Homeಮುಖಪುಟಉತ್ತರ ಸಂವಿಧಾನದಲ್ಲಿದೆ, ಮೀಸಲಾತಿ ವಿರೋಧಿ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ: ಅನಂತನಾಯಕ್ ಎನ್

ಉತ್ತರ ಸಂವಿಧಾನದಲ್ಲಿದೆ, ಮೀಸಲಾತಿ ವಿರೋಧಿ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ: ಅನಂತನಾಯಕ್ ಎನ್

ಮೀಸಲಾತಿಯೇ ಕ್ಷೀಣಿಸುತ್ತಿರುವ ಹೊತ್ತಿನಲ್ಲಿ ಮೀಸಲಾತಿಯನ್ನು ಉಳಿಸಿಕೊಳ್ಳುವ ಹೋರಾಟ ಬಲಗೊಳಿಸಬೇಕು. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲಾ ಜನಸಮುದಾಯಗಳು ಐಕ್ಯ ಹೋರಾಟಕ್ಕೆ ಮುಂದಾಗಬೇಕು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ಅನಂತನಾಯಕ್‌ರವರ ಸಂದರ್ಶನ.

  1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಎಲ್ಲಾ ವಂಚಿತ ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯ ಬೇಕು. ಅದು ನನ್ನ ಬಲವಾದ ನಂಬಿಕೆ. ಜಾತಿಗಳ ಜನಸಂಖ್ಯೆವಾರು ಮೀಸಲಾತಿ ವೈಜ್ಞಾನಿಕವಾಗಿ ಹಂಚಿಕೆಯಾಗಬೇಕು. ಈ ಹಂಚಿಕೆಗೆ ಪೂರಕ ಆಧಾರವಾಗಲು ಎಲ್ಲಾ ಜಾತಿಗಳ ಸ್ಥಿತಿಗತಿ, ಆರ್ಥಿಕ, ಸಾಮಾಜಿಕ ಸಮೀಕ್ಷೆ ನಡೆಯಬೇಕು. ಜಾತಿಗಳ ಹಿಂದುಳಿದಿರುವಿಕೆ, ಸರ್ಕಾರದಲ್ಲಿ ಅವರ ಪ್ರಾತಿನಿಧ್ಯ ಆಧರಿಸಿ ವಂಚಿತರನ್ನೂ ಮುಖ್ಯವಾಹಿನಿಗೆ ತರುವ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಬೇಕು.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಇದು ಇನ್ನೂ ಸರ್ವೋಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ಚರ್ಚೆಗೆ ಬರಬೇಕಿದೆ, ಕಾಯೋಣ. ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡಬೇಕೆನ್ನುವುದು ನಮ್ಮ ಸಂವಿಧಾನದ ಮೂಲ ತತ್ವ. ನಾವು ಅದಕ್ಕೆ ಬದ್ಧರಾಗಿರಬೇಕು. ಸಮತೆಯನ್ನು ಸಾಧಿಸಲು ಮಾರ್ಗ ಯಾವುದಾದರೇನು.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿಯ ಮಿತಿಯನ್ನು ಶೇ.50 ಮೀರದಂತೆ ಸುಪ್ರೀಂಕೋರ್ಟ್ ಇಂದಿರಾ ಸಾಹ್ನಿ ಪ್ರಕರಣದಲ್ಲಿ ಹೇಳಿದೆ. ಈ ಕುರಿತು ಆಕ್ಷೇಪಗಳೂ ಬಂದಿವೆ. ಸಕಾರಣಗಳನ್ನು ಸಾಬೀತುಪಡಿಸಿ ಕೆಲ ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ.

ಬ್ರಾಹ್ಮಣ ಮತ್ತಿತರ ಸಮುದಾಯಗಳನ್ನು ಅರ್ಥಿಕ ದುರ್ಬಲ ವರ್ಗಗಳೆಂದು ಗುರುತಿಸಿ (EWS) ಶೇ.10 ಮೀಸಲಾತಿ ಕೊಡಲಾಗಿದೆ. ಇಂದಿನ ರಾಜಕಾರಣ ಸಂಪೂರ್ಣ ಬ್ರಾಹ್ಮಣೀಕರಣಗೊಂಡಿರುವುದಕ್ಕೆ ಸ್ಪಷ್ಟ ಉದಾಹರಣೆ ಇದು. ಎಡ ಮತ್ತು ಬಹುಜನ ಸಿದ್ಧಾಂತದ ಪಕ್ಷಗಳು ಕೂಡ ಈ ಬಗ್ಗೆ ಸ್ಪಷ್ಟ ಅಭಿಪ್ರಾಯಗಳನ್ನು ದೊಡ್ಡ ಪ್ರಮಾಣದಲ್ಲಿ ದಾಖಲಿಸಲಿಲ್ಲ. ಇದನ್ನು ಪ್ರತಿಭಟಿಸಲಿಲ್ಲ.

‘ಮೀಸಲಾತಿ ಬರೀ ಆರ್ಥಿಕ ಸಬಲೀಕರಣದ ಕಾರ್ಯಕ್ರಮ ಅಲ್ಲ’. ಅಸ್ಪೃಶ್ಯತೆ, ಸಾಮಾಜಿಕ ಕಳಂಕ ಹೊತ್ತವರನ್ನು ಮುಖ್ಯವಾಹಿನಿಗೆ ತರುವ ಸಾಧನ. ಮಾನವ ಘನತೆಯನ್ನು ಹೆಚ್ಚಿಸುವ ಮಾರ್ಗ ಮೀಸಲಾತಿ.

ಸಮಾಜದ ಎಲ್ಲಾ ಅಪಮಾನಿತರಿಗೆ ಸೂಕ್ತ ಪ್ರತಿನಿಧಿತ್ವ ಇರಬೇಕೆಂದು ಮೀಸಲಾತಿಯ ಮೂಲ ತತ್ವ. ಬ್ರಾಹ್ಮಣರಾದಿಯಾಗಿ ಕೆಲವರಲ್ಲಿ ಬಡತನ ಇರಬಹುದು. ಅದನ್ನು ಹೊಗಲಾಡಿಸಲು ಇಲ್ಲಿಯವರೆಗೆ ಅನೇಕ ಅರ್ಥಿಕ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬರಲಾಗುತ್ತಿದೆ. ಅಗತ್ಯವಿದ್ದರೆ ಅವುಗಳನ್ನು ಹೆಚ್ಚಿಸೋಣ, ಮುಂದುವರೆಸೋಣ. ಆದರೆ, SC, ST, OBCಗಳಿಗೆ ಅಂಟಿಸಲಾದ ಸಾಮಾಜಿಕ ಕಳಂಕ ಮತ್ತು ತಾರತಮ್ಯ ನಿವಾರಿಸಲೆಂದು ಪ್ರಯೋಗಿಸಲಾದ ಮೀಸಲಾತಿ ನಿಯಮವನ್ನು ಬಡತನ ನಿರ್ಮೂಲನೆ ಹೆಸರಲ್ಲಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಮೀಸಲಾತಿ ತತ್ವವನ್ನು ಅಪಮೌಲ್ಯಗೊಳಿಸಲು ಈ EWS ಮೀಸಲು ಮೂಲಕ ಪ್ರಯತ್ನ ಮಾಡಲಾಗಿದೆ. ಹಾಗಾಗಿ 10% EWS ಮೀಸಲಾತಿಯನ್ನು ಒಪ್ಪಲಾಗದು.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಚಾತುವರ್ಣ ಹೇರಲ್ಪಟ್ಟ ಸಮಾಜ ನಮ್ಮದು. ಪಿರಮಿಡ್ ರೀತಿಯಲ್ಲಿ ಜಾತಿ ವ್ಯವಸ್ಥೆಯನ್ನು ರೂಪಿಸಲಾಗಿದೆ. ಸಂವಿಧಾನಿಕ ಮೀಸಲಾತಿ ನೀಡುವಾಗಲೇ ಇದನ್ನು ಗುರುತಿಸಲಾಗಿದೆ. ಹೀಗಿರುವಾಗ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವವರಲ್ಲಿ ಸ್ಪೃಶ್ಯ- ಅಸ್ಪೃಶ್ಯ, ಎಡ-ಬಲ ಅಂತ ಬೇರ್ಪಡಿಸಲಾಗದು. ಹೀಗೆ ಗುರುತಿಸುವುದು ಕೂಡ ಕಾನೂನುಬಾಹಿರ. ಇಂದಿಗೂ ಮುಟ್ಟಿಸಿಕೊಳ್ಳಲಾಗದಂತೆ ಈ ಸಮಾಜದ ಕಟ್ಟಕಡೆಯಲ್ಲಿ ಬದುಕುತ್ತಿರುವ ದಕ್ಕಲಿಗ ಮುಂತಾದ ಸಮುದಾಯದ ಗೋಳು ಕೇಳುವವರ್ಯಾರು? ಇಂತಹ ಆಲಕ್ಷಿತ ಸಮುದಾಯಗಳನ್ನು ಪ್ರತ್ಯೇಕವಾಗಿ ಗುರುತಿಸಬೇಕಿದೆ. ಗುರುತಿಸುವ ಮಾನದಂಡ ಯಾವುದು ಎಂಬುದು ಮುಖ್ಯ. ಜಾತಿ ಪಟ್ಟಿಗೆ ಸೇರಿಸುವುದಕ್ಕೆ ಮತ್ತು ತೆಗೆದು ಹಾಕಲು ಸಂಸತ್ತು ಮತ್ತು ರಾಷ್ಟ್ರಪತಿ ಅವರಿಗೆ ಅಧಿಕಾರ ಇದೆ. ಅದನ್ನು ಗಮನಿಸೋಣ.

ಅಸ್ಪೃಶ್ಯತೆ ಎಂದರೇನು? ಬಾಧಿತರು ಯಾರು? ಯಾರನ್ನು ಸ್ಪೃಶ್ಯರು ಎಂದು ಕರೆಯಲಾಗುತ್ತಿದೆ? ಅದಕ್ಕೆ ಮಾನದಂಡ ಯಾವುದು? ಅದಕ್ಕೆ ಸಾಂವಿಧಾನಿಕ ಬಲವಿದೆಯೇ? ಪರಿಶಿಷ್ಟ ಜಾತಿಗಳ ಕುರಿತು ಸಂವಿಧಾನದ ವ್ಯಾಖ್ಯಾನವನ್ನು ಸರಿಯಾಗಿ ಅರ್ಥೈಸುವ ಅಗತ್ಯವಿದೆ. ಇವುಗಳನ್ನು ಸರಿಯಾಗಿ ಅರ್ಥೈಸದಿದ್ದರೆ ಮೀಸಲಾತಿ ಹಾಳಾಗಲಿ, ಕನಿಷ್ಠ ಸಹಬಾಳ್ವೆಯನ್ನು ಉಳಿಸಿಕೊಳ್ಳಲಾಗದು.

ಮೀಸಲಾತಿಯೇ ಕ್ಷೀಣಿಸುತ್ತಿರುವ ಹೊತ್ತಿನಲ್ಲಿ ಮೀಸಲಾತಿಯನ್ನು ಉಳಿಸಿಕೊಳ್ಳುವ ಹೋರಾಟ ಬಲಗೊಳಿಸಬೇಕು. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲಾ ಜನಸಮುದಾಯಗಳು ಐಕ್ಯ ಹೋರಾಟಕ್ಕೆ ಮುಂದಾಗಬೇಕು. ಅದು ಸದ್ಯ ನಮ್ಮ ಮುಂದಿರುವ ಸವಾಲು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಈ ಪ್ರಶ್ನೆಯೇ ತಪ್ಪು. ನಮ್ಮ ಸಮುದಾಯಗಳ ರಾಜಕಾರಣಿಗಳನ್ನು ವಿಲನ್‍ಗಳಾಗಿಸಲು ಇಂತಹ ಪ್ರಶ್ನೆಗಳನ್ನು ಹರಿಬಿಡಲಾಗುತ್ತಿದ್ದೆ. ಮೀಸಲಾತಿ ವಿರೋಧಿ ಸವರ್ಣೀಯ ರಾಜಕಾರಣಿಗಳನ್ನು ಸುಧಾರಕರಂತೆ ಬಿಂಬಿಸಲಾಗುತ್ತಿದೆ. ಇದನ್ನು ಪರಿಶಿಷ್ಟರು ಎಚ್ಚರಿಕೆಯಿಂದ ಗಮನಿಸಬೇಕು. ಇನ್ನೂ ಸುಧಾರಿಸಬೇಕಾದ ಸಂಸದೀಯ ವ್ಯವಸ್ಥೆಯ ಮಿತಿಯೊಳಗೆ ನಮ್ಮವರು ಒಂದಷ್ಟು ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿದ್ದಾರೆ. ಇನ್ನಷ್ಟು ನೀರಿಕ್ಷೆ ಮಾಡೊಣ. ನಮ್ಮವರ ಮಧ್ಯೆ ಅನಗತ್ಯ ದ್ವೇಷ ಬಿತ್ತುವುದು ಬೇಡ.

ಜಾತಿ ತಾರತಮ್ಯ ವಿನಾಶಕ್ಕಾಗಿ ಮತ್ತು ದಲಿತ ಸಮುದಾಯಗಳ ಪ್ರಗತಿಗಾಗಿ ಹಲವು ರಾಜಕಾರಣಿಗಳು ಕೆಲಸ ಮಾಡುತ್ತಿದ್ದಾರೆ. ಬಲಗೈ ಸಮುದಾಯದವರು ಇದಕ್ಕೆ ವಿರೋಧ ಇದ್ದಾರೆ ಎಂಬುದು ತಪ್ಪು. ವೈಜ್ಞಾನಿಕವಾಗಿ ಅಧ್ಯಯನವಾಗಲಿ ಎಂದು ಎಲ್ಲರೂ ಒತ್ತಾಯಿಸುತ್ತಲೇ ಬರುತ್ತಿದ್ದಾರೆ. ವೈದಿಕ ಮನಸ್ಥಿತಿಯ ಸವರ್ಣೀಯರು ಇದಕ್ಕೆ ಅವಕಾಶ ಕೊಡುತ್ತಿಲ್ಲ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಇದು ತಪ್ಪು ಅಭಿಪ್ರಾಯ. ಅಂತಹ ಪರಿಸ್ಥಿತಿ ಇಲ್ಲ. ಅಂತಹ ಪರಿಸ್ಥಿತಿ ಸೃಷ್ಟಿಸುವ ಪಿತೂರಿಗಳು ನಡೆಯುತ್ತಿವೆ. ಒಳಮೀಸಲಾತಿ ‘ಬರೀ ಪರಿಶಿಷ್ಟ ಜಾತಿಗಳ ಮಧ್ಯೆ ಮಾತ್ರ ಹಂಚಿಕೆ ಆಗಲಿ’ ಎಂಬ ಚರ್ಚೆಯೇ ಅಪಾಯಕಾರಿ. ಜಾತಿ ಜನಸಂಖ್ಯೆವಾರು ಮೀಸಲಾತಿ ಹಂಚಿಕೆ ಪ್ರಕ್ರಿಯೆ ಮೊದಲಿಗೆ EWS, OBC, ST, ಕೊನೆಗೆ SCಗಳಿಗೆ ಅನ್ವಯವಾಗಲಿ. ಸಮಾನ ಪಾಲನ್ನು ಹಂಚಿತಿನ್ನುವ ದಲಿತರಲ್ಲಿ ಮೂಲತಃ ಇದೆ. ಇದು ಸಮಾನತೆ ಸಾಧಿಸುವ ಮಾರ್ಗ. ಹೀಗಾದಾಗ ದಲಿತರ ಐಕ್ಯತೆ ಹಾಳಾಗೊಲ್ಲ. ಸಾಮಾಜಿಕ ನ್ಯಾಯ ಬಲಗೊಳ್ಳುತ್ತೆ. ಪರಿಶಿಷ್ಟ ಜಾತಿಗಳನ್ನೇ ಗುರಿಯಾಗಿಸುವ ಚರ್ಚೆ ದುರುದ್ದೇಶಪೂರಿತ. ಅವೇಶಕ್ಕೊಳಗಾಗದೆ ಸೌಹಾರ್ದಯುತವಾಗಿ ಕೂತು ಚರ್ಚಿಸಿದರೆ ಪರಿಹಾರ ಸಾದ್ಯ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ನ್ಯಾ. ಸದಾಶಿವ ಆಯೋಗದ ವರದಿ ಮೊದಲು ಬಹಿರಂಗ ಚರ್ಚೆಗೆ ಬಿಡುಗಡೆ ಆಗಲಿ. ಅದರ ಶಿಫಾರಸ್ಸುಗಳ ಸತ್ಯಾಸತ್ಯಾತೆ ಕುರಿತು ಅನಂತರ ಚರ್ಚಿಸೋಣ. ಈ ವರದಿ ಜನಪರವಾಗಿದ್ದರೆ ಒಪ್ಪೋಣ, ಜನವಿರೋಧಿ ಆಗಿದ್ದರೆ ತಿರಸ್ಕರಿಸೋಣ. ಭಾಗಶಃ ಸರಿಯಿದ್ದರೆ ಮತ್ತಷ್ಟು ಅವಲೋಕಿಸಿ ನಿರ್ಧರಿಸೋಣ. ಸಂಬಂಧಪಟ್ಟ ಎಲ್ಲರನ್ನೂ ಒಳಗೊಂಡು, ಚರ್ಚಿಸಿ ಅದರ ಆಧಾರದಲ್ಲಿ ಕ್ರಮ ಕೈಗೊಳ್ಳಬಹುದು. ಆದರೆ ಈ ವರದಿಯನ್ನು ಬಚ್ಚಿಟ್ಟು ರಾಜಕೀಯ ಮಾಡಲಾಗುತ್ತಿದೆ. ಸಹೋದರ ಸಮುದಾಯಗಳ ಮಧ್ಯೆ ಅನಗತ್ಯ ದ್ವೇಷ ಹುಟ್ಟುಹಾಕಲಾಗುತ್ತಿರುವುದು ಬೇಸರದ ಸಂಗತಿ. ಇದಕ್ಕೆಲ್ಲಾ ಸಂವಿಧಾನದಲ್ಲಿ ಉತ್ತರವಿದೆ. ಮೀಸಲಾತಿ ವಿರೋಧಿಸುತ್ತಲೇ ಬಂದಿರುವ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ. ನಮಗೆಲ್ಲ ಬಾಬಾ ಸಾಹೇಬ್ ಬೆಳಕಾಗಬಹುದು, ಕಾದು ನೋಡೊಣ.

  • ಅನಂತನಾಯಕ್ ಎನ್

(ಹೈಕೋರ್ಟ್ ವಕೀಲರು, ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು. ವಿದ್ಯಾರ್ಥಿ ದೆಸೆಯಿಂದ ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.)


ಇದನ್ನೂ ಓದಿ: ಸಾಂವಿಧಾನಿಕ ರಕ್ಷಣೆಯನ್ನು ಎತ್ತಿಹಿಡಿದ ಈ ಎರಡು ಮಹತ್ವದ ತೀರ್ಪುಗಳು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...