Homeಮುಖಪುಟಒಳಮೀಸಲು ರಾಜಕೀಯ ಆಡುಂಬೊಲವಾಗದಿರಲಿ - ಎನ್. ರವಿಕುಮಾರ್

ಒಳಮೀಸಲು ರಾಜಕೀಯ ಆಡುಂಬೊಲವಾಗದಿರಲಿ – ಎನ್. ರವಿಕುಮಾರ್

- Advertisement -
- Advertisement -

ಒಳಮೀಸಲಾತಿಯನ್ನು ಕೇವಲ ಒಂದು ಸವಲತ್ತಿನ ಕಾರ್ಯಸೂಚಿಯಾಗಿ ನೋಡದೆ ಸಾಮಾಜಿಕ ಆಯಾಮಗಳಿಂದಲೂ ಅವಲೋಕಿಸಿ ನೋಡಿದಾಗ ಅಸ್ಪೃಶ್ಯ ಬದುಕಿನ ಸತ್ಯ ದರ್ಶನವಾಗುತ್ತದೆ. ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ಪೃಶ್ಯ-ಅಸ್ಪೃಶ್ಯ ಸ್ತರಗಳನ್ನು ಮೊದಲು ಮನಗಾಣಬೇಕು. ಹೊಲೆ-ಮಾದಿಗರು ಹೊರಗಿಟ್ಟ ಸಮುದಾಯವಾಗಿಯೇ ಬದುಕುತ್ತಿರುವ ಕಾಲ ಇನ್ನೂ ಜೀವಂತವಾಗಿದೆ. ಪರಿಶಿಷ್ಟ ಜಾತಿಯಲ್ಲಿನ ಬಹುತೇಕ ಬಲಾಢ್ಯ ಸ್ಪೃಶ್ಯಜಾತಿಗಳು ಮಾದಿಗರನ್ನು ಹೊಸ್ತಿಲ ಒಳಗೂ ಬಿಟ್ಟುಕೊಳ್ಳದೆ, ತಮ್ಮ ಹೊಲ, ಗದ್ದೆಗಳ ಜೀತಕ್ಕೂ ಇಟ್ಟುಕೊಂಡ ಪ್ರಕರಣಗಳು ಇವೆ. ಮಾದಿಗ ಸಮುದಾಯ ನಾಗರಿಕ ಸಮಾಜದ ಹೇಲು-ಉಚ್ಚೆ ಬಾಚಿ ಬಳಿಯುವ ದಾರುಣ ಬದುಕಿನಿಂದ ಮತ್ತು ಈ ಕಾಲಕ್ಕೂ ಪುಟ್‍ಬಾತ್‍ನಲ್ಲಿ ಅಂಬೇಡ್ಕರ್, ಬಾಬು ಜಗಜೀವನ ರಾಂ ಹೆಸರಿನಲ್ಲಿ ಪೆಟ್ಟಿಗೆಗಳನ್ನಿಟ್ಟುಕೊಂಡು ಚಪ್ಪಲಿ ಹೊಲಿಯುವ ಕಸುಬಿನಿಂದ ಈಗಿನ ತಲೆಮಾರುಗಳು ಇನ್ನೂ ಮುಕ್ತಿಹೊಂದಿಲ್ಲ. ಪರಿಶಿಷ್ಟ ಜಾತಿಗಳಲ್ಲಿನ ಸ್ಪೃಶ್ಯ-ಅಸ್ಪೃಶ್ಯ ಜಾತಿಗಳಿಗೆ ಒಟ್ಟು ಮೀಸಲಾತಿ ಅನ್ವಯವಾಗಿರುವಾಗ ಈ ಇಬ್ಬರ ನಡುವೆ ಇಂತಹ ಅಮಾನುಷ ಅಂತರ ಏಕಿದೆ ಎಂಬುದನ್ನು ಒಳಮೀಸಲಾತಿ ವಿರೋಧಿಸುವ ಸಹೋದರರು ಯೋಚಿಸಬೇಕಾಗಿದೆ.

ಒಳಮೀಸಲಾತಿಯ ಕೂಗು ಇಂದು – ನೆನ್ನೆಯದಲ್ಲ. 1994-95 ರಲ್ಲಿ ಆಂಧ್ರದಲ್ಲಿ ಆರಂಭಗೊಂಡ ಒಳಮೀಸಲಾತಿಯ ಕೂಗಿನ ಹಿಂದೆ ಜನಸಂಖ್ಯೆ ಆಧರಿಸಿ ಬಹುಸಂಖ್ಯಾತರಾಗಿದ್ದ ಅಸ್ಪೃಶ್ಯ ಜಾತಿಗಳು ಮೀಸಲಾತಿಯ ಫಲವನ್ನು ದಕ್ಕಿಸಿಕೊಳ್ಳಲಾಗದ ನೋವು ಸ್ಫೋಟಗೊಂಡಿತು. ಆಂಧ್ರದಲ್ಲಿ ಭುಗಿಲೆದ್ದ ಹೋರಾಟದ ಪರಿಣಾಮ ಅಂದಿನ ಆಂಧ್ರ ಸರ್ಕಾರ ಜಸ್ಟೀಸ್ ರಾಮಚಂದ್ರ ರಾವ್ ಆಯೋಗವನ್ನು ರಚಿಸಿದ್ದು, ಆಯೋಗವು ಮಾದಿಗ ಮತ್ತು ಸಂಬಂಧಿತ ಅಸ್ಪೃಶ್ಯ ಜಾತಿಗಳಿಗೆ ಒಳಮೀಸಲಾತಿ ನೀಡುವ ಅಗತ್ಯತೆಯನ್ನು ಸ್ಪಷ್ಟವಾಗಿ ವೈಜ್ಞಾನಿಕ ಕೋನದಲ್ಲಿ ಮಂಡಿಸಿತು. ಸರ್ಕಾರ ಕೂಡ ಇದನ್ನು ಅನುಷ್ಠಾನಗೊಳಿಸಲು ಮುಂದಾದಾಗ ಆರ್ಥಿಕವಾಗಿ ಪ್ರಬಲವಾಗಿದ್ದ ಮಾಲ ಸಮುದಾಯವು ನ್ಯಾಯಾಲಯಕ್ಕೆ ಮೊರೆಹೋಗಿದ್ದರಿಂದ ಉದ್ದೇಶಿತ ಒಳಮೀಸಲಾತಿಗೆ ಹಿನ್ನಡೆಯಾಯಿತು.

ಆಂಧ್ರದ ಚಳವಳಿಯಿಂದ ಪ್ರೇರಣೆಗೊಂಡು ಕರ್ನಾಟಕದಲ್ಲೂ ಒಳಮೀಸಲಾತಿ ಹೋರಾಟ ಆರಂಭಗೊಂಡಿತು. ಅದರ ಪರಿಣಾಮದಿಂದ ರಚನೆಯಾದ ಜಸ್ಟಿಸ್ ಸದಾಶಿವ ಆಯೋಗದ ವರದಿಯಲ್ಲಿ ಜನಸಂಖ್ಯೆಗನುಗುಣವಾಗಿ ಮೀಸಲು ಹಂಚಿಕೆಯ ಮಾನದಂಡವೊಂದು ಪ್ರಸ್ತಾಪಿತವಾಗಿದೆ. ಒಟ್ಟು ಮೀಸಲು ಪ್ರಮಾಣ ಶೇ. 15ರಲ್ಲಿ – ಶೇ. 33.47 ರಷ್ಟಿರುವ ಮಾದಿಗ ಸಮುದಾಯಕ್ಕೆ ಶೇ. 6, ಶೇ. 32 ರಷ್ಟು ಪ್ರಮಾಣದ ಜನಸಂಖ್ಯೆ ಹೊಂದಿರುವ ಬಲಗೈ ಸಮುದಾಯಕ್ಕೆ ಶೇ. 5 ಉಳಿದ ಸ್ಪೃಶ್ಯ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 3 ಮತ್ತು ಇತರೆ ಜಾತಿಗಳಿಗೆ ಶೇ. 1 ರಷ್ಟು ಮೀಸಲಾತಿಯ ಹಂಚಿಕೆಯನ್ನು ಪ್ರತಿಪಾದಿಸಿದೆ. ಜನಸಂಖ್ಯೆ ಆಧರಿಸಿ ಮೀಸಲು ಪ್ರಮಾಣ ಹಂಚಿಕೆಯಾಗುವುದು ನ್ಯಾಯಸಮ್ಮತವೂ ಮತ್ತು ಹಕ್ಕು ಆಗಿರುವಾಗ ಇದನ್ನು ವಿರೋಧಿಸುವುದು ಸಾಮಾಜಿಕ ನ್ಯಾಯದ ಉಲ್ಲಂಘನೆಯೂ ಆಗುತ್ತದೆ. ಮೀಸಲಾತಿಯ ಬಗೆಗಿನ ವೈಜ್ಞಾನಿಕವಾದ ಮತ್ತು ಪ್ರಜಾತಾಂತ್ರಿಕವಾದ ನಿಲುವನ್ನು ಬಿತ್ತುವ ಮತ್ತು ಹೊಂದುವ ಅಗತ್ಯ ಎಲ್ಲಾ ಕಾಲಕ್ಕೂ ಇರತಕ್ಕದ್ದು. ಅದು ಒಳಮೀಸಲಾತಿಗೂ ವಿಸ್ತರಿಸಬೇಕು. ಈ ಮೂಲಕ ಹಂಚುಣ್ಣುವ ಮನೋಧರ್ಮವನ್ನು ಧರಿಸಲು ಸಾಧ್ಯ.

ಇದನ್ನೂ ಓದಿ: ಒಳಮೀಸಲಾತಿಯೆಂಬುದು ಅಣ್ಣನ ಪಾಲು ಅಣ್ಣನಿಗೆ, ತಮ್ಮನ ಪಾಲು ತಮ್ಮನಿಗೆ ಎಂಬ ಸರಳ ಸೂತ್ರ – ಅಂಬಣ್ಣ ಅರೋಲಿಕರ್

ನೆನಗುದಿಗೆ ಬಿದ್ದಿದ್ದ ಜಸ್ಟಿಸ್ ಸದಾಶಿವ ಆಯೋಗಕ್ಕೆ 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪನವರು ಹಣಕಾಸು ನೀಡಿ ಚಾಲನೆ ನೀಡಿದರು. ಈಗ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿದ್ದಾರೆ. ವರದಿ ಮಂಡನೆಯಾಗಿ ಎಂಟು ವರ್ಷಗಳು ಕಳೆದಿವೆ. ಆದರೆ ಈ ವರದಿ ಕೇವಲ ರಾಜಕೀಯ ಕಾರಣಕ್ಕಾಗಿ ಬಳಕೆಯಾಗದೆ ಉದ್ದೇಶಿತ ನ್ಯಾಯವನ್ನು ಜಾರಿಗೊಳಿಸುವ ಬದ್ಧತೆಯನ್ನು ತೋರಬೇಕಿದೆ. ಇಲ್ಲಿ ಮೂಲಭೂತವಾದ ಪ್ರಶ್ನೆಯೆಂದರೆ, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನು ಒಪ್ಪುವುದು, ತಿರಸ್ಕರಿಸುವ ಹೊಣೆಗಾರಿಕೆ ಯಾರದ್ದು?!

ಈ ವರದಿಯ ಚರ್ಚೆ ಹಾದಿ – ಬೀದಿಯಲ್ಲಿ ನಡೆಯಬೇಕಾ? ಪರಿಶಿಷ್ಟ ಸಹೋದರರು ಪರ-ವಿರೋಧಗಳ ಹಗೆಗೆ ಬಿದ್ದು ಬೀದಿಗೆ ಬರಬೇಕಾ?

ಸುಪ್ರೀಂ ಕೋರ್ಟ್ ರಾಷ್ಟ್ರ ಮಟ್ಟದಲ್ಲೇ ಒಳಮೀಸಲಾತಿ ಕುರಿತಂತೆ ಸಕಾರಾತ್ಮಕವಾಗಿ ತನ್ನ ಅಭಿಪ್ರಾಯವನ್ನು ವ್ಯಕ್ತಿಪಡಿಸಿದೆ. ವಿಸ್ತೃತ ಪೀಠದ ಪರಿಶೀಲನೆಗೂ ಒಪ್ಪಿಸಿದೆ. ವಿಸ್ತೃತ ಸಂವಿಧಾನಿಕ ನ್ಯಾಯಪೀಠ ತನ್ನ ಅಂತಿಮ ತೀರ್ಪು ನೀಡುವವರೆಗೂ ಒಳಮೀಸಲು ವಂಚಿತ ಸಮುದಾಯಗಳು ರಾಜಕೀಯ ಪಕ್ಷಗಳ ಓಲೈಕೆಯ ಬಾಲಂಗೋಚಿಗಳಾಗಿ ಬದುಕುವಂತಾಗಬಹುದು. ಕೇಂದ್ರ ಸರ್ಕಾರ ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ10 ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ತನ್ನ ಪರಮ ಕರ್ತವ್ಯದಂತೆ ದಿನಬೆಳಗಾಗುವುದರೊಳಗೆ ಅನುಷ್ಠಾನಗೊಳಿಸಿರುವಾಗ ಒಳಮೀಸಲಾತಿ ವಿಚಾರದಲ್ಲಿ ಯಾಕೆ ನ್ಯಾಯಾಲಯದ ಕಡೆ ಬೆರಳು ತೋರಿ ಕುಳಿತಿರುವುದು?

ಪರಿಶಿಷ್ಟ ಜಾತಿಗಳಲ್ಲಿನ ಸಮುದಾಯಗಳ ನಡುವೆ ಪರ-ವಿರೋಧದ ಸಂಗತಿ ಎನ್ನುವುದಕ್ಕಿಂತ ಸರ್ಕಾರದ ಇಚ್ಛಾಶಕ್ತಿಯ ಪ್ರಶ್ನೆಯೂ ಅಡಗಿದೆ. ರಾಜ್ಯ ಸರ್ಕಾರವೇ ರಚಿಸಿದ ಸದಾಶಿವ ಆಯೋಗವು ಸ್ಪಷ್ಟವಾಗಿ ವರದಿಯನ್ನು ನೀಡಿರುವಾಗ ಸರ್ಕಾರ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಚರ್ಚೆಗೊಳಪಡಿಸಲಿ. ವಿಧಾನಮಂಡಲ ಸಾಂವಿಧಾನಿಕ ವೇದಿಕೆಯಾಗಿರುವಾಗ ಒಳಮೀಸಲಾತಿ ಫಲಿತಾಂಶವೂ ಅಲ್ಲೆ ಇತ್ಯರ್ಥವಾಗಬಾರದೇಕೆ? ಸಂಬಂಧಿತ ಜಾತಿಗಳ ನಡುವೆ ಕಲಹಕ್ಕೆ ಎಡೆಮಾಡುವಂತೆ ವರದಿಯನ್ನು ತೇಲಿಸಿಬಿಟ್ಟು ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಕೂರುವುದು ನಾಗರಿಕ ಸರ್ಕಾರದ ಹೊಣೆಗಾರಿಕೆಯಲ್ಲ. ಸದನದಲ್ಲಿ ವರದಿ ಮಂಡನೆಯಾಗಿ ಅದರಲ್ಲಿರಬಹುದಾದ ಭೂತ, ಹಾವು ಚೇಳುಗಳು ಹೊರಬರಲಿ. ಜೊತೆಗೆ ಹಲವರ ಬಣ್ಣಗಳೂ ಬಯಲಾಗಲಿ. ಒಳಮೀಸಲಾತಿ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಪ್ರಕಟಿಸುವ ಮೂಲಕ ಸಮಾಜದ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು.

ಒಳಮೀಸಲಾತಿಗೆ ಸಂಬಂಧಿಸಿದಂತೆ ಸದಾಶಿವ ಆಯೋಗದ ವರದಿ ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಹಾಗೂ ಇತ್ತೀಚೆಗಷ್ಟೆ ಜಸ್ಟಿಸ್ ನಾಗಮೋಹನ ದಾಸ್ ಆಯೋಗದ (ಮೀಸಲು ಪ್ರಮಾಣ ಹೆಚ್ಚಳ) ವರದಿಯೂ ಸರ್ಕಾರದ ಮುಂದೆ ಇವೆ. ಈ ಮೂರು ಆಯೋಗದ ವರದಿಗಳಲ್ಲಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹಂಚುವ ಸಮಾನ ನ್ಯಾಯ ಪ್ರತಿಪಾದನೆಯಾಗಿರುವುದು ಮಹತ್ವದ ಸಂಗತಿ. ಒಳಮೀಸಲಾತಿ ಎಂಬುದು ಅಸ್ಪೃಶ್ಯ ಸಮುದಾಯವನ್ನು ವಂಚಿಸುವ ರಾಜಕೀಯ ಆಡುಂಬೊಲವಾಗದಿರಲಿ.

ಸಾಮಾಜಿಕ ನ್ಯಾಯವೆಂಬುದು ಕಟ್ಟಕಡೆಯ ದುರ್ಬಲ ವ್ಯಕ್ತಿಗೂ ದಕ್ಕಿದಾಗ ಅದು ಸಾರ್ಥಕಗೊಳ್ಳುತ್ತದೆ. ಒಟ್ಟಾರೆ ಮೀಸಲಾತಿಯನ್ನು ಅನುಷ್ಠಾನಗೊಳಿಸುವಾಗ ಇದ್ದ ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಪ್ರತಿಪಾದನೆ ಒಳಮೀಸಲಾತಿ ವಿಷಯದಲ್ಲೂ ಇರಬೇಕಾಗುತ್ತದೆ. ಒಳಮೀಸಲಾತಿಯನ್ನು ವಿರೋಧಿಸುವವರು ಅಂತಿಮವಾಗಿ ಮೀಸಲಾತಿಯ ವಿರೋಧಿಗಳೂ ಆಗಿರುತ್ತಾರೆ.
ಎನ್. ರವಿಕುಮಾರ್
ಶಿವಮೊಗ್ಗದ ಟೆಲೆಕ್ಸ್ ಪತ್ರಿಕೆಯ ಬರಹಗಳಿಂದ ಎಲ್ಲರಿಗೂ ಪರಿಚಿತರಾಗಿರುವ ರವಿಕುಮಾರ್. ‘ಟೆಲೆಕ್ಸ್ ರವಿ’ ಎಂದೇ ಹೆಚ್ಚಿನವರಿಗೆ ಗೊತ್ತಿದ್ದಾರೆ. ತಮ್ಮ ತೀಕ್ಷ್ಣ ಕವಿತೆಗಳು ಹಾಗೂ ಖಚಿತ ಬರಹಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಚ್ಚುಮೆಚ್ಚು

ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...