Homeಚಳವಳಿಗಳಿಸಿಕೊಂಡಿದ್ದನ್ನೂ ಕಳೆದುಕೊಳ್ಳಬೇಕಿರುವ ಟ್ರಾನ್ಸ್-ಕ್ವಿಯರ್ ಸಮುದಾಯ : ಕಾರ್ತಿಕ್ ಬಿಟ್ಟು

ಗಳಿಸಿಕೊಂಡಿದ್ದನ್ನೂ ಕಳೆದುಕೊಳ್ಳಬೇಕಿರುವ ಟ್ರಾನ್ಸ್-ಕ್ವಿಯರ್ ಸಮುದಾಯ : ಕಾರ್ತಿಕ್ ಬಿಟ್ಟು

- Advertisement -
- Advertisement -

ಪಾದರಸದಂತಹ ವ್ಯಕ್ತಿತ್ವದ ಕಾರ್ತಿಕ್ ಬಿಟ್ಟು ಹುಟ್ಟಿದ್ದು ಬೆಂಗಳೂರಿನಲ್ಲಿ. ದೆಹಲಿಯಲ್ಲಿ ಬೆಳೆದು ಹಾರ್ವರ್ಡ್‍ನಲ್ಲಿ ನ್ಯೂರೋ ಬಿಹೇವಿಯರ್ ವಿಜ್ಞಾನದಲ್ಲಿ ಪಿಎಚ್‍ಡಿ ಮಾಡಿದ್ದಾರೆ. ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಸಿಡಿಯುವ ಸಂಗಾತಿ, ಸ್ಥಳೀಯ ದುರ್ಬಲ ಸಮುದಾಯಗಳ ಪರವಾಗಿ ಕೆಲಸ ಮಾಡಲು ಆದ್ಯತೆ. ರೋಹಿತ್ ವೇಮುಲಾ ಆತ್ಮಹತ್ಯೆಯಾದಾಗ ಅದೇ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕನಾಗಿದ್ದು, ದನಿಯೆತ್ತಿದ್ದರು. ಇದೀಗ ಅಶೋಕಾ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರು ಮತ್ತು ವಿಜ್ಞಾನಿ. ಕರ್ನಾಟಕ ಜನಶಕ್ತಿ, ಡಬ್ಲ್ಯುಎಸ್‍ಎಸ್ ಮತ್ತು ಟ್ರಾನ್ಸ್‍ಜೆಂಡರ್ ಸಂಘಟನೆಗಳ ಸದಸ್ಯರು. ಇವರ ಈ ಲೇಖನವನ್ನು ಕನ್ನಡಕ್ಕೆ ರಾಜಶೇಖರ್ ಅಕ್ಕಿಯವರು ಅನುವಾದ ಮಾಡಿದ್ದಾರೆ.

ಇಂದು ಭಾರತದ ಟ್ರಾನ್ಸ್‌ಜೆಂಡರ್ ಮತ್ತು ಕ್ವೀಯರ್ (ಲೈಂಗಿಕ ಅಲ್ಪಸಂಖ್ಯಾತ) ಸಮುದಾಯಗಳು ಸಂದಿಗ್ಧದಲ್ಲಿ ಇದ್ದಾರೆ. ಒಂದೆಡೆ ಭಾರತೀಯ ನ್ಯಾಯಾಲಯಗಳು ಎನ್‍ಎಎಲ್‍ಎಸ್‍ಏ ತೀರ್ಪಿನ ಅಡಿಯಲ್ಲಿ ನಮಗೆ ಹಿಂದೆಂದೂ ಇಲ್ಲದಂತಹ ನಮ್ಮನ್ನು ನಾವು ನಾವೇ ಇಚ್ಛಿಸಿದ ಲಿಂಗದೊಂದಿಗೆ ಗುರುತಿಸಿಕೊಳ್ಳುವ ಹಕ್ಕನ್ನು ನೀಡಿದ್ದಾರೆ. ಇದರಿಂದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ನಮ್ಮ ದೇಹಗಳು ಹೇಗೆ ಕಾಣಿಸಿಕೊಂಡರೂ ನಮ್ಮ ಗುರುತಿನ ದಾಖಲೆಗಳಲ್ಲಿಯೂ ನಮ್ಮ ಆಯ್ಕೆಯ ಲಿಂಗದೊಂದಿಗೆ ಗುರುತಿಸಕೊಳ್ಳಬಹುದಾಗಿದೆ. ಈ ತೀರ್ಪಿನ ಮುಖಾಂತರ ಉಚ್ಚ ನ್ಯಾಯಾಲಯವು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಈ ದೇಶದಲ್ಲಿ ಆದ ಅನ್ಯಾಯವನ್ನು ಗುರುತಿಸಿದೆ ಹಾಗೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ, ಉಚಿತ ಆರೋಗ್ಯ ಸೇವೆ, ವಸತಿ ಮುಂತಾದ ಸವಲತ್ತುಗಳನ್ನು ನೀಡಬೇಕೆಂದು ಹೇಳಿದೆ. ಸೆಕ್ಷನ್ 377ಅನ್ನು ತೆಗೆದುಹಾಕುವುದರಿಂದ ನ್ಯಾಯಾಲಯಗಳು ಒಂದು ಬಲವಾದ ಸಂದೇಶವನ್ನೂ ನೀಡಿದಂತಾಗಿದೆ.

ಇದೇ ಹೊತ್ತಿನಲ್ಲಿ ಶಾಸಕಾಂಗವು ಟ್ರಾನ್ಸ್‌ಜೆಂಡರ್ ಸಮುದಾಯವನ್ನು ಅಪರಾಧೀಕರಿಸುವ ಮಸೂದೆಗಳನ್ನು ಅತ್ಯಂತ ತ್ವರಿತ ಗತಿಯಲ್ಲಿ ಜಾರಿ ಮಾಡುತ್ತಿದೆ; ಇದರಿಂದ ಪರಿಸ್ಥಿತಿ ಮೊದಲಿಗಿಂತಲೂ ಹದಗೆಡಲಿದೆ. ಬಿಜೆಪಿ ಸರಕಾರವು 2015ರಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ರಕ್ಷಣೆ) ಮಸೂದೆ ರಚಿಸಿತು. ಈ ಮಸೂದೆಯ ಹೆಸರೇ ಅತ್ಯಂತ ಗೊಂದಲಮಯವಾಗಿದೆ; ಏಕೆಂದರೆ, ರಾಜ್ಯಸಭೆಯಲ್ಲಿ ಡಿಎಮ್‍ಕೆಯ ತಿರುಚಾ ಶಿವ ಅವರು, ಟ್ರಾನ್ಸ್‌ಜೆಂಡರ್ ಸಮುದಾಯ ಸಹಾಯದಿಂದ ಇದೇ ಹೆಸರಿನಲ್ಲಿ ರಚಿಸಲಾದ ಮಸೂದೆಯನ್ನು ಮಂಡಿಸಿದ್ದರು. ಆದರೆ ಲೋಕಸಭೆಯಲ್ಲಿ ಈ ಮಸೂದೆಯನ್ನು ತಂದಾಗ ಮೂಲ ಮಸೂದೆಯಲ್ಲಿದ್ದ ಎಲ್ಲಾ ಸಕಾರಾತ್ಮಕ ಅಂಶಗಳು ಕಣ್ಮರೆಯಾಗಿದ್ದವು. ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತು ಉದ್ಯೋಗದಲ್ಲಿ ತಾರತಮ್ಯ ಮಾಡಿದರೆ ಇರಬೇಕಾದ ದಂಡ ಇರಲಿಲ್ಲ ಹಾಗೂ ಈ ಕ್ಷೇತ್ರಗಳಲ್ಲಿ ಮೀಸಲಾತಿ ಅವಕಾಶವನ್ನು ಕಲ್ಪಿಸದೇ ಸಾಂಪ್ರದಾಯಿಕ ಭಿಕ್ಷಾಟನೆಯನ್ನು ಅಪರಾಧೀಕರಿಸಲಾಯಿತು. ಟ್ರಾನ್ಸ್‌ಜೆಂಡರ್ ಸಮುದಾಯವು ದೀರ್ಘಕಾಲಿಕ ಹೋರಾಟ ನಡೆಸಿದ ನಂತರ 2019ರ ಅವೃತ್ತಿಯಲ್ಲಿ ಆ ತಿದ್ದುಪಡಿಗಳನ್ನು ಹಿಂಪಡೆಯಲಾಯಿತು.

ಆದರೂ, ಸುಪ್ರೀಂಕೋರ್ಟಿನ ಎನ್‍ಏಎಲ್‍ಎಸ್‍ಏ ತೀರ್ಪಿನಲ್ಲಿ ಅಡಕವಾದ ಸ್ವ ಇಚ್ಛೆಯಿಂದ ತಮಗಿಷ್ಟವಾದ ಲಿಂಗವನ್ನು ಗುರುತಿಸುವ ಹಕ್ಕನ್ನು ಈ ಮಸೂದೆ ಉಲ್ಲಂಘಿಸುತ್ತದೆ. ಈಗ ಆ ವ್ಯಕ್ತಿಗಳು ಮೊದಲು ತಾವು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳೆಂದು ಸರಕಾರಕ್ಕೆ ಬಹಿರಂಗಪಡಿಸಬೇಕು ಹಾಗೂ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತಮ್ಮ ಗುರುತಿನ ದಾಖಲೆಗಳನ್ನು ಪಡೆಯಲು ಮನವಿ ಸಲ್ಲಿಸಬೇಕು ಎನ್ನುವುದನ್ನು ಕಡ್ಡಾಯಗೊಳಿಸಿದೆ. ಹಾಗೂ ನಮ್ಮ ಆಯ್ಕೆಯ ಯಾವುದೇ ಇತರ ಲಿಂಗದಲ್ಲಿ ಗುರುತಿನ ದಾಖಲೆಗಳನ್ನು ಪಡೆಯಬೇಕಾದರೆ ಶಸ್ತ್ರಚಿಕಿತ್ಸೆಯ ದಾಖಲೆಗಳನ್ನು ಸಲ್ಲಿಸಬೇಕು ಎಂತಲೂ ಹೇಳಿದೆ. ಇದರ ಅರ್ಥ, ಒಬ್ಬ ಟ್ರಾನ್ಸ್ ಪುರುಷ, ಹಾರ್ಮೋನುಗಳನ್ನು ಸೇವಿಸಿ, ಗಡ್ಡವನ್ನು ಬೆಳೆಸಿದರೂ, ಒಂದು ವೇಳೆ ಆತ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಇಚ್ಛಿಸದಿದ್ದರೆ ತನ್ನ ಆಯ್ಕೆಯ ಲಿಂಗಕ್ಕೆ ವಿರುದ್ಧವಾದ ಲಿಂಗದ ಗುರುತಿನೊಂದಿಗೇ ಜೀವಿಸಬೇಕಾಗುತ್ತದೆ. ಈ ಮಸೂದೆಯು ಬೇರೆ ಬೇರೆ ರೀತಿಯ ಟ್ರಾನ್ಸ್ ವ್ಯಕ್ತಿಗಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಬೇರೆ ಬೇರೆ ಪ್ರಮಾಣದ ಶಿಕ್ಷೆ ನೀಡುವ ತಾರತಮ್ಯವನ್ನೂ ಹೊಂದಿದೆ.

ಬಹುಶಃ ನಮ್ಮ ಹಕ್ಕುಗಳ ಮೇಲೆ ಇಂತಹ ಕಾನೂನು ದಾಳಿಗೆ ಪ್ರತಿಕ್ರಿಯೆಯಾಗಿಯೇ, ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳ ಅವಶ್ಯಕತೆ ಎಲ್ಲರಿಗೂ ಕಾಣಿಸುವಂತಾಗಲಿ ಎಂದು ಟ್ರಾನ್ಸ್‌ಜೆಂಡರ್ ಸಮುದಾಯವು 2019ರ ಚುನಾವಣೆಗಳಲ್ಲಿ ಗಟ್ಟಿಯಾಗಿ ತೊಡಗಿಸಿಕೊಂಡಿತ್ತು. ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಚುನಾವಣೆಯಲ್ಲಿ ಬಹಳ ಹಿಂದಿನಿಂದ ಭಾಗವಹಿಸುತ್ತಿದ್ದರೂ, 2019ರ ಚುನಾವಣೆ ಮುಂಚೆಗಿಂತ ಭಿನ್ನವಾಗಿತ್ತು. ದೇಶದ ವಿವಿಧೆಡೆಯಲ್ಲಿ 2019ರ ಚುನಾವಣೆಯಲ್ಲಿ ಭಾಗವಹಿಸಿದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರ ಸಂಖ್ಯೆ ಗಣನೀಯವಾಗಿತ್ತು. ಹಾಗೂ ಅದಕ್ಕಿಂತ ಮುಖ್ಯವಾಗಿ ಟ್ರಾನ್ಸ್‌ಜೆಂಡರ್ ಸಮುದಾಯದ ವಿಷಯಗಳನ್ನು ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳಲ್ಲಿ ವಿವರವಾಗಿ ಉಲ್ಲೇಖಸಿದ್ದು 2019ರ ಚುನಾವಣೆಗಳಲ್ಲಿ.

ಪ್ರಸ್ತುತ ಮಸೂದೆಯ ವಿರುದ್ಧ ಹೋರಾಟ ಮಾಡುವ ಭರವಸೆಯನ್ನು ಕೆಲವು ರಾಜಕೀಯ ಪಕ್ಷಗಳ ಪ್ರಣಾಳಿಕೆಗಳು ಸ್ಪಷ್ಟವಾಗಿ ಹೇಳಿದವು; ಕಾಂಗ್ರೆಸ್ ಪಕ್ಷ, ಸಿಪಿಎಮ್ ಹಾಗೂ ಹೊಸದಾಗಿ ರಚಿತಗೊಂಡ ವಂಚಿತ್ ಬಹುಜನ್ ಅಘಾಡಿ ಪಕ್ಷದ ಪ್ರಣಾಳಿಕೆಗಳು ಈ ಭರವಸೆಯನ್ನು ಒಳಗೊಂಡ ಕೆಲವು ಪಕ್ಷಗಳು. ಅದರೊಂದಿಗೆ, ಹಲವಾರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ಚುನಾವಣೆಗೂ ಸ್ಪರ್ಧಿಸಿದರು; ಅಲಹಾಬಾದ್‍ನಲ್ಲಿ ಭವಾನಿ ಸಿಂಗ್ ಆಪ್‍ನಿಂದ ಸ್ಪರ್ಧಿಸಿದರೆ, ಇತರ ಅಭ್ಯರ್ಥಿಗಳು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದರು; ಅವರೆಂದರೆ ಎರ್ನಾಕುಲಮ್‍ದಿಂದ ‘ಚಿಂಚು’ ಅಸ್ವಥಿ ರಾಜಪ್ಪನ್, ಅಹ್ಮದಾಬಾದ್‍ನಿಂದ ರಾಜು ಮಾತಾಜಿ, ಮುಂಬಯಿಯಲ್ಲಿ ಜತಿನ್ ರಂಗರಾವ್ ಹರ್ನೆ ಮತ್ತು ಸ್ನೇಹಾ ಕಾಳೆ ಹಾಗೂ ಚೆನ್ನೈನಿಂದ ಎಮ್.ರಾಧಾ.

ಬಿಜೆಪಿಯ ಗೆಲವು ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಇನ್ನಷ್ಟು ದುಗುಡವನ್ನು ತಂದಿದೆ. ಈ ಕಾರಣದಿಂದಲೇ ಅವರ ನೀತಿಗಳ ವಿರುದ್ಧ ಸಮುದಾಯದ ರಾಜಕೀಯ ಪಾಲ್ಗೊಳ್ಳುವಿಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಬಹುದು. ಬಿಜೆಪಿಯ ಪ್ರಣಾಳಿಕೆಯು ತುಂಬಾ ನಯವಾಗಿ ‘ಸೂಕ್ತ ಸಾಮಾಜಿಕ, ಆರ್ಥಿಕ ಮತ್ತು ನೀತಿಗಳ ಕ್ರಮಗಳ’ ಮೂಲಕ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ಮುಖ್ಯವಾಹಿನಿ ತರಲಾಗುವುದು’, ‘ಸ್ವ-ಉದ್ಯೋಗ’ ಮತ್ತು ‘ಕೌಶಲ್ಯ ಅಭಿವೃದ್ಧಿ’ಯನ್ನು ಸುನಿಶ್ಚಿತಗೊಳಿಸಲಾಗುವುದು ಎಂದೂ ಹೇಳಿತು. ಆದರೆ, ಭಿಕ್ಷಾಟನೆ ಮತ್ತು ಲೈಂಗಿಕ ವೃತ್ತಿಯ ರೂಪದಲ್ಲಿ ಸಮುದಾಯವು ಸ್ವ-ಉದ್ಯೋಗದಲ್ಲಿಯೇ ತೊಡಗಿದೆ, ಇವರೆಡೂ ಸಂಕಷ್ಟದಿಂದ ಹುಟ್ಟಿಕೊಂಡ ಸ್ವಯಂ-ಸಂಘಟಿತ ಜೀವನೋಪಾಯಗಳಾಗಿವೆ.

ಮುಂದಿನ ದಿನಗಳು ಅಷ್ಟು ಚೆನ್ನಾಗಿರುವುದಿಲ್ಲವೆಂಬುದು ಖಚಿತ. ಆರ್ಥಿಕ ಬಿಕ್ಕಟ್ಟಿನೆದುರು, ಫ್ಯಾಸಿಸ್ಟ್ ತತ್ವಾಧಾರಿತ ಹಿಂದೂ ಬಹುಸಂಖ್ಯಾತವಾದಿ ಸಂಘಟನೆಯಿಂದ ಆಳಲ್ಪಡುತ್ತಿರುವ ಈ ದೇಶವು ಒಂದು ದೀರ್ಘ ಸಾಮಾಜಿಕ ರಾಜಕೀಯ ಪ್ರಕ್ರಿಯೆಯ ಮೂಲಕ ಹಾದುಹೋಗಲೇಬೇಕಿದೆ ಎಂಬುದು ಸ್ಪಷ್ಟ.

ಅಂಕಿಅಂಶಗಳ ಪ್ರಕಾರ ಎಲ್‍ಜಿಬಿಟಿಕ್ಯುಐಏ (LGBTQIA) ಎಂದು ಗುರುತಿಸಿಕೊಂಡವರ ಸಂಖ್ಯೆ ಭಾರತದ ಜನಸಂಖ್ಯೆಯ ಶೇ.4-11ರಷ್ಟಿದೆ. ಅಂದರೆ, ಈ ಸಮುದಾಯ ವೋಟ್ ಬ್ಯಾಂಕ್ ಎಂದು ಪರಿಗಣಿಸುವಷ್ಟು ದೊಡ್ಡದಾಗಿದೆ. ಆದರೆ ನನ್ನ ಚಿಂತೆ LGBTQIA ಸಮುದಾಯದ ಸದಸ್ಯರ ಮತ್ತು ಅವರ ಹೆಚ್ಚುತ್ತಿರುವ ಸಾರ್ವಜನಿಕ ಅಸ್ತಿತ್ವ ಅಲ್ಲ; ತುಳಿತಕೊಳಪಟ್ಟ ಇತರ ಸಮುದಾಯಗಳೊಂದಿಗೆ ಈ ಸಮುದಾಯವು ಹೇಗೆ ಸಹ-ಸಂಬಂಧವನ್ನು ಸಾಧಿಸಬಹುದು ಎನ್ನುವುದು ನನ್ನ ಚಿಂತೆ. ಸ್ವ-ವಿಮೋಚನೆಯ ಒಂದು ಸಂಕುಚಿತ ರೂಪಕ್ಕಾಗಿ ಹೋರಾಡುವುದು ನಮ್ಮ ಗುರಿಯಾಗಬಾರದು. ಅದರ ಬದಲಿಗೆ ಇಂದು ಇರುವ ಕ್ರೂರ, ಅಸಮಾನ ಸಮಾಜದಿಂದ ಎಲ್ಲರನ್ನೂ ವಿಮೋಚನೆಗೊಳಿಸುವುದು ನಮ್ಮ ಗುರಿಯಾಗಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...