Homeಮುಖಪುಟಒಳಮೀಸಲು ರಾಜಕೀಯ ಆಡುಂಬೊಲವಾಗದಿರಲಿ - ಎನ್. ರವಿಕುಮಾರ್

ಒಳಮೀಸಲು ರಾಜಕೀಯ ಆಡುಂಬೊಲವಾಗದಿರಲಿ – ಎನ್. ರವಿಕುಮಾರ್

- Advertisement -
- Advertisement -

ಒಳಮೀಸಲಾತಿಯನ್ನು ಕೇವಲ ಒಂದು ಸವಲತ್ತಿನ ಕಾರ್ಯಸೂಚಿಯಾಗಿ ನೋಡದೆ ಸಾಮಾಜಿಕ ಆಯಾಮಗಳಿಂದಲೂ ಅವಲೋಕಿಸಿ ನೋಡಿದಾಗ ಅಸ್ಪೃಶ್ಯ ಬದುಕಿನ ಸತ್ಯ ದರ್ಶನವಾಗುತ್ತದೆ. ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ಪೃಶ್ಯ-ಅಸ್ಪೃಶ್ಯ ಸ್ತರಗಳನ್ನು ಮೊದಲು ಮನಗಾಣಬೇಕು. ಹೊಲೆ-ಮಾದಿಗರು ಹೊರಗಿಟ್ಟ ಸಮುದಾಯವಾಗಿಯೇ ಬದುಕುತ್ತಿರುವ ಕಾಲ ಇನ್ನೂ ಜೀವಂತವಾಗಿದೆ. ಪರಿಶಿಷ್ಟ ಜಾತಿಯಲ್ಲಿನ ಬಹುತೇಕ ಬಲಾಢ್ಯ ಸ್ಪೃಶ್ಯಜಾತಿಗಳು ಮಾದಿಗರನ್ನು ಹೊಸ್ತಿಲ ಒಳಗೂ ಬಿಟ್ಟುಕೊಳ್ಳದೆ, ತಮ್ಮ ಹೊಲ, ಗದ್ದೆಗಳ ಜೀತಕ್ಕೂ ಇಟ್ಟುಕೊಂಡ ಪ್ರಕರಣಗಳು ಇವೆ. ಮಾದಿಗ ಸಮುದಾಯ ನಾಗರಿಕ ಸಮಾಜದ ಹೇಲು-ಉಚ್ಚೆ ಬಾಚಿ ಬಳಿಯುವ ದಾರುಣ ಬದುಕಿನಿಂದ ಮತ್ತು ಈ ಕಾಲಕ್ಕೂ ಪುಟ್‍ಬಾತ್‍ನಲ್ಲಿ ಅಂಬೇಡ್ಕರ್, ಬಾಬು ಜಗಜೀವನ ರಾಂ ಹೆಸರಿನಲ್ಲಿ ಪೆಟ್ಟಿಗೆಗಳನ್ನಿಟ್ಟುಕೊಂಡು ಚಪ್ಪಲಿ ಹೊಲಿಯುವ ಕಸುಬಿನಿಂದ ಈಗಿನ ತಲೆಮಾರುಗಳು ಇನ್ನೂ ಮುಕ್ತಿಹೊಂದಿಲ್ಲ. ಪರಿಶಿಷ್ಟ ಜಾತಿಗಳಲ್ಲಿನ ಸ್ಪೃಶ್ಯ-ಅಸ್ಪೃಶ್ಯ ಜಾತಿಗಳಿಗೆ ಒಟ್ಟು ಮೀಸಲಾತಿ ಅನ್ವಯವಾಗಿರುವಾಗ ಈ ಇಬ್ಬರ ನಡುವೆ ಇಂತಹ ಅಮಾನುಷ ಅಂತರ ಏಕಿದೆ ಎಂಬುದನ್ನು ಒಳಮೀಸಲಾತಿ ವಿರೋಧಿಸುವ ಸಹೋದರರು ಯೋಚಿಸಬೇಕಾಗಿದೆ.

ಒಳಮೀಸಲಾತಿಯ ಕೂಗು ಇಂದು – ನೆನ್ನೆಯದಲ್ಲ. 1994-95 ರಲ್ಲಿ ಆಂಧ್ರದಲ್ಲಿ ಆರಂಭಗೊಂಡ ಒಳಮೀಸಲಾತಿಯ ಕೂಗಿನ ಹಿಂದೆ ಜನಸಂಖ್ಯೆ ಆಧರಿಸಿ ಬಹುಸಂಖ್ಯಾತರಾಗಿದ್ದ ಅಸ್ಪೃಶ್ಯ ಜಾತಿಗಳು ಮೀಸಲಾತಿಯ ಫಲವನ್ನು ದಕ್ಕಿಸಿಕೊಳ್ಳಲಾಗದ ನೋವು ಸ್ಫೋಟಗೊಂಡಿತು. ಆಂಧ್ರದಲ್ಲಿ ಭುಗಿಲೆದ್ದ ಹೋರಾಟದ ಪರಿಣಾಮ ಅಂದಿನ ಆಂಧ್ರ ಸರ್ಕಾರ ಜಸ್ಟೀಸ್ ರಾಮಚಂದ್ರ ರಾವ್ ಆಯೋಗವನ್ನು ರಚಿಸಿದ್ದು, ಆಯೋಗವು ಮಾದಿಗ ಮತ್ತು ಸಂಬಂಧಿತ ಅಸ್ಪೃಶ್ಯ ಜಾತಿಗಳಿಗೆ ಒಳಮೀಸಲಾತಿ ನೀಡುವ ಅಗತ್ಯತೆಯನ್ನು ಸ್ಪಷ್ಟವಾಗಿ ವೈಜ್ಞಾನಿಕ ಕೋನದಲ್ಲಿ ಮಂಡಿಸಿತು. ಸರ್ಕಾರ ಕೂಡ ಇದನ್ನು ಅನುಷ್ಠಾನಗೊಳಿಸಲು ಮುಂದಾದಾಗ ಆರ್ಥಿಕವಾಗಿ ಪ್ರಬಲವಾಗಿದ್ದ ಮಾಲ ಸಮುದಾಯವು ನ್ಯಾಯಾಲಯಕ್ಕೆ ಮೊರೆಹೋಗಿದ್ದರಿಂದ ಉದ್ದೇಶಿತ ಒಳಮೀಸಲಾತಿಗೆ ಹಿನ್ನಡೆಯಾಯಿತು.

ಆಂಧ್ರದ ಚಳವಳಿಯಿಂದ ಪ್ರೇರಣೆಗೊಂಡು ಕರ್ನಾಟಕದಲ್ಲೂ ಒಳಮೀಸಲಾತಿ ಹೋರಾಟ ಆರಂಭಗೊಂಡಿತು. ಅದರ ಪರಿಣಾಮದಿಂದ ರಚನೆಯಾದ ಜಸ್ಟಿಸ್ ಸದಾಶಿವ ಆಯೋಗದ ವರದಿಯಲ್ಲಿ ಜನಸಂಖ್ಯೆಗನುಗುಣವಾಗಿ ಮೀಸಲು ಹಂಚಿಕೆಯ ಮಾನದಂಡವೊಂದು ಪ್ರಸ್ತಾಪಿತವಾಗಿದೆ. ಒಟ್ಟು ಮೀಸಲು ಪ್ರಮಾಣ ಶೇ. 15ರಲ್ಲಿ – ಶೇ. 33.47 ರಷ್ಟಿರುವ ಮಾದಿಗ ಸಮುದಾಯಕ್ಕೆ ಶೇ. 6, ಶೇ. 32 ರಷ್ಟು ಪ್ರಮಾಣದ ಜನಸಂಖ್ಯೆ ಹೊಂದಿರುವ ಬಲಗೈ ಸಮುದಾಯಕ್ಕೆ ಶೇ. 5 ಉಳಿದ ಸ್ಪೃಶ್ಯ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 3 ಮತ್ತು ಇತರೆ ಜಾತಿಗಳಿಗೆ ಶೇ. 1 ರಷ್ಟು ಮೀಸಲಾತಿಯ ಹಂಚಿಕೆಯನ್ನು ಪ್ರತಿಪಾದಿಸಿದೆ. ಜನಸಂಖ್ಯೆ ಆಧರಿಸಿ ಮೀಸಲು ಪ್ರಮಾಣ ಹಂಚಿಕೆಯಾಗುವುದು ನ್ಯಾಯಸಮ್ಮತವೂ ಮತ್ತು ಹಕ್ಕು ಆಗಿರುವಾಗ ಇದನ್ನು ವಿರೋಧಿಸುವುದು ಸಾಮಾಜಿಕ ನ್ಯಾಯದ ಉಲ್ಲಂಘನೆಯೂ ಆಗುತ್ತದೆ. ಮೀಸಲಾತಿಯ ಬಗೆಗಿನ ವೈಜ್ಞಾನಿಕವಾದ ಮತ್ತು ಪ್ರಜಾತಾಂತ್ರಿಕವಾದ ನಿಲುವನ್ನು ಬಿತ್ತುವ ಮತ್ತು ಹೊಂದುವ ಅಗತ್ಯ ಎಲ್ಲಾ ಕಾಲಕ್ಕೂ ಇರತಕ್ಕದ್ದು. ಅದು ಒಳಮೀಸಲಾತಿಗೂ ವಿಸ್ತರಿಸಬೇಕು. ಈ ಮೂಲಕ ಹಂಚುಣ್ಣುವ ಮನೋಧರ್ಮವನ್ನು ಧರಿಸಲು ಸಾಧ್ಯ.

ಇದನ್ನೂ ಓದಿ: ಒಳಮೀಸಲಾತಿಯೆಂಬುದು ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರ – ಅಂಬಣ್ಣ ಅರೋಲಿಕರ್

ನೆನಗುದಿಗೆ ಬಿದ್ದಿದ್ದ ಜಸ್ಟಿಸ್ ಸದಾಶಿವ ಆಯೋಗಕ್ಕೆ 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪನವರು ಹಣಕಾಸು ನೀಡಿ ಚಾಲನೆ ನೀಡಿದರು. ಈಗ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿದ್ದಾರೆ. ವರದಿ ಮಂಡನೆಯಾಗಿ ಎಂಟು ವರ್ಷಗಳು ಕಳೆದಿವೆ. ಆದರೆ ಈ ವರದಿ ಕೇವಲ ರಾಜಕೀಯ ಕಾರಣಕ್ಕಾಗಿ ಬಳಕೆಯಾಗದೆ ಉದ್ದೇಶಿತ ನ್ಯಾಯವನ್ನು ಜಾರಿಗೊಳಿಸುವ ಬದ್ಧತೆಯನ್ನು ತೋರಬೇಕಿದೆ. ಇಲ್ಲಿ ಮೂಲಭೂತವಾದ ಪ್ರಶ್ನೆಯೆಂದರೆ, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನು ಒಪ್ಪುವುದು, ತಿರಸ್ಕರಿಸುವ ಹೊಣೆಗಾರಿಕೆ ಯಾರದ್ದು?!

ಈ ವರದಿಯ ಚರ್ಚೆ ಹಾದಿ – ಬೀದಿಯಲ್ಲಿ ನಡೆಯಬೇಕಾ? ಪರಿಶಿಷ್ಟ ಸಹೋದರರು ಪರ-ವಿರೋಧಗಳ ಹಗೆಗೆ ಬಿದ್ದು ಬೀದಿಗೆ ಬರಬೇಕಾ?

ಸುಪ್ರೀಂ ಕೋರ್ಟ್ ರಾಷ್ಟ್ರ ಮಟ್ಟದಲ್ಲೇ ಒಳಮೀಸಲಾತಿ ಕುರಿತಂತೆ ಸಕಾರಾತ್ಮಕವಾಗಿ ತನ್ನ ಅಭಿಪ್ರಾಯವನ್ನು ವ್ಯಕ್ತಿಪಡಿಸಿದೆ. ವಿಸ್ತೃತ ಪೀಠದ ಪರಿಶೀಲನೆಗೂ ಒಪ್ಪಿಸಿದೆ. ವಿಸ್ತೃತ ಸಂವಿಧಾನಿಕ ನ್ಯಾಯಪೀಠ ತನ್ನ ಅಂತಿಮ ತೀರ್ಪು ನೀಡುವವರೆಗೂ ಒಳಮೀಸಲು ವಂಚಿತ ಸಮುದಾಯಗಳು ರಾಜಕೀಯ ಪಕ್ಷಗಳ ಓಲೈಕೆಯ ಬಾಲಂಗೋಚಿಗಳಾಗಿ ಬದುಕುವಂತಾಗಬಹುದು. ಕೇಂದ್ರ ಸರ್ಕಾರ ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ10 ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ತನ್ನ ಪರಮ ಕರ್ತವ್ಯದಂತೆ ದಿನಬೆಳಗಾಗುವುದರೊಳಗೆ ಅನುಷ್ಠಾನಗೊಳಿಸಿರುವಾಗ ಒಳಮೀಸಲಾತಿ ವಿಚಾರದಲ್ಲಿ ಯಾಕೆ ನ್ಯಾಯಾಲಯದ ಕಡೆ ಬೆರಳು ತೋರಿ ಕುಳಿತಿರುವುದು?

ಪರಿಶಿಷ್ಟ ಜಾತಿಗಳಲ್ಲಿನ ಸಮುದಾಯಗಳ ನಡುವೆ ಪರ-ವಿರೋಧದ ಸಂಗತಿ ಎನ್ನುವುದಕ್ಕಿಂತ ಸರ್ಕಾರದ ಇಚ್ಛಾಶಕ್ತಿಯ ಪ್ರಶ್ನೆಯೂ ಅಡಗಿದೆ. ರಾಜ್ಯ ಸರ್ಕಾರವೇ ರಚಿಸಿದ ಸದಾಶಿವ ಆಯೋಗವು ಸ್ಪಷ್ಟವಾಗಿ ವರದಿಯನ್ನು ನೀಡಿರುವಾಗ ಸರ್ಕಾರ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಚರ್ಚೆಗೊಳಪಡಿಸಲಿ. ವಿಧಾನಮಂಡಲ ಸಾಂವಿಧಾನಿಕ ವೇದಿಕೆಯಾಗಿರುವಾಗ ಒಳಮೀಸಲಾತಿ ಫಲಿತಾಂಶವೂ ಅಲ್ಲೆ ಇತ್ಯರ್ಥವಾಗಬಾರದೇಕೆ? ಸಂಬಂಧಿತ ಜಾತಿಗಳ ನಡುವೆ ಕಲಹಕ್ಕೆ ಎಡೆಮಾಡುವಂತೆ ವರದಿಯನ್ನು ತೇಲಿಸಿಬಿಟ್ಟು ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಕೂರುವುದು ನಾಗರಿಕ ಸರ್ಕಾರದ ಹೊಣೆಗಾರಿಕೆಯಲ್ಲ. ಸದನದಲ್ಲಿ ವರದಿ ಮಂಡನೆಯಾಗಿ ಅದರಲ್ಲಿರಬಹುದಾದ ಭೂತ, ಹಾವು ಚೇಳುಗಳು ಹೊರಬರಲಿ. ಜೊತೆಗೆ ಹಲವರ ಬಣ್ಣಗಳೂ ಬಯಲಾಗಲಿ. ಒಳಮೀಸಲಾತಿ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಪ್ರಕಟಿಸುವ ಮೂಲಕ ಸಮಾಜದ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು.

ಒಳಮೀಸಲಾತಿಗೆ ಸಂಬಂಧಿಸಿದಂತೆ ಸದಾಶಿವ ಆಯೋಗದ ವರದಿ ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಹಾಗೂ ಇತ್ತೀಚೆಗಷ್ಟೆ ಜಸ್ಟಿಸ್ ನಾಗಮೋಹನ ದಾಸ್ ಆಯೋಗದ (ಮೀಸಲು ಪ್ರಮಾಣ ಹೆಚ್ಚಳ) ವರದಿಯೂ ಸರ್ಕಾರದ ಮುಂದೆ ಇವೆ. ಈ ಮೂರು ಆಯೋಗದ ವರದಿಗಳಲ್ಲಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹಂಚುವ ಸಮಾನ ನ್ಯಾಯ ಪ್ರತಿಪಾದನೆಯಾಗಿರುವುದು ಮಹತ್ವದ ಸಂಗತಿ. ಒಳಮೀಸಲಾತಿ ಎಂಬುದು ಅಸ್ಪೃಶ್ಯ ಸಮುದಾಯವನ್ನು ವಂಚಿಸುವ ರಾಜಕೀಯ ಆಡುಂಬೊಲವಾಗದಿರಲಿ.

ಸಾಮಾಜಿಕ ನ್ಯಾಯವೆಂಬುದು ಕಟ್ಟಕಡೆಯ ದುರ್ಬಲ ವ್ಯಕ್ತಿಗೂ ದಕ್ಕಿದಾಗ ಅದು ಸಾರ್ಥಕಗೊಳ್ಳುತ್ತದೆ. ಒಟ್ಟಾರೆ ಮೀಸಲಾತಿಯನ್ನು ಅನುಷ್ಠಾನಗೊಳಿಸುವಾಗ ಇದ್ದ ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಪ್ರತಿಪಾದನೆ ಒಳಮೀಸಲಾತಿ ವಿಷಯದಲ್ಲೂ ಇರಬೇಕಾಗುತ್ತದೆ. ಒಳಮೀಸಲಾತಿಯನ್ನು ವಿರೋಧಿಸುವವರು ಅಂತಿಮವಾಗಿ ಮೀಸಲಾತಿಯ ವಿರೋಧಿಗಳೂ ಆಗಿರುತ್ತಾರೆ.
ಎನ್. ರವಿಕುಮಾರ್
ಶಿವಮೊಗ್ಗದ ಟೆಲೆಕ್ಸ್ ಪತ್ರಿಕೆಯ ಬರಹಗಳಿಂದ ಎಲ್ಲರಿಗೂ ಪರಿಚಿತರಾಗಿರುವ ರವಿಕುಮಾರ್. ‘ಟೆಲೆಕ್ಸ್ ರವಿ’ ಎಂದೇ ಹೆಚ್ಚಿನವರಿಗೆ ಗೊತ್ತಿದ್ದಾರೆ. ತಮ್ಮ ತೀಕ್ಷ್ಣ ಕವಿತೆಗಳು ಹಾಗೂ ಖಚಿತ ಬರಹಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಚ್ಚುಮೆಚ್ಚು

ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...