Homeಕರ್ನಾಟಕಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

ಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

- Advertisement -
- Advertisement -

ಈ ಬಾರಿಯ ಮಳೆ ಮತ್ತು ಪ್ರವಾಹಕ್ಕೆ ರಾಜ್ಯದ 2/3 ಜಿಲ್ಲೆ ಮತ್ತು ತಾಲೂಕುಗಳು ಬಲಿಯಾಗಿವೆ. ನೇರವಾಗಿ ಮಳೆ ಬಿದ್ದು ಅದರಿಂದುಂಟಾದ ಪ್ರವಾಹಕ್ಕೆ ತುತ್ತಾದ ತಾಲೂಕುಗಳು ಒಂದೆಡೆಯಾದರೆ, ಅಂಥಾ ಅನಾಹುತಕಾರಿ ಮಳೆ ಇಲ್ಲದೆಯೂ, ಮಲೆನಾಡು ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಸುರಿದ ನೀರು ಹರಿಯಬಿಟ್ಟ ಕಾರಣ ಉಂಟಾದ ನೆರೆಗೆ ಬಲಿಯಾದ ತಾಲೂಕುಗಳು ಇನ್ನೊಂದೆಡೆ. ರಸ್ತೆ, ಸೇತುವೆ ಮುಂತಾದವುಗಳು ಕೊಚ್ಚಿಹೋದ ಕಾರಣಕ್ಕುಂಟಾದ ಮೂಲ ಸಂರಚನೆಯ ನಷ್ಟ, ಖಾಸಗಿ ಮನೆ ಮಠ, ಪಂಪ್‍ಸೆಟ್ ಇತ್ಯಾದಿಗಳ ನಷ್ಟ ಸಾವಿರಾರು ಕೋಟಿ ರೂಪಾಯಿಗಳು. ಇದಕ್ಕಿಂತಲೂ ಘೋರವೆಂದರೆ ಲಕ್ಷಾಂತರ ಎಕರೆಗಳಲ್ಲಿ ಸಾಗುವಳಿ ಆದ ಬೆಳೆ ನಾಶ. ಪ್ರವಾಹ ಮತ್ತು ಕುಂಭದ್ರೋಣ ಮಳೆಗೆ ತುತ್ತಾದ ಜಿಲ್ಲೆಗಳ ಸಾಗುವಳಿ ಜಮೀನಿನ ಪ್ರಮಾಣ ನೋಡಿ. ಇದರಲ್ಲಿ ಶೇ. 50-70ರಷ್ಟು ಬೆಳೆ ನಾಶವಾಗುವುದು ಖಂಡಿತ. ಕೃಷಿ ವಿಜ್ಞಾನಿಗಳು ಹೇಳಿದ ಹಾಗೆ ಒಂದು ವಾರ ಬಿಡಿ; ಕೇವಲ ಮೂರು ದಿನ ನೀರು ನಿಂತರೆ ಭತ್ತ ಮತ್ತು ಸ್ವಲ್ಪಮಟ್ಟಿಗೆ ರಾಗಿ ಮಾತ್ರ ತಾಳಿಕೊಳ್ಳಬಲ್ಲುದು. ಉಳಿದ ಬೆಳೆಗಳು ಪೋಷಕಾಂಶ ಹೀರಲಾಗದೇ ನಲುಗುತ್ತವೆ. ಅದೇರೀತಿ ಮೋಡ ಮುಸುಕಿದ ವಾತಾವರಣ ವಾರ ಕಾಲ ಇದ್ದರೆ ದ್ಯುತಿ ಸಂಶ್ಲೇಷಣೆ ಮಾಡಲಾಗದೇ ಗಿಡಗಳು ಸೊರಗುತ್ತವೆ. ಈ ಕಾರಣಕ್ಕೇ ಇಳುವರಿ ಶೇ.50-70ರಷ್ಟು ನಷ್ಟವಾಗುತ್ತದೆ.

ಈ ಮಳೆ ಹಾನಿಗೊಳಗಾದ ಭೂಪ್ರದೇಶದಲ್ಲಿ ಮೂರು ವಿಧವಿದೆ.
1. ಮಲೆನಾಡಿನ ವ್ಯಾಪಾರಿ ಬೆಳೆಗಳಾದ ಅಡಿಕೆ, ಕಾಫಿ ಬೆಳೆಯುವ ಪ್ರದೇಶ; ಇಲ್ಲಿ ಕಡುಬೇಸಿಗೆಯಿಂದಲೇ ಕಾಫಿ ಮತ್ತು ಅಡಿಕೆ ನಲುಗಿದ್ದು, ಈಗಿನ ಮಳೆಯಿಂದಾಗಿ ಕೊಳೆರೋಗ ಸಹಿತ ತೀವ್ರ ರೋಗ ಬಾಧೆಗೆ ತುತ್ತಾಗಿ ಬೆಳೆ ನಷ್ಟವಾಗುವ ಸಾಧ್ಯತೆ ದಟ್ಟವಾಗಿದೆ. ಈ ಪ್ರದೇಶದ ಸಾವಿರಾರು ಎಕರೆಗಳಲ್ಲಿ ಬಡ ಸಣ್ಣರೈತರು ಉಣ್ಣುವ ಸಲುವಾಗಿಯೇ ಮಳೆಆಶ್ರಿತ ಭತ್ತ ಬೆಳೆಯುತ್ತಾರೆ. (ಭತ್ತ ಬಿಟ್ಟು ಬೇರೆ ಯಾವ ಧಾನ್ಯವನ್ನೂ ಇವರು ಬೆಳೆಯುವುದಿಲ್ಲ) ಆರಂಭದಲ್ಲಿ ಮಳೆ ಇಲ್ಲದ ಕಾರಣ ಈ ರೈತರ ಭತ್ತದ ನಾಟಿ ಈ ಬಾರಿ ತಡವಾಗಿದೆ. ಈಗ ಭೀಷಣ ಮಳೆಯಿಂದಾಗಿ ಭತ್ತದ ಇಳುವರಿ ಕುಂಠಿತ/ ನಾಶವಾಗಲಿದೆ.

2. ಭೀಕರ ಮಳೆ ಮತ್ತು ಪ್ರವಾಹ ಎರಡಕ್ಕೂ ತುತ್ತಾದ ಪ್ರದೇಶಗಳು: ಬೆಳಗಾವಿ, ಗದಗ, ಭಾಗಶಃ ಶಿವಮೊಗ್ಗ, ಬಾಗಲಕೋಟೆಯಂಥಾ ಪ್ರದೇಶಗಳು ಪ್ರವಾಹ ಮತ್ತು ಹನಿ ಕಡಿಯದ ಮಲೇ ಎರಡರಿಂದಲೂ ಬಾಧೆ ಅನುಭವಿಸಿವೆ. ಇಲ್ಲಿನ ಬೆಳೆಗಳು ನಾನು ಮೇಲೆ ಹೇಳಿದ ಎರಡೂ ಕಾರಣಗಳಿಂದ ನಾಶವಾಗಲಿವೆ.

3. ಮಳೆ ಇಲ್ಲದಿದ್ದರೂ ತುಂಗೆ, ಭೀಮಾ, ಮಲಪ್ರಭ, ಕೃಷ್ಣಾಗಳ ಭರಪೂರ ನೀರಿನ ಪ್ರವಾಹದಿಂದ ನಲುಗಿದ ಜಿಲ್ಲೆಗಳಲ್ಲೂ ಬೆಳೆ ಸಂಪೂರ್ಣ ನಾಶವಾಗುವ ಸಾಧ್ಯತೆ ಇದೆ.

ಸುಮ್ಮನೆ ಲೆಕ್ಕ ಹಾಕಿ, ಈ ಕೃಷಿ ಪ್ರದೇಶ ಕರ್ನಾಟಕದ ಒಟ್ಟಾರೆ ಕೃಷಿ ಪ್ರದೇಶದ ಶೇ..70ರಷ್ಟಿದೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದ ಹಾಗೆ 40 ಲಕ್ಷ ಹೆಕ್ಟೇರ್ ಜಮೀನು ಬಾಧೆಗೊಳಗಾಗಿದೆ ಎಂದೇ ಇಟ್ಟುಕೊಂಡು; ಹೆಕ್ಟೇರಿಗೆ ಕನಿಷ್ಠ 25 ಸಾವಿರ ನಷ್ಟದಂತೆ ಅಂದಾಜು ಮಾಡಿದರೂ, ಒಟ್ಟಾರೆ ನಷ್ಟ 15 ಸಾವಿರ ಕೋಟಿ ಮೀರಲಿದೆ.

ನೆನಪಿಡಿ. ಇದು ಈ ಮುಂಗಾರು ಬೆಳೆಯ ನಷ್ಟ. ನೆನಪಿಡಬೇಕಾದ್ದು ಈ ಬಾರಿ ಮುಂಗಾರು ಕೈಕೊಟ್ಟ ಕಾರಣ ರೈತರು ಎರಡೆರಡು ಬಾರಿ ಬಿತ್ತನೆ ಮಾಡಿದ್ದಿದೆ. ಮಳೆಯಿಲ್ಲದೇ ಆದ ನಷ್ಟ ಮತ್ತು ಅತಿವೃಷ್ಟಿಯಿಂದಾದ ನಷ್ಟ ಲೆಕ್ಕ ಹಾಕಿದರೆ ತಲೆ ತಿರುಗುತ್ತದೆ.

ಈ ಮಳೆ ಈಗ ಒಮ್ಮೆ ಕಮ್ಮಿ ಆಗಿ ಮತ್ತೆ ಶುರು ಹಚ್ಚಿಕೊಂಡು, ನಾಡಿದ್ದು ಹಿಂಗಾರಿನಲ್ಲಿ ಒಂದೆರಡು ಅಧಿಕ ಮಳೆ ಬಂದರೂ ಹಿಂಗಾರು ಬೆಳೆಯೂ ಕೈಗೆ ದಕ್ಕುವುದು ಕಷ್ಟ. ತೀವ್ರ ನೀರು ನಿಂತಾಗ ಮಣ್ಣಿನ ಜೈವಿಕ ಚಟುವಟಿಕೆ ಬಂದ್ ಆಗಿ ಮಣ್ಣಿನ ಸ್ವರೂಪವೇ ಬದಲಾಗುತ್ತದೆ. ಇದು ಮೊದಲಿನ ಮಟ್ಟಕ್ಕೆ ಬರಲು ಎರಡು ವರ್ಷ ಬೇಕು.

ಮೂರು R – Relief, Rehabilitation and Reconstruction ಎಂಬ ಸೂತ್ರ ಇದೆ. ನಮ್ಮ ಸರ್ಕಾರ ಮೊದಲನೆಯದ್ದನ್ನು ನಿಭಾಯಿಸೀತು. ಎರಡನೆಯದಕ್ಕೆ ಗಮನಾರ್ಹ ಹಣ ಬೇಕು. ಮತ್ತು ಇದನ್ನು ಕಾಲಮಿತಿಯಲ್ಲಿ ಮಾಡಬೇಕು.

ಮೂರನೆಯ- ಪುನರ್ರಚನೆ ಎಂಬುದು ಒಟ್ಟಾರೆ ಕೃಷಿಯನ್ನು ಸುಸ್ಥಿರಗೊಳಿಸಲು ಬೇಕಾದ ದೀರ್ಘಕಾಲೀನ ಮಾರ್ಗೋಪಾಯಗಳ ಬಗ್ಗೆ. ಈ ಕುರಿತಂತೆ ಸರ್ಕಾರದ ಮಿದುಳು ಸಂಪೂರ್ಣ ಖಾಲಿಯಾಗಿರುವುದು ಈಗಾಗಲೇ ಬಂದಿರುವ ನೀತಿ ಪತ್ರಗಳಲ್ಲಿ ಗೋಚರಿಸುವ ಕಾರಣ ಆ ಬಗ್ಗೆ ಹೆಚ್ಚೇನು ನಿರೀಕ್ಷಿಸುವಂತಿಲ್ಲ. ಆದರೆ ಹವಾಮಾನ ಬದಲಾವಣೆ ಈಗ ಮನೆ ಬಾಗಿಲು ತಟ್ಟುತ್ತಿರುವ ಮಾರಿ ಎಂಬುದು ಸರ್ಕಾರಕ್ಕೆ ಗೊತ್ತಾದರೆ ಆಮೂಲಾಗ್ರವಾಗಿ ಹೊಸ ಕಾರ್ಯಸೂಚಿಗೆ ಅದು ತಯಾರಾಗಬೇಕು. ಹವಾಮಾನ ಬದಲಾವಣೆ ಎಂದರೆ ವಯಸ್ಸಾದಂತೆ ಚಳಿಯಾಗುವ ಸಂಗತಿ ಎಂದು ಭಾವಿಸುವ ಪ್ರಧಾನಿ ಇರುವಾಗ ನಮ್ಮ ನಾಯಕರು ಇನ್ನೇನು ಯೋಚಿಸಿಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...