Homeಕರ್ನಾಟಕಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

ಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

- Advertisement -
- Advertisement -

ಈ ಬಾರಿಯ ಮಳೆ ಮತ್ತು ಪ್ರವಾಹಕ್ಕೆ ರಾಜ್ಯದ 2/3 ಜಿಲ್ಲೆ ಮತ್ತು ತಾಲೂಕುಗಳು ಬಲಿಯಾಗಿವೆ. ನೇರವಾಗಿ ಮಳೆ ಬಿದ್ದು ಅದರಿಂದುಂಟಾದ ಪ್ರವಾಹಕ್ಕೆ ತುತ್ತಾದ ತಾಲೂಕುಗಳು ಒಂದೆಡೆಯಾದರೆ, ಅಂಥಾ ಅನಾಹುತಕಾರಿ ಮಳೆ ಇಲ್ಲದೆಯೂ, ಮಲೆನಾಡು ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಸುರಿದ ನೀರು ಹರಿಯಬಿಟ್ಟ ಕಾರಣ ಉಂಟಾದ ನೆರೆಗೆ ಬಲಿಯಾದ ತಾಲೂಕುಗಳು ಇನ್ನೊಂದೆಡೆ. ರಸ್ತೆ, ಸೇತುವೆ ಮುಂತಾದವುಗಳು ಕೊಚ್ಚಿಹೋದ ಕಾರಣಕ್ಕುಂಟಾದ ಮೂಲ ಸಂರಚನೆಯ ನಷ್ಟ, ಖಾಸಗಿ ಮನೆ ಮಠ, ಪಂಪ್‍ಸೆಟ್ ಇತ್ಯಾದಿಗಳ ನಷ್ಟ ಸಾವಿರಾರು ಕೋಟಿ ರೂಪಾಯಿಗಳು. ಇದಕ್ಕಿಂತಲೂ ಘೋರವೆಂದರೆ ಲಕ್ಷಾಂತರ ಎಕರೆಗಳಲ್ಲಿ ಸಾಗುವಳಿ ಆದ ಬೆಳೆ ನಾಶ. ಪ್ರವಾಹ ಮತ್ತು ಕುಂಭದ್ರೋಣ ಮಳೆಗೆ ತುತ್ತಾದ ಜಿಲ್ಲೆಗಳ ಸಾಗುವಳಿ ಜಮೀನಿನ ಪ್ರಮಾಣ ನೋಡಿ. ಇದರಲ್ಲಿ ಶೇ. 50-70ರಷ್ಟು ಬೆಳೆ ನಾಶವಾಗುವುದು ಖಂಡಿತ. ಕೃಷಿ ವಿಜ್ಞಾನಿಗಳು ಹೇಳಿದ ಹಾಗೆ ಒಂದು ವಾರ ಬಿಡಿ; ಕೇವಲ ಮೂರು ದಿನ ನೀರು ನಿಂತರೆ ಭತ್ತ ಮತ್ತು ಸ್ವಲ್ಪಮಟ್ಟಿಗೆ ರಾಗಿ ಮಾತ್ರ ತಾಳಿಕೊಳ್ಳಬಲ್ಲುದು. ಉಳಿದ ಬೆಳೆಗಳು ಪೋಷಕಾಂಶ ಹೀರಲಾಗದೇ ನಲುಗುತ್ತವೆ. ಅದೇರೀತಿ ಮೋಡ ಮುಸುಕಿದ ವಾತಾವರಣ ವಾರ ಕಾಲ ಇದ್ದರೆ ದ್ಯುತಿ ಸಂಶ್ಲೇಷಣೆ ಮಾಡಲಾಗದೇ ಗಿಡಗಳು ಸೊರಗುತ್ತವೆ. ಈ ಕಾರಣಕ್ಕೇ ಇಳುವರಿ ಶೇ.50-70ರಷ್ಟು ನಷ್ಟವಾಗುತ್ತದೆ.

ಈ ಮಳೆ ಹಾನಿಗೊಳಗಾದ ಭೂಪ್ರದೇಶದಲ್ಲಿ ಮೂರು ವಿಧವಿದೆ.
1. ಮಲೆನಾಡಿನ ವ್ಯಾಪಾರಿ ಬೆಳೆಗಳಾದ ಅಡಿಕೆ, ಕಾಫಿ ಬೆಳೆಯುವ ಪ್ರದೇಶ; ಇಲ್ಲಿ ಕಡುಬೇಸಿಗೆಯಿಂದಲೇ ಕಾಫಿ ಮತ್ತು ಅಡಿಕೆ ನಲುಗಿದ್ದು, ಈಗಿನ ಮಳೆಯಿಂದಾಗಿ ಕೊಳೆರೋಗ ಸಹಿತ ತೀವ್ರ ರೋಗ ಬಾಧೆಗೆ ತುತ್ತಾಗಿ ಬೆಳೆ ನಷ್ಟವಾಗುವ ಸಾಧ್ಯತೆ ದಟ್ಟವಾಗಿದೆ. ಈ ಪ್ರದೇಶದ ಸಾವಿರಾರು ಎಕರೆಗಳಲ್ಲಿ ಬಡ ಸಣ್ಣರೈತರು ಉಣ್ಣುವ ಸಲುವಾಗಿಯೇ ಮಳೆಆಶ್ರಿತ ಭತ್ತ ಬೆಳೆಯುತ್ತಾರೆ. (ಭತ್ತ ಬಿಟ್ಟು ಬೇರೆ ಯಾವ ಧಾನ್ಯವನ್ನೂ ಇವರು ಬೆಳೆಯುವುದಿಲ್ಲ) ಆರಂಭದಲ್ಲಿ ಮಳೆ ಇಲ್ಲದ ಕಾರಣ ಈ ರೈತರ ಭತ್ತದ ನಾಟಿ ಈ ಬಾರಿ ತಡವಾಗಿದೆ. ಈಗ ಭೀಷಣ ಮಳೆಯಿಂದಾಗಿ ಭತ್ತದ ಇಳುವರಿ ಕುಂಠಿತ/ ನಾಶವಾಗಲಿದೆ.

2. ಭೀಕರ ಮಳೆ ಮತ್ತು ಪ್ರವಾಹ ಎರಡಕ್ಕೂ ತುತ್ತಾದ ಪ್ರದೇಶಗಳು: ಬೆಳಗಾವಿ, ಗದಗ, ಭಾಗಶಃ ಶಿವಮೊಗ್ಗ, ಬಾಗಲಕೋಟೆಯಂಥಾ ಪ್ರದೇಶಗಳು ಪ್ರವಾಹ ಮತ್ತು ಹನಿ ಕಡಿಯದ ಮಲೇ ಎರಡರಿಂದಲೂ ಬಾಧೆ ಅನುಭವಿಸಿವೆ. ಇಲ್ಲಿನ ಬೆಳೆಗಳು ನಾನು ಮೇಲೆ ಹೇಳಿದ ಎರಡೂ ಕಾರಣಗಳಿಂದ ನಾಶವಾಗಲಿವೆ.

3. ಮಳೆ ಇಲ್ಲದಿದ್ದರೂ ತುಂಗೆ, ಭೀಮಾ, ಮಲಪ್ರಭ, ಕೃಷ್ಣಾಗಳ ಭರಪೂರ ನೀರಿನ ಪ್ರವಾಹದಿಂದ ನಲುಗಿದ ಜಿಲ್ಲೆಗಳಲ್ಲೂ ಬೆಳೆ ಸಂಪೂರ್ಣ ನಾಶವಾಗುವ ಸಾಧ್ಯತೆ ಇದೆ.

ಸುಮ್ಮನೆ ಲೆಕ್ಕ ಹಾಕಿ, ಈ ಕೃಷಿ ಪ್ರದೇಶ ಕರ್ನಾಟಕದ ಒಟ್ಟಾರೆ ಕೃಷಿ ಪ್ರದೇಶದ ಶೇ..70ರಷ್ಟಿದೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದ ಹಾಗೆ 40 ಲಕ್ಷ ಹೆಕ್ಟೇರ್ ಜಮೀನು ಬಾಧೆಗೊಳಗಾಗಿದೆ ಎಂದೇ ಇಟ್ಟುಕೊಂಡು; ಹೆಕ್ಟೇರಿಗೆ ಕನಿಷ್ಠ 25 ಸಾವಿರ ನಷ್ಟದಂತೆ ಅಂದಾಜು ಮಾಡಿದರೂ, ಒಟ್ಟಾರೆ ನಷ್ಟ 15 ಸಾವಿರ ಕೋಟಿ ಮೀರಲಿದೆ.

ನೆನಪಿಡಿ. ಇದು ಈ ಮುಂಗಾರು ಬೆಳೆಯ ನಷ್ಟ. ನೆನಪಿಡಬೇಕಾದ್ದು ಈ ಬಾರಿ ಮುಂಗಾರು ಕೈಕೊಟ್ಟ ಕಾರಣ ರೈತರು ಎರಡೆರಡು ಬಾರಿ ಬಿತ್ತನೆ ಮಾಡಿದ್ದಿದೆ. ಮಳೆಯಿಲ್ಲದೇ ಆದ ನಷ್ಟ ಮತ್ತು ಅತಿವೃಷ್ಟಿಯಿಂದಾದ ನಷ್ಟ ಲೆಕ್ಕ ಹಾಕಿದರೆ ತಲೆ ತಿರುಗುತ್ತದೆ.

ಈ ಮಳೆ ಈಗ ಒಮ್ಮೆ ಕಮ್ಮಿ ಆಗಿ ಮತ್ತೆ ಶುರು ಹಚ್ಚಿಕೊಂಡು, ನಾಡಿದ್ದು ಹಿಂಗಾರಿನಲ್ಲಿ ಒಂದೆರಡು ಅಧಿಕ ಮಳೆ ಬಂದರೂ ಹಿಂಗಾರು ಬೆಳೆಯೂ ಕೈಗೆ ದಕ್ಕುವುದು ಕಷ್ಟ. ತೀವ್ರ ನೀರು ನಿಂತಾಗ ಮಣ್ಣಿನ ಜೈವಿಕ ಚಟುವಟಿಕೆ ಬಂದ್ ಆಗಿ ಮಣ್ಣಿನ ಸ್ವರೂಪವೇ ಬದಲಾಗುತ್ತದೆ. ಇದು ಮೊದಲಿನ ಮಟ್ಟಕ್ಕೆ ಬರಲು ಎರಡು ವರ್ಷ ಬೇಕು.

ಮೂರು R – Relief, Rehabilitation and Reconstruction ಎಂಬ ಸೂತ್ರ ಇದೆ. ನಮ್ಮ ಸರ್ಕಾರ ಮೊದಲನೆಯದ್ದನ್ನು ನಿಭಾಯಿಸೀತು. ಎರಡನೆಯದಕ್ಕೆ ಗಮನಾರ್ಹ ಹಣ ಬೇಕು. ಮತ್ತು ಇದನ್ನು ಕಾಲಮಿತಿಯಲ್ಲಿ ಮಾಡಬೇಕು.

ಮೂರನೆಯ- ಪುನರ್ರಚನೆ ಎಂಬುದು ಒಟ್ಟಾರೆ ಕೃಷಿಯನ್ನು ಸುಸ್ಥಿರಗೊಳಿಸಲು ಬೇಕಾದ ದೀರ್ಘಕಾಲೀನ ಮಾರ್ಗೋಪಾಯಗಳ ಬಗ್ಗೆ. ಈ ಕುರಿತಂತೆ ಸರ್ಕಾರದ ಮಿದುಳು ಸಂಪೂರ್ಣ ಖಾಲಿಯಾಗಿರುವುದು ಈಗಾಗಲೇ ಬಂದಿರುವ ನೀತಿ ಪತ್ರಗಳಲ್ಲಿ ಗೋಚರಿಸುವ ಕಾರಣ ಆ ಬಗ್ಗೆ ಹೆಚ್ಚೇನು ನಿರೀಕ್ಷಿಸುವಂತಿಲ್ಲ. ಆದರೆ ಹವಾಮಾನ ಬದಲಾವಣೆ ಈಗ ಮನೆ ಬಾಗಿಲು ತಟ್ಟುತ್ತಿರುವ ಮಾರಿ ಎಂಬುದು ಸರ್ಕಾರಕ್ಕೆ ಗೊತ್ತಾದರೆ ಆಮೂಲಾಗ್ರವಾಗಿ ಹೊಸ ಕಾರ್ಯಸೂಚಿಗೆ ಅದು ತಯಾರಾಗಬೇಕು. ಹವಾಮಾನ ಬದಲಾವಣೆ ಎಂದರೆ ವಯಸ್ಸಾದಂತೆ ಚಳಿಯಾಗುವ ಸಂಗತಿ ಎಂದು ಭಾವಿಸುವ ಪ್ರಧಾನಿ ಇರುವಾಗ ನಮ್ಮ ನಾಯಕರು ಇನ್ನೇನು ಯೋಚಿಸಿಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...