Homeಮುಖಪುಟಉತ್ತರ ಸಂವಿಧಾನದಲ್ಲಿದೆ, ಮೀಸಲಾತಿ ವಿರೋಧಿ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ: ಅನಂತನಾಯಕ್ ಎನ್

ಉತ್ತರ ಸಂವಿಧಾನದಲ್ಲಿದೆ, ಮೀಸಲಾತಿ ವಿರೋಧಿ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ: ಅನಂತನಾಯಕ್ ಎನ್

ಮೀಸಲಾತಿಯೇ ಕ್ಷೀಣಿಸುತ್ತಿರುವ ಹೊತ್ತಿನಲ್ಲಿ ಮೀಸಲಾತಿಯನ್ನು ಉಳಿಸಿಕೊಳ್ಳುವ ಹೋರಾಟ ಬಲಗೊಳಿಸಬೇಕು. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲಾ ಜನಸಮುದಾಯಗಳು ಐಕ್ಯ ಹೋರಾಟಕ್ಕೆ ಮುಂದಾಗಬೇಕು.

- Advertisement -
- Advertisement -

ಒಳಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ಅನಂತನಾಯಕ್‌ರವರ ಸಂದರ್ಶನ.

  1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಎಲ್ಲಾ ವಂಚಿತ ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯ ಬೇಕು. ಅದು ನನ್ನ ಬಲವಾದ ನಂಬಿಕೆ. ಜಾತಿಗಳ ಜನಸಂಖ್ಯೆವಾರು ಮೀಸಲಾತಿ ವೈಜ್ಞಾನಿಕವಾಗಿ ಹಂಚಿಕೆಯಾಗಬೇಕು. ಈ ಹಂಚಿಕೆಗೆ ಪೂರಕ ಆಧಾರವಾಗಲು ಎಲ್ಲಾ ಜಾತಿಗಳ ಸ್ಥಿತಿಗತಿ, ಆರ್ಥಿಕ, ಸಾಮಾಜಿಕ ಸಮೀಕ್ಷೆ ನಡೆಯಬೇಕು. ಜಾತಿಗಳ ಹಿಂದುಳಿದಿರುವಿಕೆ, ಸರ್ಕಾರದಲ್ಲಿ ಅವರ ಪ್ರಾತಿನಿಧ್ಯ ಆಧರಿಸಿ ವಂಚಿತರನ್ನೂ ಮುಖ್ಯವಾಹಿನಿಗೆ ತರುವ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಬೇಕು.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಇದು ಇನ್ನೂ ಸರ್ವೋಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ಚರ್ಚೆಗೆ ಬರಬೇಕಿದೆ, ಕಾಯೋಣ. ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡಬೇಕೆನ್ನುವುದು ನಮ್ಮ ಸಂವಿಧಾನದ ಮೂಲ ತತ್ವ. ನಾವು ಅದಕ್ಕೆ ಬದ್ಧರಾಗಿರಬೇಕು. ಸಮತೆಯನ್ನು ಸಾಧಿಸಲು ಮಾರ್ಗ ಯಾವುದಾದರೇನು.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಮೀಸಲಾತಿಯ ಮಿತಿಯನ್ನು ಶೇ.50 ಮೀರದಂತೆ ಸುಪ್ರೀಂಕೋರ್ಟ್ ಇಂದಿರಾ ಸಾಹ್ನಿ ಪ್ರಕರಣದಲ್ಲಿ ಹೇಳಿದೆ. ಈ ಕುರಿತು ಆಕ್ಷೇಪಗಳೂ ಬಂದಿವೆ. ಸಕಾರಣಗಳನ್ನು ಸಾಬೀತುಪಡಿಸಿ ಕೆಲ ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ.

ಬ್ರಾಹ್ಮಣ ಮತ್ತಿತರ ಸಮುದಾಯಗಳನ್ನು ಅರ್ಥಿಕ ದುರ್ಬಲ ವರ್ಗಗಳೆಂದು ಗುರುತಿಸಿ (EWS) ಶೇ.10 ಮೀಸಲಾತಿ ಕೊಡಲಾಗಿದೆ. ಇಂದಿನ ರಾಜಕಾರಣ ಸಂಪೂರ್ಣ ಬ್ರಾಹ್ಮಣೀಕರಣಗೊಂಡಿರುವುದಕ್ಕೆ ಸ್ಪಷ್ಟ ಉದಾಹರಣೆ ಇದು. ಎಡ ಮತ್ತು ಬಹುಜನ ಸಿದ್ಧಾಂತದ ಪಕ್ಷಗಳು ಕೂಡ ಈ ಬಗ್ಗೆ ಸ್ಪಷ್ಟ ಅಭಿಪ್ರಾಯಗಳನ್ನು ದೊಡ್ಡ ಪ್ರಮಾಣದಲ್ಲಿ ದಾಖಲಿಸಲಿಲ್ಲ. ಇದನ್ನು ಪ್ರತಿಭಟಿಸಲಿಲ್ಲ.

‘ಮೀಸಲಾತಿ ಬರೀ ಆರ್ಥಿಕ ಸಬಲೀಕರಣದ ಕಾರ್ಯಕ್ರಮ ಅಲ್ಲ’. ಅಸ್ಪೃಶ್ಯತೆ, ಸಾಮಾಜಿಕ ಕಳಂಕ ಹೊತ್ತವರನ್ನು ಮುಖ್ಯವಾಹಿನಿಗೆ ತರುವ ಸಾಧನ. ಮಾನವ ಘನತೆಯನ್ನು ಹೆಚ್ಚಿಸುವ ಮಾರ್ಗ ಮೀಸಲಾತಿ.

ಸಮಾಜದ ಎಲ್ಲಾ ಅಪಮಾನಿತರಿಗೆ ಸೂಕ್ತ ಪ್ರತಿನಿಧಿತ್ವ ಇರಬೇಕೆಂದು ಮೀಸಲಾತಿಯ ಮೂಲ ತತ್ವ. ಬ್ರಾಹ್ಮಣರಾದಿಯಾಗಿ ಕೆಲವರಲ್ಲಿ ಬಡತನ ಇರಬಹುದು. ಅದನ್ನು ಹೊಗಲಾಡಿಸಲು ಇಲ್ಲಿಯವರೆಗೆ ಅನೇಕ ಅರ್ಥಿಕ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬರಲಾಗುತ್ತಿದೆ. ಅಗತ್ಯವಿದ್ದರೆ ಅವುಗಳನ್ನು ಹೆಚ್ಚಿಸೋಣ, ಮುಂದುವರೆಸೋಣ. ಆದರೆ, SC, ST, OBCಗಳಿಗೆ ಅಂಟಿಸಲಾದ ಸಾಮಾಜಿಕ ಕಳಂಕ ಮತ್ತು ತಾರತಮ್ಯ ನಿವಾರಿಸಲೆಂದು ಪ್ರಯೋಗಿಸಲಾದ ಮೀಸಲಾತಿ ನಿಯಮವನ್ನು ಬಡತನ ನಿರ್ಮೂಲನೆ ಹೆಸರಲ್ಲಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಮೀಸಲಾತಿ ತತ್ವವನ್ನು ಅಪಮೌಲ್ಯಗೊಳಿಸಲು ಈ EWS ಮೀಸಲು ಮೂಲಕ ಪ್ರಯತ್ನ ಮಾಡಲಾಗಿದೆ. ಹಾಗಾಗಿ 10% EWS ಮೀಸಲಾತಿಯನ್ನು ಒಪ್ಪಲಾಗದು.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಚಾತುವರ್ಣ ಹೇರಲ್ಪಟ್ಟ ಸಮಾಜ ನಮ್ಮದು. ಪಿರಮಿಡ್ ರೀತಿಯಲ್ಲಿ ಜಾತಿ ವ್ಯವಸ್ಥೆಯನ್ನು ರೂಪಿಸಲಾಗಿದೆ. ಸಂವಿಧಾನಿಕ ಮೀಸಲಾತಿ ನೀಡುವಾಗಲೇ ಇದನ್ನು ಗುರುತಿಸಲಾಗಿದೆ. ಹೀಗಿರುವಾಗ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವವರಲ್ಲಿ ಸ್ಪೃಶ್ಯ- ಅಸ್ಪೃಶ್ಯ, ಎಡ-ಬಲ ಅಂತ ಬೇರ್ಪಡಿಸಲಾಗದು. ಹೀಗೆ ಗುರುತಿಸುವುದು ಕೂಡ ಕಾನೂನುಬಾಹಿರ. ಇಂದಿಗೂ ಮುಟ್ಟಿಸಿಕೊಳ್ಳಲಾಗದಂತೆ ಈ ಸಮಾಜದ ಕಟ್ಟಕಡೆಯಲ್ಲಿ ಬದುಕುತ್ತಿರುವ ದಕ್ಕಲಿಗ ಮುಂತಾದ ಸಮುದಾಯದ ಗೋಳು ಕೇಳುವವರ್ಯಾರು? ಇಂತಹ ಆಲಕ್ಷಿತ ಸಮುದಾಯಗಳನ್ನು ಪ್ರತ್ಯೇಕವಾಗಿ ಗುರುತಿಸಬೇಕಿದೆ. ಗುರುತಿಸುವ ಮಾನದಂಡ ಯಾವುದು ಎಂಬುದು ಮುಖ್ಯ. ಜಾತಿ ಪಟ್ಟಿಗೆ ಸೇರಿಸುವುದಕ್ಕೆ ಮತ್ತು ತೆಗೆದು ಹಾಕಲು ಸಂಸತ್ತು ಮತ್ತು ರಾಷ್ಟ್ರಪತಿ ಅವರಿಗೆ ಅಧಿಕಾರ ಇದೆ. ಅದನ್ನು ಗಮನಿಸೋಣ.

ಅಸ್ಪೃಶ್ಯತೆ ಎಂದರೇನು? ಬಾಧಿತರು ಯಾರು? ಯಾರನ್ನು ಸ್ಪೃಶ್ಯರು ಎಂದು ಕರೆಯಲಾಗುತ್ತಿದೆ? ಅದಕ್ಕೆ ಮಾನದಂಡ ಯಾವುದು? ಅದಕ್ಕೆ ಸಾಂವಿಧಾನಿಕ ಬಲವಿದೆಯೇ? ಪರಿಶಿಷ್ಟ ಜಾತಿಗಳ ಕುರಿತು ಸಂವಿಧಾನದ ವ್ಯಾಖ್ಯಾನವನ್ನು ಸರಿಯಾಗಿ ಅರ್ಥೈಸುವ ಅಗತ್ಯವಿದೆ. ಇವುಗಳನ್ನು ಸರಿಯಾಗಿ ಅರ್ಥೈಸದಿದ್ದರೆ ಮೀಸಲಾತಿ ಹಾಳಾಗಲಿ, ಕನಿಷ್ಠ ಸಹಬಾಳ್ವೆಯನ್ನು ಉಳಿಸಿಕೊಳ್ಳಲಾಗದು.

ಮೀಸಲಾತಿಯೇ ಕ್ಷೀಣಿಸುತ್ತಿರುವ ಹೊತ್ತಿನಲ್ಲಿ ಮೀಸಲಾತಿಯನ್ನು ಉಳಿಸಿಕೊಳ್ಳುವ ಹೋರಾಟ ಬಲಗೊಳಿಸಬೇಕು. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲಾ ಜನಸಮುದಾಯಗಳು ಐಕ್ಯ ಹೋರಾಟಕ್ಕೆ ಮುಂದಾಗಬೇಕು. ಅದು ಸದ್ಯ ನಮ್ಮ ಮುಂದಿರುವ ಸವಾಲು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಈ ಪ್ರಶ್ನೆಯೇ ತಪ್ಪು. ನಮ್ಮ ಸಮುದಾಯಗಳ ರಾಜಕಾರಣಿಗಳನ್ನು ವಿಲನ್‍ಗಳಾಗಿಸಲು ಇಂತಹ ಪ್ರಶ್ನೆಗಳನ್ನು ಹರಿಬಿಡಲಾಗುತ್ತಿದ್ದೆ. ಮೀಸಲಾತಿ ವಿರೋಧಿ ಸವರ್ಣೀಯ ರಾಜಕಾರಣಿಗಳನ್ನು ಸುಧಾರಕರಂತೆ ಬಿಂಬಿಸಲಾಗುತ್ತಿದೆ. ಇದನ್ನು ಪರಿಶಿಷ್ಟರು ಎಚ್ಚರಿಕೆಯಿಂದ ಗಮನಿಸಬೇಕು. ಇನ್ನೂ ಸುಧಾರಿಸಬೇಕಾದ ಸಂಸದೀಯ ವ್ಯವಸ್ಥೆಯ ಮಿತಿಯೊಳಗೆ ನಮ್ಮವರು ಒಂದಷ್ಟು ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿದ್ದಾರೆ. ಇನ್ನಷ್ಟು ನೀರಿಕ್ಷೆ ಮಾಡೊಣ. ನಮ್ಮವರ ಮಧ್ಯೆ ಅನಗತ್ಯ ದ್ವೇಷ ಬಿತ್ತುವುದು ಬೇಡ.

ಜಾತಿ ತಾರತಮ್ಯ ವಿನಾಶಕ್ಕಾಗಿ ಮತ್ತು ದಲಿತ ಸಮುದಾಯಗಳ ಪ್ರಗತಿಗಾಗಿ ಹಲವು ರಾಜಕಾರಣಿಗಳು ಕೆಲಸ ಮಾಡುತ್ತಿದ್ದಾರೆ. ಬಲಗೈ ಸಮುದಾಯದವರು ಇದಕ್ಕೆ ವಿರೋಧ ಇದ್ದಾರೆ ಎಂಬುದು ತಪ್ಪು. ವೈಜ್ಞಾನಿಕವಾಗಿ ಅಧ್ಯಯನವಾಗಲಿ ಎಂದು ಎಲ್ಲರೂ ಒತ್ತಾಯಿಸುತ್ತಲೇ ಬರುತ್ತಿದ್ದಾರೆ. ವೈದಿಕ ಮನಸ್ಥಿತಿಯ ಸವರ್ಣೀಯರು ಇದಕ್ಕೆ ಅವಕಾಶ ಕೊಡುತ್ತಿಲ್ಲ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಇದು ತಪ್ಪು ಅಭಿಪ್ರಾಯ. ಅಂತಹ ಪರಿಸ್ಥಿತಿ ಇಲ್ಲ. ಅಂತಹ ಪರಿಸ್ಥಿತಿ ಸೃಷ್ಟಿಸುವ ಪಿತೂರಿಗಳು ನಡೆಯುತ್ತಿವೆ. ಒಳಮೀಸಲಾತಿ ‘ಬರೀ ಪರಿಶಿಷ್ಟ ಜಾತಿಗಳ ಮಧ್ಯೆ ಮಾತ್ರ ಹಂಚಿಕೆ ಆಗಲಿ’ ಎಂಬ ಚರ್ಚೆಯೇ ಅಪಾಯಕಾರಿ. ಜಾತಿ ಜನಸಂಖ್ಯೆವಾರು ಮೀಸಲಾತಿ ಹಂಚಿಕೆ ಪ್ರಕ್ರಿಯೆ ಮೊದಲಿಗೆ EWS, OBC, ST, ಕೊನೆಗೆ SCಗಳಿಗೆ ಅನ್ವಯವಾಗಲಿ. ಸಮಾನ ಪಾಲನ್ನು ಹಂಚಿತಿನ್ನುವ ದಲಿತರಲ್ಲಿ ಮೂಲತಃ ಇದೆ. ಇದು ಸಮಾನತೆ ಸಾಧಿಸುವ ಮಾರ್ಗ. ಹೀಗಾದಾಗ ದಲಿತರ ಐಕ್ಯತೆ ಹಾಳಾಗೊಲ್ಲ. ಸಾಮಾಜಿಕ ನ್ಯಾಯ ಬಲಗೊಳ್ಳುತ್ತೆ. ಪರಿಶಿಷ್ಟ ಜಾತಿಗಳನ್ನೇ ಗುರಿಯಾಗಿಸುವ ಚರ್ಚೆ ದುರುದ್ದೇಶಪೂರಿತ. ಅವೇಶಕ್ಕೊಳಗಾಗದೆ ಸೌಹಾರ್ದಯುತವಾಗಿ ಕೂತು ಚರ್ಚಿಸಿದರೆ ಪರಿಹಾರ ಸಾದ್ಯ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ನ್ಯಾ. ಸದಾಶಿವ ಆಯೋಗದ ವರದಿ ಮೊದಲು ಬಹಿರಂಗ ಚರ್ಚೆಗೆ ಬಿಡುಗಡೆ ಆಗಲಿ. ಅದರ ಶಿಫಾರಸ್ಸುಗಳ ಸತ್ಯಾಸತ್ಯಾತೆ ಕುರಿತು ಅನಂತರ ಚರ್ಚಿಸೋಣ. ಈ ವರದಿ ಜನಪರವಾಗಿದ್ದರೆ ಒಪ್ಪೋಣ, ಜನವಿರೋಧಿ ಆಗಿದ್ದರೆ ತಿರಸ್ಕರಿಸೋಣ. ಭಾಗಶಃ ಸರಿಯಿದ್ದರೆ ಮತ್ತಷ್ಟು ಅವಲೋಕಿಸಿ ನಿರ್ಧರಿಸೋಣ. ಸಂಬಂಧಪಟ್ಟ ಎಲ್ಲರನ್ನೂ ಒಳಗೊಂಡು, ಚರ್ಚಿಸಿ ಅದರ ಆಧಾರದಲ್ಲಿ ಕ್ರಮ ಕೈಗೊಳ್ಳಬಹುದು. ಆದರೆ ಈ ವರದಿಯನ್ನು ಬಚ್ಚಿಟ್ಟು ರಾಜಕೀಯ ಮಾಡಲಾಗುತ್ತಿದೆ. ಸಹೋದರ ಸಮುದಾಯಗಳ ಮಧ್ಯೆ ಅನಗತ್ಯ ದ್ವೇಷ ಹುಟ್ಟುಹಾಕಲಾಗುತ್ತಿರುವುದು ಬೇಸರದ ಸಂಗತಿ. ಇದಕ್ಕೆಲ್ಲಾ ಸಂವಿಧಾನದಲ್ಲಿ ಉತ್ತರವಿದೆ. ಮೀಸಲಾತಿ ವಿರೋಧಿಸುತ್ತಲೇ ಬಂದಿರುವ ಸಂಘಪರಿವಾರದ ಕಚೇರಿಗಳಲ್ಲಿ ಅಲ್ಲ. ನಮಗೆಲ್ಲ ಬಾಬಾ ಸಾಹೇಬ್ ಬೆಳಕಾಗಬಹುದು, ಕಾದು ನೋಡೊಣ.

  • ಅನಂತನಾಯಕ್ ಎನ್

(ಹೈಕೋರ್ಟ್ ವಕೀಲರು, ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು. ವಿದ್ಯಾರ್ಥಿ ದೆಸೆಯಿಂದ ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.)


ಇದನ್ನೂ ಓದಿ: ಸಾಂವಿಧಾನಿಕ ರಕ್ಷಣೆಯನ್ನು ಎತ್ತಿಹಿಡಿದ ಈ ಎರಡು ಮಹತ್ವದ ತೀರ್ಪುಗಳು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...