Homeಚಳವಳಿಗಳಿಸಿಕೊಂಡಿದ್ದನ್ನೂ ಕಳೆದುಕೊಳ್ಳಬೇಕಿರುವ ಟ್ರಾನ್ಸ್-ಕ್ವಿಯರ್ ಸಮುದಾಯ : ಕಾರ್ತಿಕ್ ಬಿಟ್ಟು

ಗಳಿಸಿಕೊಂಡಿದ್ದನ್ನೂ ಕಳೆದುಕೊಳ್ಳಬೇಕಿರುವ ಟ್ರಾನ್ಸ್-ಕ್ವಿಯರ್ ಸಮುದಾಯ : ಕಾರ್ತಿಕ್ ಬಿಟ್ಟು

- Advertisement -
- Advertisement -

ಪಾದರಸದಂತಹ ವ್ಯಕ್ತಿತ್ವದ ಕಾರ್ತಿಕ್ ಬಿಟ್ಟು ಹುಟ್ಟಿದ್ದು ಬೆಂಗಳೂರಿನಲ್ಲಿ. ದೆಹಲಿಯಲ್ಲಿ ಬೆಳೆದು ಹಾರ್ವರ್ಡ್‍ನಲ್ಲಿ ನ್ಯೂರೋ ಬಿಹೇವಿಯರ್ ವಿಜ್ಞಾನದಲ್ಲಿ ಪಿಎಚ್‍ಡಿ ಮಾಡಿದ್ದಾರೆ. ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಸಿಡಿಯುವ ಸಂಗಾತಿ, ಸ್ಥಳೀಯ ದುರ್ಬಲ ಸಮುದಾಯಗಳ ಪರವಾಗಿ ಕೆಲಸ ಮಾಡಲು ಆದ್ಯತೆ. ರೋಹಿತ್ ವೇಮುಲಾ ಆತ್ಮಹತ್ಯೆಯಾದಾಗ ಅದೇ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕನಾಗಿದ್ದು, ದನಿಯೆತ್ತಿದ್ದರು. ಇದೀಗ ಅಶೋಕಾ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರು ಮತ್ತು ವಿಜ್ಞಾನಿ. ಕರ್ನಾಟಕ ಜನಶಕ್ತಿ, ಡಬ್ಲ್ಯುಎಸ್‍ಎಸ್ ಮತ್ತು ಟ್ರಾನ್ಸ್‍ಜೆಂಡರ್ ಸಂಘಟನೆಗಳ ಸದಸ್ಯರು. ಇವರ ಈ ಲೇಖನವನ್ನು ಕನ್ನಡಕ್ಕೆ ರಾಜಶೇಖರ್ ಅಕ್ಕಿಯವರು ಅನುವಾದ ಮಾಡಿದ್ದಾರೆ.

ಇಂದು ಭಾರತದ ಟ್ರಾನ್ಸ್‌ಜೆಂಡರ್ ಮತ್ತು ಕ್ವೀಯರ್ (ಲೈಂಗಿಕ ಅಲ್ಪಸಂಖ್ಯಾತ) ಸಮುದಾಯಗಳು ಸಂದಿಗ್ಧದಲ್ಲಿ ಇದ್ದಾರೆ. ಒಂದೆಡೆ ಭಾರತೀಯ ನ್ಯಾಯಾಲಯಗಳು ಎನ್‍ಎಎಲ್‍ಎಸ್‍ಏ ತೀರ್ಪಿನ ಅಡಿಯಲ್ಲಿ ನಮಗೆ ಹಿಂದೆಂದೂ ಇಲ್ಲದಂತಹ ನಮ್ಮನ್ನು ನಾವು ನಾವೇ ಇಚ್ಛಿಸಿದ ಲಿಂಗದೊಂದಿಗೆ ಗುರುತಿಸಿಕೊಳ್ಳುವ ಹಕ್ಕನ್ನು ನೀಡಿದ್ದಾರೆ. ಇದರಿಂದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ನಮ್ಮ ದೇಹಗಳು ಹೇಗೆ ಕಾಣಿಸಿಕೊಂಡರೂ ನಮ್ಮ ಗುರುತಿನ ದಾಖಲೆಗಳಲ್ಲಿಯೂ ನಮ್ಮ ಆಯ್ಕೆಯ ಲಿಂಗದೊಂದಿಗೆ ಗುರುತಿಸಕೊಳ್ಳಬಹುದಾಗಿದೆ. ಈ ತೀರ್ಪಿನ ಮುಖಾಂತರ ಉಚ್ಚ ನ್ಯಾಯಾಲಯವು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಈ ದೇಶದಲ್ಲಿ ಆದ ಅನ್ಯಾಯವನ್ನು ಗುರುತಿಸಿದೆ ಹಾಗೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ, ಉಚಿತ ಆರೋಗ್ಯ ಸೇವೆ, ವಸತಿ ಮುಂತಾದ ಸವಲತ್ತುಗಳನ್ನು ನೀಡಬೇಕೆಂದು ಹೇಳಿದೆ. ಸೆಕ್ಷನ್ 377ಅನ್ನು ತೆಗೆದುಹಾಕುವುದರಿಂದ ನ್ಯಾಯಾಲಯಗಳು ಒಂದು ಬಲವಾದ ಸಂದೇಶವನ್ನೂ ನೀಡಿದಂತಾಗಿದೆ.

ಇದೇ ಹೊತ್ತಿನಲ್ಲಿ ಶಾಸಕಾಂಗವು ಟ್ರಾನ್ಸ್‌ಜೆಂಡರ್ ಸಮುದಾಯವನ್ನು ಅಪರಾಧೀಕರಿಸುವ ಮಸೂದೆಗಳನ್ನು ಅತ್ಯಂತ ತ್ವರಿತ ಗತಿಯಲ್ಲಿ ಜಾರಿ ಮಾಡುತ್ತಿದೆ; ಇದರಿಂದ ಪರಿಸ್ಥಿತಿ ಮೊದಲಿಗಿಂತಲೂ ಹದಗೆಡಲಿದೆ. ಬಿಜೆಪಿ ಸರಕಾರವು 2015ರಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ರಕ್ಷಣೆ) ಮಸೂದೆ ರಚಿಸಿತು. ಈ ಮಸೂದೆಯ ಹೆಸರೇ ಅತ್ಯಂತ ಗೊಂದಲಮಯವಾಗಿದೆ; ಏಕೆಂದರೆ, ರಾಜ್ಯಸಭೆಯಲ್ಲಿ ಡಿಎಮ್‍ಕೆಯ ತಿರುಚಾ ಶಿವ ಅವರು, ಟ್ರಾನ್ಸ್‌ಜೆಂಡರ್ ಸಮುದಾಯ ಸಹಾಯದಿಂದ ಇದೇ ಹೆಸರಿನಲ್ಲಿ ರಚಿಸಲಾದ ಮಸೂದೆಯನ್ನು ಮಂಡಿಸಿದ್ದರು. ಆದರೆ ಲೋಕಸಭೆಯಲ್ಲಿ ಈ ಮಸೂದೆಯನ್ನು ತಂದಾಗ ಮೂಲ ಮಸೂದೆಯಲ್ಲಿದ್ದ ಎಲ್ಲಾ ಸಕಾರಾತ್ಮಕ ಅಂಶಗಳು ಕಣ್ಮರೆಯಾಗಿದ್ದವು. ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತು ಉದ್ಯೋಗದಲ್ಲಿ ತಾರತಮ್ಯ ಮಾಡಿದರೆ ಇರಬೇಕಾದ ದಂಡ ಇರಲಿಲ್ಲ ಹಾಗೂ ಈ ಕ್ಷೇತ್ರಗಳಲ್ಲಿ ಮೀಸಲಾತಿ ಅವಕಾಶವನ್ನು ಕಲ್ಪಿಸದೇ ಸಾಂಪ್ರದಾಯಿಕ ಭಿಕ್ಷಾಟನೆಯನ್ನು ಅಪರಾಧೀಕರಿಸಲಾಯಿತು. ಟ್ರಾನ್ಸ್‌ಜೆಂಡರ್ ಸಮುದಾಯವು ದೀರ್ಘಕಾಲಿಕ ಹೋರಾಟ ನಡೆಸಿದ ನಂತರ 2019ರ ಅವೃತ್ತಿಯಲ್ಲಿ ಆ ತಿದ್ದುಪಡಿಗಳನ್ನು ಹಿಂಪಡೆಯಲಾಯಿತು.

ಆದರೂ, ಸುಪ್ರೀಂಕೋರ್ಟಿನ ಎನ್‍ಏಎಲ್‍ಎಸ್‍ಏ ತೀರ್ಪಿನಲ್ಲಿ ಅಡಕವಾದ ಸ್ವ ಇಚ್ಛೆಯಿಂದ ತಮಗಿಷ್ಟವಾದ ಲಿಂಗವನ್ನು ಗುರುತಿಸುವ ಹಕ್ಕನ್ನು ಈ ಮಸೂದೆ ಉಲ್ಲಂಘಿಸುತ್ತದೆ. ಈಗ ಆ ವ್ಯಕ್ತಿಗಳು ಮೊದಲು ತಾವು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳೆಂದು ಸರಕಾರಕ್ಕೆ ಬಹಿರಂಗಪಡಿಸಬೇಕು ಹಾಗೂ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತಮ್ಮ ಗುರುತಿನ ದಾಖಲೆಗಳನ್ನು ಪಡೆಯಲು ಮನವಿ ಸಲ್ಲಿಸಬೇಕು ಎನ್ನುವುದನ್ನು ಕಡ್ಡಾಯಗೊಳಿಸಿದೆ. ಹಾಗೂ ನಮ್ಮ ಆಯ್ಕೆಯ ಯಾವುದೇ ಇತರ ಲಿಂಗದಲ್ಲಿ ಗುರುತಿನ ದಾಖಲೆಗಳನ್ನು ಪಡೆಯಬೇಕಾದರೆ ಶಸ್ತ್ರಚಿಕಿತ್ಸೆಯ ದಾಖಲೆಗಳನ್ನು ಸಲ್ಲಿಸಬೇಕು ಎಂತಲೂ ಹೇಳಿದೆ. ಇದರ ಅರ್ಥ, ಒಬ್ಬ ಟ್ರಾನ್ಸ್ ಪುರುಷ, ಹಾರ್ಮೋನುಗಳನ್ನು ಸೇವಿಸಿ, ಗಡ್ಡವನ್ನು ಬೆಳೆಸಿದರೂ, ಒಂದು ವೇಳೆ ಆತ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಇಚ್ಛಿಸದಿದ್ದರೆ ತನ್ನ ಆಯ್ಕೆಯ ಲಿಂಗಕ್ಕೆ ವಿರುದ್ಧವಾದ ಲಿಂಗದ ಗುರುತಿನೊಂದಿಗೇ ಜೀವಿಸಬೇಕಾಗುತ್ತದೆ. ಈ ಮಸೂದೆಯು ಬೇರೆ ಬೇರೆ ರೀತಿಯ ಟ್ರಾನ್ಸ್ ವ್ಯಕ್ತಿಗಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಬೇರೆ ಬೇರೆ ಪ್ರಮಾಣದ ಶಿಕ್ಷೆ ನೀಡುವ ತಾರತಮ್ಯವನ್ನೂ ಹೊಂದಿದೆ.

ಬಹುಶಃ ನಮ್ಮ ಹಕ್ಕುಗಳ ಮೇಲೆ ಇಂತಹ ಕಾನೂನು ದಾಳಿಗೆ ಪ್ರತಿಕ್ರಿಯೆಯಾಗಿಯೇ, ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳ ಅವಶ್ಯಕತೆ ಎಲ್ಲರಿಗೂ ಕಾಣಿಸುವಂತಾಗಲಿ ಎಂದು ಟ್ರಾನ್ಸ್‌ಜೆಂಡರ್ ಸಮುದಾಯವು 2019ರ ಚುನಾವಣೆಗಳಲ್ಲಿ ಗಟ್ಟಿಯಾಗಿ ತೊಡಗಿಸಿಕೊಂಡಿತ್ತು. ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಚುನಾವಣೆಯಲ್ಲಿ ಬಹಳ ಹಿಂದಿನಿಂದ ಭಾಗವಹಿಸುತ್ತಿದ್ದರೂ, 2019ರ ಚುನಾವಣೆ ಮುಂಚೆಗಿಂತ ಭಿನ್ನವಾಗಿತ್ತು. ದೇಶದ ವಿವಿಧೆಡೆಯಲ್ಲಿ 2019ರ ಚುನಾವಣೆಯಲ್ಲಿ ಭಾಗವಹಿಸಿದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರ ಸಂಖ್ಯೆ ಗಣನೀಯವಾಗಿತ್ತು. ಹಾಗೂ ಅದಕ್ಕಿಂತ ಮುಖ್ಯವಾಗಿ ಟ್ರಾನ್ಸ್‌ಜೆಂಡರ್ ಸಮುದಾಯದ ವಿಷಯಗಳನ್ನು ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳಲ್ಲಿ ವಿವರವಾಗಿ ಉಲ್ಲೇಖಸಿದ್ದು 2019ರ ಚುನಾವಣೆಗಳಲ್ಲಿ.

ಪ್ರಸ್ತುತ ಮಸೂದೆಯ ವಿರುದ್ಧ ಹೋರಾಟ ಮಾಡುವ ಭರವಸೆಯನ್ನು ಕೆಲವು ರಾಜಕೀಯ ಪಕ್ಷಗಳ ಪ್ರಣಾಳಿಕೆಗಳು ಸ್ಪಷ್ಟವಾಗಿ ಹೇಳಿದವು; ಕಾಂಗ್ರೆಸ್ ಪಕ್ಷ, ಸಿಪಿಎಮ್ ಹಾಗೂ ಹೊಸದಾಗಿ ರಚಿತಗೊಂಡ ವಂಚಿತ್ ಬಹುಜನ್ ಅಘಾಡಿ ಪಕ್ಷದ ಪ್ರಣಾಳಿಕೆಗಳು ಈ ಭರವಸೆಯನ್ನು ಒಳಗೊಂಡ ಕೆಲವು ಪಕ್ಷಗಳು. ಅದರೊಂದಿಗೆ, ಹಲವಾರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ಚುನಾವಣೆಗೂ ಸ್ಪರ್ಧಿಸಿದರು; ಅಲಹಾಬಾದ್‍ನಲ್ಲಿ ಭವಾನಿ ಸಿಂಗ್ ಆಪ್‍ನಿಂದ ಸ್ಪರ್ಧಿಸಿದರೆ, ಇತರ ಅಭ್ಯರ್ಥಿಗಳು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದರು; ಅವರೆಂದರೆ ಎರ್ನಾಕುಲಮ್‍ದಿಂದ ‘ಚಿಂಚು’ ಅಸ್ವಥಿ ರಾಜಪ್ಪನ್, ಅಹ್ಮದಾಬಾದ್‍ನಿಂದ ರಾಜು ಮಾತಾಜಿ, ಮುಂಬಯಿಯಲ್ಲಿ ಜತಿನ್ ರಂಗರಾವ್ ಹರ್ನೆ ಮತ್ತು ಸ್ನೇಹಾ ಕಾಳೆ ಹಾಗೂ ಚೆನ್ನೈನಿಂದ ಎಮ್.ರಾಧಾ.

ಬಿಜೆಪಿಯ ಗೆಲವು ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಇನ್ನಷ್ಟು ದುಗುಡವನ್ನು ತಂದಿದೆ. ಈ ಕಾರಣದಿಂದಲೇ ಅವರ ನೀತಿಗಳ ವಿರುದ್ಧ ಸಮುದಾಯದ ರಾಜಕೀಯ ಪಾಲ್ಗೊಳ್ಳುವಿಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಬಹುದು. ಬಿಜೆಪಿಯ ಪ್ರಣಾಳಿಕೆಯು ತುಂಬಾ ನಯವಾಗಿ ‘ಸೂಕ್ತ ಸಾಮಾಜಿಕ, ಆರ್ಥಿಕ ಮತ್ತು ನೀತಿಗಳ ಕ್ರಮಗಳ’ ಮೂಲಕ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ಮುಖ್ಯವಾಹಿನಿ ತರಲಾಗುವುದು’, ‘ಸ್ವ-ಉದ್ಯೋಗ’ ಮತ್ತು ‘ಕೌಶಲ್ಯ ಅಭಿವೃದ್ಧಿ’ಯನ್ನು ಸುನಿಶ್ಚಿತಗೊಳಿಸಲಾಗುವುದು ಎಂದೂ ಹೇಳಿತು. ಆದರೆ, ಭಿಕ್ಷಾಟನೆ ಮತ್ತು ಲೈಂಗಿಕ ವೃತ್ತಿಯ ರೂಪದಲ್ಲಿ ಸಮುದಾಯವು ಸ್ವ-ಉದ್ಯೋಗದಲ್ಲಿಯೇ ತೊಡಗಿದೆ, ಇವರೆಡೂ ಸಂಕಷ್ಟದಿಂದ ಹುಟ್ಟಿಕೊಂಡ ಸ್ವಯಂ-ಸಂಘಟಿತ ಜೀವನೋಪಾಯಗಳಾಗಿವೆ.

ಮುಂದಿನ ದಿನಗಳು ಅಷ್ಟು ಚೆನ್ನಾಗಿರುವುದಿಲ್ಲವೆಂಬುದು ಖಚಿತ. ಆರ್ಥಿಕ ಬಿಕ್ಕಟ್ಟಿನೆದುರು, ಫ್ಯಾಸಿಸ್ಟ್ ತತ್ವಾಧಾರಿತ ಹಿಂದೂ ಬಹುಸಂಖ್ಯಾತವಾದಿ ಸಂಘಟನೆಯಿಂದ ಆಳಲ್ಪಡುತ್ತಿರುವ ಈ ದೇಶವು ಒಂದು ದೀರ್ಘ ಸಾಮಾಜಿಕ ರಾಜಕೀಯ ಪ್ರಕ್ರಿಯೆಯ ಮೂಲಕ ಹಾದುಹೋಗಲೇಬೇಕಿದೆ ಎಂಬುದು ಸ್ಪಷ್ಟ.

ಅಂಕಿಅಂಶಗಳ ಪ್ರಕಾರ ಎಲ್‍ಜಿಬಿಟಿಕ್ಯುಐಏ (LGBTQIA) ಎಂದು ಗುರುತಿಸಿಕೊಂಡವರ ಸಂಖ್ಯೆ ಭಾರತದ ಜನಸಂಖ್ಯೆಯ ಶೇ.4-11ರಷ್ಟಿದೆ. ಅಂದರೆ, ಈ ಸಮುದಾಯ ವೋಟ್ ಬ್ಯಾಂಕ್ ಎಂದು ಪರಿಗಣಿಸುವಷ್ಟು ದೊಡ್ಡದಾಗಿದೆ. ಆದರೆ ನನ್ನ ಚಿಂತೆ LGBTQIA ಸಮುದಾಯದ ಸದಸ್ಯರ ಮತ್ತು ಅವರ ಹೆಚ್ಚುತ್ತಿರುವ ಸಾರ್ವಜನಿಕ ಅಸ್ತಿತ್ವ ಅಲ್ಲ; ತುಳಿತಕೊಳಪಟ್ಟ ಇತರ ಸಮುದಾಯಗಳೊಂದಿಗೆ ಈ ಸಮುದಾಯವು ಹೇಗೆ ಸಹ-ಸಂಬಂಧವನ್ನು ಸಾಧಿಸಬಹುದು ಎನ್ನುವುದು ನನ್ನ ಚಿಂತೆ. ಸ್ವ-ವಿಮೋಚನೆಯ ಒಂದು ಸಂಕುಚಿತ ರೂಪಕ್ಕಾಗಿ ಹೋರಾಡುವುದು ನಮ್ಮ ಗುರಿಯಾಗಬಾರದು. ಅದರ ಬದಲಿಗೆ ಇಂದು ಇರುವ ಕ್ರೂರ, ಅಸಮಾನ ಸಮಾಜದಿಂದ ಎಲ್ಲರನ್ನೂ ವಿಮೋಚನೆಗೊಳಿಸುವುದು ನಮ್ಮ ಗುರಿಯಾಗಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...