Homeಮುಖಪುಟಒಳಮೀಸಲಾತಿಯೆಂಬುದು ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರ - ಅಂಬಣ್ಣ...

ಒಳಮೀಸಲಾತಿಯೆಂಬುದು ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರ – ಅಂಬಣ್ಣ ಅರೋಲಿಕರ್

ಬಲಾಢ್ಯರು ಹಾಗೂ ಬಡಕಲು ವ್ಯಕ್ತಿಗಳ ನಡುವೆ ಸ್ಪರ್ಧೆಗೆ ಅವಕಾಶ ನೀಡಿದರೆ ಅಂತಿಮವಾಗಿ ಅನ್ಯಾಯವಾಗುವುದು ಮಾತ್ರ ಬಡಕಲು ವ್ಯಕ್ತಿಗಳಿಗೆ ಎಂಬ ಸರಳ ಸತ್ಯವು ಬಹುತೇಕರಿಗೆ ಅರ್ಥವಾಗದಿರುವುದು ಈ ದೇಶದ ದೌರ್ಭಾಗ್ಯವೇ ಸರಿ.

- Advertisement -
- Advertisement -

ಸ್ವಾತಂತ್ರ್ಯ ನಂತರದ 70 ವರ್ಷಗಳ ಅವಧಿಯಲ್ಲಿ ಸರಿ ಸುಮಾರು ಮೂವತ್ತೈದು ವರ್ಷಗಳ ಕಾಲ, ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟ 15% ಮೀಸಲಾತಿಯನ್ನು ಆದ್ಯತೆಯನುಸಾರ ಬಲಹೀನರಿಗೆ ಹಾಗೂ ಅವಕಾಶ ವಂಚಿತರಿಗೆ ಅವರವರ ಆರ್ಥಿಕ ಅಸಮಾನತೆಗಳ ಆಧಾರದ ಮೇಲೆ, ವಿದ್ಯೆ ಹಾಗೂ ಉದ್ಯೋಗವಕಾಶಗಳಿಗೆ ಮಾತ್ರ ಉಪಯುಕ್ತವಾಗುವಂತೆ ಹಂಚುವಂತೆ ಹೋರಾಡುತ್ತಿರುವುದೇ ಬಹುದೊಡ್ಡ ಅಪರಾಧವೆಂಬಂತೆ ಚಿತ್ರೀಕರಿಸಲಾಗುತ್ತಿದೆ. ಬಹುತೇಕ ಎಲ್ಲಾ ನ್ಯಾಯಪಾಲಕರು ಹಾಗೂ ಬುದ್ಧಿಜೀವಿಗಳೆನಿಸಿಕೊಂಡ ಅಕ್ಷರಸ್ಥರು ತಮ್ಮ ತಮ್ಮ ಅವಗಾಹನೆಗೆ ತಕ್ಕಂತೆ ವಿಶ್ಲೇಷಣೆ ಮಾಡುತ್ತಾ, ಹಸಿದು ಹೌಹಾರಿದ ಸಮುದಾಯಗಳ ಮೇಲೆ ಅತಿಕ್ರಮಣ ನಡೆಸಿರುವುದು ಬಿಟ್ಟರೆ, ಆ ಸಮುದಾಯಗಳ ಹಸಿವಿನ ಬೇಗುದಿಯನ್ನು ಯಾವ ರೀತಿಯಾಗಿ ಶಮನ ಮಾಡಬೇಕೆಂಬುದರ ಬಗ್ಗೆ ಚಿಂತಿಸಲೇ ಇಲ್ಲ. ಇದು ‘ಸೋತವರ ಮೇಲೆ ಬಲಿತವರು ಬಿದ್ದರು’ ಎಂಬಂತಾಗಿದೆ. ಇದು ಈ ದೇಶದ ಪ್ರಗತಿಪರ, ಜೀವಪರ, ಜನಪರತೆಯ ಕಾಳಜಿಗೆ ಬಹುದೊಡ್ಡ ನಿದರ್ಶನವಾಗಿದೆ.

ಬಹುಸಂಖ್ಯಾತ ಅಸ್ಪೃಶ್ಯ ಸಮುದಾಯಗಳು ಕಳೆದ 35 ವರ್ಷಗಳಲ್ಲಿ ಸತತವಾಗಿ ಹೋರಾಡಿದ ಪರಿಣಾಮದಿಂದ ಕಾಂಗ್ರೆಸ್ ಸರ್ಕಾರವು ನ್ಯಾಯಮೂರ್ತಿ ಎ.ಜೆ ಸದಾಶಿವರವರ ಏಕಸದಸ್ಯ ಆಯೋಗವನ್ನು ನೇಮಿಸಿದರೆ, ಬಿಜೆಪಿ ಸರ್ಕಾರವು ಆಯೋಗದ ಸಮೀಕ್ಷೆಗೆ ಅನುದಾನವನ್ನು ನೀಡಿದೆ. ಇನ್ನು ಜೆಡಿಎಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವುದಾಗಿ ಲಿಖಿತ ಭರವಸೆಯನ್ನು ನೀಡಿದೆ. ಹೀಗಿರುವಾಗ ಈ ರಾಜ್ಯದ 224 ಶಾಸಕರು ಈ ಆಯೋಗದ ಶಿಫಾರಸ್ಸುಗಳನ್ನು ಸರ್ವಾನುಮತದಿಂದ ಅಂಗೀಕರಿಸಿ ಜಾರಿಗೊಳಿಸಲು ಯಾವ ಸೀಮೆಯ ಸಾಮಾಜಿಕ ನ್ಯಾಯ ಅಡ್ಡ ಬರುತ್ತದೆಯೋ? ಉತ್ತರಿಸಬೇಕಾದ ಜವಾಬ್ದಾರಿ ಸರ್ವ ಪಕ್ಷಗಳಿಗೆ ಸೇರಿದ ವಿಚಾರವಾಗಿದೆ.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಹೌದು ಇಂತಹ ಅಭಿಪ್ರಾಯವು ಒಂದಷ್ಟು ಜನರಿಗೆ ಅತಿಶಯೋಕ್ತಿ ಎನಿಸಿದರೂ ಅಕ್ಷರಶಃ ಅಸ್ಪೃಶ್ಯ ಸಮುದಾಯಗಳ ಪಾಲಿಗೆ ಹಾಗೂ ಅವಕಾಶ ವಂಚಿತರಿಗೆ ಅತಿ ಹತ್ತಿರವಾದ ಅನುಭವದ ಮಾತಾಗಿದೆ. ದೇಶದ ಯಾವುದೇ ರಾಜ್ಯಗಳಲ್ಲೂ ಅಸ್ಪೃಶ್ಯ ಸಮುದಾಯಗಳ ಪಟ್ಟಿಯಲ್ಲಿ ಅಸ್ಪೃಶ್ಯೇತರರು ಸೇರ್ಪಡೆಯಾಗದೆ ಕರ್ನಾಟಕದಲ್ಲಿ ಮಾತ್ರ ಇದು ಸಾಧ್ಯವಾಗಿದೆ. ಸ್ಪೃಶ್ಯರು ಸಹ ಆರ್ಥಿಕವಾಗಿ ಅತ್ಯಂತ ಸಬಲರು ಎನ್ನುತ್ತಿಲ್ಲ, ಆದರೆ ಬಲಾಢ್ಯರು ಹಾಗೂ ಬಡಕಲು ವ್ಯಕ್ತಿಗಳ ನಡುವೆ ಸ್ಪರ್ಧೆಗೆ ಅವಕಾಶ ನೀಡಿದರೆ ಅಂತಿಮವಾಗಿ ಅನ್ಯಾಯವಾಗುವುದು ಮಾತ್ರ ಬಡಕಲು ವ್ಯಕ್ತಿಗಳಿಗೆ ಎಂಬ ಸರಳ ಸತ್ಯವು ಅತ್ತ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಗಳಿಗೆ ಇತ್ತ ಸಾಮಾಜಿಕ ನ್ಯಾಯದ ಪರ ಶತಮಾನಗಳ ಕಾಲ ಬೊಗಳೆ ಬಿಡುವ ಬುದ್ಧಿವಂತರಿಗೂ ಅರ್ಥವಾಗದೆ ಇರುವುದು ಈ ದೇಶದ ದೌರ್ಭಾಗ್ಯವೇ ಸರಿ. ಆರ್ಥಿಕವಾಗಿ ಬಲಹೀನರಾದವರಿಗೆಲ್ಲಾ ಮೀಸಲಾತಿಯನ್ನು ನೀಡಿದಂತೆ ಸ್ಪೃಶ್ಯ ಸಮುದಾಯಗಳಿಗೂ ಅವರ ಆರ್ಥಿಕ, ಶೈಕ್ಷಣಿಕ ಆದ್ಯತೆಗಳ ಅನುಸಾರ ವಿಶೇಷವಾದ ಮೀಸಲಾತಿಯನ್ನು ನೀಡಲು ಯಾರ ಅಭ್ಯಂತರವೂ ಇಲ್ಲ. ಆದರೆ ಇಲ್ಲಿ ಆಗಿರುವುದೆ ಬೇರೆ – ರಾಜಕೀಯ ಪಕ್ಷಗಳು ತಮ್ಮ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಡಜನ್‍ಗೂ ಅಧಿಕ ಜಾತಿಗಳನ್ನು ತಮ್ಮ ಮನಸೋ ಇಚ್ಚೆ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವ ಮೂಲಕ ಮೂಲ ಪರಿಶಿಷ್ಟರಿಗೆ ಆಗಬಹುದಾದ ಸಹಜ ಅನ್ಯಾಯದ ಅಪಾಯವನ್ನು ಲೆಕ್ಕಿಸದೆ ಇರುವುದು ದುರಂತ.

ಈ ಪ್ರಕ್ರಿಯೆ ಯಾವುದೇ ಪ್ರಗತಿಪರ ಕಾಳಜಿಯುಳ್ಳ ಮತಿವಂತರಿಗೆ ಅರ್ಥವಾಗದೇ ಇರುವುದು ಅತ್ಯಂತ ಘೋರ ಅಪರಾಧವೆಂದೆ ಹೇಳಬೇಕಿದೆ. ಇದ್ಯಾವುದು ಕಾನೂನಿನ ಪ್ರಕಾರ ಅಪರಾಧವಲ್ಲ. ಆದರೆ ಇರುವ ಮೀಸಲಾತಿಯನ್ನು ಕಟ್ಟಕಡೆಯ ಜನರಿಗೆ ಪ್ರಾಮಾಣಿಕವಾಗಿ ಹಂಚಬೇಕೆಂಬ ಪರಿಕಲ್ಪನೆಯನ್ನೇ ಸಂವಿಧಾನಬಾಹಿರವೆನ್ನುವ ಆಷಾಡಭೂತಿತನ ಮಾತ್ರ ಮನುವಾದ, ಕೋಮವಾದಕ್ಕಿಂತಲೂ ಕ್ರ್ರೂರತನದ್ದಾಗಿದೆ. ಇನ್ನು ಮೇಲ್ಜಾತಿಗಳಿಗೆ ಮೀಸಲಾತಿಯ ಹೆಚ್ಚಳವಾಗುವುದು ಇರಲಿ, ಎಲ್ಲಾ ವಲಯಗಳು ಕಾರ್ಪೋರೇಟ್ ಕಬಂದಬಾಹುಗಳಿಗೆ ಸಿಲುಕಿ ಖಾಸಗೀಕರಣವಾಗಿರುವುದಾಗಲಿ ಇವರಿಗೆ ಅಪಾಯಕಾರಿ ಎನಿಸುವುದಿಲ್ಲ. ಹಳ್ಳಿಗಾಡಿನ, ಅನಕ್ಷರಸ್ಥ ಸಮುದಾಯಗಳು ನಡೆಸುವ ಹಳ್ಳಿಕಟ್ಟೆ ಪಂಚಾಯ್ತಿಯಲ್ಲಿ ಬಗೆಹರಿಯಬಹುದಾದ ಪಿತ್ರಾರ್ಜಿತ ಅಸ್ತಿಯ ಹಂಚಿಕೆಯಂತೆ ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರವು ದೆಹಲಿ ಹಂತದ ಪಂಚಾಯಿತಿಯಲ್ಲಿ ಕಳೆದ 70 ವರ್ಷಗಳಿಂದಲೂ ಬಗೆಹರಿಯದೆ, ಅನಿರ್ಧಿಷ್ಟ ಕಾಲದವರೆಗೂ ವಾದ ವಿವಾದಗಳಲ್ಲೇ ಕಾಲಹರಣವಾಗುತ್ತಿದೆ. ಇದು ಎರಡು ತಲೆಮಾರುಗಳ ಕೋಟ್ಯಾಂತರ ಜನಗಳ ವಿದ್ಯೆ ಹಾಗೂ ಉದ್ಯೋಗದ ವಂಚನೆಗೆ ಕಾರಣವಾಗಿದೆ.

ಪರಿಶಿಷ್ಟ ಜಾತಿಗಳು ಇದುವರೆಗೂ ಎತ್ತಿರುವ ಪ್ರಶ್ನೆ ಮೀಸಲಾತಿ ಹೆಚ್ಚಳವಾಗಬೇಕಂದಲ್ಲ. ಈಗಾಗಲೇ ಅಸ್ಪೃಶ್ಯರಲ್ಲೇ ಅತೀ ಬುದ್ಧಿವಂತರಾದ ಪ್ರಭಾವಿ ರಾಜಕಾರಣಿಗಳು ಹಾಗೂ ಅಕ್ರಮವಾಗಿ ನುಸುಳಲ್ಪಟ್ಟ ಅಸ್ಪೃಶ್ಯೇತರರು ಇರುವ ಎಲ್ಲಾ ಅವಕಾಶಗಳನ್ನು ಬಾಚಿ ತಿಂದು ಬಲಾಢ್ಯರಾಗಿ ಮೆರೆಯುತ್ತಿರುವಾಗ, ಇದ್ದ ಬಿದ್ದ ಹಳಸಲು ಅನ್ನವನ್ನಾದರು ನಮ್ಮ ಹಸಿದ ಹೊಟ್ಟೆಗೆ ನೀಡಿ ಎಂದು ಈ ನೆಲದ ಸಫಾಯಿ ಕರ್ಮಚಾರಿಗಳು ಹಾಗೂ ಮಲ ಬಳೆಯುವ ಪೌರಕಾರ್ಮಿಕರು ಕಳೆದ ಮೂರು ದಶಕಗಳಿಂದ ಅಂಗಲಾಚಿ ಪರಿತಪಿಸುತ್ತಿದ್ದರೂ ಯಾವ ಸರ್ಕಾರಗಳಿಗೂ ಹಾಗೂ ಯಾವ ನ್ಯಾಯಾಲಯಗಳಿಗೂ ಕಿಂಚಿತ್ತೂ ಅಲುಗಾಡುತ್ತಿಲ್ಲ. ಇದರ ಹಿಂದೆ ಅಸ್ಪೃಶ್ಯತೆಯು ಇನ್ನು ಹಲವಾರು ಶತಮಾನಗಳ ಕಾಲ ಅಸ್ತಿತ್ವದಲ್ಲಿರಬೇಕೆಂಬ ಉದ್ದೇಶ ಅಡಗಿದೆ ಎಂದು ಎನಿಸುತ್ತಿದೆ. ಕಸ ಬಳಿಯುವವರು ಕಾಲಾನುಕಾಲದಿಂದ ಕಸಬಳಿಯುತ್ತಲೇ ಇರಬೇಕೆಂಬ ಶ್ರೇಣಿಕೃತ ವ್ಯವಸ್ಥೆಯ ಹುನ್ನಾರದ ಮುಂದುವರೆದ ಭಾಗವೇ ಇದು ಎಂಬುದನ್ನು ಈ ದೇಶದ ಪ್ರಜಾತಂತ್ರವಾದಿಗಳು ಹಾಗೂ ಪ್ರಗತಿಪರವಾದದ ಪೊರೆ ಆವರಿಸಿದ ಅಣ್ಣಂದಿರು ಅರ್ಥಮಾಡಿಕೊಂಡರೆ, ಅರೆಗಳಿಗೆಯಲ್ಲಿ ಹಸಿದ ಜನಗಳಿಗೆ ಹಳಸಿದ ಅನ್ನವನ್ನಾದರೂ ನೀಡಿ, ಅರೆ ಜೀವದಲ್ಲಿರುವ ಅಸಂಖ್ಯಾತ ಅಸ್ಪೃಶ್ಯ ಸಮುದಾಯಗಳನ್ನು ಅರೆಕಾಲಿಕವಾಗಿಯಾದರೂ ಐಸಿಯುನಿಂದ ಜನರಲ್ ವಾರ್ಡ್‍ಗೆ ಸ್ಥಳಾಂತರಿಸಬಹುದಾಗಿದೆ ಎಂದು ನಂಬಿದ್ದೇನೆ.

ಅಂಬಣ್ಣ ಅರೋಲಿಕರ್

(ತಮ್ಮ ಹೋರಾಟದ ಹಾಡುಗಳ ಗಾಯನದಿಂದ ಪ್ರಖ್ಯಾತವಾಗಿದ್ದ ಅಂಬಣ್ಣ ಅರೋಲಿಕರ್ ಈಗ ಮಾದಿಗ ಮೀಸಲಾತಿ ಹೋರಾಟದ ರಾಜ್ಯ ಮಟ್ಟದ ನಾಯಕರಲ್ಲೊಬ್ಬರು. ರಾಯಚೂರಿನಲ್ಲಿ ಜನಬಲ ಟೈಮ್ಸ್ ದಿನಪತ್ರಿಕೆಯನ್ನು ನಡೆಸುತ್ತಿರುವ ಅಂಬಣ್ಣ ಕಳೆದ ಮೂರು ದಶಕಗಳಿಗಿಂತ ಹೆಚ್ಚು ಸಮಯ ಚಳವಳಿಯಲ್ಲಿ ಪಾಲ್ಗೊಂಡಿದ್ದ ಕ್ರಿಯಾಶೀಲ ವ್ಯಕ್ತಿ.)


ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...