Homeಮುಖಪುಟಒಳಮೀಸಲು ರಾಜಕೀಯ ಆಡುಂಬೊಲವಾಗದಿರಲಿ - ಎನ್. ರವಿಕುಮಾರ್

ಒಳಮೀಸಲು ರಾಜಕೀಯ ಆಡುಂಬೊಲವಾಗದಿರಲಿ – ಎನ್. ರವಿಕುಮಾರ್

- Advertisement -
- Advertisement -

ಒಳಮೀಸಲಾತಿಯನ್ನು ಕೇವಲ ಒಂದು ಸವಲತ್ತಿನ ಕಾರ್ಯಸೂಚಿಯಾಗಿ ನೋಡದೆ ಸಾಮಾಜಿಕ ಆಯಾಮಗಳಿಂದಲೂ ಅವಲೋಕಿಸಿ ನೋಡಿದಾಗ ಅಸ್ಪೃಶ್ಯ ಬದುಕಿನ ಸತ್ಯ ದರ್ಶನವಾಗುತ್ತದೆ. ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ಪೃಶ್ಯ-ಅಸ್ಪೃಶ್ಯ ಸ್ತರಗಳನ್ನು ಮೊದಲು ಮನಗಾಣಬೇಕು. ಹೊಲೆ-ಮಾದಿಗರು ಹೊರಗಿಟ್ಟ ಸಮುದಾಯವಾಗಿಯೇ ಬದುಕುತ್ತಿರುವ ಕಾಲ ಇನ್ನೂ ಜೀವಂತವಾಗಿದೆ. ಪರಿಶಿಷ್ಟ ಜಾತಿಯಲ್ಲಿನ ಬಹುತೇಕ ಬಲಾಢ್ಯ ಸ್ಪೃಶ್ಯಜಾತಿಗಳು ಮಾದಿಗರನ್ನು ಹೊಸ್ತಿಲ ಒಳಗೂ ಬಿಟ್ಟುಕೊಳ್ಳದೆ, ತಮ್ಮ ಹೊಲ, ಗದ್ದೆಗಳ ಜೀತಕ್ಕೂ ಇಟ್ಟುಕೊಂಡ ಪ್ರಕರಣಗಳು ಇವೆ. ಮಾದಿಗ ಸಮುದಾಯ ನಾಗರಿಕ ಸಮಾಜದ ಹೇಲು-ಉಚ್ಚೆ ಬಾಚಿ ಬಳಿಯುವ ದಾರುಣ ಬದುಕಿನಿಂದ ಮತ್ತು ಈ ಕಾಲಕ್ಕೂ ಪುಟ್‍ಬಾತ್‍ನಲ್ಲಿ ಅಂಬೇಡ್ಕರ್, ಬಾಬು ಜಗಜೀವನ ರಾಂ ಹೆಸರಿನಲ್ಲಿ ಪೆಟ್ಟಿಗೆಗಳನ್ನಿಟ್ಟುಕೊಂಡು ಚಪ್ಪಲಿ ಹೊಲಿಯುವ ಕಸುಬಿನಿಂದ ಈಗಿನ ತಲೆಮಾರುಗಳು ಇನ್ನೂ ಮುಕ್ತಿಹೊಂದಿಲ್ಲ. ಪರಿಶಿಷ್ಟ ಜಾತಿಗಳಲ್ಲಿನ ಸ್ಪೃಶ್ಯ-ಅಸ್ಪೃಶ್ಯ ಜಾತಿಗಳಿಗೆ ಒಟ್ಟು ಮೀಸಲಾತಿ ಅನ್ವಯವಾಗಿರುವಾಗ ಈ ಇಬ್ಬರ ನಡುವೆ ಇಂತಹ ಅಮಾನುಷ ಅಂತರ ಏಕಿದೆ ಎಂಬುದನ್ನು ಒಳಮೀಸಲಾತಿ ವಿರೋಧಿಸುವ ಸಹೋದರರು ಯೋಚಿಸಬೇಕಾಗಿದೆ.

ಒಳಮೀಸಲಾತಿಯ ಕೂಗು ಇಂದು – ನೆನ್ನೆಯದಲ್ಲ. 1994-95 ರಲ್ಲಿ ಆಂಧ್ರದಲ್ಲಿ ಆರಂಭಗೊಂಡ ಒಳಮೀಸಲಾತಿಯ ಕೂಗಿನ ಹಿಂದೆ ಜನಸಂಖ್ಯೆ ಆಧರಿಸಿ ಬಹುಸಂಖ್ಯಾತರಾಗಿದ್ದ ಅಸ್ಪೃಶ್ಯ ಜಾತಿಗಳು ಮೀಸಲಾತಿಯ ಫಲವನ್ನು ದಕ್ಕಿಸಿಕೊಳ್ಳಲಾಗದ ನೋವು ಸ್ಫೋಟಗೊಂಡಿತು. ಆಂಧ್ರದಲ್ಲಿ ಭುಗಿಲೆದ್ದ ಹೋರಾಟದ ಪರಿಣಾಮ ಅಂದಿನ ಆಂಧ್ರ ಸರ್ಕಾರ ಜಸ್ಟೀಸ್ ರಾಮಚಂದ್ರ ರಾವ್ ಆಯೋಗವನ್ನು ರಚಿಸಿದ್ದು, ಆಯೋಗವು ಮಾದಿಗ ಮತ್ತು ಸಂಬಂಧಿತ ಅಸ್ಪೃಶ್ಯ ಜಾತಿಗಳಿಗೆ ಒಳಮೀಸಲಾತಿ ನೀಡುವ ಅಗತ್ಯತೆಯನ್ನು ಸ್ಪಷ್ಟವಾಗಿ ವೈಜ್ಞಾನಿಕ ಕೋನದಲ್ಲಿ ಮಂಡಿಸಿತು. ಸರ್ಕಾರ ಕೂಡ ಇದನ್ನು ಅನುಷ್ಠಾನಗೊಳಿಸಲು ಮುಂದಾದಾಗ ಆರ್ಥಿಕವಾಗಿ ಪ್ರಬಲವಾಗಿದ್ದ ಮಾಲ ಸಮುದಾಯವು ನ್ಯಾಯಾಲಯಕ್ಕೆ ಮೊರೆಹೋಗಿದ್ದರಿಂದ ಉದ್ದೇಶಿತ ಒಳಮೀಸಲಾತಿಗೆ ಹಿನ್ನಡೆಯಾಯಿತು.

ಆಂಧ್ರದ ಚಳವಳಿಯಿಂದ ಪ್ರೇರಣೆಗೊಂಡು ಕರ್ನಾಟಕದಲ್ಲೂ ಒಳಮೀಸಲಾತಿ ಹೋರಾಟ ಆರಂಭಗೊಂಡಿತು. ಅದರ ಪರಿಣಾಮದಿಂದ ರಚನೆಯಾದ ಜಸ್ಟಿಸ್ ಸದಾಶಿವ ಆಯೋಗದ ವರದಿಯಲ್ಲಿ ಜನಸಂಖ್ಯೆಗನುಗುಣವಾಗಿ ಮೀಸಲು ಹಂಚಿಕೆಯ ಮಾನದಂಡವೊಂದು ಪ್ರಸ್ತಾಪಿತವಾಗಿದೆ. ಒಟ್ಟು ಮೀಸಲು ಪ್ರಮಾಣ ಶೇ. 15ರಲ್ಲಿ – ಶೇ. 33.47 ರಷ್ಟಿರುವ ಮಾದಿಗ ಸಮುದಾಯಕ್ಕೆ ಶೇ. 6, ಶೇ. 32 ರಷ್ಟು ಪ್ರಮಾಣದ ಜನಸಂಖ್ಯೆ ಹೊಂದಿರುವ ಬಲಗೈ ಸಮುದಾಯಕ್ಕೆ ಶೇ. 5 ಉಳಿದ ಸ್ಪೃಶ್ಯ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 3 ಮತ್ತು ಇತರೆ ಜಾತಿಗಳಿಗೆ ಶೇ. 1 ರಷ್ಟು ಮೀಸಲಾತಿಯ ಹಂಚಿಕೆಯನ್ನು ಪ್ರತಿಪಾದಿಸಿದೆ. ಜನಸಂಖ್ಯೆ ಆಧರಿಸಿ ಮೀಸಲು ಪ್ರಮಾಣ ಹಂಚಿಕೆಯಾಗುವುದು ನ್ಯಾಯಸಮ್ಮತವೂ ಮತ್ತು ಹಕ್ಕು ಆಗಿರುವಾಗ ಇದನ್ನು ವಿರೋಧಿಸುವುದು ಸಾಮಾಜಿಕ ನ್ಯಾಯದ ಉಲ್ಲಂಘನೆಯೂ ಆಗುತ್ತದೆ. ಮೀಸಲಾತಿಯ ಬಗೆಗಿನ ವೈಜ್ಞಾನಿಕವಾದ ಮತ್ತು ಪ್ರಜಾತಾಂತ್ರಿಕವಾದ ನಿಲುವನ್ನು ಬಿತ್ತುವ ಮತ್ತು ಹೊಂದುವ ಅಗತ್ಯ ಎಲ್ಲಾ ಕಾಲಕ್ಕೂ ಇರತಕ್ಕದ್ದು. ಅದು ಒಳಮೀಸಲಾತಿಗೂ ವಿಸ್ತರಿಸಬೇಕು. ಈ ಮೂಲಕ ಹಂಚುಣ್ಣುವ ಮನೋಧರ್ಮವನ್ನು ಧರಿಸಲು ಸಾಧ್ಯ.

ಇದನ್ನೂ ಓದಿ: ಒಳಮೀಸಲಾತಿಯೆಂಬುದು ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರ – ಅಂಬಣ್ಣ ಅರೋಲಿಕರ್

ನೆನಗುದಿಗೆ ಬಿದ್ದಿದ್ದ ಜಸ್ಟಿಸ್ ಸದಾಶಿವ ಆಯೋಗಕ್ಕೆ 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪನವರು ಹಣಕಾಸು ನೀಡಿ ಚಾಲನೆ ನೀಡಿದರು. ಈಗ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿದ್ದಾರೆ. ವರದಿ ಮಂಡನೆಯಾಗಿ ಎಂಟು ವರ್ಷಗಳು ಕಳೆದಿವೆ. ಆದರೆ ಈ ವರದಿ ಕೇವಲ ರಾಜಕೀಯ ಕಾರಣಕ್ಕಾಗಿ ಬಳಕೆಯಾಗದೆ ಉದ್ದೇಶಿತ ನ್ಯಾಯವನ್ನು ಜಾರಿಗೊಳಿಸುವ ಬದ್ಧತೆಯನ್ನು ತೋರಬೇಕಿದೆ. ಇಲ್ಲಿ ಮೂಲಭೂತವಾದ ಪ್ರಶ್ನೆಯೆಂದರೆ, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನು ಒಪ್ಪುವುದು, ತಿರಸ್ಕರಿಸುವ ಹೊಣೆಗಾರಿಕೆ ಯಾರದ್ದು?!

ಈ ವರದಿಯ ಚರ್ಚೆ ಹಾದಿ – ಬೀದಿಯಲ್ಲಿ ನಡೆಯಬೇಕಾ? ಪರಿಶಿಷ್ಟ ಸಹೋದರರು ಪರ-ವಿರೋಧಗಳ ಹಗೆಗೆ ಬಿದ್ದು ಬೀದಿಗೆ ಬರಬೇಕಾ?

ಸುಪ್ರೀಂ ಕೋರ್ಟ್ ರಾಷ್ಟ್ರ ಮಟ್ಟದಲ್ಲೇ ಒಳಮೀಸಲಾತಿ ಕುರಿತಂತೆ ಸಕಾರಾತ್ಮಕವಾಗಿ ತನ್ನ ಅಭಿಪ್ರಾಯವನ್ನು ವ್ಯಕ್ತಿಪಡಿಸಿದೆ. ವಿಸ್ತೃತ ಪೀಠದ ಪರಿಶೀಲನೆಗೂ ಒಪ್ಪಿಸಿದೆ. ವಿಸ್ತೃತ ಸಂವಿಧಾನಿಕ ನ್ಯಾಯಪೀಠ ತನ್ನ ಅಂತಿಮ ತೀರ್ಪು ನೀಡುವವರೆಗೂ ಒಳಮೀಸಲು ವಂಚಿತ ಸಮುದಾಯಗಳು ರಾಜಕೀಯ ಪಕ್ಷಗಳ ಓಲೈಕೆಯ ಬಾಲಂಗೋಚಿಗಳಾಗಿ ಬದುಕುವಂತಾಗಬಹುದು. ಕೇಂದ್ರ ಸರ್ಕಾರ ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ10 ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ತನ್ನ ಪರಮ ಕರ್ತವ್ಯದಂತೆ ದಿನಬೆಳಗಾಗುವುದರೊಳಗೆ ಅನುಷ್ಠಾನಗೊಳಿಸಿರುವಾಗ ಒಳಮೀಸಲಾತಿ ವಿಚಾರದಲ್ಲಿ ಯಾಕೆ ನ್ಯಾಯಾಲಯದ ಕಡೆ ಬೆರಳು ತೋರಿ ಕುಳಿತಿರುವುದು?

ಪರಿಶಿಷ್ಟ ಜಾತಿಗಳಲ್ಲಿನ ಸಮುದಾಯಗಳ ನಡುವೆ ಪರ-ವಿರೋಧದ ಸಂಗತಿ ಎನ್ನುವುದಕ್ಕಿಂತ ಸರ್ಕಾರದ ಇಚ್ಛಾಶಕ್ತಿಯ ಪ್ರಶ್ನೆಯೂ ಅಡಗಿದೆ. ರಾಜ್ಯ ಸರ್ಕಾರವೇ ರಚಿಸಿದ ಸದಾಶಿವ ಆಯೋಗವು ಸ್ಪಷ್ಟವಾಗಿ ವರದಿಯನ್ನು ನೀಡಿರುವಾಗ ಸರ್ಕಾರ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಚರ್ಚೆಗೊಳಪಡಿಸಲಿ. ವಿಧಾನಮಂಡಲ ಸಾಂವಿಧಾನಿಕ ವೇದಿಕೆಯಾಗಿರುವಾಗ ಒಳಮೀಸಲಾತಿ ಫಲಿತಾಂಶವೂ ಅಲ್ಲೆ ಇತ್ಯರ್ಥವಾಗಬಾರದೇಕೆ? ಸಂಬಂಧಿತ ಜಾತಿಗಳ ನಡುವೆ ಕಲಹಕ್ಕೆ ಎಡೆಮಾಡುವಂತೆ ವರದಿಯನ್ನು ತೇಲಿಸಿಬಿಟ್ಟು ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಕೂರುವುದು ನಾಗರಿಕ ಸರ್ಕಾರದ ಹೊಣೆಗಾರಿಕೆಯಲ್ಲ. ಸದನದಲ್ಲಿ ವರದಿ ಮಂಡನೆಯಾಗಿ ಅದರಲ್ಲಿರಬಹುದಾದ ಭೂತ, ಹಾವು ಚೇಳುಗಳು ಹೊರಬರಲಿ. ಜೊತೆಗೆ ಹಲವರ ಬಣ್ಣಗಳೂ ಬಯಲಾಗಲಿ. ಒಳಮೀಸಲಾತಿ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಪ್ರಕಟಿಸುವ ಮೂಲಕ ಸಮಾಜದ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು.

ಒಳಮೀಸಲಾತಿಗೆ ಸಂಬಂಧಿಸಿದಂತೆ ಸದಾಶಿವ ಆಯೋಗದ ವರದಿ ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಹಾಗೂ ಇತ್ತೀಚೆಗಷ್ಟೆ ಜಸ್ಟಿಸ್ ನಾಗಮೋಹನ ದಾಸ್ ಆಯೋಗದ (ಮೀಸಲು ಪ್ರಮಾಣ ಹೆಚ್ಚಳ) ವರದಿಯೂ ಸರ್ಕಾರದ ಮುಂದೆ ಇವೆ. ಈ ಮೂರು ಆಯೋಗದ ವರದಿಗಳಲ್ಲಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹಂಚುವ ಸಮಾನ ನ್ಯಾಯ ಪ್ರತಿಪಾದನೆಯಾಗಿರುವುದು ಮಹತ್ವದ ಸಂಗತಿ. ಒಳಮೀಸಲಾತಿ ಎಂಬುದು ಅಸ್ಪೃಶ್ಯ ಸಮುದಾಯವನ್ನು ವಂಚಿಸುವ ರಾಜಕೀಯ ಆಡುಂಬೊಲವಾಗದಿರಲಿ.

ಸಾಮಾಜಿಕ ನ್ಯಾಯವೆಂಬುದು ಕಟ್ಟಕಡೆಯ ದುರ್ಬಲ ವ್ಯಕ್ತಿಗೂ ದಕ್ಕಿದಾಗ ಅದು ಸಾರ್ಥಕಗೊಳ್ಳುತ್ತದೆ. ಒಟ್ಟಾರೆ ಮೀಸಲಾತಿಯನ್ನು ಅನುಷ್ಠಾನಗೊಳಿಸುವಾಗ ಇದ್ದ ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಪ್ರತಿಪಾದನೆ ಒಳಮೀಸಲಾತಿ ವಿಷಯದಲ್ಲೂ ಇರಬೇಕಾಗುತ್ತದೆ. ಒಳಮೀಸಲಾತಿಯನ್ನು ವಿರೋಧಿಸುವವರು ಅಂತಿಮವಾಗಿ ಮೀಸಲಾತಿಯ ವಿರೋಧಿಗಳೂ ಆಗಿರುತ್ತಾರೆ.
ಎನ್. ರವಿಕುಮಾರ್
ಶಿವಮೊಗ್ಗದ ಟೆಲೆಕ್ಸ್ ಪತ್ರಿಕೆಯ ಬರಹಗಳಿಂದ ಎಲ್ಲರಿಗೂ ಪರಿಚಿತರಾಗಿರುವ ರವಿಕುಮಾರ್. ‘ಟೆಲೆಕ್ಸ್ ರವಿ’ ಎಂದೇ ಹೆಚ್ಚಿನವರಿಗೆ ಗೊತ್ತಿದ್ದಾರೆ. ತಮ್ಮ ತೀಕ್ಷ್ಣ ಕವಿತೆಗಳು ಹಾಗೂ ಖಚಿತ ಬರಹಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಚ್ಚುಮೆಚ್ಚು

ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....