Homeಕರ್ನಾಟಕಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

ಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

- Advertisement -
- Advertisement -

ಈ ಬಾರಿಯ ಮಳೆ ಮತ್ತು ಪ್ರವಾಹಕ್ಕೆ ರಾಜ್ಯದ 2/3 ಜಿಲ್ಲೆ ಮತ್ತು ತಾಲೂಕುಗಳು ಬಲಿಯಾಗಿವೆ. ನೇರವಾಗಿ ಮಳೆ ಬಿದ್ದು ಅದರಿಂದುಂಟಾದ ಪ್ರವಾಹಕ್ಕೆ ತುತ್ತಾದ ತಾಲೂಕುಗಳು ಒಂದೆಡೆಯಾದರೆ, ಅಂಥಾ ಅನಾಹುತಕಾರಿ ಮಳೆ ಇಲ್ಲದೆಯೂ, ಮಲೆನಾಡು ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಸುರಿದ ನೀರು ಹರಿಯಬಿಟ್ಟ ಕಾರಣ ಉಂಟಾದ ನೆರೆಗೆ ಬಲಿಯಾದ ತಾಲೂಕುಗಳು ಇನ್ನೊಂದೆಡೆ. ರಸ್ತೆ, ಸೇತುವೆ ಮುಂತಾದವುಗಳು ಕೊಚ್ಚಿಹೋದ ಕಾರಣಕ್ಕುಂಟಾದ ಮೂಲ ಸಂರಚನೆಯ ನಷ್ಟ, ಖಾಸಗಿ ಮನೆ ಮಠ, ಪಂಪ್‍ಸೆಟ್ ಇತ್ಯಾದಿಗಳ ನಷ್ಟ ಸಾವಿರಾರು ಕೋಟಿ ರೂಪಾಯಿಗಳು. ಇದಕ್ಕಿಂತಲೂ ಘೋರವೆಂದರೆ ಲಕ್ಷಾಂತರ ಎಕರೆಗಳಲ್ಲಿ ಸಾಗುವಳಿ ಆದ ಬೆಳೆ ನಾಶ. ಪ್ರವಾಹ ಮತ್ತು ಕುಂಭದ್ರೋಣ ಮಳೆಗೆ ತುತ್ತಾದ ಜಿಲ್ಲೆಗಳ ಸಾಗುವಳಿ ಜಮೀನಿನ ಪ್ರಮಾಣ ನೋಡಿ. ಇದರಲ್ಲಿ ಶೇ. 50-70ರಷ್ಟು ಬೆಳೆ ನಾಶವಾಗುವುದು ಖಂಡಿತ. ಕೃಷಿ ವಿಜ್ಞಾನಿಗಳು ಹೇಳಿದ ಹಾಗೆ ಒಂದು ವಾರ ಬಿಡಿ; ಕೇವಲ ಮೂರು ದಿನ ನೀರು ನಿಂತರೆ ಭತ್ತ ಮತ್ತು ಸ್ವಲ್ಪಮಟ್ಟಿಗೆ ರಾಗಿ ಮಾತ್ರ ತಾಳಿಕೊಳ್ಳಬಲ್ಲುದು. ಉಳಿದ ಬೆಳೆಗಳು ಪೋಷಕಾಂಶ ಹೀರಲಾಗದೇ ನಲುಗುತ್ತವೆ. ಅದೇರೀತಿ ಮೋಡ ಮುಸುಕಿದ ವಾತಾವರಣ ವಾರ ಕಾಲ ಇದ್ದರೆ ದ್ಯುತಿ ಸಂಶ್ಲೇಷಣೆ ಮಾಡಲಾಗದೇ ಗಿಡಗಳು ಸೊರಗುತ್ತವೆ. ಈ ಕಾರಣಕ್ಕೇ ಇಳುವರಿ ಶೇ.50-70ರಷ್ಟು ನಷ್ಟವಾಗುತ್ತದೆ.

ಈ ಮಳೆ ಹಾನಿಗೊಳಗಾದ ಭೂಪ್ರದೇಶದಲ್ಲಿ ಮೂರು ವಿಧವಿದೆ.
1. ಮಲೆನಾಡಿನ ವ್ಯಾಪಾರಿ ಬೆಳೆಗಳಾದ ಅಡಿಕೆ, ಕಾಫಿ ಬೆಳೆಯುವ ಪ್ರದೇಶ; ಇಲ್ಲಿ ಕಡುಬೇಸಿಗೆಯಿಂದಲೇ ಕಾಫಿ ಮತ್ತು ಅಡಿಕೆ ನಲುಗಿದ್ದು, ಈಗಿನ ಮಳೆಯಿಂದಾಗಿ ಕೊಳೆರೋಗ ಸಹಿತ ತೀವ್ರ ರೋಗ ಬಾಧೆಗೆ ತುತ್ತಾಗಿ ಬೆಳೆ ನಷ್ಟವಾಗುವ ಸಾಧ್ಯತೆ ದಟ್ಟವಾಗಿದೆ. ಈ ಪ್ರದೇಶದ ಸಾವಿರಾರು ಎಕರೆಗಳಲ್ಲಿ ಬಡ ಸಣ್ಣರೈತರು ಉಣ್ಣುವ ಸಲುವಾಗಿಯೇ ಮಳೆಆಶ್ರಿತ ಭತ್ತ ಬೆಳೆಯುತ್ತಾರೆ. (ಭತ್ತ ಬಿಟ್ಟು ಬೇರೆ ಯಾವ ಧಾನ್ಯವನ್ನೂ ಇವರು ಬೆಳೆಯುವುದಿಲ್ಲ) ಆರಂಭದಲ್ಲಿ ಮಳೆ ಇಲ್ಲದ ಕಾರಣ ಈ ರೈತರ ಭತ್ತದ ನಾಟಿ ಈ ಬಾರಿ ತಡವಾಗಿದೆ. ಈಗ ಭೀಷಣ ಮಳೆಯಿಂದಾಗಿ ಭತ್ತದ ಇಳುವರಿ ಕುಂಠಿತ/ ನಾಶವಾಗಲಿದೆ.

2. ಭೀಕರ ಮಳೆ ಮತ್ತು ಪ್ರವಾಹ ಎರಡಕ್ಕೂ ತುತ್ತಾದ ಪ್ರದೇಶಗಳು: ಬೆಳಗಾವಿ, ಗದಗ, ಭಾಗಶಃ ಶಿವಮೊಗ್ಗ, ಬಾಗಲಕೋಟೆಯಂಥಾ ಪ್ರದೇಶಗಳು ಪ್ರವಾಹ ಮತ್ತು ಹನಿ ಕಡಿಯದ ಮಲೇ ಎರಡರಿಂದಲೂ ಬಾಧೆ ಅನುಭವಿಸಿವೆ. ಇಲ್ಲಿನ ಬೆಳೆಗಳು ನಾನು ಮೇಲೆ ಹೇಳಿದ ಎರಡೂ ಕಾರಣಗಳಿಂದ ನಾಶವಾಗಲಿವೆ.

3. ಮಳೆ ಇಲ್ಲದಿದ್ದರೂ ತುಂಗೆ, ಭೀಮಾ, ಮಲಪ್ರಭ, ಕೃಷ್ಣಾಗಳ ಭರಪೂರ ನೀರಿನ ಪ್ರವಾಹದಿಂದ ನಲುಗಿದ ಜಿಲ್ಲೆಗಳಲ್ಲೂ ಬೆಳೆ ಸಂಪೂರ್ಣ ನಾಶವಾಗುವ ಸಾಧ್ಯತೆ ಇದೆ.

ಸುಮ್ಮನೆ ಲೆಕ್ಕ ಹಾಕಿ, ಈ ಕೃಷಿ ಪ್ರದೇಶ ಕರ್ನಾಟಕದ ಒಟ್ಟಾರೆ ಕೃಷಿ ಪ್ರದೇಶದ ಶೇ..70ರಷ್ಟಿದೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದ ಹಾಗೆ 40 ಲಕ್ಷ ಹೆಕ್ಟೇರ್ ಜಮೀನು ಬಾಧೆಗೊಳಗಾಗಿದೆ ಎಂದೇ ಇಟ್ಟುಕೊಂಡು; ಹೆಕ್ಟೇರಿಗೆ ಕನಿಷ್ಠ 25 ಸಾವಿರ ನಷ್ಟದಂತೆ ಅಂದಾಜು ಮಾಡಿದರೂ, ಒಟ್ಟಾರೆ ನಷ್ಟ 15 ಸಾವಿರ ಕೋಟಿ ಮೀರಲಿದೆ.

ನೆನಪಿಡಿ. ಇದು ಈ ಮುಂಗಾರು ಬೆಳೆಯ ನಷ್ಟ. ನೆನಪಿಡಬೇಕಾದ್ದು ಈ ಬಾರಿ ಮುಂಗಾರು ಕೈಕೊಟ್ಟ ಕಾರಣ ರೈತರು ಎರಡೆರಡು ಬಾರಿ ಬಿತ್ತನೆ ಮಾಡಿದ್ದಿದೆ. ಮಳೆಯಿಲ್ಲದೇ ಆದ ನಷ್ಟ ಮತ್ತು ಅತಿವೃಷ್ಟಿಯಿಂದಾದ ನಷ್ಟ ಲೆಕ್ಕ ಹಾಕಿದರೆ ತಲೆ ತಿರುಗುತ್ತದೆ.

ಈ ಮಳೆ ಈಗ ಒಮ್ಮೆ ಕಮ್ಮಿ ಆಗಿ ಮತ್ತೆ ಶುರು ಹಚ್ಚಿಕೊಂಡು, ನಾಡಿದ್ದು ಹಿಂಗಾರಿನಲ್ಲಿ ಒಂದೆರಡು ಅಧಿಕ ಮಳೆ ಬಂದರೂ ಹಿಂಗಾರು ಬೆಳೆಯೂ ಕೈಗೆ ದಕ್ಕುವುದು ಕಷ್ಟ. ತೀವ್ರ ನೀರು ನಿಂತಾಗ ಮಣ್ಣಿನ ಜೈವಿಕ ಚಟುವಟಿಕೆ ಬಂದ್ ಆಗಿ ಮಣ್ಣಿನ ಸ್ವರೂಪವೇ ಬದಲಾಗುತ್ತದೆ. ಇದು ಮೊದಲಿನ ಮಟ್ಟಕ್ಕೆ ಬರಲು ಎರಡು ವರ್ಷ ಬೇಕು.

ಮೂರು R – Relief, Rehabilitation and Reconstruction ಎಂಬ ಸೂತ್ರ ಇದೆ. ನಮ್ಮ ಸರ್ಕಾರ ಮೊದಲನೆಯದ್ದನ್ನು ನಿಭಾಯಿಸೀತು. ಎರಡನೆಯದಕ್ಕೆ ಗಮನಾರ್ಹ ಹಣ ಬೇಕು. ಮತ್ತು ಇದನ್ನು ಕಾಲಮಿತಿಯಲ್ಲಿ ಮಾಡಬೇಕು.

ಮೂರನೆಯ- ಪುನರ್ರಚನೆ ಎಂಬುದು ಒಟ್ಟಾರೆ ಕೃಷಿಯನ್ನು ಸುಸ್ಥಿರಗೊಳಿಸಲು ಬೇಕಾದ ದೀರ್ಘಕಾಲೀನ ಮಾರ್ಗೋಪಾಯಗಳ ಬಗ್ಗೆ. ಈ ಕುರಿತಂತೆ ಸರ್ಕಾರದ ಮಿದುಳು ಸಂಪೂರ್ಣ ಖಾಲಿಯಾಗಿರುವುದು ಈಗಾಗಲೇ ಬಂದಿರುವ ನೀತಿ ಪತ್ರಗಳಲ್ಲಿ ಗೋಚರಿಸುವ ಕಾರಣ ಆ ಬಗ್ಗೆ ಹೆಚ್ಚೇನು ನಿರೀಕ್ಷಿಸುವಂತಿಲ್ಲ. ಆದರೆ ಹವಾಮಾನ ಬದಲಾವಣೆ ಈಗ ಮನೆ ಬಾಗಿಲು ತಟ್ಟುತ್ತಿರುವ ಮಾರಿ ಎಂಬುದು ಸರ್ಕಾರಕ್ಕೆ ಗೊತ್ತಾದರೆ ಆಮೂಲಾಗ್ರವಾಗಿ ಹೊಸ ಕಾರ್ಯಸೂಚಿಗೆ ಅದು ತಯಾರಾಗಬೇಕು. ಹವಾಮಾನ ಬದಲಾವಣೆ ಎಂದರೆ ವಯಸ್ಸಾದಂತೆ ಚಳಿಯಾಗುವ ಸಂಗತಿ ಎಂದು ಭಾವಿಸುವ ಪ್ರಧಾನಿ ಇರುವಾಗ ನಮ್ಮ ನಾಯಕರು ಇನ್ನೇನು ಯೋಚಿಸಿಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....