Homeಮುಖಪುಟಒಳಮೀಸಲಾತಿಯೆಂಬುದು ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರ - ಅಂಬಣ್ಣ...

ಒಳಮೀಸಲಾತಿಯೆಂಬುದು ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರ – ಅಂಬಣ್ಣ ಅರೋಲಿಕರ್

ಬಲಾಢ್ಯರು ಹಾಗೂ ಬಡಕಲು ವ್ಯಕ್ತಿಗಳ ನಡುವೆ ಸ್ಪರ್ಧೆಗೆ ಅವಕಾಶ ನೀಡಿದರೆ ಅಂತಿಮವಾಗಿ ಅನ್ಯಾಯವಾಗುವುದು ಮಾತ್ರ ಬಡಕಲು ವ್ಯಕ್ತಿಗಳಿಗೆ ಎಂಬ ಸರಳ ಸತ್ಯವು ಬಹುತೇಕರಿಗೆ ಅರ್ಥವಾಗದಿರುವುದು ಈ ದೇಶದ ದೌರ್ಭಾಗ್ಯವೇ ಸರಿ.

- Advertisement -
- Advertisement -

ಸ್ವಾತಂತ್ರ್ಯ ನಂತರದ 70 ವರ್ಷಗಳ ಅವಧಿಯಲ್ಲಿ ಸರಿ ಸುಮಾರು ಮೂವತ್ತೈದು ವರ್ಷಗಳ ಕಾಲ, ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟ 15% ಮೀಸಲಾತಿಯನ್ನು ಆದ್ಯತೆಯನುಸಾರ ಬಲಹೀನರಿಗೆ ಹಾಗೂ ಅವಕಾಶ ವಂಚಿತರಿಗೆ ಅವರವರ ಆರ್ಥಿಕ ಅಸಮಾನತೆಗಳ ಆಧಾರದ ಮೇಲೆ, ವಿದ್ಯೆ ಹಾಗೂ ಉದ್ಯೋಗವಕಾಶಗಳಿಗೆ ಮಾತ್ರ ಉಪಯುಕ್ತವಾಗುವಂತೆ ಹಂಚುವಂತೆ ಹೋರಾಡುತ್ತಿರುವುದೇ ಬಹುದೊಡ್ಡ ಅಪರಾಧವೆಂಬಂತೆ ಚಿತ್ರೀಕರಿಸಲಾಗುತ್ತಿದೆ. ಬಹುತೇಕ ಎಲ್ಲಾ ನ್ಯಾಯಪಾಲಕರು ಹಾಗೂ ಬುದ್ಧಿಜೀವಿಗಳೆನಿಸಿಕೊಂಡ ಅಕ್ಷರಸ್ಥರು ತಮ್ಮ ತಮ್ಮ ಅವಗಾಹನೆಗೆ ತಕ್ಕಂತೆ ವಿಶ್ಲೇಷಣೆ ಮಾಡುತ್ತಾ, ಹಸಿದು ಹೌಹಾರಿದ ಸಮುದಾಯಗಳ ಮೇಲೆ ಅತಿಕ್ರಮಣ ನಡೆಸಿರುವುದು ಬಿಟ್ಟರೆ, ಆ ಸಮುದಾಯಗಳ ಹಸಿವಿನ ಬೇಗುದಿಯನ್ನು ಯಾವ ರೀತಿಯಾಗಿ ಶಮನ ಮಾಡಬೇಕೆಂಬುದರ ಬಗ್ಗೆ ಚಿಂತಿಸಲೇ ಇಲ್ಲ. ಇದು ‘ಸೋತವರ ಮೇಲೆ ಬಲಿತವರು ಬಿದ್ದರು’ ಎಂಬಂತಾಗಿದೆ. ಇದು ಈ ದೇಶದ ಪ್ರಗತಿಪರ, ಜೀವಪರ, ಜನಪರತೆಯ ಕಾಳಜಿಗೆ ಬಹುದೊಡ್ಡ ನಿದರ್ಶನವಾಗಿದೆ.

ಬಹುಸಂಖ್ಯಾತ ಅಸ್ಪೃಶ್ಯ ಸಮುದಾಯಗಳು ಕಳೆದ 35 ವರ್ಷಗಳಲ್ಲಿ ಸತತವಾಗಿ ಹೋರಾಡಿದ ಪರಿಣಾಮದಿಂದ ಕಾಂಗ್ರೆಸ್ ಸರ್ಕಾರವು ನ್ಯಾಯಮೂರ್ತಿ ಎ.ಜೆ ಸದಾಶಿವರವರ ಏಕಸದಸ್ಯ ಆಯೋಗವನ್ನು ನೇಮಿಸಿದರೆ, ಬಿಜೆಪಿ ಸರ್ಕಾರವು ಆಯೋಗದ ಸಮೀಕ್ಷೆಗೆ ಅನುದಾನವನ್ನು ನೀಡಿದೆ. ಇನ್ನು ಜೆಡಿಎಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವುದಾಗಿ ಲಿಖಿತ ಭರವಸೆಯನ್ನು ನೀಡಿದೆ. ಹೀಗಿರುವಾಗ ಈ ರಾಜ್ಯದ 224 ಶಾಸಕರು ಈ ಆಯೋಗದ ಶಿಫಾರಸ್ಸುಗಳನ್ನು ಸರ್ವಾನುಮತದಿಂದ ಅಂಗೀಕರಿಸಿ ಜಾರಿಗೊಳಿಸಲು ಯಾವ ಸೀಮೆಯ ಸಾಮಾಜಿಕ ನ್ಯಾಯ ಅಡ್ಡ ಬರುತ್ತದೆಯೋ? ಉತ್ತರಿಸಬೇಕಾದ ಜವಾಬ್ದಾರಿ ಸರ್ವ ಪಕ್ಷಗಳಿಗೆ ಸೇರಿದ ವಿಚಾರವಾಗಿದೆ.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಹೌದು ಇಂತಹ ಅಭಿಪ್ರಾಯವು ಒಂದಷ್ಟು ಜನರಿಗೆ ಅತಿಶಯೋಕ್ತಿ ಎನಿಸಿದರೂ ಅಕ್ಷರಶಃ ಅಸ್ಪೃಶ್ಯ ಸಮುದಾಯಗಳ ಪಾಲಿಗೆ ಹಾಗೂ ಅವಕಾಶ ವಂಚಿತರಿಗೆ ಅತಿ ಹತ್ತಿರವಾದ ಅನುಭವದ ಮಾತಾಗಿದೆ. ದೇಶದ ಯಾವುದೇ ರಾಜ್ಯಗಳಲ್ಲೂ ಅಸ್ಪೃಶ್ಯ ಸಮುದಾಯಗಳ ಪಟ್ಟಿಯಲ್ಲಿ ಅಸ್ಪೃಶ್ಯೇತರರು ಸೇರ್ಪಡೆಯಾಗದೆ ಕರ್ನಾಟಕದಲ್ಲಿ ಮಾತ್ರ ಇದು ಸಾಧ್ಯವಾಗಿದೆ. ಸ್ಪೃಶ್ಯರು ಸಹ ಆರ್ಥಿಕವಾಗಿ ಅತ್ಯಂತ ಸಬಲರು ಎನ್ನುತ್ತಿಲ್ಲ, ಆದರೆ ಬಲಾಢ್ಯರು ಹಾಗೂ ಬಡಕಲು ವ್ಯಕ್ತಿಗಳ ನಡುವೆ ಸ್ಪರ್ಧೆಗೆ ಅವಕಾಶ ನೀಡಿದರೆ ಅಂತಿಮವಾಗಿ ಅನ್ಯಾಯವಾಗುವುದು ಮಾತ್ರ ಬಡಕಲು ವ್ಯಕ್ತಿಗಳಿಗೆ ಎಂಬ ಸರಳ ಸತ್ಯವು ಅತ್ತ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಗಳಿಗೆ ಇತ್ತ ಸಾಮಾಜಿಕ ನ್ಯಾಯದ ಪರ ಶತಮಾನಗಳ ಕಾಲ ಬೊಗಳೆ ಬಿಡುವ ಬುದ್ಧಿವಂತರಿಗೂ ಅರ್ಥವಾಗದೆ ಇರುವುದು ಈ ದೇಶದ ದೌರ್ಭಾಗ್ಯವೇ ಸರಿ. ಆರ್ಥಿಕವಾಗಿ ಬಲಹೀನರಾದವರಿಗೆಲ್ಲಾ ಮೀಸಲಾತಿಯನ್ನು ನೀಡಿದಂತೆ ಸ್ಪೃಶ್ಯ ಸಮುದಾಯಗಳಿಗೂ ಅವರ ಆರ್ಥಿಕ, ಶೈಕ್ಷಣಿಕ ಆದ್ಯತೆಗಳ ಅನುಸಾರ ವಿಶೇಷವಾದ ಮೀಸಲಾತಿಯನ್ನು ನೀಡಲು ಯಾರ ಅಭ್ಯಂತರವೂ ಇಲ್ಲ. ಆದರೆ ಇಲ್ಲಿ ಆಗಿರುವುದೆ ಬೇರೆ – ರಾಜಕೀಯ ಪಕ್ಷಗಳು ತಮ್ಮ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಡಜನ್‍ಗೂ ಅಧಿಕ ಜಾತಿಗಳನ್ನು ತಮ್ಮ ಮನಸೋ ಇಚ್ಚೆ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವ ಮೂಲಕ ಮೂಲ ಪರಿಶಿಷ್ಟರಿಗೆ ಆಗಬಹುದಾದ ಸಹಜ ಅನ್ಯಾಯದ ಅಪಾಯವನ್ನು ಲೆಕ್ಕಿಸದೆ ಇರುವುದು ದುರಂತ.

ಈ ಪ್ರಕ್ರಿಯೆ ಯಾವುದೇ ಪ್ರಗತಿಪರ ಕಾಳಜಿಯುಳ್ಳ ಮತಿವಂತರಿಗೆ ಅರ್ಥವಾಗದೇ ಇರುವುದು ಅತ್ಯಂತ ಘೋರ ಅಪರಾಧವೆಂದೆ ಹೇಳಬೇಕಿದೆ. ಇದ್ಯಾವುದು ಕಾನೂನಿನ ಪ್ರಕಾರ ಅಪರಾಧವಲ್ಲ. ಆದರೆ ಇರುವ ಮೀಸಲಾತಿಯನ್ನು ಕಟ್ಟಕಡೆಯ ಜನರಿಗೆ ಪ್ರಾಮಾಣಿಕವಾಗಿ ಹಂಚಬೇಕೆಂಬ ಪರಿಕಲ್ಪನೆಯನ್ನೇ ಸಂವಿಧಾನಬಾಹಿರವೆನ್ನುವ ಆಷಾಡಭೂತಿತನ ಮಾತ್ರ ಮನುವಾದ, ಕೋಮವಾದಕ್ಕಿಂತಲೂ ಕ್ರ್ರೂರತನದ್ದಾಗಿದೆ. ಇನ್ನು ಮೇಲ್ಜಾತಿಗಳಿಗೆ ಮೀಸಲಾತಿಯ ಹೆಚ್ಚಳವಾಗುವುದು ಇರಲಿ, ಎಲ್ಲಾ ವಲಯಗಳು ಕಾರ್ಪೋರೇಟ್ ಕಬಂದಬಾಹುಗಳಿಗೆ ಸಿಲುಕಿ ಖಾಸಗೀಕರಣವಾಗಿರುವುದಾಗಲಿ ಇವರಿಗೆ ಅಪಾಯಕಾರಿ ಎನಿಸುವುದಿಲ್ಲ. ಹಳ್ಳಿಗಾಡಿನ, ಅನಕ್ಷರಸ್ಥ ಸಮುದಾಯಗಳು ನಡೆಸುವ ಹಳ್ಳಿಕಟ್ಟೆ ಪಂಚಾಯ್ತಿಯಲ್ಲಿ ಬಗೆಹರಿಯಬಹುದಾದ ಪಿತ್ರಾರ್ಜಿತ ಅಸ್ತಿಯ ಹಂಚಿಕೆಯಂತೆ ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರವು ದೆಹಲಿ ಹಂತದ ಪಂಚಾಯಿತಿಯಲ್ಲಿ ಕಳೆದ 70 ವರ್ಷಗಳಿಂದಲೂ ಬಗೆಹರಿಯದೆ, ಅನಿರ್ಧಿಷ್ಟ ಕಾಲದವರೆಗೂ ವಾದ ವಿವಾದಗಳಲ್ಲೇ ಕಾಲಹರಣವಾಗುತ್ತಿದೆ. ಇದು ಎರಡು ತಲೆಮಾರುಗಳ ಕೋಟ್ಯಾಂತರ ಜನಗಳ ವಿದ್ಯೆ ಹಾಗೂ ಉದ್ಯೋಗದ ವಂಚನೆಗೆ ಕಾರಣವಾಗಿದೆ.

ಪರಿಶಿಷ್ಟ ಜಾತಿಗಳು ಇದುವರೆಗೂ ಎತ್ತಿರುವ ಪ್ರಶ್ನೆ ಮೀಸಲಾತಿ ಹೆಚ್ಚಳವಾಗಬೇಕಂದಲ್ಲ. ಈಗಾಗಲೇ ಅಸ್ಪೃಶ್ಯರಲ್ಲೇ ಅತೀ ಬುದ್ಧಿವಂತರಾದ ಪ್ರಭಾವಿ ರಾಜಕಾರಣಿಗಳು ಹಾಗೂ ಅಕ್ರಮವಾಗಿ ನುಸುಳಲ್ಪಟ್ಟ ಅಸ್ಪೃಶ್ಯೇತರರು ಇರುವ ಎಲ್ಲಾ ಅವಕಾಶಗಳನ್ನು ಬಾಚಿ ತಿಂದು ಬಲಾಢ್ಯರಾಗಿ ಮೆರೆಯುತ್ತಿರುವಾಗ, ಇದ್ದ ಬಿದ್ದ ಹಳಸಲು ಅನ್ನವನ್ನಾದರು ನಮ್ಮ ಹಸಿದ ಹೊಟ್ಟೆಗೆ ನೀಡಿ ಎಂದು ಈ ನೆಲದ ಸಫಾಯಿ ಕರ್ಮಚಾರಿಗಳು ಹಾಗೂ ಮಲ ಬಳೆಯುವ ಪೌರಕಾರ್ಮಿಕರು ಕಳೆದ ಮೂರು ದಶಕಗಳಿಂದ ಅಂಗಲಾಚಿ ಪರಿತಪಿಸುತ್ತಿದ್ದರೂ ಯಾವ ಸರ್ಕಾರಗಳಿಗೂ ಹಾಗೂ ಯಾವ ನ್ಯಾಯಾಲಯಗಳಿಗೂ ಕಿಂಚಿತ್ತೂ ಅಲುಗಾಡುತ್ತಿಲ್ಲ. ಇದರ ಹಿಂದೆ ಅಸ್ಪೃಶ್ಯತೆಯು ಇನ್ನು ಹಲವಾರು ಶತಮಾನಗಳ ಕಾಲ ಅಸ್ತಿತ್ವದಲ್ಲಿರಬೇಕೆಂಬ ಉದ್ದೇಶ ಅಡಗಿದೆ ಎಂದು ಎನಿಸುತ್ತಿದೆ. ಕಸ ಬಳಿಯುವವರು ಕಾಲಾನುಕಾಲದಿಂದ ಕಸಬಳಿಯುತ್ತಲೇ ಇರಬೇಕೆಂಬ ಶ್ರೇಣಿಕೃತ ವ್ಯವಸ್ಥೆಯ ಹುನ್ನಾರದ ಮುಂದುವರೆದ ಭಾಗವೇ ಇದು ಎಂಬುದನ್ನು ಈ ದೇಶದ ಪ್ರಜಾತಂತ್ರವಾದಿಗಳು ಹಾಗೂ ಪ್ರಗತಿಪರವಾದದ ಪೊರೆ ಆವರಿಸಿದ ಅಣ್ಣಂದಿರು ಅರ್ಥಮಾಡಿಕೊಂಡರೆ, ಅರೆಗಳಿಗೆಯಲ್ಲಿ ಹಸಿದ ಜನಗಳಿಗೆ ಹಳಸಿದ ಅನ್ನವನ್ನಾದರೂ ನೀಡಿ, ಅರೆ ಜೀವದಲ್ಲಿರುವ ಅಸಂಖ್ಯಾತ ಅಸ್ಪೃಶ್ಯ ಸಮುದಾಯಗಳನ್ನು ಅರೆಕಾಲಿಕವಾಗಿಯಾದರೂ ಐಸಿಯುನಿಂದ ಜನರಲ್ ವಾರ್ಡ್‍ಗೆ ಸ್ಥಳಾಂತರಿಸಬಹುದಾಗಿದೆ ಎಂದು ನಂಬಿದ್ದೇನೆ.

ಅಂಬಣ್ಣ ಅರೋಲಿಕರ್

(ತಮ್ಮ ಹೋರಾಟದ ಹಾಡುಗಳ ಗಾಯನದಿಂದ ಪ್ರಖ್ಯಾತವಾಗಿದ್ದ ಅಂಬಣ್ಣ ಅರೋಲಿಕರ್ ಈಗ ಮಾದಿಗ ಮೀಸಲಾತಿ ಹೋರಾಟದ ರಾಜ್ಯ ಮಟ್ಟದ ನಾಯಕರಲ್ಲೊಬ್ಬರು. ರಾಯಚೂರಿನಲ್ಲಿ ಜನಬಲ ಟೈಮ್ಸ್ ದಿನಪತ್ರಿಕೆಯನ್ನು ನಡೆಸುತ್ತಿರುವ ಅಂಬಣ್ಣ ಕಳೆದ ಮೂರು ದಶಕಗಳಿಗಿಂತ ಹೆಚ್ಚು ಸಮಯ ಚಳವಳಿಯಲ್ಲಿ ಪಾಲ್ಗೊಂಡಿದ್ದ ಕ್ರಿಯಾಶೀಲ ವ್ಯಕ್ತಿ.)


ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...