇರಿದ ಸಹಬಾಳ್ವೆ ಬಯಸುವ ಮನುಷ್ಯರು ಸಿಕ್ಕೇ ಸಿಗುತ್ತಾರೆ. ನಾವೀಗ ಅವರ ಕಡೆ ನೋಡಬೇಕಿದೆ. ಎಲ್ಲಡೆಯೂ ‘ಸಕಲೆಂಟು ಜಾತಿ/ಮತ ಸಹಬಾಳ್ವೆ ಸಂಘ’ ಚಿಗುರಬೇಕಾಗಿದೆ. ನಾಡು ಉಳಿಯಬೇಕಾದರೆ ಅದು ಕ್ರಿಯಾಶೀಲವಾಗಬೇಕಾಗಿದೆ.

  • ದೇವನೂರ ಮಹಾದೇವ

(ಕನ್ನಡದ ಹಿರಿಯ ಸಾಹಿತಿಗಳು ಮತ್ತು ಜನಪರ ಹೋರಾಟಗಾರರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; ಇಂದಿನಿಂದ ಹೋಟೆಲ್ ಊಟ-ತಿಂಡಿ ದರ ಏರಿಕೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಡೋಜ ದೇವನೂರು ಮಹದೇವ ಅವರ ಈ ಮಾನವೀಯ ಮಾತುಗಳು ಅಂದರಾದ ಜನರ ಕಣ್ಣು ತೆರೆಸಲಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...