Homeಕರ್ನಾಟಕಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

ಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

- Advertisement -
- Advertisement -

ಈ ಬಾರಿಯ ಮಳೆ ಮತ್ತು ಪ್ರವಾಹಕ್ಕೆ ರಾಜ್ಯದ 2/3 ಜಿಲ್ಲೆ ಮತ್ತು ತಾಲೂಕುಗಳು ಬಲಿಯಾಗಿವೆ. ನೇರವಾಗಿ ಮಳೆ ಬಿದ್ದು ಅದರಿಂದುಂಟಾದ ಪ್ರವಾಹಕ್ಕೆ ತುತ್ತಾದ ತಾಲೂಕುಗಳು ಒಂದೆಡೆಯಾದರೆ, ಅಂಥಾ ಅನಾಹುತಕಾರಿ ಮಳೆ ಇಲ್ಲದೆಯೂ, ಮಲೆನಾಡು ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಸುರಿದ ನೀರು ಹರಿಯಬಿಟ್ಟ ಕಾರಣ ಉಂಟಾದ ನೆರೆಗೆ ಬಲಿಯಾದ ತಾಲೂಕುಗಳು ಇನ್ನೊಂದೆಡೆ. ರಸ್ತೆ, ಸೇತುವೆ ಮುಂತಾದವುಗಳು ಕೊಚ್ಚಿಹೋದ ಕಾರಣಕ್ಕುಂಟಾದ ಮೂಲ ಸಂರಚನೆಯ ನಷ್ಟ, ಖಾಸಗಿ ಮನೆ ಮಠ, ಪಂಪ್‍ಸೆಟ್ ಇತ್ಯಾದಿಗಳ ನಷ್ಟ ಸಾವಿರಾರು ಕೋಟಿ ರೂಪಾಯಿಗಳು. ಇದಕ್ಕಿಂತಲೂ ಘೋರವೆಂದರೆ ಲಕ್ಷಾಂತರ ಎಕರೆಗಳಲ್ಲಿ ಸಾಗುವಳಿ ಆದ ಬೆಳೆ ನಾಶ. ಪ್ರವಾಹ ಮತ್ತು ಕುಂಭದ್ರೋಣ ಮಳೆಗೆ ತುತ್ತಾದ ಜಿಲ್ಲೆಗಳ ಸಾಗುವಳಿ ಜಮೀನಿನ ಪ್ರಮಾಣ ನೋಡಿ. ಇದರಲ್ಲಿ ಶೇ. 50-70ರಷ್ಟು ಬೆಳೆ ನಾಶವಾಗುವುದು ಖಂಡಿತ. ಕೃಷಿ ವಿಜ್ಞಾನಿಗಳು ಹೇಳಿದ ಹಾಗೆ ಒಂದು ವಾರ ಬಿಡಿ; ಕೇವಲ ಮೂರು ದಿನ ನೀರು ನಿಂತರೆ ಭತ್ತ ಮತ್ತು ಸ್ವಲ್ಪಮಟ್ಟಿಗೆ ರಾಗಿ ಮಾತ್ರ ತಾಳಿಕೊಳ್ಳಬಲ್ಲುದು. ಉಳಿದ ಬೆಳೆಗಳು ಪೋಷಕಾಂಶ ಹೀರಲಾಗದೇ ನಲುಗುತ್ತವೆ. ಅದೇರೀತಿ ಮೋಡ ಮುಸುಕಿದ ವಾತಾವರಣ ವಾರ ಕಾಲ ಇದ್ದರೆ ದ್ಯುತಿ ಸಂಶ್ಲೇಷಣೆ ಮಾಡಲಾಗದೇ ಗಿಡಗಳು ಸೊರಗುತ್ತವೆ. ಈ ಕಾರಣಕ್ಕೇ ಇಳುವರಿ ಶೇ.50-70ರಷ್ಟು ನಷ್ಟವಾಗುತ್ತದೆ.

ಈ ಮಳೆ ಹಾನಿಗೊಳಗಾದ ಭೂಪ್ರದೇಶದಲ್ಲಿ ಮೂರು ವಿಧವಿದೆ.
1. ಮಲೆನಾಡಿನ ವ್ಯಾಪಾರಿ ಬೆಳೆಗಳಾದ ಅಡಿಕೆ, ಕಾಫಿ ಬೆಳೆಯುವ ಪ್ರದೇಶ; ಇಲ್ಲಿ ಕಡುಬೇಸಿಗೆಯಿಂದಲೇ ಕಾಫಿ ಮತ್ತು ಅಡಿಕೆ ನಲುಗಿದ್ದು, ಈಗಿನ ಮಳೆಯಿಂದಾಗಿ ಕೊಳೆರೋಗ ಸಹಿತ ತೀವ್ರ ರೋಗ ಬಾಧೆಗೆ ತುತ್ತಾಗಿ ಬೆಳೆ ನಷ್ಟವಾಗುವ ಸಾಧ್ಯತೆ ದಟ್ಟವಾಗಿದೆ. ಈ ಪ್ರದೇಶದ ಸಾವಿರಾರು ಎಕರೆಗಳಲ್ಲಿ ಬಡ ಸಣ್ಣರೈತರು ಉಣ್ಣುವ ಸಲುವಾಗಿಯೇ ಮಳೆಆಶ್ರಿತ ಭತ್ತ ಬೆಳೆಯುತ್ತಾರೆ. (ಭತ್ತ ಬಿಟ್ಟು ಬೇರೆ ಯಾವ ಧಾನ್ಯವನ್ನೂ ಇವರು ಬೆಳೆಯುವುದಿಲ್ಲ) ಆರಂಭದಲ್ಲಿ ಮಳೆ ಇಲ್ಲದ ಕಾರಣ ಈ ರೈತರ ಭತ್ತದ ನಾಟಿ ಈ ಬಾರಿ ತಡವಾಗಿದೆ. ಈಗ ಭೀಷಣ ಮಳೆಯಿಂದಾಗಿ ಭತ್ತದ ಇಳುವರಿ ಕುಂಠಿತ/ ನಾಶವಾಗಲಿದೆ.

2. ಭೀಕರ ಮಳೆ ಮತ್ತು ಪ್ರವಾಹ ಎರಡಕ್ಕೂ ತುತ್ತಾದ ಪ್ರದೇಶಗಳು: ಬೆಳಗಾವಿ, ಗದಗ, ಭಾಗಶಃ ಶಿವಮೊಗ್ಗ, ಬಾಗಲಕೋಟೆಯಂಥಾ ಪ್ರದೇಶಗಳು ಪ್ರವಾಹ ಮತ್ತು ಹನಿ ಕಡಿಯದ ಮಲೇ ಎರಡರಿಂದಲೂ ಬಾಧೆ ಅನುಭವಿಸಿವೆ. ಇಲ್ಲಿನ ಬೆಳೆಗಳು ನಾನು ಮೇಲೆ ಹೇಳಿದ ಎರಡೂ ಕಾರಣಗಳಿಂದ ನಾಶವಾಗಲಿವೆ.

3. ಮಳೆ ಇಲ್ಲದಿದ್ದರೂ ತುಂಗೆ, ಭೀಮಾ, ಮಲಪ್ರಭ, ಕೃಷ್ಣಾಗಳ ಭರಪೂರ ನೀರಿನ ಪ್ರವಾಹದಿಂದ ನಲುಗಿದ ಜಿಲ್ಲೆಗಳಲ್ಲೂ ಬೆಳೆ ಸಂಪೂರ್ಣ ನಾಶವಾಗುವ ಸಾಧ್ಯತೆ ಇದೆ.

ಸುಮ್ಮನೆ ಲೆಕ್ಕ ಹಾಕಿ, ಈ ಕೃಷಿ ಪ್ರದೇಶ ಕರ್ನಾಟಕದ ಒಟ್ಟಾರೆ ಕೃಷಿ ಪ್ರದೇಶದ ಶೇ..70ರಷ್ಟಿದೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದ ಹಾಗೆ 40 ಲಕ್ಷ ಹೆಕ್ಟೇರ್ ಜಮೀನು ಬಾಧೆಗೊಳಗಾಗಿದೆ ಎಂದೇ ಇಟ್ಟುಕೊಂಡು; ಹೆಕ್ಟೇರಿಗೆ ಕನಿಷ್ಠ 25 ಸಾವಿರ ನಷ್ಟದಂತೆ ಅಂದಾಜು ಮಾಡಿದರೂ, ಒಟ್ಟಾರೆ ನಷ್ಟ 15 ಸಾವಿರ ಕೋಟಿ ಮೀರಲಿದೆ.

ನೆನಪಿಡಿ. ಇದು ಈ ಮುಂಗಾರು ಬೆಳೆಯ ನಷ್ಟ. ನೆನಪಿಡಬೇಕಾದ್ದು ಈ ಬಾರಿ ಮುಂಗಾರು ಕೈಕೊಟ್ಟ ಕಾರಣ ರೈತರು ಎರಡೆರಡು ಬಾರಿ ಬಿತ್ತನೆ ಮಾಡಿದ್ದಿದೆ. ಮಳೆಯಿಲ್ಲದೇ ಆದ ನಷ್ಟ ಮತ್ತು ಅತಿವೃಷ್ಟಿಯಿಂದಾದ ನಷ್ಟ ಲೆಕ್ಕ ಹಾಕಿದರೆ ತಲೆ ತಿರುಗುತ್ತದೆ.

ಈ ಮಳೆ ಈಗ ಒಮ್ಮೆ ಕಮ್ಮಿ ಆಗಿ ಮತ್ತೆ ಶುರು ಹಚ್ಚಿಕೊಂಡು, ನಾಡಿದ್ದು ಹಿಂಗಾರಿನಲ್ಲಿ ಒಂದೆರಡು ಅಧಿಕ ಮಳೆ ಬಂದರೂ ಹಿಂಗಾರು ಬೆಳೆಯೂ ಕೈಗೆ ದಕ್ಕುವುದು ಕಷ್ಟ. ತೀವ್ರ ನೀರು ನಿಂತಾಗ ಮಣ್ಣಿನ ಜೈವಿಕ ಚಟುವಟಿಕೆ ಬಂದ್ ಆಗಿ ಮಣ್ಣಿನ ಸ್ವರೂಪವೇ ಬದಲಾಗುತ್ತದೆ. ಇದು ಮೊದಲಿನ ಮಟ್ಟಕ್ಕೆ ಬರಲು ಎರಡು ವರ್ಷ ಬೇಕು.

ಮೂರು R – Relief, Rehabilitation and Reconstruction ಎಂಬ ಸೂತ್ರ ಇದೆ. ನಮ್ಮ ಸರ್ಕಾರ ಮೊದಲನೆಯದ್ದನ್ನು ನಿಭಾಯಿಸೀತು. ಎರಡನೆಯದಕ್ಕೆ ಗಮನಾರ್ಹ ಹಣ ಬೇಕು. ಮತ್ತು ಇದನ್ನು ಕಾಲಮಿತಿಯಲ್ಲಿ ಮಾಡಬೇಕು.

ಮೂರನೆಯ- ಪುನರ್ರಚನೆ ಎಂಬುದು ಒಟ್ಟಾರೆ ಕೃಷಿಯನ್ನು ಸುಸ್ಥಿರಗೊಳಿಸಲು ಬೇಕಾದ ದೀರ್ಘಕಾಲೀನ ಮಾರ್ಗೋಪಾಯಗಳ ಬಗ್ಗೆ. ಈ ಕುರಿತಂತೆ ಸರ್ಕಾರದ ಮಿದುಳು ಸಂಪೂರ್ಣ ಖಾಲಿಯಾಗಿರುವುದು ಈಗಾಗಲೇ ಬಂದಿರುವ ನೀತಿ ಪತ್ರಗಳಲ್ಲಿ ಗೋಚರಿಸುವ ಕಾರಣ ಆ ಬಗ್ಗೆ ಹೆಚ್ಚೇನು ನಿರೀಕ್ಷಿಸುವಂತಿಲ್ಲ. ಆದರೆ ಹವಾಮಾನ ಬದಲಾವಣೆ ಈಗ ಮನೆ ಬಾಗಿಲು ತಟ್ಟುತ್ತಿರುವ ಮಾರಿ ಎಂಬುದು ಸರ್ಕಾರಕ್ಕೆ ಗೊತ್ತಾದರೆ ಆಮೂಲಾಗ್ರವಾಗಿ ಹೊಸ ಕಾರ್ಯಸೂಚಿಗೆ ಅದು ತಯಾರಾಗಬೇಕು. ಹವಾಮಾನ ಬದಲಾವಣೆ ಎಂದರೆ ವಯಸ್ಸಾದಂತೆ ಚಳಿಯಾಗುವ ಸಂಗತಿ ಎಂದು ಭಾವಿಸುವ ಪ್ರಧಾನಿ ಇರುವಾಗ ನಮ್ಮ ನಾಯಕರು ಇನ್ನೇನು ಯೋಚಿಸಿಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...