Homeಕರ್ನಾಟಕಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

ಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

- Advertisement -
- Advertisement -

ಈ ಬಾರಿಯ ಮಳೆ ಮತ್ತು ಪ್ರವಾಹಕ್ಕೆ ರಾಜ್ಯದ 2/3 ಜಿಲ್ಲೆ ಮತ್ತು ತಾಲೂಕುಗಳು ಬಲಿಯಾಗಿವೆ. ನೇರವಾಗಿ ಮಳೆ ಬಿದ್ದು ಅದರಿಂದುಂಟಾದ ಪ್ರವಾಹಕ್ಕೆ ತುತ್ತಾದ ತಾಲೂಕುಗಳು ಒಂದೆಡೆಯಾದರೆ, ಅಂಥಾ ಅನಾಹುತಕಾರಿ ಮಳೆ ಇಲ್ಲದೆಯೂ, ಮಲೆನಾಡು ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಸುರಿದ ನೀರು ಹರಿಯಬಿಟ್ಟ ಕಾರಣ ಉಂಟಾದ ನೆರೆಗೆ ಬಲಿಯಾದ ತಾಲೂಕುಗಳು ಇನ್ನೊಂದೆಡೆ. ರಸ್ತೆ, ಸೇತುವೆ ಮುಂತಾದವುಗಳು ಕೊಚ್ಚಿಹೋದ ಕಾರಣಕ್ಕುಂಟಾದ ಮೂಲ ಸಂರಚನೆಯ ನಷ್ಟ, ಖಾಸಗಿ ಮನೆ ಮಠ, ಪಂಪ್‍ಸೆಟ್ ಇತ್ಯಾದಿಗಳ ನಷ್ಟ ಸಾವಿರಾರು ಕೋಟಿ ರೂಪಾಯಿಗಳು. ಇದಕ್ಕಿಂತಲೂ ಘೋರವೆಂದರೆ ಲಕ್ಷಾಂತರ ಎಕರೆಗಳಲ್ಲಿ ಸಾಗುವಳಿ ಆದ ಬೆಳೆ ನಾಶ. ಪ್ರವಾಹ ಮತ್ತು ಕುಂಭದ್ರೋಣ ಮಳೆಗೆ ತುತ್ತಾದ ಜಿಲ್ಲೆಗಳ ಸಾಗುವಳಿ ಜಮೀನಿನ ಪ್ರಮಾಣ ನೋಡಿ. ಇದರಲ್ಲಿ ಶೇ. 50-70ರಷ್ಟು ಬೆಳೆ ನಾಶವಾಗುವುದು ಖಂಡಿತ. ಕೃಷಿ ವಿಜ್ಞಾನಿಗಳು ಹೇಳಿದ ಹಾಗೆ ಒಂದು ವಾರ ಬಿಡಿ; ಕೇವಲ ಮೂರು ದಿನ ನೀರು ನಿಂತರೆ ಭತ್ತ ಮತ್ತು ಸ್ವಲ್ಪಮಟ್ಟಿಗೆ ರಾಗಿ ಮಾತ್ರ ತಾಳಿಕೊಳ್ಳಬಲ್ಲುದು. ಉಳಿದ ಬೆಳೆಗಳು ಪೋಷಕಾಂಶ ಹೀರಲಾಗದೇ ನಲುಗುತ್ತವೆ. ಅದೇರೀತಿ ಮೋಡ ಮುಸುಕಿದ ವಾತಾವರಣ ವಾರ ಕಾಲ ಇದ್ದರೆ ದ್ಯುತಿ ಸಂಶ್ಲೇಷಣೆ ಮಾಡಲಾಗದೇ ಗಿಡಗಳು ಸೊರಗುತ್ತವೆ. ಈ ಕಾರಣಕ್ಕೇ ಇಳುವರಿ ಶೇ.50-70ರಷ್ಟು ನಷ್ಟವಾಗುತ್ತದೆ.

ಈ ಮಳೆ ಹಾನಿಗೊಳಗಾದ ಭೂಪ್ರದೇಶದಲ್ಲಿ ಮೂರು ವಿಧವಿದೆ.
1. ಮಲೆನಾಡಿನ ವ್ಯಾಪಾರಿ ಬೆಳೆಗಳಾದ ಅಡಿಕೆ, ಕಾಫಿ ಬೆಳೆಯುವ ಪ್ರದೇಶ; ಇಲ್ಲಿ ಕಡುಬೇಸಿಗೆಯಿಂದಲೇ ಕಾಫಿ ಮತ್ತು ಅಡಿಕೆ ನಲುಗಿದ್ದು, ಈಗಿನ ಮಳೆಯಿಂದಾಗಿ ಕೊಳೆರೋಗ ಸಹಿತ ತೀವ್ರ ರೋಗ ಬಾಧೆಗೆ ತುತ್ತಾಗಿ ಬೆಳೆ ನಷ್ಟವಾಗುವ ಸಾಧ್ಯತೆ ದಟ್ಟವಾಗಿದೆ. ಈ ಪ್ರದೇಶದ ಸಾವಿರಾರು ಎಕರೆಗಳಲ್ಲಿ ಬಡ ಸಣ್ಣರೈತರು ಉಣ್ಣುವ ಸಲುವಾಗಿಯೇ ಮಳೆಆಶ್ರಿತ ಭತ್ತ ಬೆಳೆಯುತ್ತಾರೆ. (ಭತ್ತ ಬಿಟ್ಟು ಬೇರೆ ಯಾವ ಧಾನ್ಯವನ್ನೂ ಇವರು ಬೆಳೆಯುವುದಿಲ್ಲ) ಆರಂಭದಲ್ಲಿ ಮಳೆ ಇಲ್ಲದ ಕಾರಣ ಈ ರೈತರ ಭತ್ತದ ನಾಟಿ ಈ ಬಾರಿ ತಡವಾಗಿದೆ. ಈಗ ಭೀಷಣ ಮಳೆಯಿಂದಾಗಿ ಭತ್ತದ ಇಳುವರಿ ಕುಂಠಿತ/ ನಾಶವಾಗಲಿದೆ.

2. ಭೀಕರ ಮಳೆ ಮತ್ತು ಪ್ರವಾಹ ಎರಡಕ್ಕೂ ತುತ್ತಾದ ಪ್ರದೇಶಗಳು: ಬೆಳಗಾವಿ, ಗದಗ, ಭಾಗಶಃ ಶಿವಮೊಗ್ಗ, ಬಾಗಲಕೋಟೆಯಂಥಾ ಪ್ರದೇಶಗಳು ಪ್ರವಾಹ ಮತ್ತು ಹನಿ ಕಡಿಯದ ಮಲೇ ಎರಡರಿಂದಲೂ ಬಾಧೆ ಅನುಭವಿಸಿವೆ. ಇಲ್ಲಿನ ಬೆಳೆಗಳು ನಾನು ಮೇಲೆ ಹೇಳಿದ ಎರಡೂ ಕಾರಣಗಳಿಂದ ನಾಶವಾಗಲಿವೆ.

3. ಮಳೆ ಇಲ್ಲದಿದ್ದರೂ ತುಂಗೆ, ಭೀಮಾ, ಮಲಪ್ರಭ, ಕೃಷ್ಣಾಗಳ ಭರಪೂರ ನೀರಿನ ಪ್ರವಾಹದಿಂದ ನಲುಗಿದ ಜಿಲ್ಲೆಗಳಲ್ಲೂ ಬೆಳೆ ಸಂಪೂರ್ಣ ನಾಶವಾಗುವ ಸಾಧ್ಯತೆ ಇದೆ.

ಸುಮ್ಮನೆ ಲೆಕ್ಕ ಹಾಕಿ, ಈ ಕೃಷಿ ಪ್ರದೇಶ ಕರ್ನಾಟಕದ ಒಟ್ಟಾರೆ ಕೃಷಿ ಪ್ರದೇಶದ ಶೇ..70ರಷ್ಟಿದೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದ ಹಾಗೆ 40 ಲಕ್ಷ ಹೆಕ್ಟೇರ್ ಜಮೀನು ಬಾಧೆಗೊಳಗಾಗಿದೆ ಎಂದೇ ಇಟ್ಟುಕೊಂಡು; ಹೆಕ್ಟೇರಿಗೆ ಕನಿಷ್ಠ 25 ಸಾವಿರ ನಷ್ಟದಂತೆ ಅಂದಾಜು ಮಾಡಿದರೂ, ಒಟ್ಟಾರೆ ನಷ್ಟ 15 ಸಾವಿರ ಕೋಟಿ ಮೀರಲಿದೆ.

ನೆನಪಿಡಿ. ಇದು ಈ ಮುಂಗಾರು ಬೆಳೆಯ ನಷ್ಟ. ನೆನಪಿಡಬೇಕಾದ್ದು ಈ ಬಾರಿ ಮುಂಗಾರು ಕೈಕೊಟ್ಟ ಕಾರಣ ರೈತರು ಎರಡೆರಡು ಬಾರಿ ಬಿತ್ತನೆ ಮಾಡಿದ್ದಿದೆ. ಮಳೆಯಿಲ್ಲದೇ ಆದ ನಷ್ಟ ಮತ್ತು ಅತಿವೃಷ್ಟಿಯಿಂದಾದ ನಷ್ಟ ಲೆಕ್ಕ ಹಾಕಿದರೆ ತಲೆ ತಿರುಗುತ್ತದೆ.

ಈ ಮಳೆ ಈಗ ಒಮ್ಮೆ ಕಮ್ಮಿ ಆಗಿ ಮತ್ತೆ ಶುರು ಹಚ್ಚಿಕೊಂಡು, ನಾಡಿದ್ದು ಹಿಂಗಾರಿನಲ್ಲಿ ಒಂದೆರಡು ಅಧಿಕ ಮಳೆ ಬಂದರೂ ಹಿಂಗಾರು ಬೆಳೆಯೂ ಕೈಗೆ ದಕ್ಕುವುದು ಕಷ್ಟ. ತೀವ್ರ ನೀರು ನಿಂತಾಗ ಮಣ್ಣಿನ ಜೈವಿಕ ಚಟುವಟಿಕೆ ಬಂದ್ ಆಗಿ ಮಣ್ಣಿನ ಸ್ವರೂಪವೇ ಬದಲಾಗುತ್ತದೆ. ಇದು ಮೊದಲಿನ ಮಟ್ಟಕ್ಕೆ ಬರಲು ಎರಡು ವರ್ಷ ಬೇಕು.

ಮೂರು R – Relief, Rehabilitation and Reconstruction ಎಂಬ ಸೂತ್ರ ಇದೆ. ನಮ್ಮ ಸರ್ಕಾರ ಮೊದಲನೆಯದ್ದನ್ನು ನಿಭಾಯಿಸೀತು. ಎರಡನೆಯದಕ್ಕೆ ಗಮನಾರ್ಹ ಹಣ ಬೇಕು. ಮತ್ತು ಇದನ್ನು ಕಾಲಮಿತಿಯಲ್ಲಿ ಮಾಡಬೇಕು.

ಮೂರನೆಯ- ಪುನರ್ರಚನೆ ಎಂಬುದು ಒಟ್ಟಾರೆ ಕೃಷಿಯನ್ನು ಸುಸ್ಥಿರಗೊಳಿಸಲು ಬೇಕಾದ ದೀರ್ಘಕಾಲೀನ ಮಾರ್ಗೋಪಾಯಗಳ ಬಗ್ಗೆ. ಈ ಕುರಿತಂತೆ ಸರ್ಕಾರದ ಮಿದುಳು ಸಂಪೂರ್ಣ ಖಾಲಿಯಾಗಿರುವುದು ಈಗಾಗಲೇ ಬಂದಿರುವ ನೀತಿ ಪತ್ರಗಳಲ್ಲಿ ಗೋಚರಿಸುವ ಕಾರಣ ಆ ಬಗ್ಗೆ ಹೆಚ್ಚೇನು ನಿರೀಕ್ಷಿಸುವಂತಿಲ್ಲ. ಆದರೆ ಹವಾಮಾನ ಬದಲಾವಣೆ ಈಗ ಮನೆ ಬಾಗಿಲು ತಟ್ಟುತ್ತಿರುವ ಮಾರಿ ಎಂಬುದು ಸರ್ಕಾರಕ್ಕೆ ಗೊತ್ತಾದರೆ ಆಮೂಲಾಗ್ರವಾಗಿ ಹೊಸ ಕಾರ್ಯಸೂಚಿಗೆ ಅದು ತಯಾರಾಗಬೇಕು. ಹವಾಮಾನ ಬದಲಾವಣೆ ಎಂದರೆ ವಯಸ್ಸಾದಂತೆ ಚಳಿಯಾಗುವ ಸಂಗತಿ ಎಂದು ಭಾವಿಸುವ ಪ್ರಧಾನಿ ಇರುವಾಗ ನಮ್ಮ ನಾಯಕರು ಇನ್ನೇನು ಯೋಚಿಸಿಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...