Homeಮುಖಪುಟನೆನೆಯಬೇಕಿದೆ ಮಹಾತ್ಮನ ಮಡದಿಯನು.... : ಡಿ.ಉಮಾಪತಿ

ನೆನೆಯಬೇಕಿದೆ ಮಹಾತ್ಮನ ಮಡದಿಯನು…. : ಡಿ.ಉಮಾಪತಿ

- Advertisement -
- Advertisement -

ಬಹುಜನ ಭಾರತ: ಡಿ.ಉಮಾಪತಿ

ಇಂದು ಗಾಂಧೀ ಜಯಂತಿ. ಗಾಂಧೀ ಹುಟ್ಟಿ 150 ವರ್ಷಗಳು. ಹಾಗೆಯೇ ಕಸ್ತೂರ ಬಾ ಜನಿಸಿಯೂ 150 ವರ್ಷಗಳು. ಗಾಂಧೀ ಏರಿದ ಎತ್ತರದ ಎಲ್ಲ ಶ್ರೇಯಸ್ಸು ಕಸ್ತೂರ ಬಾ ಅವರದು ಎಂದಿದ್ದ ಈ ದಂಪತಿಗಳ ಹಿರಿಯ ಮಗ ಹರಿಲಾಲ್. ಪುಣೆಯ ಸೆರೆಮನೆ ವಾಸದಲ್ಲಿ ಪತಿಯ ಬಾಹುಗಳಲ್ಲೇ ಪ್ರಾಣಬಿಟ್ಟರು ಕಸ್ತೂರಬಾ.

ಹದಿಮೂರನೆಯ ವಯಸ್ಸಿಗೆ ಮದುವೆ. 1888ರಲ್ಲಿ ತಮ್ಮ 19ನೆಯ ವರ್ಷದಲ್ಲಿ ಮೊದಲ ಮಗ ಹರಿಲಾಲನ ಜನನ. ಮಣಿಲಾಲ್, ರಾಮದಾಸ್ ನಂತರ ಕಿರಿಯ ಮಗ ದೇವದಾಸ್ ಜನಿಸಿದ್ದು 1900ರಲ್ಲಿ. ಆನಂತರ ಪತ್ನಿಯ ಅಭಿಪ್ರಾಯವನ್ನು ಕೇಳುವ ಗೋಜಿಗೆ ಹೋಗದ ಗಾಂಧೀ ಅವರಿಂದ ಬ್ರಹ್ಮಚರ್ಯ ಪಾಲನೆಯ ಏಕಪಕ್ಷೀಯ ನಿರ್ಧಾರ. ಆಗ ಕಸ್ತೂರಬಾ ಅವರ ವಯಸ್ಸು 31. ದಾಂಪತ್ಯ ಜೀವನದ ಈ ಗುರುತರ ನಿರ್ಧಾರ ಕುರಿತು ತಮ್ಮ ನಿಲುಮೆ ಏನಿತ್ತೆಂದು ಆಕೆಯ ಬಾಯಿಂದಲೇ ಹೊರಬಿದ್ದ ಮಾತುಗಳು ಎಲ್ಲಿಯೂ ದಾಖಲಾಗಿಲ್ಲ.

ಕಡುಕೋಪದ ಗಳಿಗೆಗಳಲ್ಲಿ ಕಸ್ತೂರಬಾ ಅವರನ್ನು ಮನೆಯಿಂದ ಹೊರಹಾಕಲು ತಾವು ಮುಂದಾದದ್ದನ್ನು ಗಾಂಧಿಯೇ ಹೇಳಿಕೊಂಡಿದ್ದಾರೆ. ಆಶ್ರಮದ ಕಕ್ಕಸುಗಳನ್ನು ತೊಳೆಯಬೇಕೆಂಬ ಪತಿಯ ಆದೇಶವನ್ನು ಅವರು ತಿರಸ್ಕರಿಸುತ್ತಾರೆ. ಅಹಿಂಸೆ ಮತ್ತು ಸತ್ಯಾಗ್ರಹದ ಮೂಲತತ್ವಗಳನ್ನು ಗಾಂಧೀ ಕಲಿತದ್ದು ತಮ್ಮ ಪತ್ನಿಯಿಂದಲೇ..

ಪತಿಗಿಂತ ನಾಲ್ಕು ತಿಂಗಳು 22 ದಿವಸಗಳಷ್ಟು ವಯಸ್ಸಿನಲ್ಲಿ ದೊಡ್ಡವರು ಕಸ್ತೂರಬಾ. ಏಪ್ರಿಲ್ ಹನ್ನೊಂದರಂದು ಆಕೆಯ ಜನ್ಮದಿನದಿಂದು ಬಾ ಅವರನ್ನು ದೇಶ ನೆನೆದದ್ದನ್ನು ಕಂಡವರಿಲ್ಲ. ಗಾಂಧೀಯನ್ನು ಬಿಟ್ಟು ಕಸ್ತೂರಬಾಗೆ ಸ್ವತಂತ್ರ ಅಸ್ತಿತ್ವ ಇಲ್ಲ. ಗಾಂಧೀಯನ್ನು ನೆನೆದರೆ ಕಸ್ತೂರಬಾ ಅವರನ್ನು ನೆನೆದಂತೆಯೇ ಎಂಬುದು ನಮ್ಮ ಗಂಡಾಳಿಕೆಯ ಸಾಮೂಹಿಕ ಸಾಕ್ಷಿಪ್ರಜ್ಞೆ. ಗುರುತಿಸದೆ ಮಣ್ಣಾಗಿರುವ ಸಾವಿರಾರು ಅಜ್ಞಾತ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಯರ ಪ್ರತೀಕ ಕಸ್ತೂರಬಾ ಎನ್ನುತ್ತಾರೆ ಹಿರಿಯ ಸರ್ವೋದಯ ಕಾರ್ಯಕರ್ತ ಬಿಜು ನೇಗಿ.

ಹಿರಿಯರು ನಿಶ್ಚಯಿಸಿದಂತೆ ಮೋಹನದಾಸನನ್ನು ವರಿಸಿದ ಕಸ್ತೂರ್ ಕಪಾಡಿಯಾ ವೈವಾಹಿಕ ಜೀವನದ 62 ವರ್ಷಗಳನ್ನು ಗಾಂಧಿಯೊಂದಿಗೆ ಕಳೆದರು. ಕಸ್ತೂರ ಬಾ ಆದರು. ಗುಜರಾತಿನ ಪಟ್ಟಣವೊಂದರ ಶಾಲಾಬಾಲಕನಿಂದ ಲಂಡನ್ನಿನಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಸ್ವರಾಜ್ಯ ಗಳಿಕೆಯ ಹೋರಾಟದ ನಾಯಕನಾಗಿ ಪತಿಯ ರೂಪಾಂತರದಲ್ಲಿ ಜೊತೆಗಿದ್ದು ಏರಿಳಿತಗಳನ್ನು ಹಂಚಿಕೊಂಡವರು. ಪತಿಯ ಪ್ರಯೋಗಗಳಲ್ಲಿ ಪಾಲುಗೊಂಡು, ಆಶ್ರಮವಾಸದ ಕಾಠಿಣ್ಯವನ್ನು ಅನುಭವಿಸಿ, ಹಲವು ಬಾರಿ ಸೆರೆವಾಸ ಅನುಭವಿಸಿದವರು. ಇತಿಹಾಸದ ಈ ಹಂತದ ಮಧ್ಯಭೂಮಿಕೆಯಲ್ಲಿದ್ದರೂ ಅವರ ವ್ಯಕ್ತಿತ್ವ ಮಸುಕಾಗಿ ಮಹಾತ್ಮನ ನೆರಳಿನಲ್ಲಿ ಮಸುಕಾಗಿದೆ. ಮಹಾತ್ಮನ ಮಡದಿಯ ಹುಡುಕಾಟ ಕಠಿಣವಾದದ್ದು. ಆಕೆಯ ಕಾಲದ ಬಹುಪಾಲು ಮಹಿಳೆಯರಂತೆ ಆಕೆಯೂ ನಿರಕ್ಷರಸ್ಥೆ. ಅನಿಸಿದ್ದನ್ನು ಅಕ್ಷರಕ್ಕೆ ಇಳಿಸಲಾಗಲಿಲ್ಲ. ಬಾ ಅವರನ್ನು ಕುರಿತು ಬೇರೆಯವರು ಬರೆದದ್ದು ಮಾತ್ರವೇ ಲಭ್ಯ. ಪತಿಯ ಆತ್ಮಚರಿತ್ರೆಯ ಪದಗಳನ್ನು ಸೋಸಿ ಸೋಸಿ ಆಕೆಯನ್ನು ಸಮೀಪಿಸಬೇಕಿದೆ ಎನ್ನುತ್ತಾರೆ ಐರೋಪ್ಯ ಬರೆಹಗಾರ್ತಿ ಎಮ್ಮಾ ಟಾರ್ಲೋ.

ತಮ್ಮ ತವರಿನಿಂದ ದೊರೆತ ಬಾಗಿನಗಳನ್ನು ದೇಶಸೇವೆಗೆ ಒಪ್ಪಿಸುವಂತೆ ಬಾ ಅವರನ್ನು ಬಲವಂತ ಮಾಡಿದ್ದರು ಗಾಂಧೀ. ಮಕ್ಕಳನ್ನು ಸಾಧುಗಳನ್ನು ಮಾಡಿ ಅವರ ಹೆಂಡತಿಯರನ್ನು ಆಭರಣಗಳಿಂದ ದೂರ ಇರಿಸಿದ್ದ ಬಾಪೂ ಅವರ ಮೇಲೆ ಸಿಡಿದಿದ್ದರು ಕಸ್ತೂರಬಾ. ಒಮ್ಮೆ ಕಸ್ತೂರಬಾಗೆ ಕಂಠಾಭರಣದ ಉಡುಗೊರೆ ದೊರೆತದ್ದು ನನ್ನ (ದೇಶ) ಸೇವೆಗೋ ಅಥವಾ ನಿನ್ನ ಸೇವೆಗೋ ಎಂದು ದನಿಯೇರಿಸಿದ್ದರು ಬಾಪೂ. ತಿರುಗಿ ಬಾ ನೀಡಿದ ಉತ್ತರ ಹೀಗಿತ್ತು- ‘ಒಪ್ಪುತ್ತೇನೆ. . . ಆದರೆ ನೀವು ಸಲ್ಲಿಸಿದ ಸೇವೆ ನಾನು ಸಲ್ಲಿಸಿದ ಸೇವೆಯೆಂದೇ ಲೆಕ್ಕ. ನಿಮಗಾಗಿ ನಾನು ಹಗಲಿರುಳು ದೇಹ ಸವೆಸಿ ದುಡಿದಿದ್ದೇನೆ. ಅದು ಸೇವೆ ಅಲ್ಲವೇನು. . . .’

ಅಂದಿನಿಂದಲೇ ಅಜ್ಜಿಯ ಬದುಕಿನ ಕತೆಯನ್ನು ತಾತನ ಬದುಕು ಮಬ್ಬಿಗೆ ಸರಿಸಿಬಿಟ್ಟಿತು ಎಂದಿದ್ದಾರೆ ಮೊಮ್ಮಗ ಅರುಣ್ ಗಾಂಧೀ. ಹದಿಮೂರನೆಯ ವಯಸ್ಸಿಗೆ ವಿವಾಹದ ನಂತರ. ಕಸ್ತೂರ್ ಕಪಾಡಿಯಾ ಕಸ್ತೂರಬಾ ಗಾಂಧೀ. ಪೋರಬಂದರು ತೊರೆದು ರಾಜಕೋಟ್ ಮನೆಯಲ್ಲಿ ವಾಸ. ಹೊಸ ಊರು, ಹೊಸ ಮನೆ, ಹೊಸ ಹೆಸರು. ಮೋಹನದಾಸ್ ಶಾಲಾ ವಿದ್ಯಾರ್ಥಿ ಮತ್ತು ಗೃಹಸ್ಥ ಎರಡೂ ಆಗಿದ್ದ. ಪತ್ನಿ ತಾನು ಹೇಳಿದಂತೆ ಕೇಳಬೇಕು ಎಂಬ ಇರಾದೆಗೆ ಬಿದ್ದಿದ್ದ. ಮನೆ ಬಿಟ್ಟು ಹೊರಗೆ ಹೋಗುವುದಾದರೆ ತನ್ನ ಅನುಮತಿ ಪಡೆಯಲೇಬೇಕು. ಎಲ್ಲಿ, ಯಾವಾಗ, ಯಾರನ್ನು, ಯಾಕೆ ಭೇಟಿ ಮಾಡಿ ಮಾತನಾಡಿದೆ ಎಂದು ತಿಳಿಸಬೇಕು. ತನಗೇ ನಿಷ್ಠಳಾಗಿರಬೇಕು ಎಂದು ವಿಧಿಸಿದ್ದ. ಕಸ್ತೂರಬಾ ಎದುರು ವಾದಿಸುತ್ತಿದ್ದಿಲ್ಲ. . . .ಪ್ರಶ್ನಿಸುತ್ತಿರಲಿಲ್ಲ. ಗಂಡ ಹೇಳುವುದು ಸಕಾರಣ ಅಲ್ಲ ಎನಿಸಿದ್ದನ್ನು ಮೌನವಾಗಿ ತಳ್ಳಿ ಹಾಕುತ್ತಿದ್ದರು. ರಾತ್ರಿ ಆಯಿತೆಂದರೆ ಪತಿಯಿಂದ ಪ್ರಶ್ನೆಗಳ ಪ್ರವಾಹವನ್ನೇ ಎದುರಿಸಬೇಕಿತ್ತು. ಈ ಮಾತುಗಳನ್ನು ಆಡುತ್ತಿರುವುದು ತನ್ನ ಪತಿಯೇ ಎಂಬ ಸೋಜಿಗ ಬೆರೆತ ವ್ಯಥೆ ಆಕೆಯನ್ನು ಕಾಡಿತ್ತು. ಪತಿ ಸತ್ಯದೊಂದಿಗೆ ಪ್ರಯೋಗಗಳನ್ನು ಮಾಡಿದರೆ, ಆ ಪ್ರಯೋಗಗಳ ಅನುಭವಿಸಿದ್ದು ಪತ್ನಿ.

ಬಾ ಅವರನ್ನು ನಿಯಂತ್ರಿಸುವ ಎಲ್ಲ ಪ್ರಯತ್ನಗಳಲ್ಲೂ ಗಾಂಧೀ ವಿಫಲರಾದದ್ದಾಗಿ ಹೇಳಿಕೊಂಡಿದ್ದಾರೆ. ನಾನೆಷ್ಟೇ ಒತ್ತಡ ಹೇರಿದರೂ ಆಕೆ ಕಟ್ಟಕಡೆಗೆ ತನಗೆ ತಿಳಿದಂತೆಯೇ ಮಾಡುವವಳು. ಈ ಕಾರಣದಿಂದಾಗಿ ಮನಸ್ತಾಪಗಳು ಆಗುತ್ತಿದ್ದವು. ಆದರೆ ನನ್ನ ಬದುಕು ವಿಸ್ತಾರಗೊಂಡಂತೆ ನನ್ನ ಪತ್ನಿ ಅರಳಿ ನನ್ನ ಕೆಲಸದಲ್ಲೇ ತನ್ನನ್ನು ತಾನು ಕಳೆದುಕೊಂಡಳು ಎಂದಿದ್ದಾರೆ. ಬಾ ಅವರ ಕೆಚ್ಚು ಮತ್ತು ದೃಢಸಂಕಲ್ಪಗಳೇ ಬದುಕಿನುದ್ದಕ್ಕೂ ಗಾಂಧೀ ಹೋರಾಟದ ಬೆನ್ನೆಲುಬಾಗಿದ್ದವು. 1908ರಲ್ಲಿ ದಕ್ಷಿಣ ಆಫ್ರಿಕೆಯಲ್ಲಿ ಮಾತ್ರವಲ್ಲದೆ 1932, 1933, 1939 ಹಾಗೂ 1943ರಲ್ಲಿ ಗಾಂಧೀ ಸತ್ಯಾಗ್ರಹಗಳಲ್ಲಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದರು. ಆಕೆಯ ವಿನಃ ನಾನು ಕತ್ತಲ ಕೂಪದಲ್ಲಿರುತ್ತಿದ್ದೆ. ನನ್ನಲ್ಲಿ ಎಚ್ಚರದ ಬೆಂಕಿ ಆರದಂತೆ ಕಾಪಾಡಿದಳು. ನನ್ನ ಎಲ್ಲ ರಾಜಕೀಯ ಹೋರಾಟಗಳಲ್ಲೂ ಜೊತೆಗೆ ನಿಂತಳು. ಸಾಧಾರಣ ಅರ್ಥದಲ್ಲಿ ಆಕೆ ಅನಕ್ಷರಸ್ಥಳು. ಆದರೆ ನಿಜವಾದ ಶಿಕ್ಷಣದ ಮಾದರಿಯಾಗಿದ್ದಳು.

ಕಸ್ತೂರ ಬಾ ಬಾಳಸಂಗಾತಿ ಆಗದೆ ಹೋಗಿದ್ದಿದ್ದರೆ ಗಾಂಧೀ ಬ್ಯಾರಿಸ್ಟರೂ ಆಗುತ್ತಿರಲಿಲ್ಲ, ಮಹಾತ್ಮಾ ಎಂದೂ ಎನಿಸಿಕೊಳ್ಳುತ್ತಿರಲಿಲ್ಲ. ಇಂಗ್ಲೆಂಡಿಗೆ ಹೋಗಲು ಗಾಂಧೀ ಬಳಿ ಹಣ ಇರಲಿಲ್ಲ. ಕಸ್ತೂರಬಾ ಅವರ ಒಡವೆ ಮಾರಬೇಕಾಯಿತು ಗಾಂಧೀ. ದೇವರಂತೆ ಪೂಜಿಸಬೇಕಾದ ಪರಿಪೂರ್ಣ ಚಿತ್ರವಲ್ಲ, ಪ್ರೀತಿಯಿಂದ ವಿಮರ್ಶಾತ್ಮಕವಾಗಿ ಅಧ್ಯಯನ ಮಾಡಬೇಕಿರುವ ವ್ಯಕ್ತಿ ಎಂದಿದ್ದಾರೆ ಗಾಂಧೀ ಮೊಮ್ಮಗ ಗೋಪಾಲಕೃಷ್ಣ ಗಾಂಧೀ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...