Homeಮುಖಪುಟಉತ್ತರ ಸಂವಿಧಾನದಲ್ಲಿದೆ, ಮೀಸಲಾತಿ ವಿರೋಧಿ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ: ಅನಂತನಾಯಕ್ ಎನ್

ಉತ್ತರ ಸಂವಿಧಾನದಲ್ಲಿದೆ, ಮೀಸಲಾತಿ ವಿರೋಧಿ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ: ಅನಂತನಾಯಕ್ ಎನ್

ಮೀಸಲಾತಿಯೇ ಕ್ಷೀಣಿಸುತ್ತಿರುವ ಹೊತ್ತಿನಲ್ಲಿ ಮೀಸಲಾತಿಯನ್ನು ಉಳಿಸಿಕೊಳ್ಳುವ ಹೋರಾಟ ಬಲಗೊಳಿಸಬೇಕು. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲಾ ಜನಸಮುದಾಯಗಳು ಐಕ್ಯ ಹೋರಾಟಕ್ಕೆ ಮುಂದಾಗಬೇಕು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ಅನಂತನಾಯಕ್‌ರವರ ಸಂದರ್ಶನ.

  1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಎಲ್ಲಾ ವಂಚಿತ ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯ ಬೇಕು. ಅದು ನನ್ನ ಬಲವಾದ ನಂಬಿಕೆ. ಜಾತಿಗಳ ಜನಸಂಖ್ಯೆವಾರು ಮೀಸಲಾತಿ ವೈಜ್ಞಾನಿಕವಾಗಿ ಹಂಚಿಕೆಯಾಗಬೇಕು. ಈ ಹಂಚಿಕೆಗೆ ಪೂರಕ ಆಧಾರವಾಗಲು ಎಲ್ಲಾ ಜಾತಿಗಳ ಸ್ಥಿತಿಗತಿ, ಆರ್ಥಿಕ, ಸಾಮಾಜಿಕ ಸಮೀಕ್ಷೆ ನಡೆಯಬೇಕು. ಜಾತಿಗಳ ಹಿಂದುಳಿದಿರುವಿಕೆ, ಸರ್ಕಾರದಲ್ಲಿ ಅವರ ಪ್ರಾತಿನಿಧ್ಯ ಆಧರಿಸಿ ವಂಚಿತರನ್ನೂ ಮುಖ್ಯವಾಹಿನಿಗೆ ತರುವ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಬೇಕು.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಇದು ಇನ್ನೂ ಸರ್ವೋಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ಚರ್ಚೆಗೆ ಬರಬೇಕಿದೆ, ಕಾಯೋಣ. ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡಬೇಕೆನ್ನುವುದು ನಮ್ಮ ಸಂವಿಧಾನದ ಮೂಲ ತತ್ವ. ನಾವು ಅದಕ್ಕೆ ಬದ್ಧರಾಗಿರಬೇಕು. ಸಮತೆಯನ್ನು ಸಾಧಿಸಲು ಮಾರ್ಗ ಯಾವುದಾದರೇನು.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿಯ ಮಿತಿಯನ್ನು ಶೇ.50 ಮೀರದಂತೆ ಸುಪ್ರೀಂಕೋರ್ಟ್ ಇಂದಿರಾ ಸಾಹ್ನಿ ಪ್ರಕರಣದಲ್ಲಿ ಹೇಳಿದೆ. ಈ ಕುರಿತು ಆಕ್ಷೇಪಗಳೂ ಬಂದಿವೆ. ಸಕಾರಣಗಳನ್ನು ಸಾಬೀತುಪಡಿಸಿ ಕೆಲ ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ.

ಬ್ರಾಹ್ಮಣ ಮತ್ತಿತರ ಸಮುದಾಯಗಳನ್ನು ಅರ್ಥಿಕ ದುರ್ಬಲ ವರ್ಗಗಳೆಂದು ಗುರುತಿಸಿ (EWS) ಶೇ.10 ಮೀಸಲಾತಿ ಕೊಡಲಾಗಿದೆ. ಇಂದಿನ ರಾಜಕಾರಣ ಸಂಪೂರ್ಣ ಬ್ರಾಹ್ಮಣೀಕರಣಗೊಂಡಿರುವುದಕ್ಕೆ ಸ್ಪಷ್ಟ ಉದಾಹರಣೆ ಇದು. ಎಡ ಮತ್ತು ಬಹುಜನ ಸಿದ್ಧಾಂತದ ಪಕ್ಷಗಳು ಕೂಡ ಈ ಬಗ್ಗೆ ಸ್ಪಷ್ಟ ಅಭಿಪ್ರಾಯಗಳನ್ನು ದೊಡ್ಡ ಪ್ರಮಾಣದಲ್ಲಿ ದಾಖಲಿಸಲಿಲ್ಲ. ಇದನ್ನು ಪ್ರತಿಭಟಿಸಲಿಲ್ಲ.

‘ಮೀಸಲಾತಿ ಬರೀ ಆರ್ಥಿಕ ಸಬಲೀಕರಣದ ಕಾರ್ಯಕ್ರಮ ಅಲ್ಲ’. ಅಸ್ಪೃಶ್ಯತೆ, ಸಾಮಾಜಿಕ ಕಳಂಕ ಹೊತ್ತವರನ್ನು ಮುಖ್ಯವಾಹಿನಿಗೆ ತರುವ ಸಾಧನ. ಮಾನವ ಘನತೆಯನ್ನು ಹೆಚ್ಚಿಸುವ ಮಾರ್ಗ ಮೀಸಲಾತಿ.

ಸಮಾಜದ ಎಲ್ಲಾ ಅಪಮಾನಿತರಿಗೆ ಸೂಕ್ತ ಪ್ರತಿನಿಧಿತ್ವ ಇರಬೇಕೆಂದು ಮೀಸಲಾತಿಯ ಮೂಲ ತತ್ವ. ಬ್ರಾಹ್ಮಣರಾದಿಯಾಗಿ ಕೆಲವರಲ್ಲಿ ಬಡತನ ಇರಬಹುದು. ಅದನ್ನು ಹೊಗಲಾಡಿಸಲು ಇಲ್ಲಿಯವರೆಗೆ ಅನೇಕ ಅರ್ಥಿಕ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬರಲಾಗುತ್ತಿದೆ. ಅಗತ್ಯವಿದ್ದರೆ ಅವುಗಳನ್ನು ಹೆಚ್ಚಿಸೋಣ, ಮುಂದುವರೆಸೋಣ. ಆದರೆ, SC, ST, OBCಗಳಿಗೆ ಅಂಟಿಸಲಾದ ಸಾಮಾಜಿಕ ಕಳಂಕ ಮತ್ತು ತಾರತಮ್ಯ ನಿವಾರಿಸಲೆಂದು ಪ್ರಯೋಗಿಸಲಾದ ಮೀಸಲಾತಿ ನಿಯಮವನ್ನು ಬಡತನ ನಿರ್ಮೂಲನೆ ಹೆಸರಲ್ಲಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಮೀಸಲಾತಿ ತತ್ವವನ್ನು ಅಪಮೌಲ್ಯಗೊಳಿಸಲು ಈ EWS ಮೀಸಲು ಮೂಲಕ ಪ್ರಯತ್ನ ಮಾಡಲಾಗಿದೆ. ಹಾಗಾಗಿ 10% EWS ಮೀಸಲಾತಿಯನ್ನು ಒಪ್ಪಲಾಗದು.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಚಾತುವರ್ಣ ಹೇರಲ್ಪಟ್ಟ ಸಮಾಜ ನಮ್ಮದು. ಪಿರಮಿಡ್ ರೀತಿಯಲ್ಲಿ ಜಾತಿ ವ್ಯವಸ್ಥೆಯನ್ನು ರೂಪಿಸಲಾಗಿದೆ. ಸಂವಿಧಾನಿಕ ಮೀಸಲಾತಿ ನೀಡುವಾಗಲೇ ಇದನ್ನು ಗುರುತಿಸಲಾಗಿದೆ. ಹೀಗಿರುವಾಗ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವವರಲ್ಲಿ ಸ್ಪೃಶ್ಯ- ಅಸ್ಪೃಶ್ಯ, ಎಡ-ಬಲ ಅಂತ ಬೇರ್ಪಡಿಸಲಾಗದು. ಹೀಗೆ ಗುರುತಿಸುವುದು ಕೂಡ ಕಾನೂನುಬಾಹಿರ. ಇಂದಿಗೂ ಮುಟ್ಟಿಸಿಕೊಳ್ಳಲಾಗದಂತೆ ಈ ಸಮಾಜದ ಕಟ್ಟಕಡೆಯಲ್ಲಿ ಬದುಕುತ್ತಿರುವ ದಕ್ಕಲಿಗ ಮುಂತಾದ ಸಮುದಾಯದ ಗೋಳು ಕೇಳುವವರ್ಯಾರು? ಇಂತಹ ಆಲಕ್ಷಿತ ಸಮುದಾಯಗಳನ್ನು ಪ್ರತ್ಯೇಕವಾಗಿ ಗುರುತಿಸಬೇಕಿದೆ. ಗುರುತಿಸುವ ಮಾನದಂಡ ಯಾವುದು ಎಂಬುದು ಮುಖ್ಯ. ಜಾತಿ ಪಟ್ಟಿಗೆ ಸೇರಿಸುವುದಕ್ಕೆ ಮತ್ತು ತೆಗೆದು ಹಾಕಲು ಸಂಸತ್ತು ಮತ್ತು ರಾಷ್ಟ್ರಪತಿ ಅವರಿಗೆ ಅಧಿಕಾರ ಇದೆ. ಅದನ್ನು ಗಮನಿಸೋಣ.

ಅಸ್ಪೃಶ್ಯತೆ ಎಂದರೇನು? ಬಾಧಿತರು ಯಾರು? ಯಾರನ್ನು ಸ್ಪೃಶ್ಯರು ಎಂದು ಕರೆಯಲಾಗುತ್ತಿದೆ? ಅದಕ್ಕೆ ಮಾನದಂಡ ಯಾವುದು? ಅದಕ್ಕೆ ಸಾಂವಿಧಾನಿಕ ಬಲವಿದೆಯೇ? ಪರಿಶಿಷ್ಟ ಜಾತಿಗಳ ಕುರಿತು ಸಂವಿಧಾನದ ವ್ಯಾಖ್ಯಾನವನ್ನು ಸರಿಯಾಗಿ ಅರ್ಥೈಸುವ ಅಗತ್ಯವಿದೆ. ಇವುಗಳನ್ನು ಸರಿಯಾಗಿ ಅರ್ಥೈಸದಿದ್ದರೆ ಮೀಸಲಾತಿ ಹಾಳಾಗಲಿ, ಕನಿಷ್ಠ ಸಹಬಾಳ್ವೆಯನ್ನು ಉಳಿಸಿಕೊಳ್ಳಲಾಗದು.

ಮೀಸಲಾತಿಯೇ ಕ್ಷೀಣಿಸುತ್ತಿರುವ ಹೊತ್ತಿನಲ್ಲಿ ಮೀಸಲಾತಿಯನ್ನು ಉಳಿಸಿಕೊಳ್ಳುವ ಹೋರಾಟ ಬಲಗೊಳಿಸಬೇಕು. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲಾ ಜನಸಮುದಾಯಗಳು ಐಕ್ಯ ಹೋರಾಟಕ್ಕೆ ಮುಂದಾಗಬೇಕು. ಅದು ಸದ್ಯ ನಮ್ಮ ಮುಂದಿರುವ ಸವಾಲು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಈ ಪ್ರಶ್ನೆಯೇ ತಪ್ಪು. ನಮ್ಮ ಸಮುದಾಯಗಳ ರಾಜಕಾರಣಿಗಳನ್ನು ವಿಲನ್‍ಗಳಾಗಿಸಲು ಇಂತಹ ಪ್ರಶ್ನೆಗಳನ್ನು ಹರಿಬಿಡಲಾಗುತ್ತಿದ್ದೆ. ಮೀಸಲಾತಿ ವಿರೋಧಿ ಸವರ್ಣೀಯ ರಾಜಕಾರಣಿಗಳನ್ನು ಸುಧಾರಕರಂತೆ ಬಿಂಬಿಸಲಾಗುತ್ತಿದೆ. ಇದನ್ನು ಪರಿಶಿಷ್ಟರು ಎಚ್ಚರಿಕೆಯಿಂದ ಗಮನಿಸಬೇಕು. ಇನ್ನೂ ಸುಧಾರಿಸಬೇಕಾದ ಸಂಸದೀಯ ವ್ಯವಸ್ಥೆಯ ಮಿತಿಯೊಳಗೆ ನಮ್ಮವರು ಒಂದಷ್ಟು ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿದ್ದಾರೆ. ಇನ್ನಷ್ಟು ನೀರಿಕ್ಷೆ ಮಾಡೊಣ. ನಮ್ಮವರ ಮಧ್ಯೆ ಅನಗತ್ಯ ದ್ವೇಷ ಬಿತ್ತುವುದು ಬೇಡ.

ಜಾತಿ ತಾರತಮ್ಯ ವಿನಾಶಕ್ಕಾಗಿ ಮತ್ತು ದಲಿತ ಸಮುದಾಯಗಳ ಪ್ರಗತಿಗಾಗಿ ಹಲವು ರಾಜಕಾರಣಿಗಳು ಕೆಲಸ ಮಾಡುತ್ತಿದ್ದಾರೆ. ಬಲಗೈ ಸಮುದಾಯದವರು ಇದಕ್ಕೆ ವಿರೋಧ ಇದ್ದಾರೆ ಎಂಬುದು ತಪ್ಪು. ವೈಜ್ಞಾನಿಕವಾಗಿ ಅಧ್ಯಯನವಾಗಲಿ ಎಂದು ಎಲ್ಲರೂ ಒತ್ತಾಯಿಸುತ್ತಲೇ ಬರುತ್ತಿದ್ದಾರೆ. ವೈದಿಕ ಮನಸ್ಥಿತಿಯ ಸವರ್ಣೀಯರು ಇದಕ್ಕೆ ಅವಕಾಶ ಕೊಡುತ್ತಿಲ್ಲ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಇದು ತಪ್ಪು ಅಭಿಪ್ರಾಯ. ಅಂತಹ ಪರಿಸ್ಥಿತಿ ಇಲ್ಲ. ಅಂತಹ ಪರಿಸ್ಥಿತಿ ಸೃಷ್ಟಿಸುವ ಪಿತೂರಿಗಳು ನಡೆಯುತ್ತಿವೆ. ಒಳಮೀಸಲಾತಿ ‘ಬರೀ ಪರಿಶಿಷ್ಟ ಜಾತಿಗಳ ಮಧ್ಯೆ ಮಾತ್ರ ಹಂಚಿಕೆ ಆಗಲಿ’ ಎಂಬ ಚರ್ಚೆಯೇ ಅಪಾಯಕಾರಿ. ಜಾತಿ ಜನಸಂಖ್ಯೆವಾರು ಮೀಸಲಾತಿ ಹಂಚಿಕೆ ಪ್ರಕ್ರಿಯೆ ಮೊದಲಿಗೆ EWS, OBC, ST, ಕೊನೆಗೆ SCಗಳಿಗೆ ಅನ್ವಯವಾಗಲಿ. ಸಮಾನ ಪಾಲನ್ನು ಹಂಚಿತಿನ್ನುವ ದಲಿತರಲ್ಲಿ ಮೂಲತಃ ಇದೆ. ಇದು ಸಮಾನತೆ ಸಾಧಿಸುವ ಮಾರ್ಗ. ಹೀಗಾದಾಗ ದಲಿತರ ಐಕ್ಯತೆ ಹಾಳಾಗೊಲ್ಲ. ಸಾಮಾಜಿಕ ನ್ಯಾಯ ಬಲಗೊಳ್ಳುತ್ತೆ. ಪರಿಶಿಷ್ಟ ಜಾತಿಗಳನ್ನೇ ಗುರಿಯಾಗಿಸುವ ಚರ್ಚೆ ದುರುದ್ದೇಶಪೂರಿತ. ಅವೇಶಕ್ಕೊಳಗಾಗದೆ ಸೌಹಾರ್ದಯುತವಾಗಿ ಕೂತು ಚರ್ಚಿಸಿದರೆ ಪರಿಹಾರ ಸಾದ್ಯ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ನ್ಯಾ. ಸದಾಶಿವ ಆಯೋಗದ ವರದಿ ಮೊದಲು ಬಹಿರಂಗ ಚರ್ಚೆಗೆ ಬಿಡುಗಡೆ ಆಗಲಿ. ಅದರ ಶಿಫಾರಸ್ಸುಗಳ ಸತ್ಯಾಸತ್ಯಾತೆ ಕುರಿತು ಅನಂತರ ಚರ್ಚಿಸೋಣ. ಈ ವರದಿ ಜನಪರವಾಗಿದ್ದರೆ ಒಪ್ಪೋಣ, ಜನವಿರೋಧಿ ಆಗಿದ್ದರೆ ತಿರಸ್ಕರಿಸೋಣ. ಭಾಗಶಃ ಸರಿಯಿದ್ದರೆ ಮತ್ತಷ್ಟು ಅವಲೋಕಿಸಿ ನಿರ್ಧರಿಸೋಣ. ಸಂಬಂಧಪಟ್ಟ ಎಲ್ಲರನ್ನೂ ಒಳಗೊಂಡು, ಚರ್ಚಿಸಿ ಅದರ ಆಧಾರದಲ್ಲಿ ಕ್ರಮ ಕೈಗೊಳ್ಳಬಹುದು. ಆದರೆ ಈ ವರದಿಯನ್ನು ಬಚ್ಚಿಟ್ಟು ರಾಜಕೀಯ ಮಾಡಲಾಗುತ್ತಿದೆ. ಸಹೋದರ ಸಮುದಾಯಗಳ ಮಧ್ಯೆ ಅನಗತ್ಯ ದ್ವೇಷ ಹುಟ್ಟುಹಾಕಲಾಗುತ್ತಿರುವುದು ಬೇಸರದ ಸಂಗತಿ. ಇದಕ್ಕೆಲ್ಲಾ ಸಂವಿಧಾನದಲ್ಲಿ ಉತ್ತರವಿದೆ. ಮೀಸಲಾತಿ ವಿರೋಧಿಸುತ್ತಲೇ ಬಂದಿರುವ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ. ನಮಗೆಲ್ಲ ಬಾಬಾ ಸಾಹೇಬ್ ಬೆಳಕಾಗಬಹುದು, ಕಾದು ನೋಡೊಣ.

  • ಅನಂತನಾಯಕ್ ಎನ್

(ಹೈಕೋರ್ಟ್ ವಕೀಲರು, ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು. ವಿದ್ಯಾರ್ಥಿ ದೆಸೆಯಿಂದ ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.)


ಇದನ್ನೂ ಓದಿ: ಸಾಂವಿಧಾನಿಕ ರಕ್ಷಣೆಯನ್ನು ಎತ್ತಿಹಿಡಿದ ಈ ಎರಡು ಮಹತ್ವದ ತೀರ್ಪುಗಳು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...