Homeಮುಖಪುಟನೆನೆಯಬೇಕಿದೆ ಮಹಾತ್ಮನ ಮಡದಿಯನು.... : ಡಿ.ಉಮಾಪತಿ

ನೆನೆಯಬೇಕಿದೆ ಮಹಾತ್ಮನ ಮಡದಿಯನು…. : ಡಿ.ಉಮಾಪತಿ

- Advertisement -
- Advertisement -

ಬಹುಜನ ಭಾರತ: ಡಿ.ಉಮಾಪತಿ

ಇಂದು ಗಾಂಧೀ ಜಯಂತಿ. ಗಾಂಧೀ ಹುಟ್ಟಿ 150 ವರ್ಷಗಳು. ಹಾಗೆಯೇ ಕಸ್ತೂರ ಬಾ ಜನಿಸಿಯೂ 150 ವರ್ಷಗಳು. ಗಾಂಧೀ ಏರಿದ ಎತ್ತರದ ಎಲ್ಲ ಶ್ರೇಯಸ್ಸು ಕಸ್ತೂರ ಬಾ ಅವರದು ಎಂದಿದ್ದ ಈ ದಂಪತಿಗಳ ಹಿರಿಯ ಮಗ ಹರಿಲಾಲ್. ಪುಣೆಯ ಸೆರೆಮನೆ ವಾಸದಲ್ಲಿ ಪತಿಯ ಬಾಹುಗಳಲ್ಲೇ ಪ್ರಾಣಬಿಟ್ಟರು ಕಸ್ತೂರಬಾ.

ಹದಿಮೂರನೆಯ ವಯಸ್ಸಿಗೆ ಮದುವೆ. 1888ರಲ್ಲಿ ತಮ್ಮ 19ನೆಯ ವರ್ಷದಲ್ಲಿ ಮೊದಲ ಮಗ ಹರಿಲಾಲನ ಜನನ. ಮಣಿಲಾಲ್, ರಾಮದಾಸ್ ನಂತರ ಕಿರಿಯ ಮಗ ದೇವದಾಸ್ ಜನಿಸಿದ್ದು 1900ರಲ್ಲಿ. ಆನಂತರ ಪತ್ನಿಯ ಅಭಿಪ್ರಾಯವನ್ನು ಕೇಳುವ ಗೋಜಿಗೆ ಹೋಗದ ಗಾಂಧೀ ಅವರಿಂದ ಬ್ರಹ್ಮಚರ್ಯ ಪಾಲನೆಯ ಏಕಪಕ್ಷೀಯ ನಿರ್ಧಾರ. ಆಗ ಕಸ್ತೂರಬಾ ಅವರ ವಯಸ್ಸು 31. ದಾಂಪತ್ಯ ಜೀವನದ ಈ ಗುರುತರ ನಿರ್ಧಾರ ಕುರಿತು ತಮ್ಮ ನಿಲುಮೆ ಏನಿತ್ತೆಂದು ಆಕೆಯ ಬಾಯಿಂದಲೇ ಹೊರಬಿದ್ದ ಮಾತುಗಳು ಎಲ್ಲಿಯೂ ದಾಖಲಾಗಿಲ್ಲ.

ಕಡುಕೋಪದ ಗಳಿಗೆಗಳಲ್ಲಿ ಕಸ್ತೂರಬಾ ಅವರನ್ನು ಮನೆಯಿಂದ ಹೊರಹಾಕಲು ತಾವು ಮುಂದಾದದ್ದನ್ನು ಗಾಂಧಿಯೇ ಹೇಳಿಕೊಂಡಿದ್ದಾರೆ. ಆಶ್ರಮದ ಕಕ್ಕಸುಗಳನ್ನು ತೊಳೆಯಬೇಕೆಂಬ ಪತಿಯ ಆದೇಶವನ್ನು ಅವರು ತಿರಸ್ಕರಿಸುತ್ತಾರೆ. ಅಹಿಂಸೆ ಮತ್ತು ಸತ್ಯಾಗ್ರಹದ ಮೂಲತತ್ವಗಳನ್ನು ಗಾಂಧೀ ಕಲಿತದ್ದು ತಮ್ಮ ಪತ್ನಿಯಿಂದಲೇ..

ಪತಿಗಿಂತ ನಾಲ್ಕು ತಿಂಗಳು 22 ದಿವಸಗಳಷ್ಟು ವಯಸ್ಸಿನಲ್ಲಿ ದೊಡ್ಡವರು ಕಸ್ತೂರಬಾ. ಏಪ್ರಿಲ್ ಹನ್ನೊಂದರಂದು ಆಕೆಯ ಜನ್ಮದಿನದಿಂದು ಬಾ ಅವರನ್ನು ದೇಶ ನೆನೆದದ್ದನ್ನು ಕಂಡವರಿಲ್ಲ. ಗಾಂಧೀಯನ್ನು ಬಿಟ್ಟು ಕಸ್ತೂರಬಾಗೆ ಸ್ವತಂತ್ರ ಅಸ್ತಿತ್ವ ಇಲ್ಲ. ಗಾಂಧೀಯನ್ನು ನೆನೆದರೆ ಕಸ್ತೂರಬಾ ಅವರನ್ನು ನೆನೆದಂತೆಯೇ ಎಂಬುದು ನಮ್ಮ ಗಂಡಾಳಿಕೆಯ ಸಾಮೂಹಿಕ ಸಾಕ್ಷಿಪ್ರಜ್ಞೆ. ಗುರುತಿಸದೆ ಮಣ್ಣಾಗಿರುವ ಸಾವಿರಾರು ಅಜ್ಞಾತ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಯರ ಪ್ರತೀಕ ಕಸ್ತೂರಬಾ ಎನ್ನುತ್ತಾರೆ ಹಿರಿಯ ಸರ್ವೋದಯ ಕಾರ್ಯಕರ್ತ ಬಿಜು ನೇಗಿ.

ಹಿರಿಯರು ನಿಶ್ಚಯಿಸಿದಂತೆ ಮೋಹನದಾಸನನ್ನು ವರಿಸಿದ ಕಸ್ತೂರ್ ಕಪಾಡಿಯಾ ವೈವಾಹಿಕ ಜೀವನದ 62 ವರ್ಷಗಳನ್ನು ಗಾಂಧಿಯೊಂದಿಗೆ ಕಳೆದರು. ಕಸ್ತೂರ ಬಾ ಆದರು. ಗುಜರಾತಿನ ಪಟ್ಟಣವೊಂದರ ಶಾಲಾಬಾಲಕನಿಂದ ಲಂಡನ್ನಿನಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಸ್ವರಾಜ್ಯ ಗಳಿಕೆಯ ಹೋರಾಟದ ನಾಯಕನಾಗಿ ಪತಿಯ ರೂಪಾಂತರದಲ್ಲಿ ಜೊತೆಗಿದ್ದು ಏರಿಳಿತಗಳನ್ನು ಹಂಚಿಕೊಂಡವರು. ಪತಿಯ ಪ್ರಯೋಗಗಳಲ್ಲಿ ಪಾಲುಗೊಂಡು, ಆಶ್ರಮವಾಸದ ಕಾಠಿಣ್ಯವನ್ನು ಅನುಭವಿಸಿ, ಹಲವು ಬಾರಿ ಸೆರೆವಾಸ ಅನುಭವಿಸಿದವರು. ಇತಿಹಾಸದ ಈ ಹಂತದ ಮಧ್ಯಭೂಮಿಕೆಯಲ್ಲಿದ್ದರೂ ಅವರ ವ್ಯಕ್ತಿತ್ವ ಮಸುಕಾಗಿ ಮಹಾತ್ಮನ ನೆರಳಿನಲ್ಲಿ ಮಸುಕಾಗಿದೆ. ಮಹಾತ್ಮನ ಮಡದಿಯ ಹುಡುಕಾಟ ಕಠಿಣವಾದದ್ದು. ಆಕೆಯ ಕಾಲದ ಬಹುಪಾಲು ಮಹಿಳೆಯರಂತೆ ಆಕೆಯೂ ನಿರಕ್ಷರಸ್ಥೆ. ಅನಿಸಿದ್ದನ್ನು ಅಕ್ಷರಕ್ಕೆ ಇಳಿಸಲಾಗಲಿಲ್ಲ. ಬಾ ಅವರನ್ನು ಕುರಿತು ಬೇರೆಯವರು ಬರೆದದ್ದು ಮಾತ್ರವೇ ಲಭ್ಯ. ಪತಿಯ ಆತ್ಮಚರಿತ್ರೆಯ ಪದಗಳನ್ನು ಸೋಸಿ ಸೋಸಿ ಆಕೆಯನ್ನು ಸಮೀಪಿಸಬೇಕಿದೆ ಎನ್ನುತ್ತಾರೆ ಐರೋಪ್ಯ ಬರೆಹಗಾರ್ತಿ ಎಮ್ಮಾ ಟಾರ್ಲೋ.

ತಮ್ಮ ತವರಿನಿಂದ ದೊರೆತ ಬಾಗಿನಗಳನ್ನು ದೇಶಸೇವೆಗೆ ಒಪ್ಪಿಸುವಂತೆ ಬಾ ಅವರನ್ನು ಬಲವಂತ ಮಾಡಿದ್ದರು ಗಾಂಧೀ. ಮಕ್ಕಳನ್ನು ಸಾಧುಗಳನ್ನು ಮಾಡಿ ಅವರ ಹೆಂಡತಿಯರನ್ನು ಆಭರಣಗಳಿಂದ ದೂರ ಇರಿಸಿದ್ದ ಬಾಪೂ ಅವರ ಮೇಲೆ ಸಿಡಿದಿದ್ದರು ಕಸ್ತೂರಬಾ. ಒಮ್ಮೆ ಕಸ್ತೂರಬಾಗೆ ಕಂಠಾಭರಣದ ಉಡುಗೊರೆ ದೊರೆತದ್ದು ನನ್ನ (ದೇಶ) ಸೇವೆಗೋ ಅಥವಾ ನಿನ್ನ ಸೇವೆಗೋ ಎಂದು ದನಿಯೇರಿಸಿದ್ದರು ಬಾಪೂ. ತಿರುಗಿ ಬಾ ನೀಡಿದ ಉತ್ತರ ಹೀಗಿತ್ತು- ‘ಒಪ್ಪುತ್ತೇನೆ. . . ಆದರೆ ನೀವು ಸಲ್ಲಿಸಿದ ಸೇವೆ ನಾನು ಸಲ್ಲಿಸಿದ ಸೇವೆಯೆಂದೇ ಲೆಕ್ಕ. ನಿಮಗಾಗಿ ನಾನು ಹಗಲಿರುಳು ದೇಹ ಸವೆಸಿ ದುಡಿದಿದ್ದೇನೆ. ಅದು ಸೇವೆ ಅಲ್ಲವೇನು. . . .’

ಅಂದಿನಿಂದಲೇ ಅಜ್ಜಿಯ ಬದುಕಿನ ಕತೆಯನ್ನು ತಾತನ ಬದುಕು ಮಬ್ಬಿಗೆ ಸರಿಸಿಬಿಟ್ಟಿತು ಎಂದಿದ್ದಾರೆ ಮೊಮ್ಮಗ ಅರುಣ್ ಗಾಂಧೀ. ಹದಿಮೂರನೆಯ ವಯಸ್ಸಿಗೆ ವಿವಾಹದ ನಂತರ. ಕಸ್ತೂರ್ ಕಪಾಡಿಯಾ ಕಸ್ತೂರಬಾ ಗಾಂಧೀ. ಪೋರಬಂದರು ತೊರೆದು ರಾಜಕೋಟ್ ಮನೆಯಲ್ಲಿ ವಾಸ. ಹೊಸ ಊರು, ಹೊಸ ಮನೆ, ಹೊಸ ಹೆಸರು. ಮೋಹನದಾಸ್ ಶಾಲಾ ವಿದ್ಯಾರ್ಥಿ ಮತ್ತು ಗೃಹಸ್ಥ ಎರಡೂ ಆಗಿದ್ದ. ಪತ್ನಿ ತಾನು ಹೇಳಿದಂತೆ ಕೇಳಬೇಕು ಎಂಬ ಇರಾದೆಗೆ ಬಿದ್ದಿದ್ದ. ಮನೆ ಬಿಟ್ಟು ಹೊರಗೆ ಹೋಗುವುದಾದರೆ ತನ್ನ ಅನುಮತಿ ಪಡೆಯಲೇಬೇಕು. ಎಲ್ಲಿ, ಯಾವಾಗ, ಯಾರನ್ನು, ಯಾಕೆ ಭೇಟಿ ಮಾಡಿ ಮಾತನಾಡಿದೆ ಎಂದು ತಿಳಿಸಬೇಕು. ತನಗೇ ನಿಷ್ಠಳಾಗಿರಬೇಕು ಎಂದು ವಿಧಿಸಿದ್ದ. ಕಸ್ತೂರಬಾ ಎದುರು ವಾದಿಸುತ್ತಿದ್ದಿಲ್ಲ. . . .ಪ್ರಶ್ನಿಸುತ್ತಿರಲಿಲ್ಲ. ಗಂಡ ಹೇಳುವುದು ಸಕಾರಣ ಅಲ್ಲ ಎನಿಸಿದ್ದನ್ನು ಮೌನವಾಗಿ ತಳ್ಳಿ ಹಾಕುತ್ತಿದ್ದರು. ರಾತ್ರಿ ಆಯಿತೆಂದರೆ ಪತಿಯಿಂದ ಪ್ರಶ್ನೆಗಳ ಪ್ರವಾಹವನ್ನೇ ಎದುರಿಸಬೇಕಿತ್ತು. ಈ ಮಾತುಗಳನ್ನು ಆಡುತ್ತಿರುವುದು ತನ್ನ ಪತಿಯೇ ಎಂಬ ಸೋಜಿಗ ಬೆರೆತ ವ್ಯಥೆ ಆಕೆಯನ್ನು ಕಾಡಿತ್ತು. ಪತಿ ಸತ್ಯದೊಂದಿಗೆ ಪ್ರಯೋಗಗಳನ್ನು ಮಾಡಿದರೆ, ಆ ಪ್ರಯೋಗಗಳ ಅನುಭವಿಸಿದ್ದು ಪತ್ನಿ.

ಬಾ ಅವರನ್ನು ನಿಯಂತ್ರಿಸುವ ಎಲ್ಲ ಪ್ರಯತ್ನಗಳಲ್ಲೂ ಗಾಂಧೀ ವಿಫಲರಾದದ್ದಾಗಿ ಹೇಳಿಕೊಂಡಿದ್ದಾರೆ. ನಾನೆಷ್ಟೇ ಒತ್ತಡ ಹೇರಿದರೂ ಆಕೆ ಕಟ್ಟಕಡೆಗೆ ತನಗೆ ತಿಳಿದಂತೆಯೇ ಮಾಡುವವಳು. ಈ ಕಾರಣದಿಂದಾಗಿ ಮನಸ್ತಾಪಗಳು ಆಗುತ್ತಿದ್ದವು. ಆದರೆ ನನ್ನ ಬದುಕು ವಿಸ್ತಾರಗೊಂಡಂತೆ ನನ್ನ ಪತ್ನಿ ಅರಳಿ ನನ್ನ ಕೆಲಸದಲ್ಲೇ ತನ್ನನ್ನು ತಾನು ಕಳೆದುಕೊಂಡಳು ಎಂದಿದ್ದಾರೆ. ಬಾ ಅವರ ಕೆಚ್ಚು ಮತ್ತು ದೃಢಸಂಕಲ್ಪಗಳೇ ಬದುಕಿನುದ್ದಕ್ಕೂ ಗಾಂಧೀ ಹೋರಾಟದ ಬೆನ್ನೆಲುಬಾಗಿದ್ದವು. 1908ರಲ್ಲಿ ದಕ್ಷಿಣ ಆಫ್ರಿಕೆಯಲ್ಲಿ ಮಾತ್ರವಲ್ಲದೆ 1932, 1933, 1939 ಹಾಗೂ 1943ರಲ್ಲಿ ಗಾಂಧೀ ಸತ್ಯಾಗ್ರಹಗಳಲ್ಲಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದರು. ಆಕೆಯ ವಿನಃ ನಾನು ಕತ್ತಲ ಕೂಪದಲ್ಲಿರುತ್ತಿದ್ದೆ. ನನ್ನಲ್ಲಿ ಎಚ್ಚರದ ಬೆಂಕಿ ಆರದಂತೆ ಕಾಪಾಡಿದಳು. ನನ್ನ ಎಲ್ಲ ರಾಜಕೀಯ ಹೋರಾಟಗಳಲ್ಲೂ ಜೊತೆಗೆ ನಿಂತಳು. ಸಾಧಾರಣ ಅರ್ಥದಲ್ಲಿ ಆಕೆ ಅನಕ್ಷರಸ್ಥಳು. ಆದರೆ ನಿಜವಾದ ಶಿಕ್ಷಣದ ಮಾದರಿಯಾಗಿದ್ದಳು.

ಕಸ್ತೂರ ಬಾ ಬಾಳಸಂಗಾತಿ ಆಗದೆ ಹೋಗಿದ್ದಿದ್ದರೆ ಗಾಂಧೀ ಬ್ಯಾರಿಸ್ಟರೂ ಆಗುತ್ತಿರಲಿಲ್ಲ, ಮಹಾತ್ಮಾ ಎಂದೂ ಎನಿಸಿಕೊಳ್ಳುತ್ತಿರಲಿಲ್ಲ. ಇಂಗ್ಲೆಂಡಿಗೆ ಹೋಗಲು ಗಾಂಧೀ ಬಳಿ ಹಣ ಇರಲಿಲ್ಲ. ಕಸ್ತೂರಬಾ ಅವರ ಒಡವೆ ಮಾರಬೇಕಾಯಿತು ಗಾಂಧೀ. ದೇವರಂತೆ ಪೂಜಿಸಬೇಕಾದ ಪರಿಪೂರ್ಣ ಚಿತ್ರವಲ್ಲ, ಪ್ರೀತಿಯಿಂದ ವಿಮರ್ಶಾತ್ಮಕವಾಗಿ ಅಧ್ಯಯನ ಮಾಡಬೇಕಿರುವ ವ್ಯಕ್ತಿ ಎಂದಿದ್ದಾರೆ ಗಾಂಧೀ ಮೊಮ್ಮಗ ಗೋಪಾಲಕೃಷ್ಣ ಗಾಂಧೀ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...