Homeಮುಖಪುಟನೆನೆಯಬೇಕಿದೆ ಮಹಾತ್ಮನ ಮಡದಿಯನು.... : ಡಿ.ಉಮಾಪತಿ

ನೆನೆಯಬೇಕಿದೆ ಮಹಾತ್ಮನ ಮಡದಿಯನು…. : ಡಿ.ಉಮಾಪತಿ

- Advertisement -
- Advertisement -

ಬಹುಜನ ಭಾರತ: ಡಿ.ಉಮಾಪತಿ

ಇಂದು ಗಾಂಧೀ ಜಯಂತಿ. ಗಾಂಧೀ ಹುಟ್ಟಿ 150 ವರ್ಷಗಳು. ಹಾಗೆಯೇ ಕಸ್ತೂರ ಬಾ ಜನಿಸಿಯೂ 150 ವರ್ಷಗಳು. ಗಾಂಧೀ ಏರಿದ ಎತ್ತರದ ಎಲ್ಲ ಶ್ರೇಯಸ್ಸು ಕಸ್ತೂರ ಬಾ ಅವರದು ಎಂದಿದ್ದ ಈ ದಂಪತಿಗಳ ಹಿರಿಯ ಮಗ ಹರಿಲಾಲ್. ಪುಣೆಯ ಸೆರೆಮನೆ ವಾಸದಲ್ಲಿ ಪತಿಯ ಬಾಹುಗಳಲ್ಲೇ ಪ್ರಾಣಬಿಟ್ಟರು ಕಸ್ತೂರಬಾ.

ಹದಿಮೂರನೆಯ ವಯಸ್ಸಿಗೆ ಮದುವೆ. 1888ರಲ್ಲಿ ತಮ್ಮ 19ನೆಯ ವರ್ಷದಲ್ಲಿ ಮೊದಲ ಮಗ ಹರಿಲಾಲನ ಜನನ. ಮಣಿಲಾಲ್, ರಾಮದಾಸ್ ನಂತರ ಕಿರಿಯ ಮಗ ದೇವದಾಸ್ ಜನಿಸಿದ್ದು 1900ರಲ್ಲಿ. ಆನಂತರ ಪತ್ನಿಯ ಅಭಿಪ್ರಾಯವನ್ನು ಕೇಳುವ ಗೋಜಿಗೆ ಹೋಗದ ಗಾಂಧೀ ಅವರಿಂದ ಬ್ರಹ್ಮಚರ್ಯ ಪಾಲನೆಯ ಏಕಪಕ್ಷೀಯ ನಿರ್ಧಾರ. ಆಗ ಕಸ್ತೂರಬಾ ಅವರ ವಯಸ್ಸು 31. ದಾಂಪತ್ಯ ಜೀವನದ ಈ ಗುರುತರ ನಿರ್ಧಾರ ಕುರಿತು ತಮ್ಮ ನಿಲುಮೆ ಏನಿತ್ತೆಂದು ಆಕೆಯ ಬಾಯಿಂದಲೇ ಹೊರಬಿದ್ದ ಮಾತುಗಳು ಎಲ್ಲಿಯೂ ದಾಖಲಾಗಿಲ್ಲ.

ಕಡುಕೋಪದ ಗಳಿಗೆಗಳಲ್ಲಿ ಕಸ್ತೂರಬಾ ಅವರನ್ನು ಮನೆಯಿಂದ ಹೊರಹಾಕಲು ತಾವು ಮುಂದಾದದ್ದನ್ನು ಗಾಂಧಿಯೇ ಹೇಳಿಕೊಂಡಿದ್ದಾರೆ. ಆಶ್ರಮದ ಕಕ್ಕಸುಗಳನ್ನು ತೊಳೆಯಬೇಕೆಂಬ ಪತಿಯ ಆದೇಶವನ್ನು ಅವರು ತಿರಸ್ಕರಿಸುತ್ತಾರೆ. ಅಹಿಂಸೆ ಮತ್ತು ಸತ್ಯಾಗ್ರಹದ ಮೂಲತತ್ವಗಳನ್ನು ಗಾಂಧೀ ಕಲಿತದ್ದು ತಮ್ಮ ಪತ್ನಿಯಿಂದಲೇ..

ಪತಿಗಿಂತ ನಾಲ್ಕು ತಿಂಗಳು 22 ದಿವಸಗಳಷ್ಟು ವಯಸ್ಸಿನಲ್ಲಿ ದೊಡ್ಡವರು ಕಸ್ತೂರಬಾ. ಏಪ್ರಿಲ್ ಹನ್ನೊಂದರಂದು ಆಕೆಯ ಜನ್ಮದಿನದಿಂದು ಬಾ ಅವರನ್ನು ದೇಶ ನೆನೆದದ್ದನ್ನು ಕಂಡವರಿಲ್ಲ. ಗಾಂಧೀಯನ್ನು ಬಿಟ್ಟು ಕಸ್ತೂರಬಾಗೆ ಸ್ವತಂತ್ರ ಅಸ್ತಿತ್ವ ಇಲ್ಲ. ಗಾಂಧೀಯನ್ನು ನೆನೆದರೆ ಕಸ್ತೂರಬಾ ಅವರನ್ನು ನೆನೆದಂತೆಯೇ ಎಂಬುದು ನಮ್ಮ ಗಂಡಾಳಿಕೆಯ ಸಾಮೂಹಿಕ ಸಾಕ್ಷಿಪ್ರಜ್ಞೆ. ಗುರುತಿಸದೆ ಮಣ್ಣಾಗಿರುವ ಸಾವಿರಾರು ಅಜ್ಞಾತ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಯರ ಪ್ರತೀಕ ಕಸ್ತೂರಬಾ ಎನ್ನುತ್ತಾರೆ ಹಿರಿಯ ಸರ್ವೋದಯ ಕಾರ್ಯಕರ್ತ ಬಿಜು ನೇಗಿ.

ಹಿರಿಯರು ನಿಶ್ಚಯಿಸಿದಂತೆ ಮೋಹನದಾಸನನ್ನು ವರಿಸಿದ ಕಸ್ತೂರ್ ಕಪಾಡಿಯಾ ವೈವಾಹಿಕ ಜೀವನದ 62 ವರ್ಷಗಳನ್ನು ಗಾಂಧಿಯೊಂದಿಗೆ ಕಳೆದರು. ಕಸ್ತೂರ ಬಾ ಆದರು. ಗುಜರಾತಿನ ಪಟ್ಟಣವೊಂದರ ಶಾಲಾಬಾಲಕನಿಂದ ಲಂಡನ್ನಿನಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಸ್ವರಾಜ್ಯ ಗಳಿಕೆಯ ಹೋರಾಟದ ನಾಯಕನಾಗಿ ಪತಿಯ ರೂಪಾಂತರದಲ್ಲಿ ಜೊತೆಗಿದ್ದು ಏರಿಳಿತಗಳನ್ನು ಹಂಚಿಕೊಂಡವರು. ಪತಿಯ ಪ್ರಯೋಗಗಳಲ್ಲಿ ಪಾಲುಗೊಂಡು, ಆಶ್ರಮವಾಸದ ಕಾಠಿಣ್ಯವನ್ನು ಅನುಭವಿಸಿ, ಹಲವು ಬಾರಿ ಸೆರೆವಾಸ ಅನುಭವಿಸಿದವರು. ಇತಿಹಾಸದ ಈ ಹಂತದ ಮಧ್ಯಭೂಮಿಕೆಯಲ್ಲಿದ್ದರೂ ಅವರ ವ್ಯಕ್ತಿತ್ವ ಮಸುಕಾಗಿ ಮಹಾತ್ಮನ ನೆರಳಿನಲ್ಲಿ ಮಸುಕಾಗಿದೆ. ಮಹಾತ್ಮನ ಮಡದಿಯ ಹುಡುಕಾಟ ಕಠಿಣವಾದದ್ದು. ಆಕೆಯ ಕಾಲದ ಬಹುಪಾಲು ಮಹಿಳೆಯರಂತೆ ಆಕೆಯೂ ನಿರಕ್ಷರಸ್ಥೆ. ಅನಿಸಿದ್ದನ್ನು ಅಕ್ಷರಕ್ಕೆ ಇಳಿಸಲಾಗಲಿಲ್ಲ. ಬಾ ಅವರನ್ನು ಕುರಿತು ಬೇರೆಯವರು ಬರೆದದ್ದು ಮಾತ್ರವೇ ಲಭ್ಯ. ಪತಿಯ ಆತ್ಮಚರಿತ್ರೆಯ ಪದಗಳನ್ನು ಸೋಸಿ ಸೋಸಿ ಆಕೆಯನ್ನು ಸಮೀಪಿಸಬೇಕಿದೆ ಎನ್ನುತ್ತಾರೆ ಐರೋಪ್ಯ ಬರೆಹಗಾರ್ತಿ ಎಮ್ಮಾ ಟಾರ್ಲೋ.

ತಮ್ಮ ತವರಿನಿಂದ ದೊರೆತ ಬಾಗಿನಗಳನ್ನು ದೇಶಸೇವೆಗೆ ಒಪ್ಪಿಸುವಂತೆ ಬಾ ಅವರನ್ನು ಬಲವಂತ ಮಾಡಿದ್ದರು ಗಾಂಧೀ. ಮಕ್ಕಳನ್ನು ಸಾಧುಗಳನ್ನು ಮಾಡಿ ಅವರ ಹೆಂಡತಿಯರನ್ನು ಆಭರಣಗಳಿಂದ ದೂರ ಇರಿಸಿದ್ದ ಬಾಪೂ ಅವರ ಮೇಲೆ ಸಿಡಿದಿದ್ದರು ಕಸ್ತೂರಬಾ. ಒಮ್ಮೆ ಕಸ್ತೂರಬಾಗೆ ಕಂಠಾಭರಣದ ಉಡುಗೊರೆ ದೊರೆತದ್ದು ನನ್ನ (ದೇಶ) ಸೇವೆಗೋ ಅಥವಾ ನಿನ್ನ ಸೇವೆಗೋ ಎಂದು ದನಿಯೇರಿಸಿದ್ದರು ಬಾಪೂ. ತಿರುಗಿ ಬಾ ನೀಡಿದ ಉತ್ತರ ಹೀಗಿತ್ತು- ‘ಒಪ್ಪುತ್ತೇನೆ. . . ಆದರೆ ನೀವು ಸಲ್ಲಿಸಿದ ಸೇವೆ ನಾನು ಸಲ್ಲಿಸಿದ ಸೇವೆಯೆಂದೇ ಲೆಕ್ಕ. ನಿಮಗಾಗಿ ನಾನು ಹಗಲಿರುಳು ದೇಹ ಸವೆಸಿ ದುಡಿದಿದ್ದೇನೆ. ಅದು ಸೇವೆ ಅಲ್ಲವೇನು. . . .’

ಅಂದಿನಿಂದಲೇ ಅಜ್ಜಿಯ ಬದುಕಿನ ಕತೆಯನ್ನು ತಾತನ ಬದುಕು ಮಬ್ಬಿಗೆ ಸರಿಸಿಬಿಟ್ಟಿತು ಎಂದಿದ್ದಾರೆ ಮೊಮ್ಮಗ ಅರುಣ್ ಗಾಂಧೀ. ಹದಿಮೂರನೆಯ ವಯಸ್ಸಿಗೆ ವಿವಾಹದ ನಂತರ. ಕಸ್ತೂರ್ ಕಪಾಡಿಯಾ ಕಸ್ತೂರಬಾ ಗಾಂಧೀ. ಪೋರಬಂದರು ತೊರೆದು ರಾಜಕೋಟ್ ಮನೆಯಲ್ಲಿ ವಾಸ. ಹೊಸ ಊರು, ಹೊಸ ಮನೆ, ಹೊಸ ಹೆಸರು. ಮೋಹನದಾಸ್ ಶಾಲಾ ವಿದ್ಯಾರ್ಥಿ ಮತ್ತು ಗೃಹಸ್ಥ ಎರಡೂ ಆಗಿದ್ದ. ಪತ್ನಿ ತಾನು ಹೇಳಿದಂತೆ ಕೇಳಬೇಕು ಎಂಬ ಇರಾದೆಗೆ ಬಿದ್ದಿದ್ದ. ಮನೆ ಬಿಟ್ಟು ಹೊರಗೆ ಹೋಗುವುದಾದರೆ ತನ್ನ ಅನುಮತಿ ಪಡೆಯಲೇಬೇಕು. ಎಲ್ಲಿ, ಯಾವಾಗ, ಯಾರನ್ನು, ಯಾಕೆ ಭೇಟಿ ಮಾಡಿ ಮಾತನಾಡಿದೆ ಎಂದು ತಿಳಿಸಬೇಕು. ತನಗೇ ನಿಷ್ಠಳಾಗಿರಬೇಕು ಎಂದು ವಿಧಿಸಿದ್ದ. ಕಸ್ತೂರಬಾ ಎದುರು ವಾದಿಸುತ್ತಿದ್ದಿಲ್ಲ. . . .ಪ್ರಶ್ನಿಸುತ್ತಿರಲಿಲ್ಲ. ಗಂಡ ಹೇಳುವುದು ಸಕಾರಣ ಅಲ್ಲ ಎನಿಸಿದ್ದನ್ನು ಮೌನವಾಗಿ ತಳ್ಳಿ ಹಾಕುತ್ತಿದ್ದರು. ರಾತ್ರಿ ಆಯಿತೆಂದರೆ ಪತಿಯಿಂದ ಪ್ರಶ್ನೆಗಳ ಪ್ರವಾಹವನ್ನೇ ಎದುರಿಸಬೇಕಿತ್ತು. ಈ ಮಾತುಗಳನ್ನು ಆಡುತ್ತಿರುವುದು ತನ್ನ ಪತಿಯೇ ಎಂಬ ಸೋಜಿಗ ಬೆರೆತ ವ್ಯಥೆ ಆಕೆಯನ್ನು ಕಾಡಿತ್ತು. ಪತಿ ಸತ್ಯದೊಂದಿಗೆ ಪ್ರಯೋಗಗಳನ್ನು ಮಾಡಿದರೆ, ಆ ಪ್ರಯೋಗಗಳ ಅನುಭವಿಸಿದ್ದು ಪತ್ನಿ.

ಬಾ ಅವರನ್ನು ನಿಯಂತ್ರಿಸುವ ಎಲ್ಲ ಪ್ರಯತ್ನಗಳಲ್ಲೂ ಗಾಂಧೀ ವಿಫಲರಾದದ್ದಾಗಿ ಹೇಳಿಕೊಂಡಿದ್ದಾರೆ. ನಾನೆಷ್ಟೇ ಒತ್ತಡ ಹೇರಿದರೂ ಆಕೆ ಕಟ್ಟಕಡೆಗೆ ತನಗೆ ತಿಳಿದಂತೆಯೇ ಮಾಡುವವಳು. ಈ ಕಾರಣದಿಂದಾಗಿ ಮನಸ್ತಾಪಗಳು ಆಗುತ್ತಿದ್ದವು. ಆದರೆ ನನ್ನ ಬದುಕು ವಿಸ್ತಾರಗೊಂಡಂತೆ ನನ್ನ ಪತ್ನಿ ಅರಳಿ ನನ್ನ ಕೆಲಸದಲ್ಲೇ ತನ್ನನ್ನು ತಾನು ಕಳೆದುಕೊಂಡಳು ಎಂದಿದ್ದಾರೆ. ಬಾ ಅವರ ಕೆಚ್ಚು ಮತ್ತು ದೃಢಸಂಕಲ್ಪಗಳೇ ಬದುಕಿನುದ್ದಕ್ಕೂ ಗಾಂಧೀ ಹೋರಾಟದ ಬೆನ್ನೆಲುಬಾಗಿದ್ದವು. 1908ರಲ್ಲಿ ದಕ್ಷಿಣ ಆಫ್ರಿಕೆಯಲ್ಲಿ ಮಾತ್ರವಲ್ಲದೆ 1932, 1933, 1939 ಹಾಗೂ 1943ರಲ್ಲಿ ಗಾಂಧೀ ಸತ್ಯಾಗ್ರಹಗಳಲ್ಲಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದರು. ಆಕೆಯ ವಿನಃ ನಾನು ಕತ್ತಲ ಕೂಪದಲ್ಲಿರುತ್ತಿದ್ದೆ. ನನ್ನಲ್ಲಿ ಎಚ್ಚರದ ಬೆಂಕಿ ಆರದಂತೆ ಕಾಪಾಡಿದಳು. ನನ್ನ ಎಲ್ಲ ರಾಜಕೀಯ ಹೋರಾಟಗಳಲ್ಲೂ ಜೊತೆಗೆ ನಿಂತಳು. ಸಾಧಾರಣ ಅರ್ಥದಲ್ಲಿ ಆಕೆ ಅನಕ್ಷರಸ್ಥಳು. ಆದರೆ ನಿಜವಾದ ಶಿಕ್ಷಣದ ಮಾದರಿಯಾಗಿದ್ದಳು.

ಕಸ್ತೂರ ಬಾ ಬಾಳಸಂಗಾತಿ ಆಗದೆ ಹೋಗಿದ್ದಿದ್ದರೆ ಗಾಂಧೀ ಬ್ಯಾರಿಸ್ಟರೂ ಆಗುತ್ತಿರಲಿಲ್ಲ, ಮಹಾತ್ಮಾ ಎಂದೂ ಎನಿಸಿಕೊಳ್ಳುತ್ತಿರಲಿಲ್ಲ. ಇಂಗ್ಲೆಂಡಿಗೆ ಹೋಗಲು ಗಾಂಧೀ ಬಳಿ ಹಣ ಇರಲಿಲ್ಲ. ಕಸ್ತೂರಬಾ ಅವರ ಒಡವೆ ಮಾರಬೇಕಾಯಿತು ಗಾಂಧೀ. ದೇವರಂತೆ ಪೂಜಿಸಬೇಕಾದ ಪರಿಪೂರ್ಣ ಚಿತ್ರವಲ್ಲ, ಪ್ರೀತಿಯಿಂದ ವಿಮರ್ಶಾತ್ಮಕವಾಗಿ ಅಧ್ಯಯನ ಮಾಡಬೇಕಿರುವ ವ್ಯಕ್ತಿ ಎಂದಿದ್ದಾರೆ ಗಾಂಧೀ ಮೊಮ್ಮಗ ಗೋಪಾಲಕೃಷ್ಣ ಗಾಂಧೀ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...